Homeಕರ್ನಾಟಕಬಾಬರಿ ಮಸೀದಿಯಂತೆ ಗದಗದ ಜುಮ್ಮಾ ಮಸೀದಿ ವಿರುದ್ಧ ಹೋರಾಟ: ಮುತಾಲಿಕ್‌ ಪ್ರಚೋದನೆ

ಬಾಬರಿ ಮಸೀದಿಯಂತೆ ಗದಗದ ಜುಮ್ಮಾ ಮಸೀದಿ ವಿರುದ್ಧ ಹೋರಾಟ: ಮುತಾಲಿಕ್‌ ಪ್ರಚೋದನೆ

- Advertisement -
- Advertisement -

ಅಯೋಧ್ಯೆಯಲ್ಲಿ ಬಾಬರಿ ಮಸೀದಿ ತೆಗೆದು ದೇವಾಲಯ ನಿರ್ಮಿಸಿದಂತೆ ಗದಗದ ಜುಮ್ಮಾ ಮಸೀದಿಯನ್ನು ತೆರವು ಮಾಡಿ ಅಲ್ಲಿ ವೆಂಕಟೇಶ್ವರ ದೇವಾಲಯ ಕಟ್ಟಬೇಕೆಂಬ ಪ್ರಚೋದನೆಯನ್ನು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ನೀಡಿದ್ದಾರೆ.

ಗದುಗಿನ ಮುನ್ಸಿಪಲ್‌ ಮೈದಾನದಲ್ಲಿ ಭಾನುವಾರ ನಡೆದ “ಮತಾಂತರ ತಡೆಗಾಗಿ ಪಥ ಸಂಚಲನ” ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅವರು ಪ್ರಚೋದನಾಕಾರಿಯಾಗಿ ಮಾತನಾಡಿದ್ದು, ವಿಡಿಯೋ ವೈರಲ್‌ ಆಗಿದೆ.

“71 ವರ್ಷ ರಾಮಮಂದಿರ ಸಲುವಾಗಿ ಹೋರಾಟ ಮಾಡಬೇಕಾಯಿತು. 72 ವರ್ಷಗಳ ನಂತರ ಆ ಬಾಬರಿ ಮಸೀದಿಯನ್ನು ತೆಗೆದುಹಾಕಿ ಭವ್ಯ ದೇವಾಲಯವನ್ನು ನಿರ್ಮಾಣ ಮಾಡುವಂತಹ ಸಂಕಲ್ಪ ಪೂರ್ಣವಾಗಿದೆ. ಅದೇ ಮಾದರಿಯಲ್ಲಿ ಗದಗಿನಲ್ಲಿ ಜುಮ್ಮಾ ಮಸೀದಿ ಏನಿದೆ ಅದು ವೆಂಕಟೇಶ್ವರ ದೇವಸ್ಥಾನ…” ಎಂದು ಮುತಾಲಿಕ್‌ ಪ್ರಚೋದಿಸುತ್ತಿರುವ ವಿಡಿಯೋ ವೈರಲ್‌ ಆಗಿದೆ.

ಮುತಾಲಿಕ್‌ ಅವರ ಪ್ರಚೋದನಕಾರಿ ಭಾಷಣಕ್ಕೆ ಶಿಳ್ಳೆ, ಚಪ್ಪಾಳೆಯನ್ನು ಸಭೆಯಲ್ಲಿದ್ದವರು ಹಾಕಿದ್ದಾರೆ. ಬಾಬರ್‌‌ನನ್ನು ನಿಂದಿಸಿರುವ ಮುತಾಲಿಕ್‌, “ಟಿಪ್ಪು ಸುಲ್ತಾನ್‌ ಅವಧಿಯಲ್ಲಿ ಒಡೆದು ಹಾಕಿದ ದೇವಸ್ಥಾನಗಳ ಪೈಕಿ ಜಮ್ಮಾ ಮಸೀದಿ ಜಾಗದಲ್ಲಿದ್ದ ವೆಂಕಟೇಶ್ವರ ದೇವಾಲಯವೂ ಒಂದು ಎಂಬ ಆಧಾರ ಸಹಿತ ಹೋರಾಟವನ್ನು ಮುಂದೆ ಮಾಡೋಣ” ಎಂದಿದ್ದಾರೆ.

