Homeಸಿನಿಮಾಕ್ರೀಡೆಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಫ್ರಾನ್ಸ್‌ನ ಕಿಲಿಯನ್ ಎಂಬಾಪೆ ಪಾತ್ರರಾದರು.

- Advertisement -
- Advertisement -

ಜಗತ್ತಿನ ಹಲವಾರು ಜನರನ್ನು ತುದಿಗಾಲ ಮೇಲೆ ನಿಲ್ಲಿಸಿದ್ದ ಕತಾರ್ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿದ ಮೆಸ್ಸಿಯ ಅರ್ಜೆಂಟೀನಾ ಮೂರನೇ ಬಾರಿಗೆ ಕಪ್ ತನ್ನದಾಗಿಸಿಕೊಂಡಿತು. ಕೊನೆಯ ಕ್ಷಣದವರೆಗೂ ದಿಟ್ಟ ಹೋರಾಟ ನಡೆಸಿದ ಫ್ರಾನ್ಸ್ ಪೆನಾಲ್ಟಿ ಶೂಟೌಟ್‌ನಲ್ಲಿ ಎಡವಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಕತಾರ್‌ನ ಲುಸೈಲ್‌ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಅರ್ಜೆಂಟೀನಾ ತಂಡ ಆರಂಭದಿಂದಲೇ ಮೇಲುಗೈ ಸಾಧಿಸಿತ್ತು. ತಂಡದ ನಾಯಕ ಲಿಯೊನೆಲ್ ಮೆಸ್ಸಿ 23ನೇ ನಿಮಿಷದಲ್ಲಿ ಪೆನಾಲ್ಟಿ ಕಿಕ್‌ನಲ್ಲಿ ಗೋಲು ಗಳಿಸಿದರೆ, ಮತ್ತೊಬ್ಬ ಆಟಗಾರ ಡಿ ಮರಿಯಾ 36ನೇ ನಿಮಿಷದಲ್ಲಿ ಗೋಲು ಗಳಿಸುವ ಮೂಲಕ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದರು. ಚೆಂಡು ಬಹುತೇಕ ಸಮಯದಲ್ಲಿ ಅರ್ಜೆಂಟೀನಾ ಕಾಲಡಿಯಲ್ಲಿಯೇ ಇಟ್ಟುಕೊಳ್ಳುವ ಮೂಲಕ ಫ್ರಾನ್ಸ್‌ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದ್ದರು.

ಆದರೆ ಪಂದ್ಯದ 80ನೇ ನಿಮಿಷದಲ್ಲಿ ಫ್ರಾನ್ಸ್‌ ತಂಡದ ಯುವ ಆಟಗಾರ ಕಿಲಿಯನ್ ಎಂಬಾಪೆ ಮ್ಯಾಜಿಕ್ ಮಾಡಿದರು. ಪೆನಾಲ್ಟಿ ಕಿಕ್ ಅನ್ನು ಗೋಲ್ ಆಗಿ ಪರಿವರ್ತಿಸಿದ ಅವರು, ಮತ್ತೆ ಒಂದು ನಿಮಿಷದ ಅಂತರದಲ್ಲಿ ಅದ್ಭುತ ಗೋಲ್ ಬಾರಿಸುವ ಮೂಲಕ ಪಂದ್ಯವನ್ನು 2-2 ಕ್ಕೆ ತಂದು ಸಮಬಲ ಸಾಧಿಸುವಂತೆ ಮಾಡಿದರು. ಫ್ರಾನ್ಸ್ ಅಭಿಮಾನಿಗಳು ಸಂಭ್ರಮದಲ್ಲಿ ಮಿಂದೇಳುವಂತೆ, ಆಟಗಾರರು ಮತ್ತೆ ಕೆಚ್ಚೆದೆಯಿಂದ ಆಡುವಂತೆ ಮಾಡಿದ ಎಂಬಾಪೆ ಪಂದ್ಯವನ್ನು ಹೆಚ್ಚುವರಿ ಸಮಯಕ್ಕೆ ತೆಗೆದುಕೊಂಡು ಹೋದರು. ನಿರಾಶೆಯ ಮಡಿಲಲ್ಲಿದ್ದ ಫ್ರಾನ್ಸ್ ಆಟಗಾರರು ಮತ್ತೆ ಪುಟಿದೇಳುವಂತೆ ಮಾಡಿದರು.

ನಿಗಧಿತ 90 ನಿಮಿಷಗಳ ಅವಧಿಯಲ್ಲಿ ಎರಡೂ ತಂಡಗಳು 2-2 ಗೋಲುಗಳೊಂದಿಗೆ ಸಮಬಲ ಸಾಧಿಸಿದ್ದರಿಂದ ಮತ್ತೆ 30 ನಿಮಿಷಗಳ ಹೆಚ್ಚುವರಿ ಸಮಯ ನೀಡಲಾಯಿತು. ಆಗ 108 ನಿಮಿಷದಲ್ಲಿ ಸಿಕ್ಕ ಅವಕಾಶವನ್ನು ತಪ್ಪಿಸದ ಅರ್ಜೆಂಟೀನಾದ ಮೆಸ್ಸಿ ಸುಂದರ ಗೋಲು ಗಳಿಸುವ ಮೂಲಕ 3-2 ಅಂತರ ಸಾಧಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಆದರೆ ಛಲ ಬಿಡದಂತೆ ಆಡಿದ ಫ್ರಾನ್ಸ್‌ನ ಎಂಬಾಪೆ ಕಡೆಯ ಹಂತದಲ್ಲಿ ಪೆನಾಲ್ಟಿ ಕಿಕ್ ಅವಕಾಶವನ್ನು ನೇರ ಗೋಲ್ ಬಾರಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಪಾತ್ರರಾದರು. ಅಲ್ಲದೆ ಪಂದ್ಯವನ್ನು 3-3 ಸಮಬಲಕ್ಕೆ ತಂದು ಕಪ್ ಆಸೆಯನ್ನು ಜೀವಂತವಾಗಿರಿಸಿದರು.

