Homeಮುಖಪುಟಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ.

- Advertisement -
- Advertisement -

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಒಂದು ವಾರದಿಂದಲೂ ಸತತವಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಜರುಗಿದೆ.

ರವಿ ಕೃಷ್ಣಾರೆಡ್ಡಿ ಸೇರಿದಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲಿಯೇ ಎಳೆದಾಡಿ, ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

BWSSB ಯಲ್ಲಿಯ ಬಹುಕೋಟಿಗಳ ಭ್ರಷ್ಟಾಚಾರ, ಮಂತ್ರಿಯೊಬ್ಬರ ಭೂ ಅಕ್ರಮ ಹಾಗೂ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ” ಎಂಬ ಮೂರು ವಿಚಾರಗಳ ಬಗ್ಗೆ ರವಿ ಕೃಷ್ಣಾರೆಡ್ಡಿಯವರ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದ ವತಿಯಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಫೆ.07ರಂದು ಮಧ್ಯಾಹ್ನ 1:30 ಕ್ಕೆ ಪತ್ರಿಕಾಗೋಷ್ಠಿ ನಿಗದಿ ಮಾಡಿದ್ದರು.

ಆದರೆ ಮೂರನೇಯ ವಿಷಯವಾದ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ ವಿಷಯದ ಕುರಿತು ಯಾರೂ ಮಾತನಾಡದಂತೆ, ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಆ ಪೊಲೀಸ್‌ ಅಧಿಕಾರಿಯು ಕೋರ್ಟ್‌‌ನಿಂದ TI (Temporary Injunction) ತಂದಿದ್ದರು. ಹಾಗಾಗಿ ಪ್ರತಿಕಾಗೋಷ್ಠಿಯಲ್ಲಿ ಆ ವಿಚಾರವನ್ನು ಮಾತನಾಡದ ರವಿ ಕೃಷ್ಣಾರೆಡ್ಡಿಯವರು ನಂತರ ಬೀದಿಯಲ್ಲಿಯೇ ಆ ಅಧಿಕಾರಿಯ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿ ಪತ್ರಿಕಾಗೋಷ್ಠಿ ನಡೆಸಿದ್ದರು.

ದಿನಾಂಕ 06-12-2019 ರಂದು ನ್ಯಾಯಾಲಯವು ದಿನಾಂಕ 10-01-2020 ರ ತನಕ TI ಅನ್ನು ವಿಸ್ತರಿಸಿರುತ್ತದೆ. ಆದರೆ ದಿನಾಂಕ 10-01-2020 ರ ತೀರ್ಪಿನಲ್ಲಿ ಅದನ್ನು ವಿಸ್ತರಿಸಿರುವುದರ ಉಲ್ಲೇಖವಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಸದರಿ ಪೊಲೀಸ್‌ ಅಧಿಕಾರಿಯನ್ನು ಈ ಕೂಡಲೇ ಅಲ್ಲಿಂದ ತೆರವು ಮಾಡಬೇಕು ಮತ್ತು ಶೀಘ್ರವಾಗಿ ಅವರ ಮೇಲಿನ ಇಲಾಖಾ ವಿಚಾರಣೆ ಮುಗಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ರನ್ನು ಭೇಟಿಯಾಗಲು ಪ್ರಯತ್ನಿಸಿ ಹೋರಾಟ ಮುಂದುವರೆಸಿದ್ದರು.

ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಮುಂದೆ ಸಾರ್ವಜನಿಕರಿಗೆ ದಾಖಲೆಗಳನ್ನು ಹಂಚಿ ಶಾಂತಿಯುತವಾಗಿ ಪಾದಚಾರಿ ಮಾರ್ಗದಲ್ಲಿ ಪಥಸಂಚಲನ ಮಾಡಿದ್ದು ಈ ಕುರಿತು ಫೇಸ್‌ಬುಕ್‌ ಲೈವ್‌ನಲ್ಲಿ ರವಿ ಕೃಷ್ಣಾರೆಡ್ಡಿಯವರು ಬಹಳ ವಿಷಯ ಹಂಚಿಕೊಂಡಿದ್ದರು.

ನಿನ್ನೆ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದ ವೇಳೆ ಹೈಕೋರ್ಟ್‌ನ ಪಾರ್ಕಿಂಗ್ ಬಳಿ ರವಿ ಕೃಷ್ಣಾರೆಡ್ಡಿ, ರಘು ಜಾಣಗೆರೆ ಹಾಗೂ ವತ್ಸಲರವರ ಮೇಲೆ ಮುಗಿಬಿದ್ದ ಪೊಲೀಸರು ಅಮಾನುಷವಾಗಿ ನಡೆಸಿಕೊಂಡು ಬಂಧಿಸಿದ್ದಾರೆ. ಮೂವರನ್ನು ಅಶೋಕ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಿದ್ದಾರೆ.

ರವಿ ಕೃಷ್ಣರೆಡ್ಡಿ

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ. ಅವರನ್ನು ರಸ್ತೆಯಲ್ಲಿಯೇ ಎಳೆದಾಡಿದ್ದಾರೆ. ಅದನ್ನು ವಿಡಿಯೋ ಮಾಡುತ್ತಿದ್ದ ಅವರ ತಂಡದವರನ್ನು ಸಹ ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

Posted by Naanu Gauri on Tuesday, February 11, 2020

ಈ ಕುರಿತು ರವಿ ಕೃಷ್ಣಾರೆಡ್ಡಿಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಹಲವು ಗಂಭೀರ ಆರೋಪಗಳಿರುವ, ಇನ್ನೂ ಆರೋಪಮುಕ್ತನಾಗದ ಕಳಂಕಿತ ಪೊಲೀಸ್ ಅಧಿಕಾರಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದರೆ, ಅದು ಪೊಲೀಸ್ ಇಲಾಖೆಗೆ ಗೌರವ ತರುವ ವಿಷಯವೇ? ಪೊಲೀಸ್ ಇಲಾಖೆಗೆ ಇದು ಅವಮಾನವಲ್ಲವೆ? ಎಂದು ಪ್ರಶ್ನಿಸಿ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಸಿಎಂ ಅಂಡರ್‌ನಲ್ಲಿ ಬರುತ್ತದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ನುಣುಚಿಕೊಳ್ಳುತ್ತಿದ್ದಾರೆ. ನಾವೂ ಹೋರಾಟ ತೀವ್ರಗೊಳಿಸಿದಾಗ ನಮ್ಮನ್ನು ಬೆದರಿಸಲು ನಿನ್ನೆ ಈ ಬಂಧನವನ್ನು ಮಾಡಿದ್ದಾರೆ. ಆದರೆ ಈ ಬಂಧನಗಳಿಗೆ ನಾವು ಬೆದರುವುದಿಲ್ಲ. ಫೆ.15ರ ನಂತರ ಹೋರಾಟ ತೀವ್ರಗೊಳಿಸುತ್ತೇವೆ” ಎಂದಿದ್ದಾರೆ.

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...