Homeರಾಷ್ಟ್ರೀಯಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಪೊಲೀಸರು ರಾಜಧಾನಿಗೆ ಪ್ರವೇಶಿಸದಂರೆ ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ

- Advertisement -
- Advertisement -

ಜೂನ್ 10 ರಿಂದ ಗೋಧಿಗೆ ಬೋನಸ್ ಮತ್ತು ಭತ್ತ ಬಿತ್ತನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಒತ್ತಾಯಿಸಿರುವ ಪಂಜಾಬ್‌ನ ರೈತರು ಮೇ 17 ರ ಮಂಗಳವಾರದಂದು ಚಂಡೀಗಢ ಮೊಹಾಲಿ ಗಡಿಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ರೈತರು ರಾಜ್ಯ ರಾಜಧಾನಿ ಚಂಡೀಗಢ ಪ್ರವೇಶಿಸದಂತೆ ಸರ್ಕಾರ ತಡೆದ ಪರಿಣಾಮ ರೈತರು ಗಡಿಯಲ್ಲೆ ಬೀಡು ಬಿಟ್ಟಿದ್ದಾರೆ.

ಪ್ರತಿಭಟನಾಕಾರರು ಮುಂದೆ ಹೋಗದಂತೆ ಮೊಹಾಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ನೀರಿನ ಕ್ಯಾನನ್‌ಗಳನ್ನು ನಿಲ್ಲಿಸಿದ್ದಾರೆ. ರೈತರು ಮುಂದಕ್ಕೆ ಚಲಿಸದಂತೆ ಚಂಡೀಗಢ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಅನುಸರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈತರು ಮುಂದುವರಿಯದಂತೆ ತಡೆದ ನಂತರ ಮಾತನಾಡಿದ ರೈತ ಮುಖಂಡರೊಬ್ಬರು, ಸರ್ಕಾರದೊಂದಿಗೆ ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ, ಆದರೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಡೆತಡೆಗಳನ್ನು ಮುರಿದು ಚಂಡೀಗಢದತ್ತ ಸಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

ಒಕ್ಕೂಟ ಸರ್ಕಾರವು ಘೋಷಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ವರ್ಷವಿಡೀ ನಡೆದ ಆಂದೋಲನದಂತೆಯೇ ಹಲವಾರು ರೈತ ಸಂಘಟನೆಗಳು ಚಂಡೀಗಢದಲ್ಲಿ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಮಧ್ಯೆ ಈ ಘಟನೆ ನಡೆದಿದೆ.

ರೈತರ ಬೇಡಿಕೆಗಳು

ತೀವ್ರವಾದ ಶಾಖದ ಅಲೆಗಳಿಂದಾಗಿ ಗೋಧಿ ಉತ್ಪಾದನೆಯಲ್ಲಿ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು, ಪ್ರತಿ ಕ್ವಿಂಟಾಲ್ ಗೋಧಿಗೆ 500 ರೂ ಬೋನಸ್ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೂನ್ 10 ರಿಂದ ಭತ್ತ ಬಿತ್ತನೆ ಮಾಡಬೇಕೆಂಬ ತಮ್ಮ ಬೇಡಿಕೆಯ ಜೊತೆಗೆ, ಹೆಸರುಕಾಳು ಮತ್ತು ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಲು ಅಧಿಸೂಚನೆ ಹೊರಡಿಸುವಂತೆ ರೈತರು ಒತ್ತಾಯಿಸಿದ್ದಾರೆ.

ಕಬ್ಬು ಪೂರೈಕೆಯ ಮೇಲಿನ ಬಾಕಿ ಪಾವತಿಯನ್ನು ಬಿಡುಗಡೆ ಮಾಡುವಂತೆ ಕೂಡಾ ರೈತರು ಒತ್ತಾಯಿಸಿದ್ದು, ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆ ವಿರುದ್ಧ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ: ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿಗೆ ಆಗ್ರಹ

ಪಂಜಾಬ್‌ನ ವಿವಿಧ ಭಾಗಗಳಿಂದ ಬಂದ ರೈತರು ತಮ್ಮೊಂದಿಗೆ ಪಡಿತರ, ಹಾಸಿಗೆಗಳು, ಕೂಲರ್‌ಗಳು, ಫ್ಯಾನ್‌ಗಳು, ಪಾತ್ರೆಗಳು ಮತ್ತು ಸಿಲಿಂಡರ್‌ಗಳನ್ನು ಹೊತ್ತುಕೊಂಡು ಮೊಹಾಲಿಯ ಗುರುದ್ವಾರ ಅಂಬ್ ಸಾಹಿಬ್‌ನಲ್ಲಿ ಸಮಾವೇಶಗೊಂಡಿದ್ದಾರೆ.

ಮುಖ್ಯಮಂತ್ರಿಯ ಪ್ರತಿನಿಧಿಗಳು ರೈತರೊಂದಿಗೆ ಸಭೆ ನಡೆಸುವುದಾಗಿ ಸರ್ಕಾರ ತಿಳಿಸಿದ್ದರೂ, ಪ್ರಸ್ತುತ ದೆಹಲಿಯಲ್ಲಿದ್ದಾರೆ ಎನ್ನಲಾಗಿರುವ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ನೇರವಾಗಿ ಭೇಟಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ಗುರುದ್ವಾರದಿಂದ ಮೆರವಣಿಗೆ ಆರಂಭಿಸಿದ ರೈತರು ಮುಂದೆ ಸಾಗುತ್ತಾ ಮೊದಲ ಸಾಲಿನ ಬ್ಯಾರಿಕೇಡ್‌ಗಳನ್ನು ಮುರಿದ್ದಾರೆ. ಆದಾಗ್ಯೂ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಎರಡನೇ ಸಾಲಿನ ಅಡೆತಡೆಗಳನ್ನು ಮುರಿಯದಂತೆ ಪ್ರತಿಭಟನಾಕಾರರನ್ನು ಕೋರಿದ್ದು, ಬದಲಿಗೆ ತಮ್ಮ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ಈ ಮಧ್ಯೆ, ಭಾರತಿ ಕಿಸಾನ್ ಯೂನಿಯನ್ (ಲಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು, “ದೆಹಲಿಯಲ್ಲಿ ನಡೆಸಿದ ಆಂದೋಲನದಂತೆಯೇ, ಇಲ್ಲಿಯು ಖಂಡಿತಾ ಯುದ್ಧವನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಅವರನ್ನು ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ. ಇದರಿಂದಾಗಿ ಪೊಲೀಸರು ಚಂಡೀಗಢ-ಮೊಹಾಲಿ ರಸ್ತೆಯಲ್ಲಿ ಸಂಚಾರವನ್ನು ಬದಲಾಯಿಸಿದ್ದಾರೆ. ಇದಕ್ಕೂ ಮುನ್ನ ಉಪ ಪೊಲೀಸ್ ಮಹಾ ನಿರೀಕ್ಷಕ ಗುರುಪ್ರೀತ್ ಸಿಂಗ್ ಭುಲ್ಲರ್ ಕೂಡ ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...