Homeಸಿನಿಮಾಕ್ರೀಡೆಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಫ್ರಾನ್ಸ್‌ನ ಕಿಲಿಯನ್ ಎಂಬಾಪೆ ಪಾತ್ರರಾದರು.

- Advertisement -
- Advertisement -

ಜಗತ್ತಿನ ಹಲವಾರು ಜನರನ್ನು ತುದಿಗಾಲ ಮೇಲೆ ನಿಲ್ಲಿಸಿದ್ದ ಕತಾರ್ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿದ ಮೆಸ್ಸಿಯ ಅರ್ಜೆಂಟೀನಾ ಮೂರನೇ ಬಾರಿಗೆ ಕಪ್ ತನ್ನದಾಗಿಸಿಕೊಂಡಿತು. ಕೊನೆಯ ಕ್ಷಣದವರೆಗೂ ದಿಟ್ಟ ಹೋರಾಟ ನಡೆಸಿದ ಫ್ರಾನ್ಸ್ ಪೆನಾಲ್ಟಿ ಶೂಟೌಟ್‌ನಲ್ಲಿ ಎಡವಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಕತಾರ್‌ನ ಲುಸೈಲ್‌ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಅರ್ಜೆಂಟೀನಾ ತಂಡ ಆರಂಭದಿಂದಲೇ ಮೇಲುಗೈ ಸಾಧಿಸಿತ್ತು. ತಂಡದ ನಾಯಕ ಲಿಯೊನೆಲ್ ಮೆಸ್ಸಿ 23ನೇ ನಿಮಿಷದಲ್ಲಿ ಪೆನಾಲ್ಟಿ ಕಿಕ್‌ನಲ್ಲಿ ಗೋಲು ಗಳಿಸಿದರೆ, ಮತ್ತೊಬ್ಬ ಆಟಗಾರ ಡಿ ಮರಿಯಾ 36ನೇ ನಿಮಿಷದಲ್ಲಿ ಗೋಲು ಗಳಿಸುವ ಮೂಲಕ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದರು. ಚೆಂಡು ಬಹುತೇಕ ಸಮಯದಲ್ಲಿ ಅರ್ಜೆಂಟೀನಾ ಕಾಲಡಿಯಲ್ಲಿಯೇ ಇಟ್ಟುಕೊಳ್ಳುವ ಮೂಲಕ ಫ್ರಾನ್ಸ್‌ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದ್ದರು.

ಆದರೆ ಪಂದ್ಯದ 80ನೇ ನಿಮಿಷದಲ್ಲಿ ಫ್ರಾನ್ಸ್‌ ತಂಡದ ಯುವ ಆಟಗಾರ ಕಿಲಿಯನ್ ಎಂಬಾಪೆ ಮ್ಯಾಜಿಕ್ ಮಾಡಿದರು. ಪೆನಾಲ್ಟಿ ಕಿಕ್ ಅನ್ನು ಗೋಲ್ ಆಗಿ ಪರಿವರ್ತಿಸಿದ ಅವರು, ಮತ್ತೆ ಒಂದು ನಿಮಿಷದ ಅಂತರದಲ್ಲಿ ಅದ್ಭುತ ಗೋಲ್ ಬಾರಿಸುವ ಮೂಲಕ ಪಂದ್ಯವನ್ನು 2-2 ಕ್ಕೆ ತಂದು ಸಮಬಲ ಸಾಧಿಸುವಂತೆ ಮಾಡಿದರು. ಫ್ರಾನ್ಸ್ ಅಭಿಮಾನಿಗಳು ಸಂಭ್ರಮದಲ್ಲಿ ಮಿಂದೇಳುವಂತೆ, ಆಟಗಾರರು ಮತ್ತೆ ಕೆಚ್ಚೆದೆಯಿಂದ ಆಡುವಂತೆ ಮಾಡಿದ ಎಂಬಾಪೆ ಪಂದ್ಯವನ್ನು ಹೆಚ್ಚುವರಿ ಸಮಯಕ್ಕೆ ತೆಗೆದುಕೊಂಡು ಹೋದರು. ನಿರಾಶೆಯ ಮಡಿಲಲ್ಲಿದ್ದ ಫ್ರಾನ್ಸ್ ಆಟಗಾರರು ಮತ್ತೆ ಪುಟಿದೇಳುವಂತೆ ಮಾಡಿದರು.

ನಿಗಧಿತ 90 ನಿಮಿಷಗಳ ಅವಧಿಯಲ್ಲಿ ಎರಡೂ ತಂಡಗಳು 2-2 ಗೋಲುಗಳೊಂದಿಗೆ ಸಮಬಲ ಸಾಧಿಸಿದ್ದರಿಂದ ಮತ್ತೆ 30 ನಿಮಿಷಗಳ ಹೆಚ್ಚುವರಿ ಸಮಯ ನೀಡಲಾಯಿತು. ಆಗ 108 ನಿಮಿಷದಲ್ಲಿ ಸಿಕ್ಕ ಅವಕಾಶವನ್ನು ತಪ್ಪಿಸದ ಅರ್ಜೆಂಟೀನಾದ ಮೆಸ್ಸಿ ಸುಂದರ ಗೋಲು ಗಳಿಸುವ ಮೂಲಕ 3-2 ಅಂತರ ಸಾಧಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಆದರೆ ಛಲ ಬಿಡದಂತೆ ಆಡಿದ ಫ್ರಾನ್ಸ್‌ನ ಎಂಬಾಪೆ ಕಡೆಯ ಹಂತದಲ್ಲಿ ಪೆನಾಲ್ಟಿ ಕಿಕ್ ಅವಕಾಶವನ್ನು ನೇರ ಗೋಲ್ ಬಾರಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಪಾತ್ರರಾದರು. ಅಲ್ಲದೆ ಪಂದ್ಯವನ್ನು 3-3 ಸಮಬಲಕ್ಕೆ ತಂದು ಕಪ್ ಆಸೆಯನ್ನು ಜೀವಂತವಾಗಿರಿಸಿದರು.

