Homeಕರ್ನಾಟಕಬಾಬರಿ ಮಸೀದಿಯಂತೆ ಗದಗದ ಜುಮ್ಮಾ ಮಸೀದಿ ವಿರುದ್ಧ ಹೋರಾಟ: ಮುತಾಲಿಕ್‌ ಪ್ರಚೋದನೆ

ಬಾಬರಿ ಮಸೀದಿಯಂತೆ ಗದಗದ ಜುಮ್ಮಾ ಮಸೀದಿ ವಿರುದ್ಧ ಹೋರಾಟ: ಮುತಾಲಿಕ್‌ ಪ್ರಚೋದನೆ

- Advertisement -
- Advertisement -

ಅಯೋಧ್ಯೆಯಲ್ಲಿ ಬಾಬರಿ ಮಸೀದಿ ತೆಗೆದು ದೇವಾಲಯ ನಿರ್ಮಿಸಿದಂತೆ ಗದಗದ ಜುಮ್ಮಾ ಮಸೀದಿಯನ್ನು ತೆರವು ಮಾಡಿ ಅಲ್ಲಿ ವೆಂಕಟೇಶ್ವರ ದೇವಾಲಯ ಕಟ್ಟಬೇಕೆಂಬ ಪ್ರಚೋದನೆಯನ್ನು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ನೀಡಿದ್ದಾರೆ.

ಗದುಗಿನ ಮುನ್ಸಿಪಲ್‌ ಮೈದಾನದಲ್ಲಿ ಭಾನುವಾರ ನಡೆದ “ಮತಾಂತರ ತಡೆಗಾಗಿ ಪಥ ಸಂಚಲನ” ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅವರು ಪ್ರಚೋದನಾಕಾರಿಯಾಗಿ ಮಾತನಾಡಿದ್ದು, ವಿಡಿಯೋ ವೈರಲ್‌ ಆಗಿದೆ.

“71 ವರ್ಷ ರಾಮಮಂದಿರ ಸಲುವಾಗಿ ಹೋರಾಟ ಮಾಡಬೇಕಾಯಿತು. 72 ವರ್ಷಗಳ ನಂತರ ಆ ಬಾಬರಿ ಮಸೀದಿಯನ್ನು ತೆಗೆದುಹಾಕಿ ಭವ್ಯ ದೇವಾಲಯವನ್ನು ನಿರ್ಮಾಣ ಮಾಡುವಂತಹ ಸಂಕಲ್ಪ ಪೂರ್ಣವಾಗಿದೆ. ಅದೇ ಮಾದರಿಯಲ್ಲಿ ಗದಗಿನಲ್ಲಿ ಜುಮ್ಮಾ ಮಸೀದಿ ಏನಿದೆ ಅದು ವೆಂಕಟೇಶ್ವರ ದೇವಸ್ಥಾನ…” ಎಂದು ಮುತಾಲಿಕ್‌ ಪ್ರಚೋದಿಸುತ್ತಿರುವ ವಿಡಿಯೋ ವೈರಲ್‌ ಆಗಿದೆ.

ಮುತಾಲಿಕ್‌ ಅವರ ಪ್ರಚೋದನಕಾರಿ ಭಾಷಣಕ್ಕೆ ಶಿಳ್ಳೆ, ಚಪ್ಪಾಳೆಯನ್ನು ಸಭೆಯಲ್ಲಿದ್ದವರು ಹಾಕಿದ್ದಾರೆ. ಬಾಬರ್‌‌ನನ್ನು ನಿಂದಿಸಿರುವ ಮುತಾಲಿಕ್‌, “ಟಿಪ್ಪು ಸುಲ್ತಾನ್‌ ಅವಧಿಯಲ್ಲಿ ಒಡೆದು ಹಾಕಿದ ದೇವಸ್ಥಾನಗಳ ಪೈಕಿ ಜಮ್ಮಾ ಮಸೀದಿ ಜಾಗದಲ್ಲಿದ್ದ ವೆಂಕಟೇಶ್ವರ ದೇವಾಲಯವೂ ಒಂದು ಎಂಬ ಆಧಾರ ಸಹಿತ ಹೋರಾಟವನ್ನು ಮುಂದೆ ಮಾಡೋಣ” ಎಂದಿದ್ದಾರೆ.

ನೂರಕ್ಕೆ ನೂರು ಅದು ವೆಂಕಟೇಶ್ವರ ದೇವಸ್ಥಾನವೇ ಆಗಿತ್ತು. ಈ ಸಂಬಂಧ ಸಮಗ್ರ ದಾಖಲೆ ಸಂಗ್ರಹಿಸಿ ಹೋರಾಟ ನಡೆಸಲು ತಯಾರಿ ನಡೆಸಿದ್ದೇವೆ. 80 ವರ್ಷ ದಾಟಿ ಹಿರಿಯರ ಅಭಿಪ್ರಾಯ ಸಂಗ್ರಹ, ದಾಖಲೆಗಳ ಸಂಗ್ರಹ ಮಾಡಿ ಪಿಐಎಲ್‌ ಹಾಕುವವರಿದ್ದೇವೆ. ಕರ್ನಾಟಕದಲ್ಲಿ ಈ ರೀತಿ ಸಾಕಷ್ಟು ದೇವಸ್ಥಾನಗಳನ್ನು ಒಡೆದು ಮಸೀದಿಗಳನ್ನು ಕಟ್ಟಲಾಗಿದೆ. ಈ ಬಗ್ಗೆಯೂ ಸಮಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮತಾಂತರದ ಬಗ್ಗೆ ಈಗ ಸಾಕಷ್ಟು ಚರ್ಚೆಗಳು ಆಗುತ್ತಿವೆ. ಗದಗ ಜಿಲ್ಲೆಯಲ್ಲಿ ಕೂಡ ಹತ್ತು ಸಾವಿರಕ್ಕೂ ಅಧಿಕ ಮಂದಿ ಮತಾಂತರಗೊಂಡಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಆಗುತ್ತಿರುವ ಮತಾಂತರ ತಡೆಯುವ ನಿಟ್ಟಿನಲ್ಲಿ ಶ್ರೀರಾಮ ಸೇನೆ ಯುವಪಡೆಯನ್ನು ಸಜ್ಜುಗೊಳಿಸುತ್ತಿದೆ ಎಂದು ಹೇಳಿದ್ದಾರೆ.

