Homeರಾಷ್ಟ್ರೀಯಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಪೊಲೀಸರು ರಾಜಧಾನಿಗೆ ಪ್ರವೇಶಿಸದಂರೆ ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ

- Advertisement -
- Advertisement -

ಜೂನ್ 10 ರಿಂದ ಗೋಧಿಗೆ ಬೋನಸ್ ಮತ್ತು ಭತ್ತ ಬಿತ್ತನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಒತ್ತಾಯಿಸಿರುವ ಪಂಜಾಬ್‌ನ ರೈತರು ಮೇ 17 ರ ಮಂಗಳವಾರದಂದು ಚಂಡೀಗಢ ಮೊಹಾಲಿ ಗಡಿಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ರೈತರು ರಾಜ್ಯ ರಾಜಧಾನಿ ಚಂಡೀಗಢ ಪ್ರವೇಶಿಸದಂತೆ ಸರ್ಕಾರ ತಡೆದ ಪರಿಣಾಮ ರೈತರು ಗಡಿಯಲ್ಲೆ ಬೀಡು ಬಿಟ್ಟಿದ್ದಾರೆ.

ಪ್ರತಿಭಟನಾಕಾರರು ಮುಂದೆ ಹೋಗದಂತೆ ಮೊಹಾಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ನೀರಿನ ಕ್ಯಾನನ್‌ಗಳನ್ನು ನಿಲ್ಲಿಸಿದ್ದಾರೆ. ರೈತರು ಮುಂದಕ್ಕೆ ಚಲಿಸದಂತೆ ಚಂಡೀಗಢ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಅನುಸರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈತರು ಮುಂದುವರಿಯದಂತೆ ತಡೆದ ನಂತರ ಮಾತನಾಡಿದ ರೈತ ಮುಖಂಡರೊಬ್ಬರು, ಸರ್ಕಾರದೊಂದಿಗೆ ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ, ಆದರೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಡೆತಡೆಗಳನ್ನು ಮುರಿದು ಚಂಡೀಗಢದತ್ತ ಸಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

ಒಕ್ಕೂಟ ಸರ್ಕಾರವು ಘೋಷಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ವರ್ಷವಿಡೀ ನಡೆದ ಆಂದೋಲನದಂತೆಯೇ ಹಲವಾರು ರೈತ ಸಂಘಟನೆಗಳು ಚಂಡೀಗಢದಲ್ಲಿ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಮಧ್ಯೆ ಈ ಘಟನೆ ನಡೆದಿದೆ.

ರೈತರ ಬೇಡಿಕೆಗಳು

ತೀವ್ರವಾದ ಶಾಖದ ಅಲೆಗಳಿಂದಾಗಿ ಗೋಧಿ ಉತ್ಪಾದನೆಯಲ್ಲಿ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು, ಪ್ರತಿ ಕ್ವಿಂಟಾಲ್ ಗೋಧಿಗೆ 500 ರೂ ಬೋನಸ್ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೂನ್ 10 ರಿಂದ ಭತ್ತ ಬಿತ್ತನೆ ಮಾಡಬೇಕೆಂಬ ತಮ್ಮ ಬೇಡಿಕೆಯ ಜೊತೆಗೆ, ಹೆಸರುಕಾಳು ಮತ್ತು ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಲು ಅಧಿಸೂಚನೆ ಹೊರಡಿಸುವಂತೆ ರೈತರು ಒತ್ತಾಯಿಸಿದ್ದಾರೆ.

ಕಬ್ಬು ಪೂರೈಕೆಯ ಮೇಲಿನ ಬಾಕಿ ಪಾವತಿಯನ್ನು ಬಿಡುಗಡೆ ಮಾಡುವಂತೆ ಕೂಡಾ ರೈತರು ಒತ್ತಾಯಿಸಿದ್ದು, ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆ ವಿರುದ್ಧ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ: ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿಗೆ ಆಗ್ರಹ

ಪಂಜಾಬ್‌ನ ವಿವಿಧ ಭಾಗಗಳಿಂದ ಬಂದ ರೈತರು ತಮ್ಮೊಂದಿಗೆ ಪಡಿತರ, ಹಾಸಿಗೆಗಳು, ಕೂಲರ್‌ಗಳು, ಫ್ಯಾನ್‌ಗಳು, ಪಾತ್ರೆಗಳು ಮತ್ತು ಸಿಲಿಂಡರ್‌ಗಳನ್ನು ಹೊತ್ತುಕೊಂಡು ಮೊಹಾಲಿಯ ಗುರುದ್ವಾರ ಅಂಬ್ ಸಾಹಿಬ್‌ನಲ್ಲಿ ಸಮಾವೇಶಗೊಂಡಿದ್ದಾರೆ.

ಮುಖ್ಯಮಂತ್ರಿಯ ಪ್ರತಿನಿಧಿಗಳು ರೈತರೊಂದಿಗೆ ಸಭೆ ನಡೆಸುವುದಾಗಿ ಸರ್ಕಾರ ತಿಳಿಸಿದ್ದರೂ, ಪ್ರಸ್ತುತ ದೆಹಲಿಯಲ್ಲಿದ್ದಾರೆ ಎನ್ನಲಾಗಿರುವ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ನೇರವಾಗಿ ಭೇಟಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ಗುರುದ್ವಾರದಿಂದ ಮೆರವಣಿಗೆ ಆರಂಭಿಸಿದ ರೈತರು ಮುಂದೆ ಸಾಗುತ್ತಾ ಮೊದಲ ಸಾಲಿನ ಬ್ಯಾರಿಕೇಡ್‌ಗಳನ್ನು ಮುರಿದ್ದಾರೆ. ಆದಾಗ್ಯೂ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಎರಡನೇ ಸಾಲಿನ ಅಡೆತಡೆಗಳನ್ನು ಮುರಿಯದಂತೆ ಪ್ರತಿಭಟನಾಕಾರರನ್ನು ಕೋರಿದ್ದು, ಬದಲಿಗೆ ತಮ್ಮ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ಈ ಮಧ್ಯೆ, ಭಾರತಿ ಕಿಸಾನ್ ಯೂನಿಯನ್ (ಲಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು, “ದೆಹಲಿಯಲ್ಲಿ ನಡೆಸಿದ ಆಂದೋಲನದಂತೆಯೇ, ಇಲ್ಲಿಯು ಖಂಡಿತಾ ಯುದ್ಧವನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಅವರನ್ನು ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ. ಇದರಿಂದಾಗಿ ಪೊಲೀಸರು ಚಂಡೀಗಢ-ಮೊಹಾಲಿ ರಸ್ತೆಯಲ್ಲಿ ಸಂಚಾರವನ್ನು ಬದಲಾಯಿಸಿದ್ದಾರೆ. ಇದಕ್ಕೂ ಮುನ್ನ ಉಪ ಪೊಲೀಸ್ ಮಹಾ ನಿರೀಕ್ಷಕ ಗುರುಪ್ರೀತ್ ಸಿಂಗ್ ಭುಲ್ಲರ್ ಕೂಡ ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸಿಎಂ, ಗೃಹ ಸಚಿವರಿಗೆ ಪತ್ರ, ಅಗ್ನಿವೀರನ ಬೆನ್ನಿಗೆ ನಿಂತ ಭಾರತೀಯ ಸೇನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ...

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...