Homeಸಿನಿಮಾಕ್ರೀಡೆಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ಫಿಫಾ ವಿಶ್ವಕಪ್: ಕಾಲ್ಚೆಂಡಿನ ಕಾಳಗದಲ್ಲಿ ಮೂರನೇ ಕಪ್ ಗೆದ್ದ ಮೆಸ್ಸಿಯ ಅರ್ಜೆಂಟೀನಾ

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಫ್ರಾನ್ಸ್‌ನ ಕಿಲಿಯನ್ ಎಂಬಾಪೆ ಪಾತ್ರರಾದರು.

- Advertisement -
- Advertisement -

ಜಗತ್ತಿನ ಹಲವಾರು ಜನರನ್ನು ತುದಿಗಾಲ ಮೇಲೆ ನಿಲ್ಲಿಸಿದ್ದ ಕತಾರ್ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿದ ಮೆಸ್ಸಿಯ ಅರ್ಜೆಂಟೀನಾ ಮೂರನೇ ಬಾರಿಗೆ ಕಪ್ ತನ್ನದಾಗಿಸಿಕೊಂಡಿತು. ಕೊನೆಯ ಕ್ಷಣದವರೆಗೂ ದಿಟ್ಟ ಹೋರಾಟ ನಡೆಸಿದ ಫ್ರಾನ್ಸ್ ಪೆನಾಲ್ಟಿ ಶೂಟೌಟ್‌ನಲ್ಲಿ ಎಡವಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಕತಾರ್‌ನ ಲುಸೈಲ್‌ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಅರ್ಜೆಂಟೀನಾ ತಂಡ ಆರಂಭದಿಂದಲೇ ಮೇಲುಗೈ ಸಾಧಿಸಿತ್ತು. ತಂಡದ ನಾಯಕ ಲಿಯೊನೆಲ್ ಮೆಸ್ಸಿ 23ನೇ ನಿಮಿಷದಲ್ಲಿ ಪೆನಾಲ್ಟಿ ಕಿಕ್‌ನಲ್ಲಿ ಗೋಲು ಗಳಿಸಿದರೆ, ಮತ್ತೊಬ್ಬ ಆಟಗಾರ ಡಿ ಮರಿಯಾ 36ನೇ ನಿಮಿಷದಲ್ಲಿ ಗೋಲು ಗಳಿಸುವ ಮೂಲಕ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದರು. ಚೆಂಡು ಬಹುತೇಕ ಸಮಯದಲ್ಲಿ ಅರ್ಜೆಂಟೀನಾ ಕಾಲಡಿಯಲ್ಲಿಯೇ ಇಟ್ಟುಕೊಳ್ಳುವ ಮೂಲಕ ಫ್ರಾನ್ಸ್‌ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದ್ದರು.

ಆದರೆ ಪಂದ್ಯದ 80ನೇ ನಿಮಿಷದಲ್ಲಿ ಫ್ರಾನ್ಸ್‌ ತಂಡದ ಯುವ ಆಟಗಾರ ಕಿಲಿಯನ್ ಎಂಬಾಪೆ ಮ್ಯಾಜಿಕ್ ಮಾಡಿದರು. ಪೆನಾಲ್ಟಿ ಕಿಕ್ ಅನ್ನು ಗೋಲ್ ಆಗಿ ಪರಿವರ್ತಿಸಿದ ಅವರು, ಮತ್ತೆ ಒಂದು ನಿಮಿಷದ ಅಂತರದಲ್ಲಿ ಅದ್ಭುತ ಗೋಲ್ ಬಾರಿಸುವ ಮೂಲಕ ಪಂದ್ಯವನ್ನು 2-2 ಕ್ಕೆ ತಂದು ಸಮಬಲ ಸಾಧಿಸುವಂತೆ ಮಾಡಿದರು. ಫ್ರಾನ್ಸ್ ಅಭಿಮಾನಿಗಳು ಸಂಭ್ರಮದಲ್ಲಿ ಮಿಂದೇಳುವಂತೆ, ಆಟಗಾರರು ಮತ್ತೆ ಕೆಚ್ಚೆದೆಯಿಂದ ಆಡುವಂತೆ ಮಾಡಿದ ಎಂಬಾಪೆ ಪಂದ್ಯವನ್ನು ಹೆಚ್ಚುವರಿ ಸಮಯಕ್ಕೆ ತೆಗೆದುಕೊಂಡು ಹೋದರು. ನಿರಾಶೆಯ ಮಡಿಲಲ್ಲಿದ್ದ ಫ್ರಾನ್ಸ್ ಆಟಗಾರರು ಮತ್ತೆ ಪುಟಿದೇಳುವಂತೆ ಮಾಡಿದರು.

