Homeಸಿನಿಮಾಕ್ರೀಡೆಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಫ್ರಾನ್ಸ್‌ನ ಕಿಲಿಯನ್ ಎಂಬಾಪೆ ಪಾತ್ರರಾದರು.

- Advertisement -
- Advertisement -

ಜಗತ್ತಿನ ಹಲವಾರು ಜನರನ್ನು ತುದಿಗಾಲ ಮೇಲೆ ನಿಲ್ಲಿಸಿದ್ದ ಕತಾರ್ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿದ ಮೆಸ್ಸಿಯ ಅರ್ಜೆಂಟೀನಾ ಮೂರನೇ ಬಾರಿಗೆ ಕಪ್ ತನ್ನದಾಗಿಸಿಕೊಂಡಿತು. ಕೊನೆಯ ಕ್ಷಣದವರೆಗೂ ದಿಟ್ಟ ಹೋರಾಟ ನಡೆಸಿದ ಫ್ರಾನ್ಸ್ ಪೆನಾಲ್ಟಿ ಶೂಟೌಟ್‌ನಲ್ಲಿ ಎಡವಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಕತಾರ್‌ನ ಲುಸೈಲ್‌ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಅರ್ಜೆಂಟೀನಾ ತಂಡ ಆರಂಭದಿಂದಲೇ ಮೇಲುಗೈ ಸಾಧಿಸಿತ್ತು. ತಂಡದ ನಾಯಕ ಲಿಯೊನೆಲ್ ಮೆಸ್ಸಿ 23ನೇ ನಿಮಿಷದಲ್ಲಿ ಪೆನಾಲ್ಟಿ ಕಿಕ್‌ನಲ್ಲಿ ಗೋಲು ಗಳಿಸಿದರೆ, ಮತ್ತೊಬ್ಬ ಆಟಗಾರ ಡಿ ಮರಿಯಾ 36ನೇ ನಿಮಿಷದಲ್ಲಿ ಗೋಲು ಗಳಿಸುವ ಮೂಲಕ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದರು. ಚೆಂಡು ಬಹುತೇಕ ಸಮಯದಲ್ಲಿ ಅರ್ಜೆಂಟೀನಾ ಕಾಲಡಿಯಲ್ಲಿಯೇ ಇಟ್ಟುಕೊಳ್ಳುವ ಮೂಲಕ ಫ್ರಾನ್ಸ್‌ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದ್ದರು.

ಆದರೆ ಪಂದ್ಯದ 80ನೇ ನಿಮಿಷದಲ್ಲಿ ಫ್ರಾನ್ಸ್‌ ತಂಡದ ಯುವ ಆಟಗಾರ ಕಿಲಿಯನ್ ಎಂಬಾಪೆ ಮ್ಯಾಜಿಕ್ ಮಾಡಿದರು. ಪೆನಾಲ್ಟಿ ಕಿಕ್ ಅನ್ನು ಗೋಲ್ ಆಗಿ ಪರಿವರ್ತಿಸಿದ ಅವರು, ಮತ್ತೆ ಒಂದು ನಿಮಿಷದ ಅಂತರದಲ್ಲಿ ಅದ್ಭುತ ಗೋಲ್ ಬಾರಿಸುವ ಮೂಲಕ ಪಂದ್ಯವನ್ನು 2-2 ಕ್ಕೆ ತಂದು ಸಮಬಲ ಸಾಧಿಸುವಂತೆ ಮಾಡಿದರು. ಫ್ರಾನ್ಸ್ ಅಭಿಮಾನಿಗಳು ಸಂಭ್ರಮದಲ್ಲಿ ಮಿಂದೇಳುವಂತೆ, ಆಟಗಾರರು ಮತ್ತೆ ಕೆಚ್ಚೆದೆಯಿಂದ ಆಡುವಂತೆ ಮಾಡಿದ ಎಂಬಾಪೆ ಪಂದ್ಯವನ್ನು ಹೆಚ್ಚುವರಿ ಸಮಯಕ್ಕೆ ತೆಗೆದುಕೊಂಡು ಹೋದರು. ನಿರಾಶೆಯ ಮಡಿಲಲ್ಲಿದ್ದ ಫ್ರಾನ್ಸ್ ಆಟಗಾರರು ಮತ್ತೆ ಪುಟಿದೇಳುವಂತೆ ಮಾಡಿದರು.

ನಿಗಧಿತ 90 ನಿಮಿಷಗಳ ಅವಧಿಯಲ್ಲಿ ಎರಡೂ ತಂಡಗಳು 2-2 ಗೋಲುಗಳೊಂದಿಗೆ ಸಮಬಲ ಸಾಧಿಸಿದ್ದರಿಂದ ಮತ್ತೆ 30 ನಿಮಿಷಗಳ ಹೆಚ್ಚುವರಿ ಸಮಯ ನೀಡಲಾಯಿತು. ಆಗ 108 ನಿಮಿಷದಲ್ಲಿ ಸಿಕ್ಕ ಅವಕಾಶವನ್ನು ತಪ್ಪಿಸದ ಅರ್ಜೆಂಟೀನಾದ ಮೆಸ್ಸಿ ಸುಂದರ ಗೋಲು ಗಳಿಸುವ ಮೂಲಕ 3-2 ಅಂತರ ಸಾಧಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಆದರೆ ಛಲ ಬಿಡದಂತೆ ಆಡಿದ ಫ್ರಾನ್ಸ್‌ನ ಎಂಬಾಪೆ ಕಡೆಯ ಹಂತದಲ್ಲಿ ಪೆನಾಲ್ಟಿ ಕಿಕ್ ಅವಕಾಶವನ್ನು ನೇರ ಗೋಲ್ ಬಾರಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಪಾತ್ರರಾದರು. ಅಲ್ಲದೆ ಪಂದ್ಯವನ್ನು 3-3 ಸಮಬಲಕ್ಕೆ ತಂದು ಕಪ್ ಆಸೆಯನ್ನು ಜೀವಂತವಾಗಿರಿಸಿದರು.

