Homeಮುಖಪುಟಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ.

- Advertisement -
- Advertisement -

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಒಂದು ವಾರದಿಂದಲೂ ಸತತವಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಜರುಗಿದೆ.

ರವಿ ಕೃಷ್ಣಾರೆಡ್ಡಿ ಸೇರಿದಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲಿಯೇ ಎಳೆದಾಡಿ, ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

BWSSB ಯಲ್ಲಿಯ ಬಹುಕೋಟಿಗಳ ಭ್ರಷ್ಟಾಚಾರ, ಮಂತ್ರಿಯೊಬ್ಬರ ಭೂ ಅಕ್ರಮ ಹಾಗೂ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ” ಎಂಬ ಮೂರು ವಿಚಾರಗಳ ಬಗ್ಗೆ ರವಿ ಕೃಷ್ಣಾರೆಡ್ಡಿಯವರ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದ ವತಿಯಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಫೆ.07ರಂದು ಮಧ್ಯಾಹ್ನ 1:30 ಕ್ಕೆ ಪತ್ರಿಕಾಗೋಷ್ಠಿ ನಿಗದಿ ಮಾಡಿದ್ದರು.

ಆದರೆ ಮೂರನೇಯ ವಿಷಯವಾದ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ ವಿಷಯದ ಕುರಿತು ಯಾರೂ ಮಾತನಾಡದಂತೆ, ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಆ ಪೊಲೀಸ್‌ ಅಧಿಕಾರಿಯು ಕೋರ್ಟ್‌‌ನಿಂದ TI (Temporary Injunction) ತಂದಿದ್ದರು. ಹಾಗಾಗಿ ಪ್ರತಿಕಾಗೋಷ್ಠಿಯಲ್ಲಿ ಆ ವಿಚಾರವನ್ನು ಮಾತನಾಡದ ರವಿ ಕೃಷ್ಣಾರೆಡ್ಡಿಯವರು ನಂತರ ಬೀದಿಯಲ್ಲಿಯೇ ಆ ಅಧಿಕಾರಿಯ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿ ಪತ್ರಿಕಾಗೋಷ್ಠಿ ನಡೆಸಿದ್ದರು.

ದಿನಾಂಕ 06-12-2019 ರಂದು ನ್ಯಾಯಾಲಯವು ದಿನಾಂಕ 10-01-2020 ರ ತನಕ TI ಅನ್ನು ವಿಸ್ತರಿಸಿರುತ್ತದೆ. ಆದರೆ ದಿನಾಂಕ 10-01-2020 ರ ತೀರ್ಪಿನಲ್ಲಿ ಅದನ್ನು ವಿಸ್ತರಿಸಿರುವುದರ ಉಲ್ಲೇಖವಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಸದರಿ ಪೊಲೀಸ್‌ ಅಧಿಕಾರಿಯನ್ನು ಈ ಕೂಡಲೇ ಅಲ್ಲಿಂದ ತೆರವು ಮಾಡಬೇಕು ಮತ್ತು ಶೀಘ್ರವಾಗಿ ಅವರ ಮೇಲಿನ ಇಲಾಖಾ ವಿಚಾರಣೆ ಮುಗಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ರನ್ನು ಭೇಟಿಯಾಗಲು ಪ್ರಯತ್ನಿಸಿ ಹೋರಾಟ ಮುಂದುವರೆಸಿದ್ದರು.

ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಮುಂದೆ ಸಾರ್ವಜನಿಕರಿಗೆ ದಾಖಲೆಗಳನ್ನು ಹಂಚಿ ಶಾಂತಿಯುತವಾಗಿ ಪಾದಚಾರಿ ಮಾರ್ಗದಲ್ಲಿ ಪಥಸಂಚಲನ ಮಾಡಿದ್ದು ಈ ಕುರಿತು ಫೇಸ್‌ಬುಕ್‌ ಲೈವ್‌ನಲ್ಲಿ ರವಿ ಕೃಷ್ಣಾರೆಡ್ಡಿಯವರು ಬಹಳ ವಿಷಯ ಹಂಚಿಕೊಂಡಿದ್ದರು.

ನಿನ್ನೆ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದ ವೇಳೆ ಹೈಕೋರ್ಟ್‌ನ ಪಾರ್ಕಿಂಗ್ ಬಳಿ ರವಿ ಕೃಷ್ಣಾರೆಡ್ಡಿ, ರಘು ಜಾಣಗೆರೆ ಹಾಗೂ ವತ್ಸಲರವರ ಮೇಲೆ ಮುಗಿಬಿದ್ದ ಪೊಲೀಸರು ಅಮಾನುಷವಾಗಿ ನಡೆಸಿಕೊಂಡು ಬಂಧಿಸಿದ್ದಾರೆ. ಮೂವರನ್ನು ಅಶೋಕ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಿದ್ದಾರೆ.

ರವಿ ಕೃಷ್ಣರೆಡ್ಡಿ

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ. ಅವರನ್ನು ರಸ್ತೆಯಲ್ಲಿಯೇ ಎಳೆದಾಡಿದ್ದಾರೆ. ಅದನ್ನು ವಿಡಿಯೋ ಮಾಡುತ್ತಿದ್ದ ಅವರ ತಂಡದವರನ್ನು ಸಹ ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

Posted by Naanu Gauri on Tuesday, February 11, 2020

ಈ ಕುರಿತು ರವಿ ಕೃಷ್ಣಾರೆಡ್ಡಿಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಹಲವು ಗಂಭೀರ ಆರೋಪಗಳಿರುವ, ಇನ್ನೂ ಆರೋಪಮುಕ್ತನಾಗದ ಕಳಂಕಿತ ಪೊಲೀಸ್ ಅಧಿಕಾರಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದರೆ, ಅದು ಪೊಲೀಸ್ ಇಲಾಖೆಗೆ ಗೌರವ ತರುವ ವಿಷಯವೇ? ಪೊಲೀಸ್ ಇಲಾಖೆಗೆ ಇದು ಅವಮಾನವಲ್ಲವೆ? ಎಂದು ಪ್ರಶ್ನಿಸಿ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಸಿಎಂ ಅಂಡರ್‌ನಲ್ಲಿ ಬರುತ್ತದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ನುಣುಚಿಕೊಳ್ಳುತ್ತಿದ್ದಾರೆ. ನಾವೂ ಹೋರಾಟ ತೀವ್ರಗೊಳಿಸಿದಾಗ ನಮ್ಮನ್ನು ಬೆದರಿಸಲು ನಿನ್ನೆ ಈ ಬಂಧನವನ್ನು ಮಾಡಿದ್ದಾರೆ. ಆದರೆ ಈ ಬಂಧನಗಳಿಗೆ ನಾವು ಬೆದರುವುದಿಲ್ಲ. ಫೆ.15ರ ನಂತರ ಹೋರಾಟ ತೀವ್ರಗೊಳಿಸುತ್ತೇವೆ” ಎಂದಿದ್ದಾರೆ.

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...