Homeರಾಷ್ಟ್ರೀಯಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಪೊಲೀಸರು ರಾಜಧಾನಿಗೆ ಪ್ರವೇಶಿಸದಂರೆ ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ

- Advertisement -
- Advertisement -

ಜೂನ್ 10 ರಿಂದ ಗೋಧಿಗೆ ಬೋನಸ್ ಮತ್ತು ಭತ್ತ ಬಿತ್ತನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಒತ್ತಾಯಿಸಿರುವ ಪಂಜಾಬ್‌ನ ರೈತರು ಮೇ 17 ರ ಮಂಗಳವಾರದಂದು ಚಂಡೀಗಢ ಮೊಹಾಲಿ ಗಡಿಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ರೈತರು ರಾಜ್ಯ ರಾಜಧಾನಿ ಚಂಡೀಗಢ ಪ್ರವೇಶಿಸದಂತೆ ಸರ್ಕಾರ ತಡೆದ ಪರಿಣಾಮ ರೈತರು ಗಡಿಯಲ್ಲೆ ಬೀಡು ಬಿಟ್ಟಿದ್ದಾರೆ.

ಪ್ರತಿಭಟನಾಕಾರರು ಮುಂದೆ ಹೋಗದಂತೆ ಮೊಹಾಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ನೀರಿನ ಕ್ಯಾನನ್‌ಗಳನ್ನು ನಿಲ್ಲಿಸಿದ್ದಾರೆ. ರೈತರು ಮುಂದಕ್ಕೆ ಚಲಿಸದಂತೆ ಚಂಡೀಗಢ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಅನುಸರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈತರು ಮುಂದುವರಿಯದಂತೆ ತಡೆದ ನಂತರ ಮಾತನಾಡಿದ ರೈತ ಮುಖಂಡರೊಬ್ಬರು, ಸರ್ಕಾರದೊಂದಿಗೆ ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ, ಆದರೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಡೆತಡೆಗಳನ್ನು ಮುರಿದು ಚಂಡೀಗಢದತ್ತ ಸಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

ಒಕ್ಕೂಟ ಸರ್ಕಾರವು ಘೋಷಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ವರ್ಷವಿಡೀ ನಡೆದ ಆಂದೋಲನದಂತೆಯೇ ಹಲವಾರು ರೈತ ಸಂಘಟನೆಗಳು ಚಂಡೀಗಢದಲ್ಲಿ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಮಧ್ಯೆ ಈ ಘಟನೆ ನಡೆದಿದೆ.

ರೈತರ ಬೇಡಿಕೆಗಳು

ತೀವ್ರವಾದ ಶಾಖದ ಅಲೆಗಳಿಂದಾಗಿ ಗೋಧಿ ಉತ್ಪಾದನೆಯಲ್ಲಿ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು, ಪ್ರತಿ ಕ್ವಿಂಟಾಲ್ ಗೋಧಿಗೆ 500 ರೂ ಬೋನಸ್ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೂನ್ 10 ರಿಂದ ಭತ್ತ ಬಿತ್ತನೆ ಮಾಡಬೇಕೆಂಬ ತಮ್ಮ ಬೇಡಿಕೆಯ ಜೊತೆಗೆ, ಹೆಸರುಕಾಳು ಮತ್ತು ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಲು ಅಧಿಸೂಚನೆ ಹೊರಡಿಸುವಂತೆ ರೈತರು ಒತ್ತಾಯಿಸಿದ್ದಾರೆ.

ಕಬ್ಬು ಪೂರೈಕೆಯ ಮೇಲಿನ ಬಾಕಿ ಪಾವತಿಯನ್ನು ಬಿಡುಗಡೆ ಮಾಡುವಂತೆ ಕೂಡಾ ರೈತರು ಒತ್ತಾಯಿಸಿದ್ದು, ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆ ವಿರುದ್ಧ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ: ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿಗೆ ಆಗ್ರಹ

ಪಂಜಾಬ್‌ನ ವಿವಿಧ ಭಾಗಗಳಿಂದ ಬಂದ ರೈತರು ತಮ್ಮೊಂದಿಗೆ ಪಡಿತರ, ಹಾಸಿಗೆಗಳು, ಕೂಲರ್‌ಗಳು, ಫ್ಯಾನ್‌ಗಳು, ಪಾತ್ರೆಗಳು ಮತ್ತು ಸಿಲಿಂಡರ್‌ಗಳನ್ನು ಹೊತ್ತುಕೊಂಡು ಮೊಹಾಲಿಯ ಗುರುದ್ವಾರ ಅಂಬ್ ಸಾಹಿಬ್‌ನಲ್ಲಿ ಸಮಾವೇಶಗೊಂಡಿದ್ದಾರೆ.

ಮುಖ್ಯಮಂತ್ರಿಯ ಪ್ರತಿನಿಧಿಗಳು ರೈತರೊಂದಿಗೆ ಸಭೆ ನಡೆಸುವುದಾಗಿ ಸರ್ಕಾರ ತಿಳಿಸಿದ್ದರೂ, ಪ್ರಸ್ತುತ ದೆಹಲಿಯಲ್ಲಿದ್ದಾರೆ ಎನ್ನಲಾಗಿರುವ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ನೇರವಾಗಿ ಭೇಟಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ಗುರುದ್ವಾರದಿಂದ ಮೆರವಣಿಗೆ ಆರಂಭಿಸಿದ ರೈತರು ಮುಂದೆ ಸಾಗುತ್ತಾ ಮೊದಲ ಸಾಲಿನ ಬ್ಯಾರಿಕೇಡ್‌ಗಳನ್ನು ಮುರಿದ್ದಾರೆ. ಆದಾಗ್ಯೂ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಎರಡನೇ ಸಾಲಿನ ಅಡೆತಡೆಗಳನ್ನು ಮುರಿಯದಂತೆ ಪ್ರತಿಭಟನಾಕಾರರನ್ನು ಕೋರಿದ್ದು, ಬದಲಿಗೆ ತಮ್ಮ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ಈ ಮಧ್ಯೆ, ಭಾರತಿ ಕಿಸಾನ್ ಯೂನಿಯನ್ (ಲಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು, “ದೆಹಲಿಯಲ್ಲಿ ನಡೆಸಿದ ಆಂದೋಲನದಂತೆಯೇ, ಇಲ್ಲಿಯು ಖಂಡಿತಾ ಯುದ್ಧವನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಅವರನ್ನು ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ. ಇದರಿಂದಾಗಿ ಪೊಲೀಸರು ಚಂಡೀಗಢ-ಮೊಹಾಲಿ ರಸ್ತೆಯಲ್ಲಿ ಸಂಚಾರವನ್ನು ಬದಲಾಯಿಸಿದ್ದಾರೆ. ಇದಕ್ಕೂ ಮುನ್ನ ಉಪ ಪೊಲೀಸ್ ಮಹಾ ನಿರೀಕ್ಷಕ ಗುರುಪ್ರೀತ್ ಸಿಂಗ್ ಭುಲ್ಲರ್ ಕೂಡ ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...