Homeಮುಖಪುಟಎಎಪಿ-ಬಿಜೆಪಿ ಮಧ್ಯೆ ಮತ್ತೊಮ್ಮೆ ಫೈಟ್; ದೆಹಲಿ ಮೇಯರ್ ಚುನಾವಣೆ ಸ್ಥಗಿತ

ಎಎಪಿ-ಬಿಜೆಪಿ ಮಧ್ಯೆ ಮತ್ತೊಮ್ಮೆ ಫೈಟ್; ದೆಹಲಿ ಮೇಯರ್ ಚುನಾವಣೆ ಸ್ಥಗಿತ

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯು ಮಂಗಳವಾರ ಮೇಯರ್ ಮತ್ತು ಉಪ ಮೇಯರ್ ಹುದ್ದೆಗೆ ಚುನಾವಣೆ ನಡೆಸಲು ನಿರ್ಧರಿಸಿತ್ತು. ಆದರೆ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವಿನ ಘರ್ಷಣೆಯಿಂದಾಗಿ  ಎರಡನೇ ಬಾರಿಗೆ ಸ್ಥಗಿತಗೊಂಡಿದೆ.

ದೆಹಲಿಯ ಮಹಾನಗರ ಪಾಲಿಕೆ (MCD) ಸದನದಲ್ಲಿ ಗದ್ದಲ ಏರ್ಪಟ್ಟಿದ್ದರಿಂದ ಮತ್ತೊಮ್ಮೆ ಅನಿರ್ದಿಷ್ಟಾವಧಿಗೆ ಸದನವನ್ನು ಮುಂದೂಡಲಾಯಿತು. ಜನವರಿ 6 ರಂದು ನಡೆದ 250 ಸದಸ್ಯರ ಎಂಸಿಡಿ ಹೌಸ್‌ನ ಮೊದಲ ಸಭೆಯಲ್ಲೂ ಎಎಪಿ ಕೌನ್ಸಿಲರ್‌ಗಳ ದೊಡ್ಡ ಪ್ರತಿಭಟನೆಯ ನಡುವೆ ಚುನಾವಣೆಯನ್ನು ರದ್ದುಗೊಳಿಸಲಾಗಿತ್ತು. ಚುನಾವಣೆಯಲ್ಲಿ ಬಿಜೆಪಿ ಸೋತರೂ ಕೂಡಾ ಅಧಿಕಾರದ ನಿಯಂತ್ರಣವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆಪ್ ಆರೋಪಿಸಿತ್ತು.

ಮಂಗಳವಾರ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ನೇಮಿಸಿದ ಬಿಜೆಪಿಯ ಅಧ್ಯಕ್ಷ ಸತ್ಯ ಶರ್ಮಾ ಅವರು ಕಳೆದ ಸಭೆಯಲ್ಲಿ ಎಎಪಿಯ ತೀವ್ರ ವಿರೋಧದ ನಡೆವೆಯೂ ಮೊದಲು 10 ನಾಮನಿರ್ದೇಶಿತ ಕೌನ್ಸಿಲರ್‌ಗಳಿಗೆ ಪ್ರಮಾಣ ವಚನ ಬೋಧಿಸಿದರು. ಆಲ್ಡರ್‌ಮೆನ್ ಎಂದು ಕರೆಯಲ್ಪಡುವ ಈ ಕೌನ್ಸಿಲರ್‌ಗಳಿಗೆ ಮತ ಚಲಾಯಿಸಲು ಅವಕಾಶವಿಲ್ಲ ಎಂದು ಎಎಪಿ ಹೇಳಿದೆ.

ಇದನ್ನೂ ಓದಿ: ಗುಜರಾತ್‌: ನಾಮಪತ್ರ ಹಿಂಪಡೆಯಲು ಒತ್ತಾಯಿಸಿ ಆಪ್‌ ಅಭ್ಯರ್ಥಿಯನ್ನು ಎಳೆದೊಯ್ದ ಬಿಜೆಪಿ- ಎಎಪಿ ಆರೋಪ

MCD ಯ ಪ್ರಧಾನ ಕಛೇರಿಯಾದ ಸಿವಿಕ್ ಸೆಂಟರ್‍‌ಗೆ ಹೆಚ್ಚಿನ ಸಂಖ್ಯೆಯ ರಕ್ಷಣಾ ಸಿಬ್ಬಂದಿ ಮತ್ತು ಮಾರ್ಷಲ್‌ಗಳನ್ನು ಒಳಗೊಂಡಂತೆ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.

ಆಪ್‌ನಿಂದ ಶೆಲ್ಲಿ ಒಬೆರಾಯ್ ಅವರನ್ನು ಮೇಯರ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದೆ ಮತ್ತು ಇನ್ನೊಬ್ಬ ಅಭ್ಯರ್ಥಿ ಅಶು ಠಾಕೂರ್ ಅವರನ್ನು “ಬ್ಯಾಕ್ಅಪ್” ಎಂದು ಹೆಸರಿಸಿದೆ. ಬಿಜೆಪಿ ರೇಖಾ ಗುಪ್ತಾ ಅವರನ್ನು ನಾಮನಿರ್ದೇಶನ ಮಾಡಿದೆ. ಉಪಮೇಯರ್ ಹುದ್ದೆಗೆ ಆಲೆ ಮೊಹಮ್ಮದ್ ಇಕ್ಬಾಲ್ ಮತ್ತು ಜಲಜ್ ಕುಮಾರ್ (ಎಎಪಿ) ಮತ್ತು ಕಮಲ್ ಬಾಗ್ರಿ (ಬಿಜೆಪಿ) ನಾಮನಿರ್ದೇಶಿತರಾಗಿದ್ದಾರೆ.

ಚುನಾವಣೆಯಲ್ಲಿ ಸೋತ ನಂತರವೂ ಕೂಡ ಬಿಜೆಪಿ ಮೊದಲು ಮೇಯರ್ ಹುದ್ದೆಗೆ ಎಎಪಿ ವಿರುದ್ಧ ಹೋರಾಡುವುದಾಗಿ ಸುಳಿವು ನೀಡಿತ್ತು. ನಂತರ ಪಕ್ಷವು ಹೇಳಿಕೆಯಿಂದ ಹಿಂದೆ ಸರಿಯಿತು, ಮೇಯರ್ ಆಪ್‌ನವರೇ ಆಗುತ್ತಾರೆ ಎಂದು ಹೇಳಿದರು. ಮತ್ತೊಂದು ಬದಲಾವಣೆಯ ಬಲಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಬಿಜೆಪಿ ಹೇಳಿದೆ.

ರಾಜಧಾನಿಯ 250 ಸದಸ್ಯರ ನಾಗರಿಕ ಸಂಸ್ಥೆಗೆ ಕಳೆದ ವರ್ಷ ಡಿಸೆಂಬರ್ 4 ರಂದು ಚುನಾವಣೆ ನಡೆದಿತ್ತು ಮತ್ತು ಡಿಸೆಂಬರ್ 7 ರಂದು ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಆಪ್ 134 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ ಮತ್ತು ನಾಗರಿಕ ಸಂಸ್ಥೆಯಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದೆ. ಬಿಜೆಪಿ 104 ವಾರ್ಡ್‌ಗಳನ್ನು ಗೆದ್ದು ಎರಡನೇ ಸ್ಥಾನ ಗಳಿಸಿದರೆ, ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಗೆದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...