ಪೆನಾಲ್ಟಿ ಶೂಟೌಟ್‌

ಹೆಚ್ಚುವರಿ ಸಮಯದಲ್ಲಿಯೂ ಉಭಯ ತಂಡಗಳು ಸಮಬಲ ಸಾಧಿಸಿದ್ದರಿಂದ ಪೆನಾಲ್ಟಿ ಶೂಟೌಟ್‌ ನೀಡಲಾಯಿತು. ಮೊದಲು ಕಿಕ್ ಮಾಡುವ ಅವಕಾಶ ಪಡೆದ ಫ್ರಾನ್ಸ್ ತಮ್ಮ ಮೊದಲ ಪ್ರಯತ್ನದಲ್ಲಿಯೇ ಎಂಬಾಪೆ ಚೆಂಡನ್ನು ಗೋಲ್ ಪೋಸ್ಟ್ ತಲುಪಿಸಿದರು. ಅದೇ ರೀತಿ ಅರ್ಜೆಂಟೀನಾದ ಮೆಸ್ಸಿ ಸಹ ಗುರಿ ತಪ್ಪಲಿಲ್ಲ. ಆದರೆ ಫ್ರಾನ್ಸ್ ತನ್ನ ಎರಡನೆ ಪ್ರಯತ್ನದಲ್ಲಿ ವಿಫಲವಾಯಿತು. ಅರ್ಜೆಂಟೀನಾ ತನ್ನ ನಾಲ್ಕು ಪ್ರಯತ್ನಗಳಲ್ಲಿ ನಾಲ್ಕು ಪೆನಾಲ್ಟಿ ಗೋಲ್ ಗಳಿಸಿದರೆ, ಫ್ರಾನ್ಸ್ ಕೇವಲ ಎರಡು ಗೋಲು ಗಳಿಸಲು ಸಾಧ್ಯವಾಗಿ ಸೋಲೊಪ್ಪಿಕೊಂಡಿತು. ಎಂಬಾಪೆಯ ಶ್ರಮ ವ್ಯರ್ಥವಾಯಿತು. ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ (4-2 ಅಂತರದಲ್ಲಿ) ಗೆದ್ದು ಸಂಭ್ರಮಿಸಿತು. ಮೆಸ್ಸಿ ತನ್ನ ಬಹುದಿನದ ವಿಶ್ವಕಪ್ ಗೆಲುವಿನ ಕನಸು ನನಸಾಗಿಸಿಕೊಂಡರು. ಅವರ ವಿದಾಯಕ್ಕೆ ಸೂಕ್ತ ಗೌರವ ದೊರಕಿತೆಂಬ ಭಾವ ಎಲ್ಲರಲ್ಲಿ ಮೂಡಿತು.

ಗೋಲ್ಡನ್ ಬೂಟ್ ಗೆದ್ದ ಎಂಬಾಪೆ, ಗೋಲ್ಡನ್ ಬಾಲ್ ತನ್ನದಾಗಿಸಿಕೊಂಡ ಮೆಸ್ಸಿ

ಈ ವಿಶ್ವಕಪ್‌ನಲ್ಲಿ 8 ಗೋಲು ಗಳಿಸಿದ ಕಿಲಿಯನ್ ಎಂಬಾಪೆ ಗೋಲ್ಡನ್ ಬೂಟ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಆದರೆ ಫ್ರಾನ್ಸ್ ಸೋತ ನಿರಾಸೆಯಲ್ಲಿ ಅವರು ಅದನ್ನು ಸಂಭ್ರಮಿಸಲೇ ಇಲ್ಲ. ಇನ್ನೊಂದೆಡೆ 7 ಗೋಲ್ ಗಳಿಸಿದ ಮೆಸ್ಸಿಗೆ ಗೋಲ್ಡನ್ ಬಾಲ್ ಪ್ರಶಸ್ತಿ ದಕ್ಕಿತು. ಗೋಲ್ಡನ್ ಗ್ಲೋವ್ ಪ್ರಶಸ್ತಿ ಅರ್ಜೆಂಟೀನಾದ ಎಮಿಲಿಯಾನೋ ಮಾರ್ಟಿನೆಜ್ ಪಾಲಾದರೆ, FIFA ಯುವ ಆಟಗಾರ ಪ್ರಶಸ್ತಿಯನ್ನು ಅದೇ ದೇಶದ ಎಂಝೋ ಫೆರ್ನಾಂಡಿಸ್ ತನ್ನದಾಗಿಸಿಕೊಂಡರು.

ಇದನ್ನೂ ಓದಿ: ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...