Homeರಾಷ್ಟ್ರೀಯಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಪೊಲೀಸರು ರಾಜಧಾನಿಗೆ ಪ್ರವೇಶಿಸದಂರೆ ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ

- Advertisement -
- Advertisement -

ಜೂನ್ 10 ರಿಂದ ಗೋಧಿಗೆ ಬೋನಸ್ ಮತ್ತು ಭತ್ತ ಬಿತ್ತನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಒತ್ತಾಯಿಸಿರುವ ಪಂಜಾಬ್‌ನ ರೈತರು ಮೇ 17 ರ ಮಂಗಳವಾರದಂದು ಚಂಡೀಗಢ ಮೊಹಾಲಿ ಗಡಿಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ರೈತರು ರಾಜ್ಯ ರಾಜಧಾನಿ ಚಂಡೀಗಢ ಪ್ರವೇಶಿಸದಂತೆ ಸರ್ಕಾರ ತಡೆದ ಪರಿಣಾಮ ರೈತರು ಗಡಿಯಲ್ಲೆ ಬೀಡು ಬಿಟ್ಟಿದ್ದಾರೆ.

ಪ್ರತಿಭಟನಾಕಾರರು ಮುಂದೆ ಹೋಗದಂತೆ ಮೊಹಾಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ನೀರಿನ ಕ್ಯಾನನ್‌ಗಳನ್ನು ನಿಲ್ಲಿಸಿದ್ದಾರೆ. ರೈತರು ಮುಂದಕ್ಕೆ ಚಲಿಸದಂತೆ ಚಂಡೀಗಢ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಅನುಸರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈತರು ಮುಂದುವರಿಯದಂತೆ ತಡೆದ ನಂತರ ಮಾತನಾಡಿದ ರೈತ ಮುಖಂಡರೊಬ್ಬರು, ಸರ್ಕಾರದೊಂದಿಗೆ ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ, ಆದರೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಡೆತಡೆಗಳನ್ನು ಮುರಿದು ಚಂಡೀಗಢದತ್ತ ಸಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

ಒಕ್ಕೂಟ ಸರ್ಕಾರವು ಘೋಷಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ವರ್ಷವಿಡೀ ನಡೆದ ಆಂದೋಲನದಂತೆಯೇ ಹಲವಾರು ರೈತ ಸಂಘಟನೆಗಳು ಚಂಡೀಗಢದಲ್ಲಿ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಮಧ್ಯೆ ಈ ಘಟನೆ ನಡೆದಿದೆ.

ರೈತರ ಬೇಡಿಕೆಗಳು

ತೀವ್ರವಾದ ಶಾಖದ ಅಲೆಗಳಿಂದಾಗಿ ಗೋಧಿ ಉತ್ಪಾದನೆಯಲ್ಲಿ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು, ಪ್ರತಿ ಕ್ವಿಂಟಾಲ್ ಗೋಧಿಗೆ 500 ರೂ ಬೋನಸ್ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೂನ್ 10 ರಿಂದ ಭತ್ತ ಬಿತ್ತನೆ ಮಾಡಬೇಕೆಂಬ ತಮ್ಮ ಬೇಡಿಕೆಯ ಜೊತೆಗೆ, ಹೆಸರುಕಾಳು ಮತ್ತು ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಲು ಅಧಿಸೂಚನೆ ಹೊರಡಿಸುವಂತೆ ರೈತರು ಒತ್ತಾಯಿಸಿದ್ದಾರೆ.

ಕಬ್ಬು ಪೂರೈಕೆಯ ಮೇಲಿನ ಬಾಕಿ ಪಾವತಿಯನ್ನು ಬಿಡುಗಡೆ ಮಾಡುವಂತೆ ಕೂಡಾ ರೈತರು ಒತ್ತಾಯಿಸಿದ್ದು, ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆ ವಿರುದ್ಧ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ: ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿಗೆ ಆಗ್ರಹ

ಪಂಜಾಬ್‌ನ ವಿವಿಧ ಭಾಗಗಳಿಂದ ಬಂದ ರೈತರು ತಮ್ಮೊಂದಿಗೆ ಪಡಿತರ, ಹಾಸಿಗೆಗಳು, ಕೂಲರ್‌ಗಳು, ಫ್ಯಾನ್‌ಗಳು, ಪಾತ್ರೆಗಳು ಮತ್ತು ಸಿಲಿಂಡರ್‌ಗಳನ್ನು ಹೊತ್ತುಕೊಂಡು ಮೊಹಾಲಿಯ ಗುರುದ್ವಾರ ಅಂಬ್ ಸಾಹಿಬ್‌ನಲ್ಲಿ ಸಮಾವೇಶಗೊಂಡಿದ್ದಾರೆ.

ಮುಖ್ಯಮಂತ್ರಿಯ ಪ್ರತಿನಿಧಿಗಳು ರೈತರೊಂದಿಗೆ ಸಭೆ ನಡೆಸುವುದಾಗಿ ಸರ್ಕಾರ ತಿಳಿಸಿದ್ದರೂ, ಪ್ರಸ್ತುತ ದೆಹಲಿಯಲ್ಲಿದ್ದಾರೆ ಎನ್ನಲಾಗಿರುವ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ನೇರವಾಗಿ ಭೇಟಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ಗುರುದ್ವಾರದಿಂದ ಮೆರವಣಿಗೆ ಆರಂಭಿಸಿದ ರೈತರು ಮುಂದೆ ಸಾಗುತ್ತಾ ಮೊದಲ ಸಾಲಿನ ಬ್ಯಾರಿಕೇಡ್‌ಗಳನ್ನು ಮುರಿದ್ದಾರೆ. ಆದಾಗ್ಯೂ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಎರಡನೇ ಸಾಲಿನ ಅಡೆತಡೆಗಳನ್ನು ಮುರಿಯದಂತೆ ಪ್ರತಿಭಟನಾಕಾರರನ್ನು ಕೋರಿದ್ದು, ಬದಲಿಗೆ ತಮ್ಮ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ಈ ಮಧ್ಯೆ, ಭಾರತಿ ಕಿಸಾನ್ ಯೂನಿಯನ್ (ಲಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು, “ದೆಹಲಿಯಲ್ಲಿ ನಡೆಸಿದ ಆಂದೋಲನದಂತೆಯೇ, ಇಲ್ಲಿಯು ಖಂಡಿತಾ ಯುದ್ಧವನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಅವರನ್ನು ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ. ಇದರಿಂದಾಗಿ ಪೊಲೀಸರು ಚಂಡೀಗಢ-ಮೊಹಾಲಿ ರಸ್ತೆಯಲ್ಲಿ ಸಂಚಾರವನ್ನು ಬದಲಾಯಿಸಿದ್ದಾರೆ. ಇದಕ್ಕೂ ಮುನ್ನ ಉಪ ಪೊಲೀಸ್ ಮಹಾ ನಿರೀಕ್ಷಕ ಗುರುಪ್ರೀತ್ ಸಿಂಗ್ ಭುಲ್ಲರ್ ಕೂಡ ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...