Homeಮುಖಪುಟಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

- Advertisement -
- Advertisement -

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ ಸ್ಟಾಲಿನ್ ಅವರು, ಅಲ್ಲಿಯೇ ಕಪ್ಪು ಬಾವುಟ ಹಾರಿಸಿ, ಕೇಂದ್ರದ ಮಸೂದೆಯ ಪ್ರತಿಯನ್ನು ಸುಟ್ಟು ಹಾಕಿ ಪ್ರತಿಭಟನೆಗೆ ಚಾಲನೆ ಕೊಟ್ಟಿದ್ದಾರೆ.

ಚೆನ್ನೈನ ಡಿಎಂಕೆ ಕೇಂದ್ರ ಕಚೇರಿ ಮತ್ತು ಮಾಜಿ ಸಿಎಂ ಎಂ. ಕರುಣಾನಿಧಿ ಅವರ ಗೋಪಾಲಪುರಂ ನಿವಾಸ ಸೇರಿದಂತೆ ರಾಜ್ಯದಾದ್ಯಂತ ಕಪ್ಪು ಬಾವುಟಗಳನ್ನು ಹಾರಿಸಲಾಗಿದೆ.

ಸ್ಟಾಲಿನ್ ಮತ್ತು ಅವರ ಪಕ್ಷದ ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಹೋರಾಟವನ್ನು 1960ರ ದಶಕದ ಹಿಂದಿ ಹೇರಿಕೆ ವಿರೋಧಿ ಚಳವಳಿಗೆ ಹೋಲಿಸಿರುವ ಸ್ಟಾಲಿನ್ ಅವರು, ಕೇಂದ್ರದ ಕ್ರಮ ತಮಿಳುನಾಡು ಮತ್ತು ದಕ್ಷಿಣ ಭಾರತಕ್ಕೆ ಆಗುತ್ತಿರುವ ‘ಐತಿಹಾಸಿಕ ಅನ್ಯಾಯ’ ಎಂದು ಬಣ್ಣಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ಟಾಲಿನ್ ಅವರು, “ತಮಿಳುನಾಡಿನಾದ್ಯಂತ ಪ್ರತಿರೋಧ ಹರಡಲಿ. ಫ್ಯಾಸಿಸ್ಟ್ ಬಿಜೆಪಿಯ ಅಹಂಕಾರ ಪತನಗೊಳ್ಳಲಿ. ಅಂದು ತಮಿಳುನಾಡಿನಲ್ಲಿ ಹೊತ್ತಿಕೊಂಡ ಹಿಂದಿ ವಿರೋಧಿ ಪ್ರತಿರೋಧದ ಕಿಚ್ಚು ದೆಹಲಿಯನ್ನು ದಹಿಸಿತ್ತು. ದೆಹಲಿಯು ಮಣಿದ ನಂತರವಷ್ಟೇ ನಮ್ಮ ಕಿಚ್ಚು ತಣ್ಣಗಾಯಿತು. ಇಂದು, ತಮಿಳರನ್ನು ತಮ್ಮದೇ ನೆಲದಲ್ಲಿ ನಿರಾಶ್ರಿತರನ್ನಾಗಿ ಮಾಡುವ ಕರಾಳ ಕಾನೂನಿನ ಪ್ರತಿಯನ್ನು ಸುಡುವ ಮೂಲಕ ನಾನು ಮತ್ತೊಂದು ಕಿಚ್ಚನ್ನು ಹೊತ್ತಿಸಿದ್ದೇನೆ. ಈ ಬೆಂಕಿಯು ದ್ರಾವಿಡ ಭೂಮಿಯಾದ್ಯಂತ ಹರಡಲಿದೆ ಮತ್ತು ಬಿಜೆಪಿಯ ಅಹಂಕಾರವನ್ನು ಅಡಗಿಸಲಿದೆ. “ತಮಿಳು ನಮ್ಮ ಜನ್ಮದ ತಾಯಿ – ಆನಂದಮಯವಾದದ್ದು; ತಮಿಳು ನಮ್ಮ ಆತ್ಮದ ಪ್ರಜ್ವಲಿಸುವ ಅಂತರಾಳದ ಕಿಚ್ಚು” ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್ ಹಾಕಿರುವ ಸ್ಟಾಲಿನ್ ಅವರು, “ತಮಿಳುನಾಡಿನಾದ್ಯಂತ ಪ್ರತಿರೋಧದ ಜ್ವಾಲೆಯು ಹರಡಲಿ. ಫ್ಯಾಸಿಸ್ಟ್ ಬಿಜೆಪಿಯ ಅಹಂಕಾರ ಪತನಗೊಳ್ಳಲಿ. ಅಂದು ತಮಿಳುನಾಡಿನಿಂದ ಉದ್ಭವಿಸಿದ ಹಿಂದಿ ಹೇರಿಕೆಯ ವಿರುದ್ಧದ ಪ್ರತಿರೋಧದ ಕಿಚ್ಚು ದೆಹಲಿಯನ್ನು ದಹಿಸಿತ್ತು; ದೆಹಲಿಯು ಮಣಿದ ನಂತರವಷ್ಟೇ ಆ ಕಿಚ್ಚು ತಣ್ಣಗಾಯಿತು. ಇಂದು, ತಮಿಳರನ್ನು ತಮ್ಮದೇ ನೆಲದಲ್ಲಿ ನಿರಾಶ್ರಿತರನ್ನಾಗಿ ಮಾಡಲು ಹವಣಿಸುತ್ತಿರುವ ಈ ಕರಾಳ ಕಾನೂನಿನ ಪ್ರತಿಯನ್ನು ಸುಡುವ ಮೂಲಕ ಮತ್ತು ಅದರ ವಿರುದ್ಧ ಕಪ್ಪು ಬಾವುಟವನ್ನು ಹಾರಿಸುವ ಮೂಲಕ ನಾನು ಆ ಕಿಚ್ಚನ್ನು ಮತ್ತೆ ಹೊತ್ತಿಸಿದ್ದೇನೆ. ಈ ಬೆಂಕಿಯು ಈಗ ದ್ರಾವಿಡ ಭೂಮಿಯಾದ್ಯಂತ ಪಸರಿಸಲಿದೆ. ಇದು ಪುಟಿದೇಳಲಿದೆ, ಇದು ಕೆರಳಲಿದೆ ಮತ್ತು ಬಿಜೆಪಿಯ ಅಹಂಕಾರವನ್ನು ಮಂಡಿಯೂರಿಸುವಂತೆ ಮಾಡಲಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...