Homeಮುಖಪುಟಎಎಪಿ-ಬಿಜೆಪಿ ಮಧ್ಯೆ ಮತ್ತೊಮ್ಮೆ ಫೈಟ್; ದೆಹಲಿ ಮೇಯರ್ ಚುನಾವಣೆ ಸ್ಥಗಿತ

ಎಎಪಿ-ಬಿಜೆಪಿ ಮಧ್ಯೆ ಮತ್ತೊಮ್ಮೆ ಫೈಟ್; ದೆಹಲಿ ಮೇಯರ್ ಚುನಾವಣೆ ಸ್ಥಗಿತ

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯು ಮಂಗಳವಾರ ಮೇಯರ್ ಮತ್ತು ಉಪ ಮೇಯರ್ ಹುದ್ದೆಗೆ ಚುನಾವಣೆ ನಡೆಸಲು ನಿರ್ಧರಿಸಿತ್ತು. ಆದರೆ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವಿನ ಘರ್ಷಣೆಯಿಂದಾಗಿ  ಎರಡನೇ ಬಾರಿಗೆ ಸ್ಥಗಿತಗೊಂಡಿದೆ.

ದೆಹಲಿಯ ಮಹಾನಗರ ಪಾಲಿಕೆ (MCD) ಸದನದಲ್ಲಿ ಗದ್ದಲ ಏರ್ಪಟ್ಟಿದ್ದರಿಂದ ಮತ್ತೊಮ್ಮೆ ಅನಿರ್ದಿಷ್ಟಾವಧಿಗೆ ಸದನವನ್ನು ಮುಂದೂಡಲಾಯಿತು. ಜನವರಿ 6 ರಂದು ನಡೆದ 250 ಸದಸ್ಯರ ಎಂಸಿಡಿ ಹೌಸ್‌ನ ಮೊದಲ ಸಭೆಯಲ್ಲೂ ಎಎಪಿ ಕೌನ್ಸಿಲರ್‌ಗಳ ದೊಡ್ಡ ಪ್ರತಿಭಟನೆಯ ನಡುವೆ ಚುನಾವಣೆಯನ್ನು ರದ್ದುಗೊಳಿಸಲಾಗಿತ್ತು. ಚುನಾವಣೆಯಲ್ಲಿ ಬಿಜೆಪಿ ಸೋತರೂ ಕೂಡಾ ಅಧಿಕಾರದ ನಿಯಂತ್ರಣವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆಪ್ ಆರೋಪಿಸಿತ್ತು.

ಮಂಗಳವಾರ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ನೇಮಿಸಿದ ಬಿಜೆಪಿಯ ಅಧ್ಯಕ್ಷ ಸತ್ಯ ಶರ್ಮಾ ಅವರು ಕಳೆದ ಸಭೆಯಲ್ಲಿ ಎಎಪಿಯ ತೀವ್ರ ವಿರೋಧದ ನಡೆವೆಯೂ ಮೊದಲು 10 ನಾಮನಿರ್ದೇಶಿತ ಕೌನ್ಸಿಲರ್‌ಗಳಿಗೆ ಪ್ರಮಾಣ ವಚನ ಬೋಧಿಸಿದರು. ಆಲ್ಡರ್‌ಮೆನ್ ಎಂದು ಕರೆಯಲ್ಪಡುವ ಈ ಕೌನ್ಸಿಲರ್‌ಗಳಿಗೆ ಮತ ಚಲಾಯಿಸಲು ಅವಕಾಶವಿಲ್ಲ ಎಂದು ಎಎಪಿ ಹೇಳಿದೆ.

ಇದನ್ನೂ ಓದಿ: ಗುಜರಾತ್‌: ನಾಮಪತ್ರ ಹಿಂಪಡೆಯಲು ಒತ್ತಾಯಿಸಿ ಆಪ್‌ ಅಭ್ಯರ್ಥಿಯನ್ನು ಎಳೆದೊಯ್ದ ಬಿಜೆಪಿ- ಎಎಪಿ ಆರೋಪ

MCD ಯ ಪ್ರಧಾನ ಕಛೇರಿಯಾದ ಸಿವಿಕ್ ಸೆಂಟರ್‍‌ಗೆ ಹೆಚ್ಚಿನ ಸಂಖ್ಯೆಯ ರಕ್ಷಣಾ ಸಿಬ್ಬಂದಿ ಮತ್ತು ಮಾರ್ಷಲ್‌ಗಳನ್ನು ಒಳಗೊಂಡಂತೆ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.

ಆಪ್‌ನಿಂದ ಶೆಲ್ಲಿ ಒಬೆರಾಯ್ ಅವರನ್ನು ಮೇಯರ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದೆ ಮತ್ತು ಇನ್ನೊಬ್ಬ ಅಭ್ಯರ್ಥಿ ಅಶು ಠಾಕೂರ್ ಅವರನ್ನು “ಬ್ಯಾಕ್ಅಪ್” ಎಂದು ಹೆಸರಿಸಿದೆ. ಬಿಜೆಪಿ ರೇಖಾ ಗುಪ್ತಾ ಅವರನ್ನು ನಾಮನಿರ್ದೇಶನ ಮಾಡಿದೆ. ಉಪಮೇಯರ್ ಹುದ್ದೆಗೆ ಆಲೆ ಮೊಹಮ್ಮದ್ ಇಕ್ಬಾಲ್ ಮತ್ತು ಜಲಜ್ ಕುಮಾರ್ (ಎಎಪಿ) ಮತ್ತು ಕಮಲ್ ಬಾಗ್ರಿ (ಬಿಜೆಪಿ) ನಾಮನಿರ್ದೇಶಿತರಾಗಿದ್ದಾರೆ.

ಚುನಾವಣೆಯಲ್ಲಿ ಸೋತ ನಂತರವೂ ಕೂಡ ಬಿಜೆಪಿ ಮೊದಲು ಮೇಯರ್ ಹುದ್ದೆಗೆ ಎಎಪಿ ವಿರುದ್ಧ ಹೋರಾಡುವುದಾಗಿ ಸುಳಿವು ನೀಡಿತ್ತು. ನಂತರ ಪಕ್ಷವು ಹೇಳಿಕೆಯಿಂದ ಹಿಂದೆ ಸರಿಯಿತು, ಮೇಯರ್ ಆಪ್‌ನವರೇ ಆಗುತ್ತಾರೆ ಎಂದು ಹೇಳಿದರು. ಮತ್ತೊಂದು ಬದಲಾವಣೆಯ ಬಲಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಬಿಜೆಪಿ ಹೇಳಿದೆ.

ರಾಜಧಾನಿಯ 250 ಸದಸ್ಯರ ನಾಗರಿಕ ಸಂಸ್ಥೆಗೆ ಕಳೆದ ವರ್ಷ ಡಿಸೆಂಬರ್ 4 ರಂದು ಚುನಾವಣೆ ನಡೆದಿತ್ತು ಮತ್ತು ಡಿಸೆಂಬರ್ 7 ರಂದು ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಆಪ್ 134 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ ಮತ್ತು ನಾಗರಿಕ ಸಂಸ್ಥೆಯಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದೆ. ಬಿಜೆಪಿ 104 ವಾರ್ಡ್‌ಗಳನ್ನು ಗೆದ್ದು ಎರಡನೇ ಸ್ಥಾನ ಗಳಿಸಿದರೆ, ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಗೆದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...