Homeಅಂತರಾಷ್ಟ್ರೀಯಫಿಫಾ: ದೇಶದ ಮಹಿಳೆಯರು ಮುನ್ನಡೆಸುತ್ತಿರುವ ಕ್ರಾಂತಿಯನ್ನು ಬೆಂಬಲಿಸಿ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್ ತಂಡ!

ಫಿಫಾ: ದೇಶದ ಮಹಿಳೆಯರು ಮುನ್ನಡೆಸುತ್ತಿರುವ ಕ್ರಾಂತಿಯನ್ನು ಬೆಂಬಲಿಸಿ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್ ತಂಡ!

- Advertisement -
- Advertisement -

ಫಿಫಾ ವಿಶ್ವಕಪ್‌‌‌‌ ಪಂದ್ಯಾಟದ ವೇಳೆ ಇರಾನ್‌ ತಂಡವು ರಾಷ್ಟ್ರಗೀತೆಯನ್ನು ಹಾಡದೆ ತಮ್ಮ ದೇಶದಲ್ಲಿ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದೆ. ಸೋಮವಾರದಂದು ದೋಹಾದ ಖಲೀಫಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದ ವೇಳೆ ಇರಾನ್ ತಂಡವು ತಮ್ಮ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಒಗ್ಗಟ್ಟು ವ್ಯಕ್ತಪಡಿಸಿದೆ.

ಕಳೆದ ಸೆಪ್ಟೆಂಬರ್ 16 ರಂದು ಹಿಜಾಬ್ ಧರಿಸದ ಕಾರಣಕ್ಕಾಗಿ ದೇಶದ ನೈತಿಕತೆಯ ಪೋಲೀಸರು ಮಹ್ಸಾ ಅಮಿನಿ ಅವರನ್ನು ಬಂಧಿಸಿದ್ದರು. ಇದರ ನಂತರ ಅವರು ಅಲ್ಲಿಯೆ ಹತ್ಯಗೀಡಾಗಿದ್ದರು ಎಂದು ಆರೋಪಿಸಲಾಗಿದೆ. ಅಮಿನಿಯ ಸಾವಿನ ನಂತರ ಇರಾನ್‌ನಲ್ಲಿ ಭಾರಿ ಪ್ರತಿಭಟನೆಗಳು ನಡೆಯುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಗ್ಲೇಂಡ್ ಮತ್ತು ಇರಾನ್‌ ಪಂದ್ಯ ನೋಡಲು ಬಂದ ಇರಾನ್‌ ಅಭಿಮಾನಿಗಳು ಸ್ಟೇಡಿಯಂನಲ್ಲಿ ತಮ್ಮದೇ ಆದ ರಾಷ್ಟ್ರಗೀತೆಯನ್ನು ಹಾಡಿದ್ದು, ತಮ್ಮ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ವಿಡಿಯೊ ಪೋಸ್ಟ್‌ ಮಾಡಿರುವ ಅಫ್ಘಾನ್ ಪುನರ್ವಸತಿ ಮತ್ತು ನಿರಾಶ್ರಿತರ ಸಚಿವರ ಮಾಜಿ ನೀತಿ ವಿಶೇಷ ಸಲಹೆಗಾರ್ತಿ ಶಬ್ನಮ್ ನಸಿಮಿ, “ಈ ರೀತಿ ಮಾಡುವುದು ತಂಡಕ್ಕೆ ದೊಡ್ಡ ಅಪಾಯ ಉಂಟುಮಾಡುತ್ತದೆ. ಇರಾನ್ ಆಡಳಿತವು ತನ್ನ ವಿರುದ್ಧ ಮಾತನಾಡಿದ ಇರಾನ್ ಫುಟ್ಬಾಲ್ ಆಟಗಾರರಿಗೆ ಬಂಧನ ವಾರಂಟ್ ಹೊರಡಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 1948 ರ ಒಲಂಪಿಕ್ಸ್‌ನಲ್ಲಿ ಭಾರತ ತಂಡ ಬರಿಗಾಲಿನಲ್ಲಿ ಫುಟ್‌ಬಾಲ್ ಆಡಿದ್ದು ಹಣದ ಕೊರತೆಯಿಂದಲ್ಲ

