Homeರಾಷ್ಟ್ರೀಯಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಪೊಲೀಸರು ರಾಜಧಾನಿಗೆ ಪ್ರವೇಶಿಸದಂರೆ ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ

- Advertisement -
- Advertisement -

ಜೂನ್ 10 ರಿಂದ ಗೋಧಿಗೆ ಬೋನಸ್ ಮತ್ತು ಭತ್ತ ಬಿತ್ತನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಒತ್ತಾಯಿಸಿರುವ ಪಂಜಾಬ್‌ನ ರೈತರು ಮೇ 17 ರ ಮಂಗಳವಾರದಂದು ಚಂಡೀಗಢ ಮೊಹಾಲಿ ಗಡಿಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ರೈತರು ರಾಜ್ಯ ರಾಜಧಾನಿ ಚಂಡೀಗಢ ಪ್ರವೇಶಿಸದಂತೆ ಸರ್ಕಾರ ತಡೆದ ಪರಿಣಾಮ ರೈತರು ಗಡಿಯಲ್ಲೆ ಬೀಡು ಬಿಟ್ಟಿದ್ದಾರೆ.

ಪ್ರತಿಭಟನಾಕಾರರು ಮುಂದೆ ಹೋಗದಂತೆ ಮೊಹಾಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ನೀರಿನ ಕ್ಯಾನನ್‌ಗಳನ್ನು ನಿಲ್ಲಿಸಿದ್ದಾರೆ. ರೈತರು ಮುಂದಕ್ಕೆ ಚಲಿಸದಂತೆ ಚಂಡೀಗಢ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಅನುಸರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈತರು ಮುಂದುವರಿಯದಂತೆ ತಡೆದ ನಂತರ ಮಾತನಾಡಿದ ರೈತ ಮುಖಂಡರೊಬ್ಬರು, ಸರ್ಕಾರದೊಂದಿಗೆ ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ, ಆದರೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಡೆತಡೆಗಳನ್ನು ಮುರಿದು ಚಂಡೀಗಢದತ್ತ ಸಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

ಒಕ್ಕೂಟ ಸರ್ಕಾರವು ಘೋಷಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ವರ್ಷವಿಡೀ ನಡೆದ ಆಂದೋಲನದಂತೆಯೇ ಹಲವಾರು ರೈತ ಸಂಘಟನೆಗಳು ಚಂಡೀಗಢದಲ್ಲಿ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಮಧ್ಯೆ ಈ ಘಟನೆ ನಡೆದಿದೆ.

ರೈತರ ಬೇಡಿಕೆಗಳು

ತೀವ್ರವಾದ ಶಾಖದ ಅಲೆಗಳಿಂದಾಗಿ ಗೋಧಿ ಉತ್ಪಾದನೆಯಲ್ಲಿ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು, ಪ್ರತಿ ಕ್ವಿಂಟಾಲ್ ಗೋಧಿಗೆ 500 ರೂ ಬೋನಸ್ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೂನ್ 10 ರಿಂದ ಭತ್ತ ಬಿತ್ತನೆ ಮಾಡಬೇಕೆಂಬ ತಮ್ಮ ಬೇಡಿಕೆಯ ಜೊತೆಗೆ, ಹೆಸರುಕಾಳು ಮತ್ತು ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಲು ಅಧಿಸೂಚನೆ ಹೊರಡಿಸುವಂತೆ ರೈತರು ಒತ್ತಾಯಿಸಿದ್ದಾರೆ.

ಕಬ್ಬು ಪೂರೈಕೆಯ ಮೇಲಿನ ಬಾಕಿ ಪಾವತಿಯನ್ನು ಬಿಡುಗಡೆ ಮಾಡುವಂತೆ ಕೂಡಾ ರೈತರು ಒತ್ತಾಯಿಸಿದ್ದು, ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆ ವಿರುದ್ಧ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ: ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿಗೆ ಆಗ್ರಹ

ಪಂಜಾಬ್‌ನ ವಿವಿಧ ಭಾಗಗಳಿಂದ ಬಂದ ರೈತರು ತಮ್ಮೊಂದಿಗೆ ಪಡಿತರ, ಹಾಸಿಗೆಗಳು, ಕೂಲರ್‌ಗಳು, ಫ್ಯಾನ್‌ಗಳು, ಪಾತ್ರೆಗಳು ಮತ್ತು ಸಿಲಿಂಡರ್‌ಗಳನ್ನು ಹೊತ್ತುಕೊಂಡು ಮೊಹಾಲಿಯ ಗುರುದ್ವಾರ ಅಂಬ್ ಸಾಹಿಬ್‌ನಲ್ಲಿ ಸಮಾವೇಶಗೊಂಡಿದ್ದಾರೆ.

ಮುಖ್ಯಮಂತ್ರಿಯ ಪ್ರತಿನಿಧಿಗಳು ರೈತರೊಂದಿಗೆ ಸಭೆ ನಡೆಸುವುದಾಗಿ ಸರ್ಕಾರ ತಿಳಿಸಿದ್ದರೂ, ಪ್ರಸ್ತುತ ದೆಹಲಿಯಲ್ಲಿದ್ದಾರೆ ಎನ್ನಲಾಗಿರುವ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ನೇರವಾಗಿ ಭೇಟಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ಗುರುದ್ವಾರದಿಂದ ಮೆರವಣಿಗೆ ಆರಂಭಿಸಿದ ರೈತರು ಮುಂದೆ ಸಾಗುತ್ತಾ ಮೊದಲ ಸಾಲಿನ ಬ್ಯಾರಿಕೇಡ್‌ಗಳನ್ನು ಮುರಿದ್ದಾರೆ. ಆದಾಗ್ಯೂ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಎರಡನೇ ಸಾಲಿನ ಅಡೆತಡೆಗಳನ್ನು ಮುರಿಯದಂತೆ ಪ್ರತಿಭಟನಾಕಾರರನ್ನು ಕೋರಿದ್ದು, ಬದಲಿಗೆ ತಮ್ಮ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ಈ ಮಧ್ಯೆ, ಭಾರತಿ ಕಿಸಾನ್ ಯೂನಿಯನ್ (ಲಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು, “ದೆಹಲಿಯಲ್ಲಿ ನಡೆಸಿದ ಆಂದೋಲನದಂತೆಯೇ, ಇಲ್ಲಿಯು ಖಂಡಿತಾ ಯುದ್ಧವನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಅವರನ್ನು ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ. ಇದರಿಂದಾಗಿ ಪೊಲೀಸರು ಚಂಡೀಗಢ-ಮೊಹಾಲಿ ರಸ್ತೆಯಲ್ಲಿ ಸಂಚಾರವನ್ನು ಬದಲಾಯಿಸಿದ್ದಾರೆ. ಇದಕ್ಕೂ ಮುನ್ನ ಉಪ ಪೊಲೀಸ್ ಮಹಾ ನಿರೀಕ್ಷಕ ಗುರುಪ್ರೀತ್ ಸಿಂಗ್ ಭುಲ್ಲರ್ ಕೂಡ ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...