Homeಕರ್ನಾಟಕಬಾಬರಿ ಮಸೀದಿಯಂತೆ ಗದಗದ ಜುಮ್ಮಾ ಮಸೀದಿ ವಿರುದ್ಧ ಹೋರಾಟ: ಮುತಾಲಿಕ್‌ ಪ್ರಚೋದನೆ

ಬಾಬರಿ ಮಸೀದಿಯಂತೆ ಗದಗದ ಜುಮ್ಮಾ ಮಸೀದಿ ವಿರುದ್ಧ ಹೋರಾಟ: ಮುತಾಲಿಕ್‌ ಪ್ರಚೋದನೆ

- Advertisement -
- Advertisement -

ಅಯೋಧ್ಯೆಯಲ್ಲಿ ಬಾಬರಿ ಮಸೀದಿ ತೆಗೆದು ದೇವಾಲಯ ನಿರ್ಮಿಸಿದಂತೆ ಗದಗದ ಜುಮ್ಮಾ ಮಸೀದಿಯನ್ನು ತೆರವು ಮಾಡಿ ಅಲ್ಲಿ ವೆಂಕಟೇಶ್ವರ ದೇವಾಲಯ ಕಟ್ಟಬೇಕೆಂಬ ಪ್ರಚೋದನೆಯನ್ನು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ನೀಡಿದ್ದಾರೆ.

ಗದುಗಿನ ಮುನ್ಸಿಪಲ್‌ ಮೈದಾನದಲ್ಲಿ ಭಾನುವಾರ ನಡೆದ “ಮತಾಂತರ ತಡೆಗಾಗಿ ಪಥ ಸಂಚಲನ” ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅವರು ಪ್ರಚೋದನಾಕಾರಿಯಾಗಿ ಮಾತನಾಡಿದ್ದು, ವಿಡಿಯೋ ವೈರಲ್‌ ಆಗಿದೆ.

“71 ವರ್ಷ ರಾಮಮಂದಿರ ಸಲುವಾಗಿ ಹೋರಾಟ ಮಾಡಬೇಕಾಯಿತು. 72 ವರ್ಷಗಳ ನಂತರ ಆ ಬಾಬರಿ ಮಸೀದಿಯನ್ನು ತೆಗೆದುಹಾಕಿ ಭವ್ಯ ದೇವಾಲಯವನ್ನು ನಿರ್ಮಾಣ ಮಾಡುವಂತಹ ಸಂಕಲ್ಪ ಪೂರ್ಣವಾಗಿದೆ. ಅದೇ ಮಾದರಿಯಲ್ಲಿ ಗದಗಿನಲ್ಲಿ ಜುಮ್ಮಾ ಮಸೀದಿ ಏನಿದೆ ಅದು ವೆಂಕಟೇಶ್ವರ ದೇವಸ್ಥಾನ…” ಎಂದು ಮುತಾಲಿಕ್‌ ಪ್ರಚೋದಿಸುತ್ತಿರುವ ವಿಡಿಯೋ ವೈರಲ್‌ ಆಗಿದೆ.

ಮುತಾಲಿಕ್‌ ಅವರ ಪ್ರಚೋದನಕಾರಿ ಭಾಷಣಕ್ಕೆ ಶಿಳ್ಳೆ, ಚಪ್ಪಾಳೆಯನ್ನು ಸಭೆಯಲ್ಲಿದ್ದವರು ಹಾಕಿದ್ದಾರೆ. ಬಾಬರ್‌‌ನನ್ನು ನಿಂದಿಸಿರುವ ಮುತಾಲಿಕ್‌, “ಟಿಪ್ಪು ಸುಲ್ತಾನ್‌ ಅವಧಿಯಲ್ಲಿ ಒಡೆದು ಹಾಕಿದ ದೇವಸ್ಥಾನಗಳ ಪೈಕಿ ಜಮ್ಮಾ ಮಸೀದಿ ಜಾಗದಲ್ಲಿದ್ದ ವೆಂಕಟೇಶ್ವರ ದೇವಾಲಯವೂ ಒಂದು ಎಂಬ ಆಧಾರ ಸಹಿತ ಹೋರಾಟವನ್ನು ಮುಂದೆ ಮಾಡೋಣ” ಎಂದಿದ್ದಾರೆ.

ನೂರಕ್ಕೆ ನೂರು ಅದು ವೆಂಕಟೇಶ್ವರ ದೇವಸ್ಥಾನವೇ ಆಗಿತ್ತು. ಈ ಸಂಬಂಧ ಸಮಗ್ರ ದಾಖಲೆ ಸಂಗ್ರಹಿಸಿ ಹೋರಾಟ ನಡೆಸಲು ತಯಾರಿ ನಡೆಸಿದ್ದೇವೆ. 80 ವರ್ಷ ದಾಟಿ ಹಿರಿಯರ ಅಭಿಪ್ರಾಯ ಸಂಗ್ರಹ, ದಾಖಲೆಗಳ ಸಂಗ್ರಹ ಮಾಡಿ ಪಿಐಎಲ್‌ ಹಾಕುವವರಿದ್ದೇವೆ. ಕರ್ನಾಟಕದಲ್ಲಿ ಈ ರೀತಿ ಸಾಕಷ್ಟು ದೇವಸ್ಥಾನಗಳನ್ನು ಒಡೆದು ಮಸೀದಿಗಳನ್ನು ಕಟ್ಟಲಾಗಿದೆ. ಈ ಬಗ್ಗೆಯೂ ಸಮಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮತಾಂತರದ ಬಗ್ಗೆ ಈಗ ಸಾಕಷ್ಟು ಚರ್ಚೆಗಳು ಆಗುತ್ತಿವೆ. ಗದಗ ಜಿಲ್ಲೆಯಲ್ಲಿ ಕೂಡ ಹತ್ತು ಸಾವಿರಕ್ಕೂ ಅಧಿಕ ಮಂದಿ ಮತಾಂತರಗೊಂಡಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಆಗುತ್ತಿರುವ ಮತಾಂತರ ತಡೆಯುವ ನಿಟ್ಟಿನಲ್ಲಿ ಶ್ರೀರಾಮ ಸೇನೆ ಯುವಪಡೆಯನ್ನು ಸಜ್ಜುಗೊಳಿಸುತ್ತಿದೆ ಎಂದು ಹೇಳಿದ್ದಾರೆ.