ಶಬ್ನಮ್ ನಸಿಮಿ ಬ್ರಿಟಿಷ್-ಆಫ್ಘಾನ್ ಸಾಮಾಜಿಕ ಹೋರಾಟಗಾರ್ತಿಯಾಗಿದ್ದು, ರಾಜಕೀಯ ವಿಮರ್ಶಕಿ ಕೂಡಾ ಆಗಿದ್ದಾರೆ. “ದೇಶದ ಮಹಿಳೆಯರ ನೇತೃತ್ವದ ಕ್ರಾಂತಿಯನ್ನು ಬೆಂಬಲಿಸುವ ಸಲುವಾಗಿ ಇರಾನ್‌ನ ರಾಷ್ಟ್ರೀಯ ತಂಡವು ಇಂಗ್ಲೇಂಡ್‌ ವಿರುದ್ಧದ ಆಟ ಪ್ರಾರಂಭಿಸಿದಾಗ ರಾಷ್ಟ್ರಗೀತೆಯನ್ನು ಹಾಡಲಿಲ್ಲ. ಇರಾನಿನ ಜನಸಮೂಹವೂ ತಮ್ಮದೇ ಆದ ರಾಷ್ಟ್ರಗೀತೆಯನ್ನು ಹಾಡುತ್ತಿದ್ದರು. ಅದ್ಭುತ!” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಇರಾನ್ ತಂಡದ ನಾಯಕ ಎಹ್ಸಾನ್ ಹಾಜಿಸಾಫಿ, “ಅಮಿನಿಯ ಸಾವಿನ ನಂತರ ಭುಗಿಲೆದ್ದ ಕ್ರಾಂತಿಯನ್ನು ಬೆಂಬಲಿಸಲು ತಂಡವು ನಿರ್ಧರಿಸಿದೆ” ಎಂದು ಹೇಳಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ ಸಂಘಟನೆಯ ಪ್ರಕಾರ, ಇರಾನ್‌ನಲ್ಲಿ ಪ್ರತಿಭಟನೆಗಳು ಪ್ರಾರಂಭವಾದಾಗಿನಿಂದ 400 ಕ್ಕೂ ಹೆಚ್ಚು ಪ್ರತಿಭಟನಾಕಾರರು ಕೊಲ್ಲಲ್ಪಟ್ಟಿದ್ದಾರೆ ಮತ್ತು 16,000 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಕೇರಳದ ಈ ಅಭ್ಯರ್ಥಿ ಗೆದ್ದರೆ ‘ವಿಶ್ವಕಪ್‌ ಫುಟ್ಬಾಲ್‌’ ನೋಡಲು ಕರೆದೊಯ್ಯುತ್ತಿದ್ದರು!

“ನಮ್ಮ ದೇಶದ ಪರಿಸ್ಥಿತಿಗಳು ಸರಿಯಾಗಿಲ್ಲ ಮತ್ತು ನಮ್ಮ ಜನರು ಸಂತೋಷವಾಗಿಲ್ಲ ಎಂಬುದನ್ನು ನಾವು ಒಪ್ಪಿಕೊಳ್ಳಬೇಕು. ನಾವು ಇಲ್ಲಿದ್ದ ಮಾತ್ರಕ್ಕೆ ನಾವು ಅವರ ಧ್ವನಿಯಾಗಬಾರದು ಅಥವಾ ನಾವು ಅವರನ್ನು ಗೌರವಿಸಬಾರದು ಎಂದೇನಿಲ್ಲ” ಎಂದು ಇರಾನ್ ಕ್ಯಾಪ್ಟನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...