Homeರಾಷ್ಟ್ರೀಯಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಪೊಲೀಸರು ರಾಜಧಾನಿಗೆ ಪ್ರವೇಶಿಸದಂರೆ ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ

- Advertisement -
- Advertisement -

ಜೂನ್ 10 ರಿಂದ ಗೋಧಿಗೆ ಬೋನಸ್ ಮತ್ತು ಭತ್ತ ಬಿತ್ತನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಒತ್ತಾಯಿಸಿರುವ ಪಂಜಾಬ್‌ನ ರೈತರು ಮೇ 17 ರ ಮಂಗಳವಾರದಂದು ಚಂಡೀಗಢ ಮೊಹಾಲಿ ಗಡಿಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ರೈತರು ರಾಜ್ಯ ರಾಜಧಾನಿ ಚಂಡೀಗಢ ಪ್ರವೇಶಿಸದಂತೆ ಸರ್ಕಾರ ತಡೆದ ಪರಿಣಾಮ ರೈತರು ಗಡಿಯಲ್ಲೆ ಬೀಡು ಬಿಟ್ಟಿದ್ದಾರೆ.

ಪ್ರತಿಭಟನಾಕಾರರು ಮುಂದೆ ಹೋಗದಂತೆ ಮೊಹಾಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ನೀರಿನ ಕ್ಯಾನನ್‌ಗಳನ್ನು ನಿಲ್ಲಿಸಿದ್ದಾರೆ. ರೈತರು ಮುಂದಕ್ಕೆ ಚಲಿಸದಂತೆ ಚಂಡೀಗಢ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಅನುಸರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈತರು ಮುಂದುವರಿಯದಂತೆ ತಡೆದ ನಂತರ ಮಾತನಾಡಿದ ರೈತ ಮುಖಂಡರೊಬ್ಬರು, ಸರ್ಕಾರದೊಂದಿಗೆ ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ, ಆದರೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಡೆತಡೆಗಳನ್ನು ಮುರಿದು ಚಂಡೀಗಢದತ್ತ ಸಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

ಒಕ್ಕೂಟ ಸರ್ಕಾರವು ಘೋಷಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ವರ್ಷವಿಡೀ ನಡೆದ ಆಂದೋಲನದಂತೆಯೇ ಹಲವಾರು ರೈತ ಸಂಘಟನೆಗಳು ಚಂಡೀಗಢದಲ್ಲಿ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಮಧ್ಯೆ ಈ ಘಟನೆ ನಡೆದಿದೆ.

ರೈತರ ಬೇಡಿಕೆಗಳು

ತೀವ್ರವಾದ ಶಾಖದ ಅಲೆಗಳಿಂದಾಗಿ ಗೋಧಿ ಉತ್ಪಾದನೆಯಲ್ಲಿ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು, ಪ್ರತಿ ಕ್ವಿಂಟಾಲ್ ಗೋಧಿಗೆ 500 ರೂ ಬೋನಸ್ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೂನ್ 10 ರಿಂದ ಭತ್ತ ಬಿತ್ತನೆ ಮಾಡಬೇಕೆಂಬ ತಮ್ಮ ಬೇಡಿಕೆಯ ಜೊತೆಗೆ, ಹೆಸರುಕಾಳು ಮತ್ತು ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಲು ಅಧಿಸೂಚನೆ ಹೊರಡಿಸುವಂತೆ ರೈತರು ಒತ್ತಾಯಿಸಿದ್ದಾರೆ.

ಕಬ್ಬು ಪೂರೈಕೆಯ ಮೇಲಿನ ಬಾಕಿ ಪಾವತಿಯನ್ನು ಬಿಡುಗಡೆ ಮಾಡುವಂತೆ ಕೂಡಾ ರೈತರು ಒತ್ತಾಯಿಸಿದ್ದು, ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆ ವಿರುದ್ಧ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ: ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿಗೆ ಆಗ್ರಹ

ಪಂಜಾಬ್‌ನ ವಿವಿಧ ಭಾಗಗಳಿಂದ ಬಂದ ರೈತರು ತಮ್ಮೊಂದಿಗೆ ಪಡಿತರ, ಹಾಸಿಗೆಗಳು, ಕೂಲರ್‌ಗಳು, ಫ್ಯಾನ್‌ಗಳು, ಪಾತ್ರೆಗಳು ಮತ್ತು ಸಿಲಿಂಡರ್‌ಗಳನ್ನು ಹೊತ್ತುಕೊಂಡು ಮೊಹಾಲಿಯ ಗುರುದ್ವಾರ ಅಂಬ್ ಸಾಹಿಬ್‌ನಲ್ಲಿ ಸಮಾವೇಶಗೊಂಡಿದ್ದಾರೆ.

ಮುಖ್ಯಮಂತ್ರಿಯ ಪ್ರತಿನಿಧಿಗಳು ರೈತರೊಂದಿಗೆ ಸಭೆ ನಡೆಸುವುದಾಗಿ ಸರ್ಕಾರ ತಿಳಿಸಿದ್ದರೂ, ಪ್ರಸ್ತುತ ದೆಹಲಿಯಲ್ಲಿದ್ದಾರೆ ಎನ್ನಲಾಗಿರುವ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ನೇರವಾಗಿ ಭೇಟಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ಗುರುದ್ವಾರದಿಂದ ಮೆರವಣಿಗೆ ಆರಂಭಿಸಿದ ರೈತರು ಮುಂದೆ ಸಾಗುತ್ತಾ ಮೊದಲ ಸಾಲಿನ ಬ್ಯಾರಿಕೇಡ್‌ಗಳನ್ನು ಮುರಿದ್ದಾರೆ. ಆದಾಗ್ಯೂ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಎರಡನೇ ಸಾಲಿನ ಅಡೆತಡೆಗಳನ್ನು ಮುರಿಯದಂತೆ ಪ್ರತಿಭಟನಾಕಾರರನ್ನು ಕೋರಿದ್ದು, ಬದಲಿಗೆ ತಮ್ಮ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ಈ ಮಧ್ಯೆ, ಭಾರತಿ ಕಿಸಾನ್ ಯೂನಿಯನ್ (ಲಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು, “ದೆಹಲಿಯಲ್ಲಿ ನಡೆಸಿದ ಆಂದೋಲನದಂತೆಯೇ, ಇಲ್ಲಿಯು ಖಂಡಿತಾ ಯುದ್ಧವನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಅವರನ್ನು ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ. ಇದರಿಂದಾಗಿ ಪೊಲೀಸರು ಚಂಡೀಗಢ-ಮೊಹಾಲಿ ರಸ್ತೆಯಲ್ಲಿ ಸಂಚಾರವನ್ನು ಬದಲಾಯಿಸಿದ್ದಾರೆ. ಇದಕ್ಕೂ ಮುನ್ನ ಉಪ ಪೊಲೀಸ್ ಮಹಾ ನಿರೀಕ್ಷಕ ಗುರುಪ್ರೀತ್ ಸಿಂಗ್ ಭುಲ್ಲರ್ ಕೂಡ ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...