ಕ್ರಿಶ್ಚಿಯನ್‌ ಪಾದ್ರಿಗಳು ಇಲ್ಲೀವರೆಗೆ ಬಡವರು, ದೀನ ದಲಿತರನ್ನು ಗುರಿಯಾಗಿಸಿಕೊಂಡು ಮತಾಂತರ ಮಾಡುತ್ತಿದ್ದರು. ಆದರೆ, ಈಗ ಅವರ ಕಾರ್ಯವ್ಯಾಪ್ತಿ ವಿಸ್ತಾರಗೊಂಡಿದ್ದು ಕುರುಬರು, ಲಿಂಗಾಯತರು, ಬ್ರಾಹ್ಮಣರು, ಒಕ್ಕಲಿಗರು ಎಲ್ಲರನ್ನೂ ಮತಾಂತರ ಮಾಡುತ್ತಿದ್ದಾರೆ. ಈ ಬಗ್ಗೆ ಆಯಾಯ ಸಮುದಾಯದ ಸ್ವಾಮೀಜಿಗಳು, ಜನಪ್ರತಿನಿಧಿಗಳು ಗಂಭೀರವಾಗಿ ಆಲೋಚಿಸಿ ಮತಾಂತರ ತಡೆಗೆ ಮುಂದಾಗಬೇಕು. ಇಲ್ಲವಾದಲ್ಲಿ ಮಠಕ್ಕೆ ಬರಲು, ವೋಟು ಹಾಕಲು ಸಮುದಾಯದ ಜನರು ಇರುವುದಿಲ್ಲ ಎಂದಿದ್ದಾರೆ.

‘ಬಡವರ ಕಷ್ಟ ನಷ್ಟಗಳನ್ನೇ ಬಂಡವಾಳ ಆಗಿಸಿಕೊಂಡ ಕ್ರೈಸ್ತ ಮಿಷನರಿಗಳು ಮತಾಂತರ ಪ್ರಕ್ರಿಯೆ ಆರಂಭಿಸಿದವು. ವೃದ್ಧಾಶ್ರಮಗಳು ಕೂಡ ಬ್ರಿಟಿಷರ ಕೊಡುಗೆ. ಸಮೃದ್ಧ ಭಾರತದಲ್ಲಿ ಹಿಂದೂ ಧರ್ಮವನ್ನು ನಾಶ ಮಾಡುವುದಕ್ಕಾಗಿಯೇ ಕ್ರೈಸ್ತರು ಚರ್ಚ್, ಪಾದ್ರಿಗಳನ್ನು ಕರೆತಂದರು. ಶ್ರೀಮಂತ ಸಂಸ್ಕೃತಿ, ಪರಂಪರೆ ಹೊಂದಿರುವ ಭಾರತವನ್ನು ಒಡೆದು ಆಳಲು ಇಲ್ಲಿನ ಜನರನ್ನು ಅವರು ವೈಚಾರಿಕವಾಗಿಯೂ ಮತಾಂತರ ಮಾಡಿದರು ಎಂದು ಆರೋಪಿಸಿದ್ದಾರೆ.

‘ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದರೂ ಗೋವುಗಳ ಹತ್ಯೆ ನಿಂತಿಲ್ಲ. ಅಂತೆಯೇ, ಮತಾಂತರ ತಡೆ ಕಾನೂನು ಆಗಬಾರದು. ಮತಾಂತರಕ್ಕೆ ಮುಂದಾಗುವ ಪಾದ್ರಿಗಳಿಗೆ ಜೈಲು ಶಿಕ್ಷೆ ಆಗಬೇಕು. ಒಂದು ವರ್ಷದವರೆಗೆ ಜಾಮೀನು ಸಿಗಬಾರದು. ಈ ರೀತಿಯಾಗಿ ಮತಾಂತರ ವಿರೋಧಿ ಕಾನೂನನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಶ್ರೀರಾಮ ಸೇನೆ ಸಂಘಟನೆಯ ರಾಜು ಖಾನಾಪುರ ಹಾಜರಿದ್ದರು.

ಇದನ್ನೂ ಓದಿರಿ: ಉತ್ತರ ಪ್ರದೇಶ: ನ್ಯಾಯಾಲಯ ಅಂಗಳದಲ್ಲಿ ವಕೀಲನಿಗೆ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...