Homeಮುಖಪುಟಎಎಪಿ-ಬಿಜೆಪಿ ಮಧ್ಯೆ ಮತ್ತೊಮ್ಮೆ ಫೈಟ್; ದೆಹಲಿ ಮೇಯರ್ ಚುನಾವಣೆ ಸ್ಥಗಿತ

ಎಎಪಿ-ಬಿಜೆಪಿ ಮಧ್ಯೆ ಮತ್ತೊಮ್ಮೆ ಫೈಟ್; ದೆಹಲಿ ಮೇಯರ್ ಚುನಾವಣೆ ಸ್ಥಗಿತ

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯು ಮಂಗಳವಾರ ಮೇಯರ್ ಮತ್ತು ಉಪ ಮೇಯರ್ ಹುದ್ದೆಗೆ ಚುನಾವಣೆ ನಡೆಸಲು ನಿರ್ಧರಿಸಿತ್ತು. ಆದರೆ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವಿನ ಘರ್ಷಣೆಯಿಂದಾಗಿ  ಎರಡನೇ ಬಾರಿಗೆ ಸ್ಥಗಿತಗೊಂಡಿದೆ.

ದೆಹಲಿಯ ಮಹಾನಗರ ಪಾಲಿಕೆ (MCD) ಸದನದಲ್ಲಿ ಗದ್ದಲ ಏರ್ಪಟ್ಟಿದ್ದರಿಂದ ಮತ್ತೊಮ್ಮೆ ಅನಿರ್ದಿಷ್ಟಾವಧಿಗೆ ಸದನವನ್ನು ಮುಂದೂಡಲಾಯಿತು. ಜನವರಿ 6 ರಂದು ನಡೆದ 250 ಸದಸ್ಯರ ಎಂಸಿಡಿ ಹೌಸ್‌ನ ಮೊದಲ ಸಭೆಯಲ್ಲೂ ಎಎಪಿ ಕೌನ್ಸಿಲರ್‌ಗಳ ದೊಡ್ಡ ಪ್ರತಿಭಟನೆಯ ನಡುವೆ ಚುನಾವಣೆಯನ್ನು ರದ್ದುಗೊಳಿಸಲಾಗಿತ್ತು. ಚುನಾವಣೆಯಲ್ಲಿ ಬಿಜೆಪಿ ಸೋತರೂ ಕೂಡಾ ಅಧಿಕಾರದ ನಿಯಂತ್ರಣವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆಪ್ ಆರೋಪಿಸಿತ್ತು.

ಮಂಗಳವಾರ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ನೇಮಿಸಿದ ಬಿಜೆಪಿಯ ಅಧ್ಯಕ್ಷ ಸತ್ಯ ಶರ್ಮಾ ಅವರು ಕಳೆದ ಸಭೆಯಲ್ಲಿ ಎಎಪಿಯ ತೀವ್ರ ವಿರೋಧದ ನಡೆವೆಯೂ ಮೊದಲು 10 ನಾಮನಿರ್ದೇಶಿತ ಕೌನ್ಸಿಲರ್‌ಗಳಿಗೆ ಪ್ರಮಾಣ ವಚನ ಬೋಧಿಸಿದರು. ಆಲ್ಡರ್‌ಮೆನ್ ಎಂದು ಕರೆಯಲ್ಪಡುವ ಈ ಕೌನ್ಸಿಲರ್‌ಗಳಿಗೆ ಮತ ಚಲಾಯಿಸಲು ಅವಕಾಶವಿಲ್ಲ ಎಂದು ಎಎಪಿ ಹೇಳಿದೆ.

ಇದನ್ನೂ ಓದಿ: ಗುಜರಾತ್‌: ನಾಮಪತ್ರ ಹಿಂಪಡೆಯಲು ಒತ್ತಾಯಿಸಿ ಆಪ್‌ ಅಭ್ಯರ್ಥಿಯನ್ನು ಎಳೆದೊಯ್ದ ಬಿಜೆಪಿ- ಎಎಪಿ ಆರೋಪ

MCD ಯ ಪ್ರಧಾನ ಕಛೇರಿಯಾದ ಸಿವಿಕ್ ಸೆಂಟರ್‍‌ಗೆ ಹೆಚ್ಚಿನ ಸಂಖ್ಯೆಯ ರಕ್ಷಣಾ ಸಿಬ್ಬಂದಿ ಮತ್ತು ಮಾರ್ಷಲ್‌ಗಳನ್ನು ಒಳಗೊಂಡಂತೆ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.

ಆಪ್‌ನಿಂದ ಶೆಲ್ಲಿ ಒಬೆರಾಯ್ ಅವರನ್ನು ಮೇಯರ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದೆ ಮತ್ತು ಇನ್ನೊಬ್ಬ ಅಭ್ಯರ್ಥಿ ಅಶು ಠಾಕೂರ್ ಅವರನ್ನು “ಬ್ಯಾಕ್ಅಪ್” ಎಂದು ಹೆಸರಿಸಿದೆ. ಬಿಜೆಪಿ ರೇಖಾ ಗುಪ್ತಾ ಅವರನ್ನು ನಾಮನಿರ್ದೇಶನ ಮಾಡಿದೆ. ಉಪಮೇಯರ್ ಹುದ್ದೆಗೆ ಆಲೆ ಮೊಹಮ್ಮದ್ ಇಕ್ಬಾಲ್ ಮತ್ತು ಜಲಜ್ ಕುಮಾರ್ (ಎಎಪಿ) ಮತ್ತು ಕಮಲ್ ಬಾಗ್ರಿ (ಬಿಜೆಪಿ) ನಾಮನಿರ್ದೇಶಿತರಾಗಿದ್ದಾರೆ.

ಚುನಾವಣೆಯಲ್ಲಿ ಸೋತ ನಂತರವೂ ಕೂಡ ಬಿಜೆಪಿ ಮೊದಲು ಮೇಯರ್ ಹುದ್ದೆಗೆ ಎಎಪಿ ವಿರುದ್ಧ ಹೋರಾಡುವುದಾಗಿ ಸುಳಿವು ನೀಡಿತ್ತು. ನಂತರ ಪಕ್ಷವು ಹೇಳಿಕೆಯಿಂದ ಹಿಂದೆ ಸರಿಯಿತು, ಮೇಯರ್ ಆಪ್‌ನವರೇ ಆಗುತ್ತಾರೆ ಎಂದು ಹೇಳಿದರು. ಮತ್ತೊಂದು ಬದಲಾವಣೆಯ ಬಲಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಬಿಜೆಪಿ ಹೇಳಿದೆ.

ರಾಜಧಾನಿಯ 250 ಸದಸ್ಯರ ನಾಗರಿಕ ಸಂಸ್ಥೆಗೆ ಕಳೆದ ವರ್ಷ ಡಿಸೆಂಬರ್ 4 ರಂದು ಚುನಾವಣೆ ನಡೆದಿತ್ತು ಮತ್ತು ಡಿಸೆಂಬರ್ 7 ರಂದು ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಆಪ್ 134 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ ಮತ್ತು ನಾಗರಿಕ ಸಂಸ್ಥೆಯಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದೆ. ಬಿಜೆಪಿ 104 ವಾರ್ಡ್‌ಗಳನ್ನು ಗೆದ್ದು ಎರಡನೇ ಸ್ಥಾನ ಗಳಿಸಿದರೆ, ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಗೆದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...