ನಿಗಧಿತ 90 ನಿಮಿಷಗಳ ಅವಧಿಯಲ್ಲಿ ಎರಡೂ ತಂಡಗಳು 2-2 ಗೋಲುಗಳೊಂದಿಗೆ ಸಮಬಲ ಸಾಧಿಸಿದ್ದರಿಂದ ಮತ್ತೆ 30 ನಿಮಿಷಗಳ ಹೆಚ್ಚುವರಿ ಸಮಯ ನೀಡಲಾಯಿತು. ಆಗ 108 ನಿಮಿಷದಲ್ಲಿ ಸಿಕ್ಕ ಅವಕಾಶವನ್ನು ತಪ್ಪಿಸದ ಅರ್ಜೆಂಟೀನಾದ ಮೆಸ್ಸಿ ಸುಂದರ ಗೋಲು ಗಳಿಸುವ ಮೂಲಕ 3-2 ಅಂತರ ಸಾಧಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಆದರೆ ಛಲ ಬಿಡದಂತೆ ಆಡಿದ ಫ್ರಾನ್ಸ್‌ನ ಎಂಬಾಪೆ ಕಡೆಯ ಹಂತದಲ್ಲಿ ಪೆನಾಲ್ಟಿ ಕಿಕ್ ಅವಕಾಶವನ್ನು ನೇರ ಗೋಲ್ ಬಾರಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಗೆ ಪಾತ್ರರಾದರು. ಅಲ್ಲದೆ ಪಂದ್ಯವನ್ನು 3-3 ಸಮಬಲಕ್ಕೆ ತಂದು ಕಪ್ ಆಸೆಯನ್ನು ಜೀವಂತವಾಗಿರಿಸಿದರು.

ಪೆನಾಲ್ಟಿ ಶೂಟೌಟ್‌

ಹೆಚ್ಚುವರಿ ಸಮಯದಲ್ಲಿಯೂ ಉಭಯ ತಂಡಗಳು ಸಮಬಲ ಸಾಧಿಸಿದ್ದರಿಂದ ಪೆನಾಲ್ಟಿ ಶೂಟೌಟ್‌ ನೀಡಲಾಯಿತು. ಮೊದಲು ಕಿಕ್ ಮಾಡುವ ಅವಕಾಶ ಪಡೆದ ಫ್ರಾನ್ಸ್ ತಮ್ಮ ಮೊದಲ ಪ್ರಯತ್ನದಲ್ಲಿಯೇ ಎಂಬಾಪೆ ಚೆಂಡನ್ನು ಗೋಲ್ ಪೋಸ್ಟ್ ತಲುಪಿಸಿದರು. ಅದೇ ರೀತಿ ಅರ್ಜೆಂಟೀನಾದ ಮೆಸ್ಸಿ ಸಹ ಗುರಿ ತಪ್ಪಲಿಲ್ಲ. ಆದರೆ ಫ್ರಾನ್ಸ್ ತನ್ನ ಎರಡನೆ ಪ್ರಯತ್ನದಲ್ಲಿ ವಿಫಲವಾಯಿತು. ಅರ್ಜೆಂಟೀನಾ ತನ್ನ ನಾಲ್ಕು ಪ್ರಯತ್ನಗಳಲ್ಲಿ ನಾಲ್ಕು ಪೆನಾಲ್ಟಿ ಗೋಲ್ ಗಳಿಸಿದರೆ, ಫ್ರಾನ್ಸ್ ಕೇವಲ ಎರಡು ಗೋಲು ಗಳಿಸಲು ಸಾಧ್ಯವಾಗಿ ಸೋಲೊಪ್ಪಿಕೊಂಡಿತು. ಎಂಬಾಪೆಯ ಶ್ರಮ ವ್ಯರ್ಥವಾಯಿತು. ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ (4-2 ಅಂತರದಲ್ಲಿ) ಗೆದ್ದು ಸಂಭ್ರಮಿಸಿತು. ಮೆಸ್ಸಿ ತನ್ನ ಬಹುದಿನದ ವಿಶ್ವಕಪ್ ಗೆಲುವಿನ ಕನಸು ನನಸಾಗಿಸಿಕೊಂಡರು. ಅವರ ವಿದಾಯಕ್ಕೆ ಸೂಕ್ತ ಗೌರವ ದೊರಕಿತೆಂಬ ಭಾವ ಎಲ್ಲರಲ್ಲಿ ಮೂಡಿತು.

ಗೋಲ್ಡನ್ ಬೂಟ್ ಗೆದ್ದ ಎಂಬಾಪೆ, ಗೋಲ್ಡನ್ ಬಾಲ್ ತನ್ನದಾಗಿಸಿಕೊಂಡ ಮೆಸ್ಸಿ

ಈ ವಿಶ್ವಕಪ್‌ನಲ್ಲಿ 8 ಗೋಲು ಗಳಿಸಿದ ಕಿಲಿಯನ್ ಎಂಬಾಪೆ ಗೋಲ್ಡನ್ ಬೂಟ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಆದರೆ ಫ್ರಾನ್ಸ್ ಸೋತ ನಿರಾಸೆಯಲ್ಲಿ ಅವರು ಅದನ್ನು ಸಂಭ್ರಮಿಸಲೇ ಇಲ್ಲ. ಇನ್ನೊಂದೆಡೆ 7 ಗೋಲ್ ಗಳಿಸಿದ ಮೆಸ್ಸಿಗೆ ಗೋಲ್ಡನ್ ಬಾಲ್ ಪ್ರಶಸ್ತಿ ದಕ್ಕಿತು. ಗೋಲ್ಡನ್ ಗ್ಲೋವ್ ಪ್ರಶಸ್ತಿ ಅರ್ಜೆಂಟೀನಾದ ಎಮಿಲಿಯಾನೋ ಮಾರ್ಟಿನೆಜ್ ಪಾಲಾದರೆ, FIFA ಯುವ ಆಟಗಾರ ಪ್ರಶಸ್ತಿಯನ್ನು ಅದೇ ದೇಶದ ಎಂಝೋ ಫೆರ್ನಾಂಡಿಸ್ ತನ್ನದಾಗಿಸಿಕೊಂಡರು.

ಇದನ್ನೂ ಓದಿ: ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...