Homeಮುಖಪುಟಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ.

- Advertisement -
- Advertisement -

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಒಂದು ವಾರದಿಂದಲೂ ಸತತವಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಜರುಗಿದೆ.

ರವಿ ಕೃಷ್ಣಾರೆಡ್ಡಿ ಸೇರಿದಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲಿಯೇ ಎಳೆದಾಡಿ, ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

BWSSB ಯಲ್ಲಿಯ ಬಹುಕೋಟಿಗಳ ಭ್ರಷ್ಟಾಚಾರ, ಮಂತ್ರಿಯೊಬ್ಬರ ಭೂ ಅಕ್ರಮ ಹಾಗೂ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ” ಎಂಬ ಮೂರು ವಿಚಾರಗಳ ಬಗ್ಗೆ ರವಿ ಕೃಷ್ಣಾರೆಡ್ಡಿಯವರ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದ ವತಿಯಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಫೆ.07ರಂದು ಮಧ್ಯಾಹ್ನ 1:30 ಕ್ಕೆ ಪತ್ರಿಕಾಗೋಷ್ಠಿ ನಿಗದಿ ಮಾಡಿದ್ದರು.

ಆದರೆ ಮೂರನೇಯ ವಿಷಯವಾದ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ ವಿಷಯದ ಕುರಿತು ಯಾರೂ ಮಾತನಾಡದಂತೆ, ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಆ ಪೊಲೀಸ್‌ ಅಧಿಕಾರಿಯು ಕೋರ್ಟ್‌‌ನಿಂದ TI (Temporary Injunction) ತಂದಿದ್ದರು. ಹಾಗಾಗಿ ಪ್ರತಿಕಾಗೋಷ್ಠಿಯಲ್ಲಿ ಆ ವಿಚಾರವನ್ನು ಮಾತನಾಡದ ರವಿ ಕೃಷ್ಣಾರೆಡ್ಡಿಯವರು ನಂತರ ಬೀದಿಯಲ್ಲಿಯೇ ಆ ಅಧಿಕಾರಿಯ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿ ಪತ್ರಿಕಾಗೋಷ್ಠಿ ನಡೆಸಿದ್ದರು.

ದಿನಾಂಕ 06-12-2019 ರಂದು ನ್ಯಾಯಾಲಯವು ದಿನಾಂಕ 10-01-2020 ರ ತನಕ TI ಅನ್ನು ವಿಸ್ತರಿಸಿರುತ್ತದೆ. ಆದರೆ ದಿನಾಂಕ 10-01-2020 ರ ತೀರ್ಪಿನಲ್ಲಿ ಅದನ್ನು ವಿಸ್ತರಿಸಿರುವುದರ ಉಲ್ಲೇಖವಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಸದರಿ ಪೊಲೀಸ್‌ ಅಧಿಕಾರಿಯನ್ನು ಈ ಕೂಡಲೇ ಅಲ್ಲಿಂದ ತೆರವು ಮಾಡಬೇಕು ಮತ್ತು ಶೀಘ್ರವಾಗಿ ಅವರ ಮೇಲಿನ ಇಲಾಖಾ ವಿಚಾರಣೆ ಮುಗಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ರನ್ನು ಭೇಟಿಯಾಗಲು ಪ್ರಯತ್ನಿಸಿ ಹೋರಾಟ ಮುಂದುವರೆಸಿದ್ದರು.

ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಮುಂದೆ ಸಾರ್ವಜನಿಕರಿಗೆ ದಾಖಲೆಗಳನ್ನು ಹಂಚಿ ಶಾಂತಿಯುತವಾಗಿ ಪಾದಚಾರಿ ಮಾರ್ಗದಲ್ಲಿ ಪಥಸಂಚಲನ ಮಾಡಿದ್ದು ಈ ಕುರಿತು ಫೇಸ್‌ಬುಕ್‌ ಲೈವ್‌ನಲ್ಲಿ ರವಿ ಕೃಷ್ಣಾರೆಡ್ಡಿಯವರು ಬಹಳ ವಿಷಯ ಹಂಚಿಕೊಂಡಿದ್ದರು.

ನಿನ್ನೆ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದ ವೇಳೆ ಹೈಕೋರ್ಟ್‌ನ ಪಾರ್ಕಿಂಗ್ ಬಳಿ ರವಿ ಕೃಷ್ಣಾರೆಡ್ಡಿ, ರಘು ಜಾಣಗೆರೆ ಹಾಗೂ ವತ್ಸಲರವರ ಮೇಲೆ ಮುಗಿಬಿದ್ದ ಪೊಲೀಸರು ಅಮಾನುಷವಾಗಿ ನಡೆಸಿಕೊಂಡು ಬಂಧಿಸಿದ್ದಾರೆ. ಮೂವರನ್ನು ಅಶೋಕ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಿದ್ದಾರೆ.

ರವಿ ಕೃಷ್ಣರೆಡ್ಡಿ

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ. ಅವರನ್ನು ರಸ್ತೆಯಲ್ಲಿಯೇ ಎಳೆದಾಡಿದ್ದಾರೆ. ಅದನ್ನು ವಿಡಿಯೋ ಮಾಡುತ್ತಿದ್ದ ಅವರ ತಂಡದವರನ್ನು ಸಹ ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

Posted by Naanu Gauri on Tuesday, February 11, 2020

ಈ ಕುರಿತು ರವಿ ಕೃಷ್ಣಾರೆಡ್ಡಿಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಹಲವು ಗಂಭೀರ ಆರೋಪಗಳಿರುವ, ಇನ್ನೂ ಆರೋಪಮುಕ್ತನಾಗದ ಕಳಂಕಿತ ಪೊಲೀಸ್ ಅಧಿಕಾರಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದರೆ, ಅದು ಪೊಲೀಸ್ ಇಲಾಖೆಗೆ ಗೌರವ ತರುವ ವಿಷಯವೇ? ಪೊಲೀಸ್ ಇಲಾಖೆಗೆ ಇದು ಅವಮಾನವಲ್ಲವೆ? ಎಂದು ಪ್ರಶ್ನಿಸಿ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಸಿಎಂ ಅಂಡರ್‌ನಲ್ಲಿ ಬರುತ್ತದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ನುಣುಚಿಕೊಳ್ಳುತ್ತಿದ್ದಾರೆ. ನಾವೂ ಹೋರಾಟ ತೀವ್ರಗೊಳಿಸಿದಾಗ ನಮ್ಮನ್ನು ಬೆದರಿಸಲು ನಿನ್ನೆ ಈ ಬಂಧನವನ್ನು ಮಾಡಿದ್ದಾರೆ. ಆದರೆ ಈ ಬಂಧನಗಳಿಗೆ ನಾವು ಬೆದರುವುದಿಲ್ಲ. ಫೆ.15ರ ನಂತರ ಹೋರಾಟ ತೀವ್ರಗೊಳಿಸುತ್ತೇವೆ” ಎಂದಿದ್ದಾರೆ.

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...