Homeಅಂತರಾಷ್ಟ್ರೀಯಫಿಫಾ: ದೇಶದ ಮಹಿಳೆಯರು ಮುನ್ನಡೆಸುತ್ತಿರುವ ಕ್ರಾಂತಿಯನ್ನು ಬೆಂಬಲಿಸಿ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್ ತಂಡ!

ಫಿಫಾ: ದೇಶದ ಮಹಿಳೆಯರು ಮುನ್ನಡೆಸುತ್ತಿರುವ ಕ್ರಾಂತಿಯನ್ನು ಬೆಂಬಲಿಸಿ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್ ತಂಡ!

- Advertisement -
- Advertisement -

ಫಿಫಾ ವಿಶ್ವಕಪ್‌‌‌‌ ಪಂದ್ಯಾಟದ ವೇಳೆ ಇರಾನ್‌ ತಂಡವು ರಾಷ್ಟ್ರಗೀತೆಯನ್ನು ಹಾಡದೆ ತಮ್ಮ ದೇಶದಲ್ಲಿ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದೆ. ಸೋಮವಾರದಂದು ದೋಹಾದ ಖಲೀಫಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದ ವೇಳೆ ಇರಾನ್ ತಂಡವು ತಮ್ಮ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಒಗ್ಗಟ್ಟು ವ್ಯಕ್ತಪಡಿಸಿದೆ.

ಕಳೆದ ಸೆಪ್ಟೆಂಬರ್ 16 ರಂದು ಹಿಜಾಬ್ ಧರಿಸದ ಕಾರಣಕ್ಕಾಗಿ ದೇಶದ ನೈತಿಕತೆಯ ಪೋಲೀಸರು ಮಹ್ಸಾ ಅಮಿನಿ ಅವರನ್ನು ಬಂಧಿಸಿದ್ದರು. ಇದರ ನಂತರ ಅವರು ಅಲ್ಲಿಯೆ ಹತ್ಯಗೀಡಾಗಿದ್ದರು ಎಂದು ಆರೋಪಿಸಲಾಗಿದೆ. ಅಮಿನಿಯ ಸಾವಿನ ನಂತರ ಇರಾನ್‌ನಲ್ಲಿ ಭಾರಿ ಪ್ರತಿಭಟನೆಗಳು ನಡೆಯುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಗ್ಲೇಂಡ್ ಮತ್ತು ಇರಾನ್‌ ಪಂದ್ಯ ನೋಡಲು ಬಂದ ಇರಾನ್‌ ಅಭಿಮಾನಿಗಳು ಸ್ಟೇಡಿಯಂನಲ್ಲಿ ತಮ್ಮದೇ ಆದ ರಾಷ್ಟ್ರಗೀತೆಯನ್ನು ಹಾಡಿದ್ದು, ತಮ್ಮ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ವಿಡಿಯೊ ಪೋಸ್ಟ್‌ ಮಾಡಿರುವ ಅಫ್ಘಾನ್ ಪುನರ್ವಸತಿ ಮತ್ತು ನಿರಾಶ್ರಿತರ ಸಚಿವರ ಮಾಜಿ ನೀತಿ ವಿಶೇಷ ಸಲಹೆಗಾರ್ತಿ ಶಬ್ನಮ್ ನಸಿಮಿ, “ಈ ರೀತಿ ಮಾಡುವುದು ತಂಡಕ್ಕೆ ದೊಡ್ಡ ಅಪಾಯ ಉಂಟುಮಾಡುತ್ತದೆ. ಇರಾನ್ ಆಡಳಿತವು ತನ್ನ ವಿರುದ್ಧ ಮಾತನಾಡಿದ ಇರಾನ್ ಫುಟ್ಬಾಲ್ ಆಟಗಾರರಿಗೆ ಬಂಧನ ವಾರಂಟ್ ಹೊರಡಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 1948 ರ ಒಲಂಪಿಕ್ಸ್‌ನಲ್ಲಿ ಭಾರತ ತಂಡ ಬರಿಗಾಲಿನಲ್ಲಿ ಫುಟ್‌ಬಾಲ್ ಆಡಿದ್ದು ಹಣದ ಕೊರತೆಯಿಂದಲ್ಲ

