Homeಸಿನಿಮಾಕ್ರೀಡೆಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಫ್ರಾನ್ಸ್‌ನ ಕಿಲಿಯನ್ ಎಂಬಾಪೆ ಪಾತ್ರರಾದರು.

- Advertisement -
- Advertisement -

ಜಗತ್ತಿನ ಹಲವಾರು ಜನರನ್ನು ತುದಿಗಾಲ ಮೇಲೆ ನಿಲ್ಲಿಸಿದ್ದ ಕತಾರ್ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿದ ಮೆಸ್ಸಿಯ ಅರ್ಜೆಂಟೀನಾ ಮೂರನೇ ಬಾರಿಗೆ ಕಪ್ ತನ್ನದಾಗಿಸಿಕೊಂಡಿತು. ಕೊನೆಯ ಕ್ಷಣದವರೆಗೂ ದಿಟ್ಟ ಹೋರಾಟ ನಡೆಸಿದ ಫ್ರಾನ್ಸ್ ಪೆನಾಲ್ಟಿ ಶೂಟೌಟ್‌ನಲ್ಲಿ ಎಡವಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಕತಾರ್‌ನ ಲುಸೈಲ್‌ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಅರ್ಜೆಂಟೀನಾ ತಂಡ ಆರಂಭದಿಂದಲೇ ಮೇಲುಗೈ ಸಾಧಿಸಿತ್ತು. ತಂಡದ ನಾಯಕ ಲಿಯೊನೆಲ್ ಮೆಸ್ಸಿ 23ನೇ ನಿಮಿಷದಲ್ಲಿ ಪೆನಾಲ್ಟಿ ಕಿಕ್‌ನಲ್ಲಿ ಗೋಲು ಗಳಿಸಿದರೆ, ಮತ್ತೊಬ್ಬ ಆಟಗಾರ ಡಿ ಮರಿಯಾ 36ನೇ ನಿಮಿಷದಲ್ಲಿ ಗೋಲು ಗಳಿಸುವ ಮೂಲಕ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದರು. ಚೆಂಡು ಬಹುತೇಕ ಸಮಯದಲ್ಲಿ ಅರ್ಜೆಂಟೀನಾ ಕಾಲಡಿಯಲ್ಲಿಯೇ ಇಟ್ಟುಕೊಳ್ಳುವ ಮೂಲಕ ಫ್ರಾನ್ಸ್‌ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದ್ದರು.

ಆದರೆ ಪಂದ್ಯದ 80ನೇ ನಿಮಿಷದಲ್ಲಿ ಫ್ರಾನ್ಸ್‌ ತಂಡದ ಯುವ ಆಟಗಾರ ಕಿಲಿಯನ್ ಎಂಬಾಪೆ ಮ್ಯಾಜಿಕ್ ಮಾಡಿದರು. ಪೆನಾಲ್ಟಿ ಕಿಕ್ ಅನ್ನು ಗೋಲ್ ಆಗಿ ಪರಿವರ್ತಿಸಿದ ಅವರು, ಮತ್ತೆ ಒಂದು ನಿಮಿಷದ ಅಂತರದಲ್ಲಿ ಅದ್ಭುತ ಗೋಲ್ ಬಾರಿಸುವ ಮೂಲಕ ಪಂದ್ಯವನ್ನು 2-2 ಕ್ಕೆ ತಂದು ಸಮಬಲ ಸಾಧಿಸುವಂತೆ ಮಾಡಿದರು. ಫ್ರಾನ್ಸ್ ಅಭಿಮಾನಿಗಳು ಸಂಭ್ರಮದಲ್ಲಿ ಮಿಂದೇಳುವಂತೆ, ಆಟಗಾರರು ಮತ್ತೆ ಕೆಚ್ಚೆದೆಯಿಂದ ಆಡುವಂತೆ ಮಾಡಿದ ಎಂಬಾಪೆ ಪಂದ್ಯವನ್ನು ಹೆಚ್ಚುವರಿ ಸಮಯಕ್ಕೆ ತೆಗೆದುಕೊಂಡು ಹೋದರು. ನಿರಾಶೆಯ ಮಡಿಲಲ್ಲಿದ್ದ ಫ್ರಾನ್ಸ್ ಆಟಗಾರರು ಮತ್ತೆ ಪುಟಿದೇಳುವಂತೆ ಮಾಡಿದರು.

ನಿಗಧಿತ 90 ನಿಮಿಷಗಳ ಅವಧಿಯಲ್ಲಿ ಎರಡೂ ತಂಡಗಳು 2-2 ಗೋಲುಗಳೊಂದಿಗೆ ಸಮಬಲ ಸಾಧಿಸಿದ್ದರಿಂದ ಮತ್ತೆ 30 ನಿಮಿಷಗಳ ಹೆಚ್ಚುವರಿ ಸಮಯ ನೀಡಲಾಯಿತು. ಆಗ 108 ನಿಮಿಷದಲ್ಲಿ ಸಿಕ್ಕ ಅವಕಾಶವನ್ನು ತಪ್ಪಿಸದ ಅರ್ಜೆಂಟೀನಾದ ಮೆಸ್ಸಿ ಸುಂದರ ಗೋಲು ಗಳಿಸುವ ಮೂಲಕ 3-2 ಅಂತರ ಸಾಧಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಆದರೆ ಛಲ ಬಿಡದಂತೆ ಆಡಿದ ಫ್ರಾನ್ಸ್‌ನ ಎಂಬಾಪೆ ಕಡೆಯ ಹಂತದಲ್ಲಿ ಪೆನಾಲ್ಟಿ ಕಿಕ್ ಅವಕಾಶವನ್ನು ನೇರ ಗೋಲ್ ಬಾರಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಪಾತ್ರರಾದರು. ಅಲ್ಲದೆ ಪಂದ್ಯವನ್ನು 3-3 ಸಮಬಲಕ್ಕೆ ತಂದು ಕಪ್ ಆಸೆಯನ್ನು ಜೀವಂತವಾಗಿರಿಸಿದರು.

