Homeಮುಖಪುಟಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ.

- Advertisement -
- Advertisement -

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಒಂದು ವಾರದಿಂದಲೂ ಸತತವಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಜರುಗಿದೆ.

ರವಿ ಕೃಷ್ಣಾರೆಡ್ಡಿ ಸೇರಿದಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲಿಯೇ ಎಳೆದಾಡಿ, ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

BWSSB ಯಲ್ಲಿಯ ಬಹುಕೋಟಿಗಳ ಭ್ರಷ್ಟಾಚಾರ, ಮಂತ್ರಿಯೊಬ್ಬರ ಭೂ ಅಕ್ರಮ ಹಾಗೂ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ” ಎಂಬ ಮೂರು ವಿಚಾರಗಳ ಬಗ್ಗೆ ರವಿ ಕೃಷ್ಣಾರೆಡ್ಡಿಯವರ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದ ವತಿಯಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಫೆ.07ರಂದು ಮಧ್ಯಾಹ್ನ 1:30 ಕ್ಕೆ ಪತ್ರಿಕಾಗೋಷ್ಠಿ ನಿಗದಿ ಮಾಡಿದ್ದರು.

ಆದರೆ ಮೂರನೇಯ ವಿಷಯವಾದ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ ವಿಷಯದ ಕುರಿತು ಯಾರೂ ಮಾತನಾಡದಂತೆ, ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಆ ಪೊಲೀಸ್‌ ಅಧಿಕಾರಿಯು ಕೋರ್ಟ್‌‌ನಿಂದ TI (Temporary Injunction) ತಂದಿದ್ದರು. ಹಾಗಾಗಿ ಪ್ರತಿಕಾಗೋಷ್ಠಿಯಲ್ಲಿ ಆ ವಿಚಾರವನ್ನು ಮಾತನಾಡದ ರವಿ ಕೃಷ್ಣಾರೆಡ್ಡಿಯವರು ನಂತರ ಬೀದಿಯಲ್ಲಿಯೇ ಆ ಅಧಿಕಾರಿಯ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿ ಪತ್ರಿಕಾಗೋಷ್ಠಿ ನಡೆಸಿದ್ದರು.

ದಿನಾಂಕ 06-12-2019 ರಂದು ನ್ಯಾಯಾಲಯವು ದಿನಾಂಕ 10-01-2020 ರ ತನಕ TI ಅನ್ನು ವಿಸ್ತರಿಸಿರುತ್ತದೆ. ಆದರೆ ದಿನಾಂಕ 10-01-2020 ರ ತೀರ್ಪಿನಲ್ಲಿ ಅದನ್ನು ವಿಸ್ತರಿಸಿರುವುದರ ಉಲ್ಲೇಖವಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಸದರಿ ಪೊಲೀಸ್‌ ಅಧಿಕಾರಿಯನ್ನು ಈ ಕೂಡಲೇ ಅಲ್ಲಿಂದ ತೆರವು ಮಾಡಬೇಕು ಮತ್ತು ಶೀಘ್ರವಾಗಿ ಅವರ ಮೇಲಿನ ಇಲಾಖಾ ವಿಚಾರಣೆ ಮುಗಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ರನ್ನು ಭೇಟಿಯಾಗಲು ಪ್ರಯತ್ನಿಸಿ ಹೋರಾಟ ಮುಂದುವರೆಸಿದ್ದರು.

ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಮುಂದೆ ಸಾರ್ವಜನಿಕರಿಗೆ ದಾಖಲೆಗಳನ್ನು ಹಂಚಿ ಶಾಂತಿಯುತವಾಗಿ ಪಾದಚಾರಿ ಮಾರ್ಗದಲ್ಲಿ ಪಥಸಂಚಲನ ಮಾಡಿದ್ದು ಈ ಕುರಿತು ಫೇಸ್‌ಬುಕ್‌ ಲೈವ್‌ನಲ್ಲಿ ರವಿ ಕೃಷ್ಣಾರೆಡ್ಡಿಯವರು ಬಹಳ ವಿಷಯ ಹಂಚಿಕೊಂಡಿದ್ದರು.

ನಿನ್ನೆ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದ ವೇಳೆ ಹೈಕೋರ್ಟ್‌ನ ಪಾರ್ಕಿಂಗ್ ಬಳಿ ರವಿ ಕೃಷ್ಣಾರೆಡ್ಡಿ, ರಘು ಜಾಣಗೆರೆ ಹಾಗೂ ವತ್ಸಲರವರ ಮೇಲೆ ಮುಗಿಬಿದ್ದ ಪೊಲೀಸರು ಅಮಾನುಷವಾಗಿ ನಡೆಸಿಕೊಂಡು ಬಂಧಿಸಿದ್ದಾರೆ. ಮೂವರನ್ನು ಅಶೋಕ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಿದ್ದಾರೆ.

ರವಿ ಕೃಷ್ಣರೆಡ್ಡಿ

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ. ಅವರನ್ನು ರಸ್ತೆಯಲ್ಲಿಯೇ ಎಳೆದಾಡಿದ್ದಾರೆ. ಅದನ್ನು ವಿಡಿಯೋ ಮಾಡುತ್ತಿದ್ದ ಅವರ ತಂಡದವರನ್ನು ಸಹ ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

Posted by Naanu Gauri on Tuesday, February 11, 2020

ಈ ಕುರಿತು ರವಿ ಕೃಷ್ಣಾರೆಡ್ಡಿಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಹಲವು ಗಂಭೀರ ಆರೋಪಗಳಿರುವ, ಇನ್ನೂ ಆರೋಪಮುಕ್ತನಾಗದ ಕಳಂಕಿತ ಪೊಲೀಸ್ ಅಧಿಕಾರಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದರೆ, ಅದು ಪೊಲೀಸ್ ಇಲಾಖೆಗೆ ಗೌರವ ತರುವ ವಿಷಯವೇ? ಪೊಲೀಸ್ ಇಲಾಖೆಗೆ ಇದು ಅವಮಾನವಲ್ಲವೆ? ಎಂದು ಪ್ರಶ್ನಿಸಿ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಸಿಎಂ ಅಂಡರ್‌ನಲ್ಲಿ ಬರುತ್ತದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ನುಣುಚಿಕೊಳ್ಳುತ್ತಿದ್ದಾರೆ. ನಾವೂ ಹೋರಾಟ ತೀವ್ರಗೊಳಿಸಿದಾಗ ನಮ್ಮನ್ನು ಬೆದರಿಸಲು ನಿನ್ನೆ ಈ ಬಂಧನವನ್ನು ಮಾಡಿದ್ದಾರೆ. ಆದರೆ ಈ ಬಂಧನಗಳಿಗೆ ನಾವು ಬೆದರುವುದಿಲ್ಲ. ಫೆ.15ರ ನಂತರ ಹೋರಾಟ ತೀವ್ರಗೊಳಿಸುತ್ತೇವೆ” ಎಂದಿದ್ದಾರೆ.

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...