Homeಮುಖಪುಟಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ..

ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ..

- Advertisement -
- Advertisement -

ಕೊರೋನಾ ನಿಯಂತ್ರಣಕ್ಕೆ ಅಮೆರಿಕ 1.2 ಟ್ರಿಲಿಯನ್ ಡಾಲರ್, ಇಂಗ್ಲೆಂಡ್ 39 ಬಿಲಿಯನ್ ಡಾಲರ್, ಫ್ರಾನ್ಸ್ 45 ಬಿಲಿಯನ್ ಡಾಲರ್, ನ್ಯೂಜಿಲ್ಯಾಂಡ್ 8 ಬಿಲಿಯನ್ ಡಾಲರ್, ಇಟಲಿ 28 ಬಿಲಿಯನ್ ಡಾಲರ್, ಕೆನಡಾ 56 ಬಿಲಿಯನ್ ಡಾಲರ್, ದ,ಕೋರಿಯಾ 10 ಬಿಲಿಯನ್ ಡಾಲರ್ ಹಣ ಮೀಸಲಿಟ್ಟಿವೆ.

ಪಕ್ಕದ ಪುಟ್ಟ ರಾಜ್ಯ ಕೇರಳ 20 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಿದೆ. ಖಜಾನೆಯಲ್ಲಿ ಸಾಕಷ್ಟು ದುಡ್ಡಿಲ್ಲದಿದ್ದರೂ ಯಡಿಯೂರಪ್ಪ ಎರಡು ತಿಂಗಳ ರೇಷನ್ ಕೊಡುವುದಾಗಿ ಹೇಳಿದ್ದಾರೆ.
ಆದರೆ, ಮೋದಿಯವರು ಯಾವ ಪ್ಯಾಕೇಜನ್ನೂ ಘೋಷಣೆ ಮಾಡಿಲ್ಲ. ನಿಮ್ಮ ಕೈ ಬಳಸಿ ಚಪ್ಪಾಳೆ ಹೊಡೆಯಿರಿ, ನಿಮ್ಮ ಮನೆ ಗಂಟೆ ಮತ್ತು ಗಂಗಾಳ (ಪ್ಲೇಟು) ಬಾರಿಸಿ ಎಂದಷ್ಟೇ ಹೇಳಿದ್ದಾರೆ. ಪರೋಕ್ಷವಾಗಿ ಅವರು ಬಡವರಿಗೆ ಶಂಖಾ ಹೊಡಿರಿ ಎಂದಿದ್ದಾರಷ್ಟೆ.

ಯಾಕೆ ಹಣ ಬಿಚ್ಚುತ್ತಿಲ್ಲ? ಹಣ ಇದ್ದರೆ ತಾನೇ? ಪುಟ್ಟಾಪೂರಾ ದೋಸ್ತ್‌ಗಳಾದ ಅಂಬಾನಿ, ಅದಾನಿಗಳಿಗೆ, ಯೆಸ್ ಬ್ಯಾಂಕಿನ ಮಿತ್ರ ಕಪೂರ್‌ಗಳಿಗೆಲ್ಲ ಮೋದಿ ಗಳಿಸಲು ಬಿಟ್ಟು ಖಜಾನೆ ಖಾಲಿ ಮಾಡುತ್ತ ಹೊರಟಿದ್ದಾರೆ. ಹೀಗಾಗಿ ಅವರ ಬಳಿ ಈಗ ಉಳಿದಿರುವುದು ಬಿಟ್ಟಿ ಬೋಧನೆಯಷ್ಟೇ!

20 ದಿನದ ಜನತಾ ಕರ್ಫ್ಯೂ

ನಿಜಕ್ಕೂ ಕಾಳಜಿ ಇದ್ದಿದ್ದರೆ, 20 ದಿನಗಳ ಜನತಾ ಕರ್ಫ್ಯೂ ಘೋಷಿಸಿ, ಸಂಬಳ ಪಡೆಯದ ಜನರಿಗೆಲ್ಲ ಕೇರಳದಂತೆ ಪ್ಯಾಕೇಜ್ ಘೋಷಿಸಬಹುದಿತ್ತು. ಅದು ಬಿಟ್ಟು ಗಂಟೆ ಬಾರಿಸಿ ಎಂದು ಹೇಳಲು ಪ್ರಧಾನಿಯೇ ಬೇಕಿತ್ತಾ? ಭಕ್ತರು ಆ ಕೆಲಸವನ್ನು ನಿರಂತರವಾಗಿ ಮಾತಾಡ್ತಾನೇ ಇದ್ದಾರಲ್ಲ?

ಜನತಾ ಕರ್ಫ್ಯೂ ಉಲ್ಲಂಘಿಸಿದ ಮೋದಿ ಭಕ್ತರು!

ಒಂದು ದಿನದ ಮಟ್ಟಿಗಾದರೂ ಹೊರಬರದೇ ಮನೆಯಲ್ಲಿಯೇ ಇದ್ದು ಚಪ್ಪಾಳೆ ಹೊಡೆಯಿರಿ ಎಂದು ಮೋದಿ ಹೇಳಿದರೆ ಹಲವು ಮೋದಿ ಭಕ್ತರು ಗುಂಪು ಗುಂಪಾಗಿ ಬೀದಿಗೆ ಬಂದು ಚಪ್ಪಾಳೆ ಹೊಡೆಯುವ ಮೂಲಕ ಮೋದಿಯವರ ಉದ್ದೇಶವನ್ನೇ ಹಾಳುಗೆಡವಿರುವ ವಿಡಿಯೋಗಳು ವೈರಲ್‌ ಆಗಿವೆ.

ಕೊರೋನಾದ ಬಗ್ಗೆ ಇಷ್ಟು ಲಘುವಾದ ಧೋರಣೆ ಬೆಳೆಸಿಕೊಂಡರೆ, ಅಪಾಯಕ್ಕೆ ಈಡಾಗುವವರು ಈ ದೇಶದ ಬಡವರು ಅಲ್ಲವೇ? ಹೀಗಾಗಿ ಶ್ರೀಮಂತರು, ಮೇಲ್ ಮಧ್ಯಮ ಮತ್ತು ಮಧ್ಯಮ ವರ್ಗಗಳ ಜನ ಒಂಥರಾ ರೋಮ್ಯಾಂಟಿಕ್ ಆಗಿ ಇದನ್ನೆಲ್ಲ ಅನುಭವಿಸುತ್ತಿರಬಹುದೇ ಎಂಬ ಸಂಶಯ ಕಾಡತೊಡಗಿದೆ.
-ಪಿ.ಕೆ. ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...