ಪೆನಾಲ್ಟಿ ಶೂಟೌಟ್‌

ಹೆಚ್ಚುವರಿ ಸಮಯದಲ್ಲಿಯೂ ಉಭಯ ತಂಡಗಳು ಸಮಬಲ ಸಾಧಿಸಿದ್ದರಿಂದ ಪೆನಾಲ್ಟಿ ಶೂಟೌಟ್‌ ನೀಡಲಾಯಿತು. ಮೊದಲು ಕಿಕ್ ಮಾಡುವ ಅವಕಾಶ ಪಡೆದ ಫ್ರಾನ್ಸ್ ತಮ್ಮ ಮೊದಲ ಪ್ರಯತ್ನದಲ್ಲಿಯೇ ಎಂಬಾಪೆ ಚೆಂಡನ್ನು ಗೋಲ್ ಪೋಸ್ಟ್ ತಲುಪಿಸಿದರು. ಅದೇ ರೀತಿ ಅರ್ಜೆಂಟೀನಾದ ಮೆಸ್ಸಿ ಸಹ ಗುರಿ ತಪ್ಪಲಿಲ್ಲ. ಆದರೆ ಫ್ರಾನ್ಸ್ ತನ್ನ ಎರಡನೆ ಪ್ರಯತ್ನದಲ್ಲಿ ವಿಫಲವಾಯಿತು. ಅರ್ಜೆಂಟೀನಾ ತನ್ನ ನಾಲ್ಕು ಪ್ರಯತ್ನಗಳಲ್ಲಿ ನಾಲ್ಕು ಪೆನಾಲ್ಟಿ ಗೋಲ್ ಗಳಿಸಿದರೆ, ಫ್ರಾನ್ಸ್ ಕೇವಲ ಎರಡು ಗೋಲು ಗಳಿಸಲು ಸಾಧ್ಯವಾಗಿ ಸೋಲೊಪ್ಪಿಕೊಂಡಿತು. ಎಂಬಾಪೆಯ ಶ್ರಮ ವ್ಯರ್ಥವಾಯಿತು. ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ (4-2 ಅಂತರದಲ್ಲಿ) ಗೆದ್ದು ಸಂಭ್ರಮಿಸಿತು. ಮೆಸ್ಸಿ ತನ್ನ ಬಹುದಿನದ ವಿಶ್ವಕಪ್ ಗೆಲುವಿನ ಕನಸು ನನಸಾಗಿಸಿಕೊಂಡರು. ಅವರ ವಿದಾಯಕ್ಕೆ ಸೂಕ್ತ ಗೌರವ ದೊರಕಿತೆಂಬ ಭಾವ ಎಲ್ಲರಲ್ಲಿ ಮೂಡಿತು.

ಗೋಲ್ಡನ್ ಬೂಟ್ ಗೆದ್ದ ಎಂಬಾಪೆ, ಗೋಲ್ಡನ್ ಬಾಲ್ ತನ್ನದಾಗಿಸಿಕೊಂಡ ಮೆಸ್ಸಿ

ಈ ವಿಶ್ವಕಪ್‌ನಲ್ಲಿ 8 ಗೋಲು ಗಳಿಸಿದ ಕಿಲಿಯನ್ ಎಂಬಾಪೆ ಗೋಲ್ಡನ್ ಬೂಟ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಆದರೆ ಫ್ರಾನ್ಸ್ ಸೋತ ನಿರಾಸೆಯಲ್ಲಿ ಅವರು ಅದನ್ನು ಸಂಭ್ರಮಿಸಲೇ ಇಲ್ಲ. ಇನ್ನೊಂದೆಡೆ 7 ಗೋಲ್ ಗಳಿಸಿದ ಮೆಸ್ಸಿಗೆ ಗೋಲ್ಡನ್ ಬಾಲ್ ಪ್ರಶಸ್ತಿ ದಕ್ಕಿತು. ಗೋಲ್ಡನ್ ಗ್ಲೋವ್ ಪ್ರಶಸ್ತಿ ಅರ್ಜೆಂಟೀನಾದ ಎಮಿಲಿಯಾನೋ ಮಾರ್ಟಿನೆಜ್ ಪಾಲಾದರೆ, FIFA ಯುವ ಆಟಗಾರ ಪ್ರಶಸ್ತಿಯನ್ನು ಅದೇ ದೇಶದ ಎಂಝೋ ಫೆರ್ನಾಂಡಿಸ್ ತನ್ನದಾಗಿಸಿಕೊಂಡರು.

ಇದನ್ನೂ ಓದಿ: ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...