Homeಸಿನಿಮಾಕ್ರೀಡೆಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಫ್ರಾನ್ಸ್‌ನ ಕಿಲಿಯನ್ ಎಂಬಾಪೆ ಪಾತ್ರರಾದರು.

- Advertisement -
- Advertisement -

ಜಗತ್ತಿನ ಹಲವಾರು ಜನರನ್ನು ತುದಿಗಾಲ ಮೇಲೆ ನಿಲ್ಲಿಸಿದ್ದ ಕತಾರ್ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿದ ಮೆಸ್ಸಿಯ ಅರ್ಜೆಂಟೀನಾ ಮೂರನೇ ಬಾರಿಗೆ ಕಪ್ ತನ್ನದಾಗಿಸಿಕೊಂಡಿತು. ಕೊನೆಯ ಕ್ಷಣದವರೆಗೂ ದಿಟ್ಟ ಹೋರಾಟ ನಡೆಸಿದ ಫ್ರಾನ್ಸ್ ಪೆನಾಲ್ಟಿ ಶೂಟೌಟ್‌ನಲ್ಲಿ ಎಡವಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಕತಾರ್‌ನ ಲುಸೈಲ್‌ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಅರ್ಜೆಂಟೀನಾ ತಂಡ ಆರಂಭದಿಂದಲೇ ಮೇಲುಗೈ ಸಾಧಿಸಿತ್ತು. ತಂಡದ ನಾಯಕ ಲಿಯೊನೆಲ್ ಮೆಸ್ಸಿ 23ನೇ ನಿಮಿಷದಲ್ಲಿ ಪೆನಾಲ್ಟಿ ಕಿಕ್‌ನಲ್ಲಿ ಗೋಲು ಗಳಿಸಿದರೆ, ಮತ್ತೊಬ್ಬ ಆಟಗಾರ ಡಿ ಮರಿಯಾ 36ನೇ ನಿಮಿಷದಲ್ಲಿ ಗೋಲು ಗಳಿಸುವ ಮೂಲಕ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದರು. ಚೆಂಡು ಬಹುತೇಕ ಸಮಯದಲ್ಲಿ ಅರ್ಜೆಂಟೀನಾ ಕಾಲಡಿಯಲ್ಲಿಯೇ ಇಟ್ಟುಕೊಳ್ಳುವ ಮೂಲಕ ಫ್ರಾನ್ಸ್‌ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದ್ದರು.

ಆದರೆ ಪಂದ್ಯದ 80ನೇ ನಿಮಿಷದಲ್ಲಿ ಫ್ರಾನ್ಸ್‌ ತಂಡದ ಯುವ ಆಟಗಾರ ಕಿಲಿಯನ್ ಎಂಬಾಪೆ ಮ್ಯಾಜಿಕ್ ಮಾಡಿದರು. ಪೆನಾಲ್ಟಿ ಕಿಕ್ ಅನ್ನು ಗೋಲ್ ಆಗಿ ಪರಿವರ್ತಿಸಿದ ಅವರು, ಮತ್ತೆ ಒಂದು ನಿಮಿಷದ ಅಂತರದಲ್ಲಿ ಅದ್ಭುತ ಗೋಲ್ ಬಾರಿಸುವ ಮೂಲಕ ಪಂದ್ಯವನ್ನು 2-2 ಕ್ಕೆ ತಂದು ಸಮಬಲ ಸಾಧಿಸುವಂತೆ ಮಾಡಿದರು. ಫ್ರಾನ್ಸ್ ಅಭಿಮಾನಿಗಳು ಸಂಭ್ರಮದಲ್ಲಿ ಮಿಂದೇಳುವಂತೆ, ಆಟಗಾರರು ಮತ್ತೆ ಕೆಚ್ಚೆದೆಯಿಂದ ಆಡುವಂತೆ ಮಾಡಿದ ಎಂಬಾಪೆ ಪಂದ್ಯವನ್ನು ಹೆಚ್ಚುವರಿ ಸಮಯಕ್ಕೆ ತೆಗೆದುಕೊಂಡು ಹೋದರು. ನಿರಾಶೆಯ ಮಡಿಲಲ್ಲಿದ್ದ ಫ್ರಾನ್ಸ್ ಆಟಗಾರರು ಮತ್ತೆ ಪುಟಿದೇಳುವಂತೆ ಮಾಡಿದರು.

ನಿಗಧಿತ 90 ನಿಮಿಷಗಳ ಅವಧಿಯಲ್ಲಿ ಎರಡೂ ತಂಡಗಳು 2-2 ಗೋಲುಗಳೊಂದಿಗೆ ಸಮಬಲ ಸಾಧಿಸಿದ್ದರಿಂದ ಮತ್ತೆ 30 ನಿಮಿಷಗಳ ಹೆಚ್ಚುವರಿ ಸಮಯ ನೀಡಲಾಯಿತು. ಆಗ 108 ನಿಮಿಷದಲ್ಲಿ ಸಿಕ್ಕ ಅವಕಾಶವನ್ನು ತಪ್ಪಿಸದ ಅರ್ಜೆಂಟೀನಾದ ಮೆಸ್ಸಿ ಸುಂದರ ಗೋಲು ಗಳಿಸುವ ಮೂಲಕ 3-2 ಅಂತರ ಸಾಧಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಆದರೆ ಛಲ ಬಿಡದಂತೆ ಆಡಿದ ಫ್ರಾನ್ಸ್‌ನ ಎಂಬಾಪೆ ಕಡೆಯ ಹಂತದಲ್ಲಿ ಪೆನಾಲ್ಟಿ ಕಿಕ್ ಅವಕಾಶವನ್ನು ನೇರ ಗೋಲ್ ಬಾರಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಪಾತ್ರರಾದರು. ಅಲ್ಲದೆ ಪಂದ್ಯವನ್ನು 3-3 ಸಮಬಲಕ್ಕೆ ತಂದು ಕಪ್ ಆಸೆಯನ್ನು ಜೀವಂತವಾಗಿರಿಸಿದರು.

