Homeರಾಷ್ಟ್ರೀಯಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಪೊಲೀಸರು ರಾಜಧಾನಿಗೆ ಪ್ರವೇಶಿಸದಂರೆ ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ

- Advertisement -
- Advertisement -

ಜೂನ್ 10 ರಿಂದ ಗೋಧಿಗೆ ಬೋನಸ್ ಮತ್ತು ಭತ್ತ ಬಿತ್ತನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಒತ್ತಾಯಿಸಿರುವ ಪಂಜಾಬ್‌ನ ರೈತರು ಮೇ 17 ರ ಮಂಗಳವಾರದಂದು ಚಂಡೀಗಢ ಮೊಹಾಲಿ ಗಡಿಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ರೈತರು ರಾಜ್ಯ ರಾಜಧಾನಿ ಚಂಡೀಗಢ ಪ್ರವೇಶಿಸದಂತೆ ಸರ್ಕಾರ ತಡೆದ ಪರಿಣಾಮ ರೈತರು ಗಡಿಯಲ್ಲೆ ಬೀಡು ಬಿಟ್ಟಿದ್ದಾರೆ.

ಪ್ರತಿಭಟನಾಕಾರರು ಮುಂದೆ ಹೋಗದಂತೆ ಮೊಹಾಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ನೀರಿನ ಕ್ಯಾನನ್‌ಗಳನ್ನು ನಿಲ್ಲಿಸಿದ್ದಾರೆ. ರೈತರು ಮುಂದಕ್ಕೆ ಚಲಿಸದಂತೆ ಚಂಡೀಗಢ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಅನುಸರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈತರು ಮುಂದುವರಿಯದಂತೆ ತಡೆದ ನಂತರ ಮಾತನಾಡಿದ ರೈತ ಮುಖಂಡರೊಬ್ಬರು, ಸರ್ಕಾರದೊಂದಿಗೆ ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ, ಆದರೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಡೆತಡೆಗಳನ್ನು ಮುರಿದು ಚಂಡೀಗಢದತ್ತ ಸಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

ಒಕ್ಕೂಟ ಸರ್ಕಾರವು ಘೋಷಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ವರ್ಷವಿಡೀ ನಡೆದ ಆಂದೋಲನದಂತೆಯೇ ಹಲವಾರು ರೈತ ಸಂಘಟನೆಗಳು ಚಂಡೀಗಢದಲ್ಲಿ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಮಧ್ಯೆ ಈ ಘಟನೆ ನಡೆದಿದೆ.

ರೈತರ ಬೇಡಿಕೆಗಳು

ತೀವ್ರವಾದ ಶಾಖದ ಅಲೆಗಳಿಂದಾಗಿ ಗೋಧಿ ಉತ್ಪಾದನೆಯಲ್ಲಿ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು, ಪ್ರತಿ ಕ್ವಿಂಟಾಲ್ ಗೋಧಿಗೆ 500 ರೂ ಬೋನಸ್ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೂನ್ 10 ರಿಂದ ಭತ್ತ ಬಿತ್ತನೆ ಮಾಡಬೇಕೆಂಬ ತಮ್ಮ ಬೇಡಿಕೆಯ ಜೊತೆಗೆ, ಹೆಸರುಕಾಳು ಮತ್ತು ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಲು ಅಧಿಸೂಚನೆ ಹೊರಡಿಸುವಂತೆ ರೈತರು ಒತ್ತಾಯಿಸಿದ್ದಾರೆ.

ಕಬ್ಬು ಪೂರೈಕೆಯ ಮೇಲಿನ ಬಾಕಿ ಪಾವತಿಯನ್ನು ಬಿಡುಗಡೆ ಮಾಡುವಂತೆ ಕೂಡಾ ರೈತರು ಒತ್ತಾಯಿಸಿದ್ದು, ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆ ವಿರುದ್ಧ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ: ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿಗೆ ಆಗ್ರಹ

ಪಂಜಾಬ್‌ನ ವಿವಿಧ ಭಾಗಗಳಿಂದ ಬಂದ ರೈತರು ತಮ್ಮೊಂದಿಗೆ ಪಡಿತರ, ಹಾಸಿಗೆಗಳು, ಕೂಲರ್‌ಗಳು, ಫ್ಯಾನ್‌ಗಳು, ಪಾತ್ರೆಗಳು ಮತ್ತು ಸಿಲಿಂಡರ್‌ಗಳನ್ನು ಹೊತ್ತುಕೊಂಡು ಮೊಹಾಲಿಯ ಗುರುದ್ವಾರ ಅಂಬ್ ಸಾಹಿಬ್‌ನಲ್ಲಿ ಸಮಾವೇಶಗೊಂಡಿದ್ದಾರೆ.

ಮುಖ್ಯಮಂತ್ರಿಯ ಪ್ರತಿನಿಧಿಗಳು ರೈತರೊಂದಿಗೆ ಸಭೆ ನಡೆಸುವುದಾಗಿ ಸರ್ಕಾರ ತಿಳಿಸಿದ್ದರೂ, ಪ್ರಸ್ತುತ ದೆಹಲಿಯಲ್ಲಿದ್ದಾರೆ ಎನ್ನಲಾಗಿರುವ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ನೇರವಾಗಿ ಭೇಟಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ಗುರುದ್ವಾರದಿಂದ ಮೆರವಣಿಗೆ ಆರಂಭಿಸಿದ ರೈತರು ಮುಂದೆ ಸಾಗುತ್ತಾ ಮೊದಲ ಸಾಲಿನ ಬ್ಯಾರಿಕೇಡ್‌ಗಳನ್ನು ಮುರಿದ್ದಾರೆ. ಆದಾಗ್ಯೂ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಎರಡನೇ ಸಾಲಿನ ಅಡೆತಡೆಗಳನ್ನು ಮುರಿಯದಂತೆ ಪ್ರತಿಭಟನಾಕಾರರನ್ನು ಕೋರಿದ್ದು, ಬದಲಿಗೆ ತಮ್ಮ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ಈ ಮಧ್ಯೆ, ಭಾರತಿ ಕಿಸಾನ್ ಯೂನಿಯನ್ (ಲಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು, “ದೆಹಲಿಯಲ್ಲಿ ನಡೆಸಿದ ಆಂದೋಲನದಂತೆಯೇ, ಇಲ್ಲಿಯು ಖಂಡಿತಾ ಯುದ್ಧವನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಅವರನ್ನು ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ. ಇದರಿಂದಾಗಿ ಪೊಲೀಸರು ಚಂಡೀಗಢ-ಮೊಹಾಲಿ ರಸ್ತೆಯಲ್ಲಿ ಸಂಚಾರವನ್ನು ಬದಲಾಯಿಸಿದ್ದಾರೆ. ಇದಕ್ಕೂ ಮುನ್ನ ಉಪ ಪೊಲೀಸ್ ಮಹಾ ನಿರೀಕ್ಷಕ ಗುರುಪ್ರೀತ್ ಸಿಂಗ್ ಭುಲ್ಲರ್ ಕೂಡ ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...