ಕ್ರಿಶ್ಚಿಯನ್‌ ಪಾದ್ರಿಗಳು ಇಲ್ಲೀವರೆಗೆ ಬಡವರು, ದೀನ ದಲಿತರನ್ನು ಗುರಿಯಾಗಿಸಿಕೊಂಡು ಮತಾಂತರ ಮಾಡುತ್ತಿದ್ದರು. ಆದರೆ, ಈಗ ಅವರ ಕಾರ್ಯವ್ಯಾಪ್ತಿ ವಿಸ್ತಾರಗೊಂಡಿದ್ದು ಕುರುಬರು, ಲಿಂಗಾಯತರು, ಬ್ರಾಹ್ಮಣರು, ಒಕ್ಕಲಿಗರು ಎಲ್ಲರನ್ನೂ ಮತಾಂತರ ಮಾಡುತ್ತಿದ್ದಾರೆ. ಈ ಬಗ್ಗೆ ಆಯಾಯ ಸಮುದಾಯದ ಸ್ವಾಮೀಜಿಗಳು, ಜನಪ್ರತಿನಿಧಿಗಳು ಗಂಭೀರವಾಗಿ ಆಲೋಚಿಸಿ ಮತಾಂತರ ತಡೆಗೆ ಮುಂದಾಗಬೇಕು. ಇಲ್ಲವಾದಲ್ಲಿ ಮಠಕ್ಕೆ ಬರಲು, ವೋಟು ಹಾಕಲು ಸಮುದಾಯದ ಜನರು ಇರುವುದಿಲ್ಲ ಎಂದಿದ್ದಾರೆ.

‘ಬಡವರ ಕಷ್ಟ ನಷ್ಟಗಳನ್ನೇ ಬಂಡವಾಳ ಆಗಿಸಿಕೊಂಡ ಕ್ರೈಸ್ತ ಮಿಷನರಿಗಳು ಮತಾಂತರ ಪ್ರಕ್ರಿಯೆ ಆರಂಭಿಸಿದವು. ವೃದ್ಧಾಶ್ರಮಗಳು ಕೂಡ ಬ್ರಿಟಿಷರ ಕೊಡುಗೆ. ಸಮೃದ್ಧ ಭಾರತದಲ್ಲಿ ಹಿಂದೂ ಧರ್ಮವನ್ನು ನಾಶ ಮಾಡುವುದಕ್ಕಾಗಿಯೇ ಕ್ರೈಸ್ತರು ಚರ್ಚ್, ಪಾದ್ರಿಗಳನ್ನು ಕರೆತಂದರು. ಶ್ರೀಮಂತ ಸಂಸ್ಕೃತಿ, ಪರಂಪರೆ ಹೊಂದಿರುವ ಭಾರತವನ್ನು ಒಡೆದು ಆಳಲು ಇಲ್ಲಿನ ಜನರನ್ನು ಅವರು ವೈಚಾರಿಕವಾಗಿಯೂ ಮತಾಂತರ ಮಾಡಿದರು ಎಂದು ಆರೋಪಿಸಿದ್ದಾರೆ.

‘ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದರೂ ಗೋವುಗಳ ಹತ್ಯೆ ನಿಂತಿಲ್ಲ. ಅಂತೆಯೇ, ಮತಾಂತರ ತಡೆ ಕಾನೂನು ಆಗಬಾರದು. ಮತಾಂತರಕ್ಕೆ ಮುಂದಾಗುವ ಪಾದ್ರಿಗಳಿಗೆ ಜೈಲು ಶಿಕ್ಷೆ ಆಗಬೇಕು. ಒಂದು ವರ್ಷದವರೆಗೆ ಜಾಮೀನು ಸಿಗಬಾರದು. ಈ ರೀತಿಯಾಗಿ ಮತಾಂತರ ವಿರೋಧಿ ಕಾನೂನನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಶ್ರೀರಾಮ ಸೇನೆ ಸಂಘಟನೆಯ ರಾಜು ಖಾನಾಪುರ ಹಾಜರಿದ್ದರು.

ಇದನ್ನೂ ಓದಿರಿ: ಉತ್ತರ ಪ್ರದೇಶ: ನ್ಯಾಯಾಲಯ ಅಂಗಳದಲ್ಲಿ ವಕೀಲನಿಗೆ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...