Homeಮುಖಪುಟಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ.

- Advertisement -
- Advertisement -

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಒಂದು ವಾರದಿಂದಲೂ ಸತತವಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಜರುಗಿದೆ.

ರವಿ ಕೃಷ್ಣಾರೆಡ್ಡಿ ಸೇರಿದಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲಿಯೇ ಎಳೆದಾಡಿ, ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

BWSSB ಯಲ್ಲಿಯ ಬಹುಕೋಟಿಗಳ ಭ್ರಷ್ಟಾಚಾರ, ಮಂತ್ರಿಯೊಬ್ಬರ ಭೂ ಅಕ್ರಮ ಹಾಗೂ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ” ಎಂಬ ಮೂರು ವಿಚಾರಗಳ ಬಗ್ಗೆ ರವಿ ಕೃಷ್ಣಾರೆಡ್ಡಿಯವರ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದ ವತಿಯಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಫೆ.07ರಂದು ಮಧ್ಯಾಹ್ನ 1:30 ಕ್ಕೆ ಪತ್ರಿಕಾಗೋಷ್ಠಿ ನಿಗದಿ ಮಾಡಿದ್ದರು.

ಆದರೆ ಮೂರನೇಯ ವಿಷಯವಾದ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ ವಿಷಯದ ಕುರಿತು ಯಾರೂ ಮಾತನಾಡದಂತೆ, ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಆ ಪೊಲೀಸ್‌ ಅಧಿಕಾರಿಯು ಕೋರ್ಟ್‌‌ನಿಂದ TI (Temporary Injunction) ತಂದಿದ್ದರು. ಹಾಗಾಗಿ ಪ್ರತಿಕಾಗೋಷ್ಠಿಯಲ್ಲಿ ಆ ವಿಚಾರವನ್ನು ಮಾತನಾಡದ ರವಿ ಕೃಷ್ಣಾರೆಡ್ಡಿಯವರು ನಂತರ ಬೀದಿಯಲ್ಲಿಯೇ ಆ ಅಧಿಕಾರಿಯ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿ ಪತ್ರಿಕಾಗೋಷ್ಠಿ ನಡೆಸಿದ್ದರು.

ದಿನಾಂಕ 06-12-2019 ರಂದು ನ್ಯಾಯಾಲಯವು ದಿನಾಂಕ 10-01-2020 ರ ತನಕ TI ಅನ್ನು ವಿಸ್ತರಿಸಿರುತ್ತದೆ. ಆದರೆ ದಿನಾಂಕ 10-01-2020 ರ ತೀರ್ಪಿನಲ್ಲಿ ಅದನ್ನು ವಿಸ್ತರಿಸಿರುವುದರ ಉಲ್ಲೇಖವಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಸದರಿ ಪೊಲೀಸ್‌ ಅಧಿಕಾರಿಯನ್ನು ಈ ಕೂಡಲೇ ಅಲ್ಲಿಂದ ತೆರವು ಮಾಡಬೇಕು ಮತ್ತು ಶೀಘ್ರವಾಗಿ ಅವರ ಮೇಲಿನ ಇಲಾಖಾ ವಿಚಾರಣೆ ಮುಗಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ರನ್ನು ಭೇಟಿಯಾಗಲು ಪ್ರಯತ್ನಿಸಿ ಹೋರಾಟ ಮುಂದುವರೆಸಿದ್ದರು.

ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಮುಂದೆ ಸಾರ್ವಜನಿಕರಿಗೆ ದಾಖಲೆಗಳನ್ನು ಹಂಚಿ ಶಾಂತಿಯುತವಾಗಿ ಪಾದಚಾರಿ ಮಾರ್ಗದಲ್ಲಿ ಪಥಸಂಚಲನ ಮಾಡಿದ್ದು ಈ ಕುರಿತು ಫೇಸ್‌ಬುಕ್‌ ಲೈವ್‌ನಲ್ಲಿ ರವಿ ಕೃಷ್ಣಾರೆಡ್ಡಿಯವರು ಬಹಳ ವಿಷಯ ಹಂಚಿಕೊಂಡಿದ್ದರು.

ನಿನ್ನೆ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದ ವೇಳೆ ಹೈಕೋರ್ಟ್‌ನ ಪಾರ್ಕಿಂಗ್ ಬಳಿ ರವಿ ಕೃಷ್ಣಾರೆಡ್ಡಿ, ರಘು ಜಾಣಗೆರೆ ಹಾಗೂ ವತ್ಸಲರವರ ಮೇಲೆ ಮುಗಿಬಿದ್ದ ಪೊಲೀಸರು ಅಮಾನುಷವಾಗಿ ನಡೆಸಿಕೊಂಡು ಬಂಧಿಸಿದ್ದಾರೆ. ಮೂವರನ್ನು ಅಶೋಕ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಿದ್ದಾರೆ.

ರವಿ ಕೃಷ್ಣರೆಡ್ಡಿ

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ. ಅವರನ್ನು ರಸ್ತೆಯಲ್ಲಿಯೇ ಎಳೆದಾಡಿದ್ದಾರೆ. ಅದನ್ನು ವಿಡಿಯೋ ಮಾಡುತ್ತಿದ್ದ ಅವರ ತಂಡದವರನ್ನು ಸಹ ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

Posted by Naanu Gauri on Tuesday, February 11, 2020

ಈ ಕುರಿತು ರವಿ ಕೃಷ್ಣಾರೆಡ್ಡಿಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಹಲವು ಗಂಭೀರ ಆರೋಪಗಳಿರುವ, ಇನ್ನೂ ಆರೋಪಮುಕ್ತನಾಗದ ಕಳಂಕಿತ ಪೊಲೀಸ್ ಅಧಿಕಾರಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದರೆ, ಅದು ಪೊಲೀಸ್ ಇಲಾಖೆಗೆ ಗೌರವ ತರುವ ವಿಷಯವೇ? ಪೊಲೀಸ್ ಇಲಾಖೆಗೆ ಇದು ಅವಮಾನವಲ್ಲವೆ? ಎಂದು ಪ್ರಶ್ನಿಸಿ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಸಿಎಂ ಅಂಡರ್‌ನಲ್ಲಿ ಬರುತ್ತದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ನುಣುಚಿಕೊಳ್ಳುತ್ತಿದ್ದಾರೆ. ನಾವೂ ಹೋರಾಟ ತೀವ್ರಗೊಳಿಸಿದಾಗ ನಮ್ಮನ್ನು ಬೆದರಿಸಲು ನಿನ್ನೆ ಈ ಬಂಧನವನ್ನು ಮಾಡಿದ್ದಾರೆ. ಆದರೆ ಈ ಬಂಧನಗಳಿಗೆ ನಾವು ಬೆದರುವುದಿಲ್ಲ. ಫೆ.15ರ ನಂತರ ಹೋರಾಟ ತೀವ್ರಗೊಳಿಸುತ್ತೇವೆ” ಎಂದಿದ್ದಾರೆ.

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...