ಪೆನಾಲ್ಟಿ ಶೂಟೌಟ್‌

ಹೆಚ್ಚುವರಿ ಸಮಯದಲ್ಲಿಯೂ ಉಭಯ ತಂಡಗಳು ಸಮಬಲ ಸಾಧಿಸಿದ್ದರಿಂದ ಪೆನಾಲ್ಟಿ ಶೂಟೌಟ್‌ ನೀಡಲಾಯಿತು. ಮೊದಲು ಕಿಕ್ ಮಾಡುವ ಅವಕಾಶ ಪಡೆದ ಫ್ರಾನ್ಸ್ ತಮ್ಮ ಮೊದಲ ಪ್ರಯತ್ನದಲ್ಲಿಯೇ ಎಂಬಾಪೆ ಚೆಂಡನ್ನು ಗೋಲ್ ಪೋಸ್ಟ್ ತಲುಪಿಸಿದರು. ಅದೇ ರೀತಿ ಅರ್ಜೆಂಟೀನಾದ ಮೆಸ್ಸಿ ಸಹ ಗುರಿ ತಪ್ಪಲಿಲ್ಲ. ಆದರೆ ಫ್ರಾನ್ಸ್ ತನ್ನ ಎರಡನೆ ಪ್ರಯತ್ನದಲ್ಲಿ ವಿಫಲವಾಯಿತು. ಅರ್ಜೆಂಟೀನಾ ತನ್ನ ನಾಲ್ಕು ಪ್ರಯತ್ನಗಳಲ್ಲಿ ನಾಲ್ಕು ಪೆನಾಲ್ಟಿ ಗೋಲ್ ಗಳಿಸಿದರೆ, ಫ್ರಾನ್ಸ್ ಕೇವಲ ಎರಡು ಗೋಲು ಗಳಿಸಲು ಸಾಧ್ಯವಾಗಿ ಸೋಲೊಪ್ಪಿಕೊಂಡಿತು. ಎಂಬಾಪೆಯ ಶ್ರಮ ವ್ಯರ್ಥವಾಯಿತು. ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ (4-2 ಅಂತರದಲ್ಲಿ) ಗೆದ್ದು ಸಂಭ್ರಮಿಸಿತು. ಮೆಸ್ಸಿ ತನ್ನ ಬಹುದಿನದ ವಿಶ್ವಕಪ್ ಗೆಲುವಿನ ಕನಸು ನನಸಾಗಿಸಿಕೊಂಡರು. ಅವರ ವಿದಾಯಕ್ಕೆ ಸೂಕ್ತ ಗೌರವ ದೊರಕಿತೆಂಬ ಭಾವ ಎಲ್ಲರಲ್ಲಿ ಮೂಡಿತು.

ಗೋಲ್ಡನ್ ಬೂಟ್ ಗೆದ್ದ ಎಂಬಾಪೆ, ಗೋಲ್ಡನ್ ಬಾಲ್ ತನ್ನದಾಗಿಸಿಕೊಂಡ ಮೆಸ್ಸಿ

ಈ ವಿಶ್ವಕಪ್‌ನಲ್ಲಿ 8 ಗೋಲು ಗಳಿಸಿದ ಕಿಲಿಯನ್ ಎಂಬಾಪೆ ಗೋಲ್ಡನ್ ಬೂಟ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಆದರೆ ಫ್ರಾನ್ಸ್ ಸೋತ ನಿರಾಸೆಯಲ್ಲಿ ಅವರು ಅದನ್ನು ಸಂಭ್ರಮಿಸಲೇ ಇಲ್ಲ. ಇನ್ನೊಂದೆಡೆ 7 ಗೋಲ್ ಗಳಿಸಿದ ಮೆಸ್ಸಿಗೆ ಗೋಲ್ಡನ್ ಬಾಲ್ ಪ್ರಶಸ್ತಿ ದಕ್ಕಿತು. ಗೋಲ್ಡನ್ ಗ್ಲೋವ್ ಪ್ರಶಸ್ತಿ ಅರ್ಜೆಂಟೀನಾದ ಎಮಿಲಿಯಾನೋ ಮಾರ್ಟಿನೆಜ್ ಪಾಲಾದರೆ, FIFA ಯುವ ಆಟಗಾರ ಪ್ರಶಸ್ತಿಯನ್ನು ಅದೇ ದೇಶದ ಎಂಝೋ ಫೆರ್ನಾಂಡಿಸ್ ತನ್ನದಾಗಿಸಿಕೊಂಡರು.

ಇದನ್ನೂ ಓದಿ: ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...