Homeಮುಖಪುಟಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ..

ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ..

- Advertisement -
- Advertisement -

ಕೊರೋನಾ ನಿಯಂತ್ರಣಕ್ಕೆ ಅಮೆರಿಕ 1.2 ಟ್ರಿಲಿಯನ್ ಡಾಲರ್, ಇಂಗ್ಲೆಂಡ್ 39 ಬಿಲಿಯನ್ ಡಾಲರ್, ಫ್ರಾನ್ಸ್ 45 ಬಿಲಿಯನ್ ಡಾಲರ್, ನ್ಯೂಜಿಲ್ಯಾಂಡ್ 8 ಬಿಲಿಯನ್ ಡಾಲರ್, ಇಟಲಿ 28 ಬಿಲಿಯನ್ ಡಾಲರ್, ಕೆನಡಾ 56 ಬಿಲಿಯನ್ ಡಾಲರ್, ದ,ಕೋರಿಯಾ 10 ಬಿಲಿಯನ್ ಡಾಲರ್ ಹಣ ಮೀಸಲಿಟ್ಟಿವೆ.

ಪಕ್ಕದ ಪುಟ್ಟ ರಾಜ್ಯ ಕೇರಳ 20 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಿದೆ. ಖಜಾನೆಯಲ್ಲಿ ಸಾಕಷ್ಟು ದುಡ್ಡಿಲ್ಲದಿದ್ದರೂ ಯಡಿಯೂರಪ್ಪ ಎರಡು ತಿಂಗಳ ರೇಷನ್ ಕೊಡುವುದಾಗಿ ಹೇಳಿದ್ದಾರೆ.
ಆದರೆ, ಮೋದಿಯವರು ಯಾವ ಪ್ಯಾಕೇಜನ್ನೂ ಘೋಷಣೆ ಮಾಡಿಲ್ಲ. ನಿಮ್ಮ ಕೈ ಬಳಸಿ ಚಪ್ಪಾಳೆ ಹೊಡೆಯಿರಿ, ನಿಮ್ಮ ಮನೆ ಗಂಟೆ ಮತ್ತು ಗಂಗಾಳ (ಪ್ಲೇಟು) ಬಾರಿಸಿ ಎಂದಷ್ಟೇ ಹೇಳಿದ್ದಾರೆ. ಪರೋಕ್ಷವಾಗಿ ಅವರು ಬಡವರಿಗೆ ಶಂಖಾ ಹೊಡಿರಿ ಎಂದಿದ್ದಾರಷ್ಟೆ.

ಯಾಕೆ ಹಣ ಬಿಚ್ಚುತ್ತಿಲ್ಲ? ಹಣ ಇದ್ದರೆ ತಾನೇ? ಪುಟ್ಟಾಪೂರಾ ದೋಸ್ತ್‌ಗಳಾದ ಅಂಬಾನಿ, ಅದಾನಿಗಳಿಗೆ, ಯೆಸ್ ಬ್ಯಾಂಕಿನ ಮಿತ್ರ ಕಪೂರ್‌ಗಳಿಗೆಲ್ಲ ಮೋದಿ ಗಳಿಸಲು ಬಿಟ್ಟು ಖಜಾನೆ ಖಾಲಿ ಮಾಡುತ್ತ ಹೊರಟಿದ್ದಾರೆ. ಹೀಗಾಗಿ ಅವರ ಬಳಿ ಈಗ ಉಳಿದಿರುವುದು ಬಿಟ್ಟಿ ಬೋಧನೆಯಷ್ಟೇ!

20 ದಿನದ ಜನತಾ ಕರ್ಫ್ಯೂ

ನಿಜಕ್ಕೂ ಕಾಳಜಿ ಇದ್ದಿದ್ದರೆ, 20 ದಿನಗಳ ಜನತಾ ಕರ್ಫ್ಯೂ ಘೋಷಿಸಿ, ಸಂಬಳ ಪಡೆಯದ ಜನರಿಗೆಲ್ಲ ಕೇರಳದಂತೆ ಪ್ಯಾಕೇಜ್ ಘೋಷಿಸಬಹುದಿತ್ತು. ಅದು ಬಿಟ್ಟು ಗಂಟೆ ಬಾರಿಸಿ ಎಂದು ಹೇಳಲು ಪ್ರಧಾನಿಯೇ ಬೇಕಿತ್ತಾ? ಭಕ್ತರು ಆ ಕೆಲಸವನ್ನು ನಿರಂತರವಾಗಿ ಮಾತಾಡ್ತಾನೇ ಇದ್ದಾರಲ್ಲ?

ಜನತಾ ಕರ್ಫ್ಯೂ ಉಲ್ಲಂಘಿಸಿದ ಮೋದಿ ಭಕ್ತರು!

ಒಂದು ದಿನದ ಮಟ್ಟಿಗಾದರೂ ಹೊರಬರದೇ ಮನೆಯಲ್ಲಿಯೇ ಇದ್ದು ಚಪ್ಪಾಳೆ ಹೊಡೆಯಿರಿ ಎಂದು ಮೋದಿ ಹೇಳಿದರೆ ಹಲವು ಮೋದಿ ಭಕ್ತರು ಗುಂಪು ಗುಂಪಾಗಿ ಬೀದಿಗೆ ಬಂದು ಚಪ್ಪಾಳೆ ಹೊಡೆಯುವ ಮೂಲಕ ಮೋದಿಯವರ ಉದ್ದೇಶವನ್ನೇ ಹಾಳುಗೆಡವಿರುವ ವಿಡಿಯೋಗಳು ವೈರಲ್‌ ಆಗಿವೆ.

ಕೊರೋನಾದ ಬಗ್ಗೆ ಇಷ್ಟು ಲಘುವಾದ ಧೋರಣೆ ಬೆಳೆಸಿಕೊಂಡರೆ, ಅಪಾಯಕ್ಕೆ ಈಡಾಗುವವರು ಈ ದೇಶದ ಬಡವರು ಅಲ್ಲವೇ? ಹೀಗಾಗಿ ಶ್ರೀಮಂತರು, ಮೇಲ್ ಮಧ್ಯಮ ಮತ್ತು ಮಧ್ಯಮ ವರ್ಗಗಳ ಜನ ಒಂಥರಾ ರೋಮ್ಯಾಂಟಿಕ್ ಆಗಿ ಇದನ್ನೆಲ್ಲ ಅನುಭವಿಸುತ್ತಿರಬಹುದೇ ಎಂಬ ಸಂಶಯ ಕಾಡತೊಡಗಿದೆ.
-ಪಿ.ಕೆ. ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....