Homeರಾಷ್ಟ್ರೀಯಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಪೊಲೀಸರು ರಾಜಧಾನಿಗೆ ಪ್ರವೇಶಿಸದಂರೆ ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ

- Advertisement -
- Advertisement -

ಜೂನ್ 10 ರಿಂದ ಗೋಧಿಗೆ ಬೋನಸ್ ಮತ್ತು ಭತ್ತ ಬಿತ್ತನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಒತ್ತಾಯಿಸಿರುವ ಪಂಜಾಬ್‌ನ ರೈತರು ಮೇ 17 ರ ಮಂಗಳವಾರದಂದು ಚಂಡೀಗಢ ಮೊಹಾಲಿ ಗಡಿಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ರೈತರು ರಾಜ್ಯ ರಾಜಧಾನಿ ಚಂಡೀಗಢ ಪ್ರವೇಶಿಸದಂತೆ ಸರ್ಕಾರ ತಡೆದ ಪರಿಣಾಮ ರೈತರು ಗಡಿಯಲ್ಲೆ ಬೀಡು ಬಿಟ್ಟಿದ್ದಾರೆ.

ಪ್ರತಿಭಟನಾಕಾರರು ಮುಂದೆ ಹೋಗದಂತೆ ಮೊಹಾಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ನೀರಿನ ಕ್ಯಾನನ್‌ಗಳನ್ನು ನಿಲ್ಲಿಸಿದ್ದಾರೆ. ರೈತರು ಮುಂದಕ್ಕೆ ಚಲಿಸದಂತೆ ಚಂಡೀಗಢ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಅನುಸರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈತರು ಮುಂದುವರಿಯದಂತೆ ತಡೆದ ನಂತರ ಮಾತನಾಡಿದ ರೈತ ಮುಖಂಡರೊಬ್ಬರು, ಸರ್ಕಾರದೊಂದಿಗೆ ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ, ಆದರೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಡೆತಡೆಗಳನ್ನು ಮುರಿದು ಚಂಡೀಗಢದತ್ತ ಸಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

ಒಕ್ಕೂಟ ಸರ್ಕಾರವು ಘೋಷಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ವರ್ಷವಿಡೀ ನಡೆದ ಆಂದೋಲನದಂತೆಯೇ ಹಲವಾರು ರೈತ ಸಂಘಟನೆಗಳು ಚಂಡೀಗಢದಲ್ಲಿ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಮಧ್ಯೆ ಈ ಘಟನೆ ನಡೆದಿದೆ.

ರೈತರ ಬೇಡಿಕೆಗಳು

ತೀವ್ರವಾದ ಶಾಖದ ಅಲೆಗಳಿಂದಾಗಿ ಗೋಧಿ ಉತ್ಪಾದನೆಯಲ್ಲಿ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು, ಪ್ರತಿ ಕ್ವಿಂಟಾಲ್ ಗೋಧಿಗೆ 500 ರೂ ಬೋನಸ್ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೂನ್ 10 ರಿಂದ ಭತ್ತ ಬಿತ್ತನೆ ಮಾಡಬೇಕೆಂಬ ತಮ್ಮ ಬೇಡಿಕೆಯ ಜೊತೆಗೆ, ಹೆಸರುಕಾಳು ಮತ್ತು ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಲು ಅಧಿಸೂಚನೆ ಹೊರಡಿಸುವಂತೆ ರೈತರು ಒತ್ತಾಯಿಸಿದ್ದಾರೆ.

ಕಬ್ಬು ಪೂರೈಕೆಯ ಮೇಲಿನ ಬಾಕಿ ಪಾವತಿಯನ್ನು ಬಿಡುಗಡೆ ಮಾಡುವಂತೆ ಕೂಡಾ ರೈತರು ಒತ್ತಾಯಿಸಿದ್ದು, ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆ ವಿರುದ್ಧ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ: ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿಗೆ ಆಗ್ರಹ

ಪಂಜಾಬ್‌ನ ವಿವಿಧ ಭಾಗಗಳಿಂದ ಬಂದ ರೈತರು ತಮ್ಮೊಂದಿಗೆ ಪಡಿತರ, ಹಾಸಿಗೆಗಳು, ಕೂಲರ್‌ಗಳು, ಫ್ಯಾನ್‌ಗಳು, ಪಾತ್ರೆಗಳು ಮತ್ತು ಸಿಲಿಂಡರ್‌ಗಳನ್ನು ಹೊತ್ತುಕೊಂಡು ಮೊಹಾಲಿಯ ಗುರುದ್ವಾರ ಅಂಬ್ ಸಾಹಿಬ್‌ನಲ್ಲಿ ಸಮಾವೇಶಗೊಂಡಿದ್ದಾರೆ.

ಮುಖ್ಯಮಂತ್ರಿಯ ಪ್ರತಿನಿಧಿಗಳು ರೈತರೊಂದಿಗೆ ಸಭೆ ನಡೆಸುವುದಾಗಿ ಸರ್ಕಾರ ತಿಳಿಸಿದ್ದರೂ, ಪ್ರಸ್ತುತ ದೆಹಲಿಯಲ್ಲಿದ್ದಾರೆ ಎನ್ನಲಾಗಿರುವ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ನೇರವಾಗಿ ಭೇಟಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ಗುರುದ್ವಾರದಿಂದ ಮೆರವಣಿಗೆ ಆರಂಭಿಸಿದ ರೈತರು ಮುಂದೆ ಸಾಗುತ್ತಾ ಮೊದಲ ಸಾಲಿನ ಬ್ಯಾರಿಕೇಡ್‌ಗಳನ್ನು ಮುರಿದ್ದಾರೆ. ಆದಾಗ್ಯೂ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಎರಡನೇ ಸಾಲಿನ ಅಡೆತಡೆಗಳನ್ನು ಮುರಿಯದಂತೆ ಪ್ರತಿಭಟನಾಕಾರರನ್ನು ಕೋರಿದ್ದು, ಬದಲಿಗೆ ತಮ್ಮ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ಈ ಮಧ್ಯೆ, ಭಾರತಿ ಕಿಸಾನ್ ಯೂನಿಯನ್ (ಲಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು, “ದೆಹಲಿಯಲ್ಲಿ ನಡೆಸಿದ ಆಂದೋಲನದಂತೆಯೇ, ಇಲ್ಲಿಯು ಖಂಡಿತಾ ಯುದ್ಧವನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಅವರನ್ನು ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ. ಇದರಿಂದಾಗಿ ಪೊಲೀಸರು ಚಂಡೀಗಢ-ಮೊಹಾಲಿ ರಸ್ತೆಯಲ್ಲಿ ಸಂಚಾರವನ್ನು ಬದಲಾಯಿಸಿದ್ದಾರೆ. ಇದಕ್ಕೂ ಮುನ್ನ ಉಪ ಪೊಲೀಸ್ ಮಹಾ ನಿರೀಕ್ಷಕ ಗುರುಪ್ರೀತ್ ಸಿಂಗ್ ಭುಲ್ಲರ್ ಕೂಡ ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...