Homeರಾಷ್ಟ್ರೀಯಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಪೊಲೀಸರು ರಾಜಧಾನಿಗೆ ಪ್ರವೇಶಿಸದಂರೆ ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ

- Advertisement -
- Advertisement -

ಜೂನ್ 10 ರಿಂದ ಗೋಧಿಗೆ ಬೋನಸ್ ಮತ್ತು ಭತ್ತ ಬಿತ್ತನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಒತ್ತಾಯಿಸಿರುವ ಪಂಜಾಬ್‌ನ ರೈತರು ಮೇ 17 ರ ಮಂಗಳವಾರದಂದು ಚಂಡೀಗಢ ಮೊಹಾಲಿ ಗಡಿಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ರೈತರು ರಾಜ್ಯ ರಾಜಧಾನಿ ಚಂಡೀಗಢ ಪ್ರವೇಶಿಸದಂತೆ ಸರ್ಕಾರ ತಡೆದ ಪರಿಣಾಮ ರೈತರು ಗಡಿಯಲ್ಲೆ ಬೀಡು ಬಿಟ್ಟಿದ್ದಾರೆ.

ಪ್ರತಿಭಟನಾಕಾರರು ಮುಂದೆ ಹೋಗದಂತೆ ಮೊಹಾಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ನೀರಿನ ಕ್ಯಾನನ್‌ಗಳನ್ನು ನಿಲ್ಲಿಸಿದ್ದಾರೆ. ರೈತರು ಮುಂದಕ್ಕೆ ಚಲಿಸದಂತೆ ಚಂಡೀಗಢ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಅನುಸರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈತರು ಮುಂದುವರಿಯದಂತೆ ತಡೆದ ನಂತರ ಮಾತನಾಡಿದ ರೈತ ಮುಖಂಡರೊಬ್ಬರು, ಸರ್ಕಾರದೊಂದಿಗೆ ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ, ಆದರೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಡೆತಡೆಗಳನ್ನು ಮುರಿದು ಚಂಡೀಗಢದತ್ತ ಸಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

ಒಕ್ಕೂಟ ಸರ್ಕಾರವು ಘೋಷಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ವರ್ಷವಿಡೀ ನಡೆದ ಆಂದೋಲನದಂತೆಯೇ ಹಲವಾರು ರೈತ ಸಂಘಟನೆಗಳು ಚಂಡೀಗಢದಲ್ಲಿ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಮಧ್ಯೆ ಈ ಘಟನೆ ನಡೆದಿದೆ.

ರೈತರ ಬೇಡಿಕೆಗಳು

ತೀವ್ರವಾದ ಶಾಖದ ಅಲೆಗಳಿಂದಾಗಿ ಗೋಧಿ ಉತ್ಪಾದನೆಯಲ್ಲಿ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು, ಪ್ರತಿ ಕ್ವಿಂಟಾಲ್ ಗೋಧಿಗೆ 500 ರೂ ಬೋನಸ್ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜೂನ್ 10 ರಿಂದ ಭತ್ತ ಬಿತ್ತನೆ ಮಾಡಬೇಕೆಂಬ ತಮ್ಮ ಬೇಡಿಕೆಯ ಜೊತೆಗೆ, ಹೆಸರುಕಾಳು ಮತ್ತು ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಲು ಅಧಿಸೂಚನೆ ಹೊರಡಿಸುವಂತೆ ರೈತರು ಒತ್ತಾಯಿಸಿದ್ದಾರೆ.

ಕಬ್ಬು ಪೂರೈಕೆಯ ಮೇಲಿನ ಬಾಕಿ ಪಾವತಿಯನ್ನು ಬಿಡುಗಡೆ ಮಾಡುವಂತೆ ಕೂಡಾ ರೈತರು ಒತ್ತಾಯಿಸಿದ್ದು, ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆ ವಿರುದ್ಧ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ: ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿಗೆ ಆಗ್ರಹ

ಪಂಜಾಬ್‌ನ ವಿವಿಧ ಭಾಗಗಳಿಂದ ಬಂದ ರೈತರು ತಮ್ಮೊಂದಿಗೆ ಪಡಿತರ, ಹಾಸಿಗೆಗಳು, ಕೂಲರ್‌ಗಳು, ಫ್ಯಾನ್‌ಗಳು, ಪಾತ್ರೆಗಳು ಮತ್ತು ಸಿಲಿಂಡರ್‌ಗಳನ್ನು ಹೊತ್ತುಕೊಂಡು ಮೊಹಾಲಿಯ ಗುರುದ್ವಾರ ಅಂಬ್ ಸಾಹಿಬ್‌ನಲ್ಲಿ ಸಮಾವೇಶಗೊಂಡಿದ್ದಾರೆ.

ಮುಖ್ಯಮಂತ್ರಿಯ ಪ್ರತಿನಿಧಿಗಳು ರೈತರೊಂದಿಗೆ ಸಭೆ ನಡೆಸುವುದಾಗಿ ಸರ್ಕಾರ ತಿಳಿಸಿದ್ದರೂ, ಪ್ರಸ್ತುತ ದೆಹಲಿಯಲ್ಲಿದ್ದಾರೆ ಎನ್ನಲಾಗಿರುವ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ನೇರವಾಗಿ ಭೇಟಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ಗುರುದ್ವಾರದಿಂದ ಮೆರವಣಿಗೆ ಆರಂಭಿಸಿದ ರೈತರು ಮುಂದೆ ಸಾಗುತ್ತಾ ಮೊದಲ ಸಾಲಿನ ಬ್ಯಾರಿಕೇಡ್‌ಗಳನ್ನು ಮುರಿದ್ದಾರೆ. ಆದಾಗ್ಯೂ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಎರಡನೇ ಸಾಲಿನ ಅಡೆತಡೆಗಳನ್ನು ಮುರಿಯದಂತೆ ಪ್ರತಿಭಟನಾಕಾರರನ್ನು ಕೋರಿದ್ದು, ಬದಲಿಗೆ ತಮ್ಮ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ಈ ಮಧ್ಯೆ, ಭಾರತಿ ಕಿಸಾನ್ ಯೂನಿಯನ್ (ಲಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು, “ದೆಹಲಿಯಲ್ಲಿ ನಡೆಸಿದ ಆಂದೋಲನದಂತೆಯೇ, ಇಲ್ಲಿಯು ಖಂಡಿತಾ ಯುದ್ಧವನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಅವರನ್ನು ತಡೆದ ನಂತರ, ಹಲವಾರು ರೈತರು ತಮ್ಮ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಚಹಾ ತಯಾರಿಸಲು ಪ್ರಾರಂಭಿಸಿದ್ದಾರೆ. ಇದರಿಂದಾಗಿ ಪೊಲೀಸರು ಚಂಡೀಗಢ-ಮೊಹಾಲಿ ರಸ್ತೆಯಲ್ಲಿ ಸಂಚಾರವನ್ನು ಬದಲಾಯಿಸಿದ್ದಾರೆ. ಇದಕ್ಕೂ ಮುನ್ನ ಉಪ ಪೊಲೀಸ್ ಮಹಾ ನಿರೀಕ್ಷಕ ಗುರುಪ್ರೀತ್ ಸಿಂಗ್ ಭುಲ್ಲರ್ ಕೂಡ ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...