ಪೆನಾಲ್ಟಿ ಶೂಟೌಟ್‌

ಹೆಚ್ಚುವರಿ ಸಮಯದಲ್ಲಿಯೂ ಉಭಯ ತಂಡಗಳು ಸಮಬಲ ಸಾಧಿಸಿದ್ದರಿಂದ ಪೆನಾಲ್ಟಿ ಶೂಟೌಟ್‌ ನೀಡಲಾಯಿತು. ಮೊದಲು ಕಿಕ್ ಮಾಡುವ ಅವಕಾಶ ಪಡೆದ ಫ್ರಾನ್ಸ್ ತಮ್ಮ ಮೊದಲ ಪ್ರಯತ್ನದಲ್ಲಿಯೇ ಎಂಬಾಪೆ ಚೆಂಡನ್ನು ಗೋಲ್ ಪೋಸ್ಟ್ ತಲುಪಿಸಿದರು. ಅದೇ ರೀತಿ ಅರ್ಜೆಂಟೀನಾದ ಮೆಸ್ಸಿ ಸಹ ಗುರಿ ತಪ್ಪಲಿಲ್ಲ. ಆದರೆ ಫ್ರಾನ್ಸ್ ತನ್ನ ಎರಡನೆ ಪ್ರಯತ್ನದಲ್ಲಿ ವಿಫಲವಾಯಿತು. ಅರ್ಜೆಂಟೀನಾ ತನ್ನ ನಾಲ್ಕು ಪ್ರಯತ್ನಗಳಲ್ಲಿ ನಾಲ್ಕು ಪೆನಾಲ್ಟಿ ಗೋಲ್ ಗಳಿಸಿದರೆ, ಫ್ರಾನ್ಸ್ ಕೇವಲ ಎರಡು ಗೋಲು ಗಳಿಸಲು ಸಾಧ್ಯವಾಗಿ ಸೋಲೊಪ್ಪಿಕೊಂಡಿತು. ಎಂಬಾಪೆಯ ಶ್ರಮ ವ್ಯರ್ಥವಾಯಿತು. ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ (4-2 ಅಂತರದಲ್ಲಿ) ಗೆದ್ದು ಸಂಭ್ರಮಿಸಿತು. ಮೆಸ್ಸಿ ತನ್ನ ಬಹುದಿನದ ವಿಶ್ವಕಪ್ ಗೆಲುವಿನ ಕನಸು ನನಸಾಗಿಸಿಕೊಂಡರು. ಅವರ ವಿದಾಯಕ್ಕೆ ಸೂಕ್ತ ಗೌರವ ದೊರಕಿತೆಂಬ ಭಾವ ಎಲ್ಲರಲ್ಲಿ ಮೂಡಿತು.

ಗೋಲ್ಡನ್ ಬೂಟ್ ಗೆದ್ದ ಎಂಬಾಪೆ, ಗೋಲ್ಡನ್ ಬಾಲ್ ತನ್ನದಾಗಿಸಿಕೊಂಡ ಮೆಸ್ಸಿ

ಈ ವಿಶ್ವಕಪ್‌ನಲ್ಲಿ 8 ಗೋಲು ಗಳಿಸಿದ ಕಿಲಿಯನ್ ಎಂಬಾಪೆ ಗೋಲ್ಡನ್ ಬೂಟ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಆದರೆ ಫ್ರಾನ್ಸ್ ಸೋತ ನಿರಾಸೆಯಲ್ಲಿ ಅವರು ಅದನ್ನು ಸಂಭ್ರಮಿಸಲೇ ಇಲ್ಲ. ಇನ್ನೊಂದೆಡೆ 7 ಗೋಲ್ ಗಳಿಸಿದ ಮೆಸ್ಸಿಗೆ ಗೋಲ್ಡನ್ ಬಾಲ್ ಪ್ರಶಸ್ತಿ ದಕ್ಕಿತು. ಗೋಲ್ಡನ್ ಗ್ಲೋವ್ ಪ್ರಶಸ್ತಿ ಅರ್ಜೆಂಟೀನಾದ ಎಮಿಲಿಯಾನೋ ಮಾರ್ಟಿನೆಜ್ ಪಾಲಾದರೆ, FIFA ಯುವ ಆಟಗಾರ ಪ್ರಶಸ್ತಿಯನ್ನು ಅದೇ ದೇಶದ ಎಂಝೋ ಫೆರ್ನಾಂಡಿಸ್ ತನ್ನದಾಗಿಸಿಕೊಂಡರು.

ಇದನ್ನೂ ಓದಿ: ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...