Homeಮುಖಪುಟಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ.

- Advertisement -
- Advertisement -

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಒಂದು ವಾರದಿಂದಲೂ ಸತತವಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಜರುಗಿದೆ.

ರವಿ ಕೃಷ್ಣಾರೆಡ್ಡಿ ಸೇರಿದಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲಿಯೇ ಎಳೆದಾಡಿ, ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

BWSSB ಯಲ್ಲಿಯ ಬಹುಕೋಟಿಗಳ ಭ್ರಷ್ಟಾಚಾರ, ಮಂತ್ರಿಯೊಬ್ಬರ ಭೂ ಅಕ್ರಮ ಹಾಗೂ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ” ಎಂಬ ಮೂರು ವಿಚಾರಗಳ ಬಗ್ಗೆ ರವಿ ಕೃಷ್ಣಾರೆಡ್ಡಿಯವರ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದ ವತಿಯಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಫೆ.07ರಂದು ಮಧ್ಯಾಹ್ನ 1:30 ಕ್ಕೆ ಪತ್ರಿಕಾಗೋಷ್ಠಿ ನಿಗದಿ ಮಾಡಿದ್ದರು.

ಆದರೆ ಮೂರನೇಯ ವಿಷಯವಾದ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ ವಿಷಯದ ಕುರಿತು ಯಾರೂ ಮಾತನಾಡದಂತೆ, ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಆ ಪೊಲೀಸ್‌ ಅಧಿಕಾರಿಯು ಕೋರ್ಟ್‌‌ನಿಂದ TI (Temporary Injunction) ತಂದಿದ್ದರು. ಹಾಗಾಗಿ ಪ್ರತಿಕಾಗೋಷ್ಠಿಯಲ್ಲಿ ಆ ವಿಚಾರವನ್ನು ಮಾತನಾಡದ ರವಿ ಕೃಷ್ಣಾರೆಡ್ಡಿಯವರು ನಂತರ ಬೀದಿಯಲ್ಲಿಯೇ ಆ ಅಧಿಕಾರಿಯ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿ ಪತ್ರಿಕಾಗೋಷ್ಠಿ ನಡೆಸಿದ್ದರು.

ದಿನಾಂಕ 06-12-2019 ರಂದು ನ್ಯಾಯಾಲಯವು ದಿನಾಂಕ 10-01-2020 ರ ತನಕ TI ಅನ್ನು ವಿಸ್ತರಿಸಿರುತ್ತದೆ. ಆದರೆ ದಿನಾಂಕ 10-01-2020 ರ ತೀರ್ಪಿನಲ್ಲಿ ಅದನ್ನು ವಿಸ್ತರಿಸಿರುವುದರ ಉಲ್ಲೇಖವಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಸದರಿ ಪೊಲೀಸ್‌ ಅಧಿಕಾರಿಯನ್ನು ಈ ಕೂಡಲೇ ಅಲ್ಲಿಂದ ತೆರವು ಮಾಡಬೇಕು ಮತ್ತು ಶೀಘ್ರವಾಗಿ ಅವರ ಮೇಲಿನ ಇಲಾಖಾ ವಿಚಾರಣೆ ಮುಗಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ರನ್ನು ಭೇಟಿಯಾಗಲು ಪ್ರಯತ್ನಿಸಿ ಹೋರಾಟ ಮುಂದುವರೆಸಿದ್ದರು.

ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಮುಂದೆ ಸಾರ್ವಜನಿಕರಿಗೆ ದಾಖಲೆಗಳನ್ನು ಹಂಚಿ ಶಾಂತಿಯುತವಾಗಿ ಪಾದಚಾರಿ ಮಾರ್ಗದಲ್ಲಿ ಪಥಸಂಚಲನ ಮಾಡಿದ್ದು ಈ ಕುರಿತು ಫೇಸ್‌ಬುಕ್‌ ಲೈವ್‌ನಲ್ಲಿ ರವಿ ಕೃಷ್ಣಾರೆಡ್ಡಿಯವರು ಬಹಳ ವಿಷಯ ಹಂಚಿಕೊಂಡಿದ್ದರು.

ನಿನ್ನೆ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದ ವೇಳೆ ಹೈಕೋರ್ಟ್‌ನ ಪಾರ್ಕಿಂಗ್ ಬಳಿ ರವಿ ಕೃಷ್ಣಾರೆಡ್ಡಿ, ರಘು ಜಾಣಗೆರೆ ಹಾಗೂ ವತ್ಸಲರವರ ಮೇಲೆ ಮುಗಿಬಿದ್ದ ಪೊಲೀಸರು ಅಮಾನುಷವಾಗಿ ನಡೆಸಿಕೊಂಡು ಬಂಧಿಸಿದ್ದಾರೆ. ಮೂವರನ್ನು ಅಶೋಕ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಿದ್ದಾರೆ.

ರವಿ ಕೃಷ್ಣರೆಡ್ಡಿ

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ. ಅವರನ್ನು ರಸ್ತೆಯಲ್ಲಿಯೇ ಎಳೆದಾಡಿದ್ದಾರೆ. ಅದನ್ನು ವಿಡಿಯೋ ಮಾಡುತ್ತಿದ್ದ ಅವರ ತಂಡದವರನ್ನು ಸಹ ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

Posted by Naanu Gauri on Tuesday, February 11, 2020

ಈ ಕುರಿತು ರವಿ ಕೃಷ್ಣಾರೆಡ್ಡಿಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಹಲವು ಗಂಭೀರ ಆರೋಪಗಳಿರುವ, ಇನ್ನೂ ಆರೋಪಮುಕ್ತನಾಗದ ಕಳಂಕಿತ ಪೊಲೀಸ್ ಅಧಿಕಾರಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದರೆ, ಅದು ಪೊಲೀಸ್ ಇಲಾಖೆಗೆ ಗೌರವ ತರುವ ವಿಷಯವೇ? ಪೊಲೀಸ್ ಇಲಾಖೆಗೆ ಇದು ಅವಮಾನವಲ್ಲವೆ? ಎಂದು ಪ್ರಶ್ನಿಸಿ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಸಿಎಂ ಅಂಡರ್‌ನಲ್ಲಿ ಬರುತ್ತದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ನುಣುಚಿಕೊಳ್ಳುತ್ತಿದ್ದಾರೆ. ನಾವೂ ಹೋರಾಟ ತೀವ್ರಗೊಳಿಸಿದಾಗ ನಮ್ಮನ್ನು ಬೆದರಿಸಲು ನಿನ್ನೆ ಈ ಬಂಧನವನ್ನು ಮಾಡಿದ್ದಾರೆ. ಆದರೆ ಈ ಬಂಧನಗಳಿಗೆ ನಾವು ಬೆದರುವುದಿಲ್ಲ. ಫೆ.15ರ ನಂತರ ಹೋರಾಟ ತೀವ್ರಗೊಳಿಸುತ್ತೇವೆ” ಎಂದಿದ್ದಾರೆ.

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...