Homeಮುಖಪುಟಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ..

ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ..

- Advertisement -
- Advertisement -

ಕೊರೋನಾ ನಿಯಂತ್ರಣಕ್ಕೆ ಅಮೆರಿಕ 1.2 ಟ್ರಿಲಿಯನ್ ಡಾಲರ್, ಇಂಗ್ಲೆಂಡ್ 39 ಬಿಲಿಯನ್ ಡಾಲರ್, ಫ್ರಾನ್ಸ್ 45 ಬಿಲಿಯನ್ ಡಾಲರ್, ನ್ಯೂಜಿಲ್ಯಾಂಡ್ 8 ಬಿಲಿಯನ್ ಡಾಲರ್, ಇಟಲಿ 28 ಬಿಲಿಯನ್ ಡಾಲರ್, ಕೆನಡಾ 56 ಬಿಲಿಯನ್ ಡಾಲರ್, ದ,ಕೋರಿಯಾ 10 ಬಿಲಿಯನ್ ಡಾಲರ್ ಹಣ ಮೀಸಲಿಟ್ಟಿವೆ.

ಪಕ್ಕದ ಪುಟ್ಟ ರಾಜ್ಯ ಕೇರಳ 20 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಿದೆ. ಖಜಾನೆಯಲ್ಲಿ ಸಾಕಷ್ಟು ದುಡ್ಡಿಲ್ಲದಿದ್ದರೂ ಯಡಿಯೂರಪ್ಪ ಎರಡು ತಿಂಗಳ ರೇಷನ್ ಕೊಡುವುದಾಗಿ ಹೇಳಿದ್ದಾರೆ.
ಆದರೆ, ಮೋದಿಯವರು ಯಾವ ಪ್ಯಾಕೇಜನ್ನೂ ಘೋಷಣೆ ಮಾಡಿಲ್ಲ. ನಿಮ್ಮ ಕೈ ಬಳಸಿ ಚಪ್ಪಾಳೆ ಹೊಡೆಯಿರಿ, ನಿಮ್ಮ ಮನೆ ಗಂಟೆ ಮತ್ತು ಗಂಗಾಳ (ಪ್ಲೇಟು) ಬಾರಿಸಿ ಎಂದಷ್ಟೇ ಹೇಳಿದ್ದಾರೆ. ಪರೋಕ್ಷವಾಗಿ ಅವರು ಬಡವರಿಗೆ ಶಂಖಾ ಹೊಡಿರಿ ಎಂದಿದ್ದಾರಷ್ಟೆ.

ಯಾಕೆ ಹಣ ಬಿಚ್ಚುತ್ತಿಲ್ಲ? ಹಣ ಇದ್ದರೆ ತಾನೇ? ಪುಟ್ಟಾಪೂರಾ ದೋಸ್ತ್‌ಗಳಾದ ಅಂಬಾನಿ, ಅದಾನಿಗಳಿಗೆ, ಯೆಸ್ ಬ್ಯಾಂಕಿನ ಮಿತ್ರ ಕಪೂರ್‌ಗಳಿಗೆಲ್ಲ ಮೋದಿ ಗಳಿಸಲು ಬಿಟ್ಟು ಖಜಾನೆ ಖಾಲಿ ಮಾಡುತ್ತ ಹೊರಟಿದ್ದಾರೆ. ಹೀಗಾಗಿ ಅವರ ಬಳಿ ಈಗ ಉಳಿದಿರುವುದು ಬಿಟ್ಟಿ ಬೋಧನೆಯಷ್ಟೇ!

20 ದಿನದ ಜನತಾ ಕರ್ಫ್ಯೂ

ನಿಜಕ್ಕೂ ಕಾಳಜಿ ಇದ್ದಿದ್ದರೆ, 20 ದಿನಗಳ ಜನತಾ ಕರ್ಫ್ಯೂ ಘೋಷಿಸಿ, ಸಂಬಳ ಪಡೆಯದ ಜನರಿಗೆಲ್ಲ ಕೇರಳದಂತೆ ಪ್ಯಾಕೇಜ್ ಘೋಷಿಸಬಹುದಿತ್ತು. ಅದು ಬಿಟ್ಟು ಗಂಟೆ ಬಾರಿಸಿ ಎಂದು ಹೇಳಲು ಪ್ರಧಾನಿಯೇ ಬೇಕಿತ್ತಾ? ಭಕ್ತರು ಆ ಕೆಲಸವನ್ನು ನಿರಂತರವಾಗಿ ಮಾತಾಡ್ತಾನೇ ಇದ್ದಾರಲ್ಲ?

ಜನತಾ ಕರ್ಫ್ಯೂ ಉಲ್ಲಂಘಿಸಿದ ಮೋದಿ ಭಕ್ತರು!

ಒಂದು ದಿನದ ಮಟ್ಟಿಗಾದರೂ ಹೊರಬರದೇ ಮನೆಯಲ್ಲಿಯೇ ಇದ್ದು ಚಪ್ಪಾಳೆ ಹೊಡೆಯಿರಿ ಎಂದು ಮೋದಿ ಹೇಳಿದರೆ ಹಲವು ಮೋದಿ ಭಕ್ತರು ಗುಂಪು ಗುಂಪಾಗಿ ಬೀದಿಗೆ ಬಂದು ಚಪ್ಪಾಳೆ ಹೊಡೆಯುವ ಮೂಲಕ ಮೋದಿಯವರ ಉದ್ದೇಶವನ್ನೇ ಹಾಳುಗೆಡವಿರುವ ವಿಡಿಯೋಗಳು ವೈರಲ್‌ ಆಗಿವೆ.

ಕೊರೋನಾದ ಬಗ್ಗೆ ಇಷ್ಟು ಲಘುವಾದ ಧೋರಣೆ ಬೆಳೆಸಿಕೊಂಡರೆ, ಅಪಾಯಕ್ಕೆ ಈಡಾಗುವವರು ಈ ದೇಶದ ಬಡವರು ಅಲ್ಲವೇ? ಹೀಗಾಗಿ ಶ್ರೀಮಂತರು, ಮೇಲ್ ಮಧ್ಯಮ ಮತ್ತು ಮಧ್ಯಮ ವರ್ಗಗಳ ಜನ ಒಂಥರಾ ರೋಮ್ಯಾಂಟಿಕ್ ಆಗಿ ಇದನ್ನೆಲ್ಲ ಅನುಭವಿಸುತ್ತಿರಬಹುದೇ ಎಂಬ ಸಂಶಯ ಕಾಡತೊಡಗಿದೆ.
-ಪಿ.ಕೆ. ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...