Homeಮುಖಪುಟಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ.

- Advertisement -
- Advertisement -

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಒಂದು ವಾರದಿಂದಲೂ ಸತತವಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಜರುಗಿದೆ.

ರವಿ ಕೃಷ್ಣಾರೆಡ್ಡಿ ಸೇರಿದಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲಿಯೇ ಎಳೆದಾಡಿ, ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

BWSSB ಯಲ್ಲಿಯ ಬಹುಕೋಟಿಗಳ ಭ್ರಷ್ಟಾಚಾರ, ಮಂತ್ರಿಯೊಬ್ಬರ ಭೂ ಅಕ್ರಮ ಹಾಗೂ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ” ಎಂಬ ಮೂರು ವಿಚಾರಗಳ ಬಗ್ಗೆ ರವಿ ಕೃಷ್ಣಾರೆಡ್ಡಿಯವರ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದ ವತಿಯಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಫೆ.07ರಂದು ಮಧ್ಯಾಹ್ನ 1:30 ಕ್ಕೆ ಪತ್ರಿಕಾಗೋಷ್ಠಿ ನಿಗದಿ ಮಾಡಿದ್ದರು.

ಆದರೆ ಮೂರನೇಯ ವಿಷಯವಾದ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ ವಿಷಯದ ಕುರಿತು ಯಾರೂ ಮಾತನಾಡದಂತೆ, ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಆ ಪೊಲೀಸ್‌ ಅಧಿಕಾರಿಯು ಕೋರ್ಟ್‌‌ನಿಂದ TI (Temporary Injunction) ತಂದಿದ್ದರು. ಹಾಗಾಗಿ ಪ್ರತಿಕಾಗೋಷ್ಠಿಯಲ್ಲಿ ಆ ವಿಚಾರವನ್ನು ಮಾತನಾಡದ ರವಿ ಕೃಷ್ಣಾರೆಡ್ಡಿಯವರು ನಂತರ ಬೀದಿಯಲ್ಲಿಯೇ ಆ ಅಧಿಕಾರಿಯ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿ ಪತ್ರಿಕಾಗೋಷ್ಠಿ ನಡೆಸಿದ್ದರು.

ದಿನಾಂಕ 06-12-2019 ರಂದು ನ್ಯಾಯಾಲಯವು ದಿನಾಂಕ 10-01-2020 ರ ತನಕ TI ಅನ್ನು ವಿಸ್ತರಿಸಿರುತ್ತದೆ. ಆದರೆ ದಿನಾಂಕ 10-01-2020 ರ ತೀರ್ಪಿನಲ್ಲಿ ಅದನ್ನು ವಿಸ್ತರಿಸಿರುವುದರ ಉಲ್ಲೇಖವಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಸದರಿ ಪೊಲೀಸ್‌ ಅಧಿಕಾರಿಯನ್ನು ಈ ಕೂಡಲೇ ಅಲ್ಲಿಂದ ತೆರವು ಮಾಡಬೇಕು ಮತ್ತು ಶೀಘ್ರವಾಗಿ ಅವರ ಮೇಲಿನ ಇಲಾಖಾ ವಿಚಾರಣೆ ಮುಗಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ರನ್ನು ಭೇಟಿಯಾಗಲು ಪ್ರಯತ್ನಿಸಿ ಹೋರಾಟ ಮುಂದುವರೆಸಿದ್ದರು.

ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಮುಂದೆ ಸಾರ್ವಜನಿಕರಿಗೆ ದಾಖಲೆಗಳನ್ನು ಹಂಚಿ ಶಾಂತಿಯುತವಾಗಿ ಪಾದಚಾರಿ ಮಾರ್ಗದಲ್ಲಿ ಪಥಸಂಚಲನ ಮಾಡಿದ್ದು ಈ ಕುರಿತು ಫೇಸ್‌ಬುಕ್‌ ಲೈವ್‌ನಲ್ಲಿ ರವಿ ಕೃಷ್ಣಾರೆಡ್ಡಿಯವರು ಬಹಳ ವಿಷಯ ಹಂಚಿಕೊಂಡಿದ್ದರು.

ನಿನ್ನೆ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದ ವೇಳೆ ಹೈಕೋರ್ಟ್‌ನ ಪಾರ್ಕಿಂಗ್ ಬಳಿ ರವಿ ಕೃಷ್ಣಾರೆಡ್ಡಿ, ರಘು ಜಾಣಗೆರೆ ಹಾಗೂ ವತ್ಸಲರವರ ಮೇಲೆ ಮುಗಿಬಿದ್ದ ಪೊಲೀಸರು ಅಮಾನುಷವಾಗಿ ನಡೆಸಿಕೊಂಡು ಬಂಧಿಸಿದ್ದಾರೆ. ಮೂವರನ್ನು ಅಶೋಕ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಿದ್ದಾರೆ.

ರವಿ ಕೃಷ್ಣರೆಡ್ಡಿ

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ. ಅವರನ್ನು ರಸ್ತೆಯಲ್ಲಿಯೇ ಎಳೆದಾಡಿದ್ದಾರೆ. ಅದನ್ನು ವಿಡಿಯೋ ಮಾಡುತ್ತಿದ್ದ ಅವರ ತಂಡದವರನ್ನು ಸಹ ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

Posted by Naanu Gauri on Tuesday, February 11, 2020

ಈ ಕುರಿತು ರವಿ ಕೃಷ್ಣಾರೆಡ್ಡಿಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಹಲವು ಗಂಭೀರ ಆರೋಪಗಳಿರುವ, ಇನ್ನೂ ಆರೋಪಮುಕ್ತನಾಗದ ಕಳಂಕಿತ ಪೊಲೀಸ್ ಅಧಿಕಾರಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದರೆ, ಅದು ಪೊಲೀಸ್ ಇಲಾಖೆಗೆ ಗೌರವ ತರುವ ವಿಷಯವೇ? ಪೊಲೀಸ್ ಇಲಾಖೆಗೆ ಇದು ಅವಮಾನವಲ್ಲವೆ? ಎಂದು ಪ್ರಶ್ನಿಸಿ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಸಿಎಂ ಅಂಡರ್‌ನಲ್ಲಿ ಬರುತ್ತದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ನುಣುಚಿಕೊಳ್ಳುತ್ತಿದ್ದಾರೆ. ನಾವೂ ಹೋರಾಟ ತೀವ್ರಗೊಳಿಸಿದಾಗ ನಮ್ಮನ್ನು ಬೆದರಿಸಲು ನಿನ್ನೆ ಈ ಬಂಧನವನ್ನು ಮಾಡಿದ್ದಾರೆ. ಆದರೆ ಈ ಬಂಧನಗಳಿಗೆ ನಾವು ಬೆದರುವುದಿಲ್ಲ. ಫೆ.15ರ ನಂತರ ಹೋರಾಟ ತೀವ್ರಗೊಳಿಸುತ್ತೇವೆ” ಎಂದಿದ್ದಾರೆ.

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...