Homeರಾಷ್ಟ್ರೀಯಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಪೊಲೀಸರು ರಾಜಧಾನಿಗೆ ಪ್ರವೇಶಿಸದಂರೆ ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ

- Advertisement -
- Advertisement -

ಜೂನ್ 10 ರಿಂದ ಗೋಧಿಗೆ ಬೋನಸ್ ಮತ್ತು ಭತ್ತ ಬಿತ್ತನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಒತ್ತಾಯಿಸಿರುವ ಪಂಜಾಬ್‌ನ ರೈತರು ಮೇ 17 ರ ಮಂಗಳವಾರದಂದು ಚಂಡೀಗಢ ಮೊಹಾಲಿ ಗಡಿಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ರೈತರು ರಾಜ್ಯ ರಾಜಧಾನಿ ಚಂಡೀಗಢ ಪ್ರವೇಶಿಸದಂತೆ ಸರ್ಕಾರ ತಡೆದ ಪರಿಣಾಮ ರೈತರು ಗಡಿಯಲ್ಲೆ ಬೀಡು ಬಿಟ್ಟಿದ್ದಾರೆ.

ಪ್ರತಿಭಟನಾಕಾರರು ಮುಂದೆ ಹೋಗದಂತೆ ಮೊಹಾಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ನೀರಿನ ಕ್ಯಾನನ್‌ಗಳನ್ನು ನಿಲ್ಲಿಸಿದ್ದಾರೆ. ರೈತರು ಮುಂದಕ್ಕೆ ಚಲಿಸದಂತೆ ಚಂಡೀಗಢ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಅನುಸರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈತರು ಮುಂದುವರಿಯದಂತೆ ತಡೆದ ನಂತರ ಮಾತನಾಡಿದ ರೈತ ಮುಖಂಡರೊಬ್ಬರು, ಸರ್ಕಾರದೊಂದಿಗೆ ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ, ಆದರೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಡೆತಡೆಗಳನ್ನು ಮುರಿದು ಚಂಡೀಗಢದತ್ತ ಸಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

ಒಕ್ಕೂಟ ಸರ್ಕಾರವು ಘೋಷಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ವರ್ಷವಿಡೀ ನಡೆದ ಆಂದೋಲನದಂತೆಯೇ ಹಲವಾರು ರೈತ ಸಂಘಟನೆಗಳು ಚಂಡೀಗಢದಲ್ಲಿ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಮಧ್ಯೆ ಈ ಘಟನೆ ನಡೆದಿದೆ.

ರೈತರ ಬೇಡಿಕೆಗಳು

ತೀವ್ರವಾದ ಶಾಖದ ಅಲೆಗಳಿಂದಾಗಿ ಗೋಧಿ ಉತ್ಪಾದನೆಯಲ್ಲಿ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು, ಪ್ರತಿ ಕ್ವಿಂಟಾಲ್ ಗೋಧಿಗೆ 500 ರೂ ಬೋನಸ್ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೂನ್ 10 ರಿಂದ ಭತ್ತ ಬಿತ್ತನೆ ಮಾಡಬೇಕೆಂಬ ತಮ್ಮ ಬೇಡಿಕೆಯ ಜೊತೆಗೆ, ಹೆಸರುಕಾಳು ಮತ್ತು ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಲು ಅಧಿಸೂಚನೆ ಹೊರಡಿಸುವಂತೆ ರೈತರು ಒತ್ತಾಯಿಸಿದ್ದಾರೆ.

ಕಬ್ಬು ಪೂರೈಕೆಯ ಮೇಲಿನ ಬಾಕಿ ಪಾವತಿಯನ್ನು ಬಿಡುಗಡೆ ಮಾಡುವಂತೆ ಕೂಡಾ ರೈತರು ಒತ್ತಾಯಿಸಿದ್ದು, ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆ ವಿರುದ್ಧ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ: ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿಗೆ ಆಗ್ರಹ

ಪಂಜಾಬ್‌ನ ವಿವಿಧ ಭಾಗಗಳಿಂದ ಬಂದ ರೈತರು ತಮ್ಮೊಂದಿಗೆ ಪಡಿತರ, ಹಾಸಿಗೆಗಳು, ಕೂಲರ್‌ಗಳು, ಫ್ಯಾನ್‌ಗಳು, ಪಾತ್ರೆಗಳು ಮತ್ತು ಸಿಲಿಂಡರ್‌ಗಳನ್ನು ಹೊತ್ತುಕೊಂಡು ಮೊಹಾಲಿಯ ಗುರುದ್ವಾರ ಅಂಬ್ ಸಾಹಿಬ್‌ನಲ್ಲಿ ಸಮಾವೇಶಗೊಂಡಿದ್ದಾರೆ.

ಮುಖ್ಯಮಂತ್ರಿಯ ಪ್ರತಿನಿಧಿಗಳು ರೈತರೊಂದಿಗೆ ಸಭೆ ನಡೆಸುವುದಾಗಿ ಸರ್ಕಾರ ತಿಳಿಸಿದ್ದರೂ, ಪ್ರಸ್ತುತ ದೆಹಲಿಯಲ್ಲಿದ್ದಾರೆ ಎನ್ನಲಾಗಿರುವ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ನೇರವಾಗಿ ಭೇಟಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ಗುರುದ್ವಾರದಿಂದ ಮೆರವಣಿಗೆ ಆರಂಭಿಸಿದ ರೈತರು ಮುಂದೆ ಸಾಗುತ್ತಾ ಮೊದಲ ಸಾಲಿನ ಬ್ಯಾರಿಕೇಡ್‌ಗಳನ್ನು ಮುರಿದ್ದಾರೆ. ಆದಾಗ್ಯೂ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಎರಡನೇ ಸಾಲಿನ ಅಡೆತಡೆಗಳನ್ನು ಮುರಿಯದಂತೆ ಪ್ರತಿಭಟನಾಕಾರರನ್ನು ಕೋರಿದ್ದು, ಬದಲಿಗೆ ತಮ್ಮ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ಈ ಮಧ್ಯೆ, ಭಾರತಿ ಕಿಸಾನ್ ಯೂನಿಯನ್ (ಲಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು, “ದೆಹಲಿಯಲ್ಲಿ ನಡೆಸಿದ ಆಂದೋಲನದಂತೆಯೇ, ಇಲ್ಲಿಯು ಖಂಡಿತಾ ಯುದ್ಧವನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಅವರನ್ನು ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ. ಇದರಿಂದಾಗಿ ಪೊಲೀಸರು ಚಂಡೀಗಢ-ಮೊಹಾಲಿ ರಸ್ತೆಯಲ್ಲಿ ಸಂಚಾರವನ್ನು ಬದಲಾಯಿಸಿದ್ದಾರೆ. ಇದಕ್ಕೂ ಮುನ್ನ ಉಪ ಪೊಲೀಸ್ ಮಹಾ ನಿರೀಕ್ಷಕ ಗುರುಪ್ರೀತ್ ಸಿಂಗ್ ಭುಲ್ಲರ್ ಕೂಡ ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...