Homeಮುಖಪುಟಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ.

- Advertisement -
- Advertisement -

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಒಂದು ವಾರದಿಂದಲೂ ಸತತವಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಜರುಗಿದೆ.

ರವಿ ಕೃಷ್ಣಾರೆಡ್ಡಿ ಸೇರಿದಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲಿಯೇ ಎಳೆದಾಡಿ, ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

BWSSB ಯಲ್ಲಿಯ ಬಹುಕೋಟಿಗಳ ಭ್ರಷ್ಟಾಚಾರ, ಮಂತ್ರಿಯೊಬ್ಬರ ಭೂ ಅಕ್ರಮ ಹಾಗೂ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ” ಎಂಬ ಮೂರು ವಿಚಾರಗಳ ಬಗ್ಗೆ ರವಿ ಕೃಷ್ಣಾರೆಡ್ಡಿಯವರ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದ ವತಿಯಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಫೆ.07ರಂದು ಮಧ್ಯಾಹ್ನ 1:30 ಕ್ಕೆ ಪತ್ರಿಕಾಗೋಷ್ಠಿ ನಿಗದಿ ಮಾಡಿದ್ದರು.

ಆದರೆ ಮೂರನೇಯ ವಿಷಯವಾದ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ ವಿಷಯದ ಕುರಿತು ಯಾರೂ ಮಾತನಾಡದಂತೆ, ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಆ ಪೊಲೀಸ್‌ ಅಧಿಕಾರಿಯು ಕೋರ್ಟ್‌‌ನಿಂದ TI (Temporary Injunction) ತಂದಿದ್ದರು. ಹಾಗಾಗಿ ಪ್ರತಿಕಾಗೋಷ್ಠಿಯಲ್ಲಿ ಆ ವಿಚಾರವನ್ನು ಮಾತನಾಡದ ರವಿ ಕೃಷ್ಣಾರೆಡ್ಡಿಯವರು ನಂತರ ಬೀದಿಯಲ್ಲಿಯೇ ಆ ಅಧಿಕಾರಿಯ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿ ಪತ್ರಿಕಾಗೋಷ್ಠಿ ನಡೆಸಿದ್ದರು.

ದಿನಾಂಕ 06-12-2019 ರಂದು ನ್ಯಾಯಾಲಯವು ದಿನಾಂಕ 10-01-2020 ರ ತನಕ TI ಅನ್ನು ವಿಸ್ತರಿಸಿರುತ್ತದೆ. ಆದರೆ ದಿನಾಂಕ 10-01-2020 ರ ತೀರ್ಪಿನಲ್ಲಿ ಅದನ್ನು ವಿಸ್ತರಿಸಿರುವುದರ ಉಲ್ಲೇಖವಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಸದರಿ ಪೊಲೀಸ್‌ ಅಧಿಕಾರಿಯನ್ನು ಈ ಕೂಡಲೇ ಅಲ್ಲಿಂದ ತೆರವು ಮಾಡಬೇಕು ಮತ್ತು ಶೀಘ್ರವಾಗಿ ಅವರ ಮೇಲಿನ ಇಲಾಖಾ ವಿಚಾರಣೆ ಮುಗಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ರನ್ನು ಭೇಟಿಯಾಗಲು ಪ್ರಯತ್ನಿಸಿ ಹೋರಾಟ ಮುಂದುವರೆಸಿದ್ದರು.

ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಮುಂದೆ ಸಾರ್ವಜನಿಕರಿಗೆ ದಾಖಲೆಗಳನ್ನು ಹಂಚಿ ಶಾಂತಿಯುತವಾಗಿ ಪಾದಚಾರಿ ಮಾರ್ಗದಲ್ಲಿ ಪಥಸಂಚಲನ ಮಾಡಿದ್ದು ಈ ಕುರಿತು ಫೇಸ್‌ಬುಕ್‌ ಲೈವ್‌ನಲ್ಲಿ ರವಿ ಕೃಷ್ಣಾರೆಡ್ಡಿಯವರು ಬಹಳ ವಿಷಯ ಹಂಚಿಕೊಂಡಿದ್ದರು.

ನಿನ್ನೆ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದ ವೇಳೆ ಹೈಕೋರ್ಟ್‌ನ ಪಾರ್ಕಿಂಗ್ ಬಳಿ ರವಿ ಕೃಷ್ಣಾರೆಡ್ಡಿ, ರಘು ಜಾಣಗೆರೆ ಹಾಗೂ ವತ್ಸಲರವರ ಮೇಲೆ ಮುಗಿಬಿದ್ದ ಪೊಲೀಸರು ಅಮಾನುಷವಾಗಿ ನಡೆಸಿಕೊಂಡು ಬಂಧಿಸಿದ್ದಾರೆ. ಮೂವರನ್ನು ಅಶೋಕ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಿದ್ದಾರೆ.

ರವಿ ಕೃಷ್ಣರೆಡ್ಡಿ

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ. ಅವರನ್ನು ರಸ್ತೆಯಲ್ಲಿಯೇ ಎಳೆದಾಡಿದ್ದಾರೆ. ಅದನ್ನು ವಿಡಿಯೋ ಮಾಡುತ್ತಿದ್ದ ಅವರ ತಂಡದವರನ್ನು ಸಹ ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

Posted by Naanu Gauri on Tuesday, February 11, 2020

ಈ ಕುರಿತು ರವಿ ಕೃಷ್ಣಾರೆಡ್ಡಿಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಹಲವು ಗಂಭೀರ ಆರೋಪಗಳಿರುವ, ಇನ್ನೂ ಆರೋಪಮುಕ್ತನಾಗದ ಕಳಂಕಿತ ಪೊಲೀಸ್ ಅಧಿಕಾರಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದರೆ, ಅದು ಪೊಲೀಸ್ ಇಲಾಖೆಗೆ ಗೌರವ ತರುವ ವಿಷಯವೇ? ಪೊಲೀಸ್ ಇಲಾಖೆಗೆ ಇದು ಅವಮಾನವಲ್ಲವೆ? ಎಂದು ಪ್ರಶ್ನಿಸಿ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಸಿಎಂ ಅಂಡರ್‌ನಲ್ಲಿ ಬರುತ್ತದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ನುಣುಚಿಕೊಳ್ಳುತ್ತಿದ್ದಾರೆ. ನಾವೂ ಹೋರಾಟ ತೀವ್ರಗೊಳಿಸಿದಾಗ ನಮ್ಮನ್ನು ಬೆದರಿಸಲು ನಿನ್ನೆ ಈ ಬಂಧನವನ್ನು ಮಾಡಿದ್ದಾರೆ. ಆದರೆ ಈ ಬಂಧನಗಳಿಗೆ ನಾವು ಬೆದರುವುದಿಲ್ಲ. ಫೆ.15ರ ನಂತರ ಹೋರಾಟ ತೀವ್ರಗೊಳಿಸುತ್ತೇವೆ” ಎಂದಿದ್ದಾರೆ.

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...