ಪೆನಾಲ್ಟಿ ಶೂಟೌಟ್‌

ಹೆಚ್ಚುವರಿ ಸಮಯದಲ್ಲಿಯೂ ಉಭಯ ತಂಡಗಳು ಸಮಬಲ ಸಾಧಿಸಿದ್ದರಿಂದ ಪೆನಾಲ್ಟಿ ಶೂಟೌಟ್‌ ನೀಡಲಾಯಿತು. ಮೊದಲು ಕಿಕ್ ಮಾಡುವ ಅವಕಾಶ ಪಡೆದ ಫ್ರಾನ್ಸ್ ತಮ್ಮ ಮೊದಲ ಪ್ರಯತ್ನದಲ್ಲಿಯೇ ಎಂಬಾಪೆ ಚೆಂಡನ್ನು ಗೋಲ್ ಪೋಸ್ಟ್ ತಲುಪಿಸಿದರು. ಅದೇ ರೀತಿ ಅರ್ಜೆಂಟೀನಾದ ಮೆಸ್ಸಿ ಸಹ ಗುರಿ ತಪ್ಪಲಿಲ್ಲ. ಆದರೆ ಫ್ರಾನ್ಸ್ ತನ್ನ ಎರಡನೆ ಪ್ರಯತ್ನದಲ್ಲಿ ವಿಫಲವಾಯಿತು. ಅರ್ಜೆಂಟೀನಾ ತನ್ನ ನಾಲ್ಕು ಪ್ರಯತ್ನಗಳಲ್ಲಿ ನಾಲ್ಕು ಪೆನಾಲ್ಟಿ ಗೋಲ್ ಗಳಿಸಿದರೆ, ಫ್ರಾನ್ಸ್ ಕೇವಲ ಎರಡು ಗೋಲು ಗಳಿಸಲು ಸಾಧ್ಯವಾಗಿ ಸೋಲೊಪ್ಪಿಕೊಂಡಿತು. ಎಂಬಾಪೆಯ ಶ್ರಮ ವ್ಯರ್ಥವಾಯಿತು. ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ (4-2 ಅಂತರದಲ್ಲಿ) ಗೆದ್ದು ಸಂಭ್ರಮಿಸಿತು. ಮೆಸ್ಸಿ ತನ್ನ ಬಹುದಿನದ ವಿಶ್ವಕಪ್ ಗೆಲುವಿನ ಕನಸು ನನಸಾಗಿಸಿಕೊಂಡರು. ಅವರ ವಿದಾಯಕ್ಕೆ ಸೂಕ್ತ ಗೌರವ ದೊರಕಿತೆಂಬ ಭಾವ ಎಲ್ಲರಲ್ಲಿ ಮೂಡಿತು.

ಗೋಲ್ಡನ್ ಬೂಟ್ ಗೆದ್ದ ಎಂಬಾಪೆ, ಗೋಲ್ಡನ್ ಬಾಲ್ ತನ್ನದಾಗಿಸಿಕೊಂಡ ಮೆಸ್ಸಿ

ಈ ವಿಶ್ವಕಪ್‌ನಲ್ಲಿ 8 ಗೋಲು ಗಳಿಸಿದ ಕಿಲಿಯನ್ ಎಂಬಾಪೆ ಗೋಲ್ಡನ್ ಬೂಟ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಆದರೆ ಫ್ರಾನ್ಸ್ ಸೋತ ನಿರಾಸೆಯಲ್ಲಿ ಅವರು ಅದನ್ನು ಸಂಭ್ರಮಿಸಲೇ ಇಲ್ಲ. ಇನ್ನೊಂದೆಡೆ 7 ಗೋಲ್ ಗಳಿಸಿದ ಮೆಸ್ಸಿಗೆ ಗೋಲ್ಡನ್ ಬಾಲ್ ಪ್ರಶಸ್ತಿ ದಕ್ಕಿತು. ಗೋಲ್ಡನ್ ಗ್ಲೋವ್ ಪ್ರಶಸ್ತಿ ಅರ್ಜೆಂಟೀನಾದ ಎಮಿಲಿಯಾನೋ ಮಾರ್ಟಿನೆಜ್ ಪಾಲಾದರೆ, FIFA ಯುವ ಆಟಗಾರ ಪ್ರಶಸ್ತಿಯನ್ನು ಅದೇ ದೇಶದ ಎಂಝೋ ಫೆರ್ನಾಂಡಿಸ್ ತನ್ನದಾಗಿಸಿಕೊಂಡರು.

ಇದನ್ನೂ ಓದಿ: ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...