ಶಬ್ನಮ್ ನಸಿಮಿ ಬ್ರಿಟಿಷ್-ಆಫ್ಘಾನ್ ಸಾಮಾಜಿಕ ಹೋರಾಟಗಾರ್ತಿಯಾಗಿದ್ದು, ರಾಜಕೀಯ ವಿಮರ್ಶಕಿ ಕೂಡಾ ಆಗಿದ್ದಾರೆ. “ದೇಶದ ಮಹಿಳೆಯರ ನೇತೃತ್ವದ ಕ್ರಾಂತಿಯನ್ನು ಬೆಂಬಲಿಸುವ ಸಲುವಾಗಿ ಇರಾನ್‌ನ ರಾಷ್ಟ್ರೀಯ ತಂಡವು ಇಂಗ್ಲೇಂಡ್‌ ವಿರುದ್ಧದ ಆಟ ಪ್ರಾರಂಭಿಸಿದಾಗ ರಾಷ್ಟ್ರಗೀತೆಯನ್ನು ಹಾಡಲಿಲ್ಲ. ಇರಾನಿನ ಜನಸಮೂಹವೂ ತಮ್ಮದೇ ಆದ ರಾಷ್ಟ್ರಗೀತೆಯನ್ನು ಹಾಡುತ್ತಿದ್ದರು. ಅದ್ಭುತ!” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಇರಾನ್ ತಂಡದ ನಾಯಕ ಎಹ್ಸಾನ್ ಹಾಜಿಸಾಫಿ, “ಅಮಿನಿಯ ಸಾವಿನ ನಂತರ ಭುಗಿಲೆದ್ದ ಕ್ರಾಂತಿಯನ್ನು ಬೆಂಬಲಿಸಲು ತಂಡವು ನಿರ್ಧರಿಸಿದೆ” ಎಂದು ಹೇಳಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ ಸಂಘಟನೆಯ ಪ್ರಕಾರ, ಇರಾನ್‌ನಲ್ಲಿ ಪ್ರತಿಭಟನೆಗಳು ಪ್ರಾರಂಭವಾದಾಗಿನಿಂದ 400 ಕ್ಕೂ ಹೆಚ್ಚು ಪ್ರತಿಭಟನಾಕಾರರು ಕೊಲ್ಲಲ್ಪಟ್ಟಿದ್ದಾರೆ ಮತ್ತು 16,000 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಕೇರಳದ ಈ ಅಭ್ಯರ್ಥಿ ಗೆದ್ದರೆ ‘ವಿಶ್ವಕಪ್‌ ಫುಟ್ಬಾಲ್‌’ ನೋಡಲು ಕರೆದೊಯ್ಯುತ್ತಿದ್ದರು!

“ನಮ್ಮ ದೇಶದ ಪರಿಸ್ಥಿತಿಗಳು ಸರಿಯಾಗಿಲ್ಲ ಮತ್ತು ನಮ್ಮ ಜನರು ಸಂತೋಷವಾಗಿಲ್ಲ ಎಂಬುದನ್ನು ನಾವು ಒಪ್ಪಿಕೊಳ್ಳಬೇಕು. ನಾವು ಇಲ್ಲಿದ್ದ ಮಾತ್ರಕ್ಕೆ ನಾವು ಅವರ ಧ್ವನಿಯಾಗಬಾರದು ಅಥವಾ ನಾವು ಅವರನ್ನು ಗೌರವಿಸಬಾರದು ಎಂದೇನಿಲ್ಲ” ಎಂದು ಇರಾನ್ ಕ್ಯಾಪ್ಟನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....