ನೂರಕ್ಕೆ ನೂರು ಅದು ವೆಂಕಟೇಶ್ವರ ದೇವಸ್ಥಾನವೇ ಆಗಿತ್ತು. ಈ ಸಂಬಂಧ ಸಮಗ್ರ ದಾಖಲೆ ಸಂಗ್ರಹಿಸಿ ಹೋರಾಟ ನಡೆಸಲು ತಯಾರಿ ನಡೆಸಿದ್ದೇವೆ. 80 ವರ್ಷ ದಾಟಿ ಹಿರಿಯರ ಅಭಿಪ್ರಾಯ ಸಂಗ್ರಹ, ದಾಖಲೆಗಳ ಸಂಗ್ರಹ ಮಾಡಿ ಪಿಐಎಲ್‌ ಹಾಕುವವರಿದ್ದೇವೆ. ಕರ್ನಾಟಕದಲ್ಲಿ ಈ ರೀತಿ ಸಾಕಷ್ಟು ದೇವಸ್ಥಾನಗಳನ್ನು ಒಡೆದು ಮಸೀದಿಗಳನ್ನು ಕಟ್ಟಲಾಗಿದೆ. ಈ ಬಗ್ಗೆಯೂ ಸಮಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮತಾಂತರದ ಬಗ್ಗೆ ಈಗ ಸಾಕಷ್ಟು ಚರ್ಚೆಗಳು ಆಗುತ್ತಿವೆ. ಗದಗ ಜಿಲ್ಲೆಯಲ್ಲಿ ಕೂಡ ಹತ್ತು ಸಾವಿರಕ್ಕೂ ಅಧಿಕ ಮಂದಿ ಮತಾಂತರಗೊಂಡಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಆಗುತ್ತಿರುವ ಮತಾಂತರ ತಡೆಯುವ ನಿಟ್ಟಿನಲ್ಲಿ ಶ್ರೀರಾಮ ಸೇನೆ ಯುವಪಡೆಯನ್ನು ಸಜ್ಜುಗೊಳಿಸುತ್ತಿದೆ ಎಂದು ಹೇಳಿದ್ದಾರೆ.

ಕ್ರಿಶ್ಚಿಯನ್‌ ಪಾದ್ರಿಗಳು ಇಲ್ಲೀವರೆಗೆ ಬಡವರು, ದೀನ ದಲಿತರನ್ನು ಗುರಿಯಾಗಿಸಿಕೊಂಡು ಮತಾಂತರ ಮಾಡುತ್ತಿದ್ದರು. ಆದರೆ, ಈಗ ಅವರ ಕಾರ್ಯವ್ಯಾಪ್ತಿ ವಿಸ್ತಾರಗೊಂಡಿದ್ದು ಕುರುಬರು, ಲಿಂಗಾಯತರು, ಬ್ರಾಹ್ಮಣರು, ಒಕ್ಕಲಿಗರು ಎಲ್ಲರನ್ನೂ ಮತಾಂತರ ಮಾಡುತ್ತಿದ್ದಾರೆ. ಈ ಬಗ್ಗೆ ಆಯಾಯ ಸಮುದಾಯದ ಸ್ವಾಮೀಜಿಗಳು, ಜನಪ್ರತಿನಿಧಿಗಳು ಗಂಭೀರವಾಗಿ ಆಲೋಚಿಸಿ ಮತಾಂತರ ತಡೆಗೆ ಮುಂದಾಗಬೇಕು. ಇಲ್ಲವಾದಲ್ಲಿ ಮಠಕ್ಕೆ ಬರಲು, ವೋಟು ಹಾಕಲು ಸಮುದಾಯದ ಜನರು ಇರುವುದಿಲ್ಲ ಎಂದಿದ್ದಾರೆ.

‘ಬಡವರ ಕಷ್ಟ ನಷ್ಟಗಳನ್ನೇ ಬಂಡವಾಳ ಆಗಿಸಿಕೊಂಡ ಕ್ರೈಸ್ತ ಮಿಷನರಿಗಳು ಮತಾಂತರ ಪ್ರಕ್ರಿಯೆ ಆರಂಭಿಸಿದವು. ವೃದ್ಧಾಶ್ರಮಗಳು ಕೂಡ ಬ್ರಿಟಿಷರ ಕೊಡುಗೆ. ಸಮೃದ್ಧ ಭಾರತದಲ್ಲಿ ಹಿಂದೂ ಧರ್ಮವನ್ನು ನಾಶ ಮಾಡುವುದಕ್ಕಾಗಿಯೇ ಕ್ರೈಸ್ತರು ಚರ್ಚ್, ಪಾದ್ರಿಗಳನ್ನು ಕರೆತಂದರು. ಶ್ರೀಮಂತ ಸಂಸ್ಕೃತಿ, ಪರಂಪರೆ ಹೊಂದಿರುವ ಭಾರತವನ್ನು ಒಡೆದು ಆಳಲು ಇಲ್ಲಿನ ಜನರನ್ನು ಅವರು ವೈಚಾರಿಕವಾಗಿಯೂ ಮತಾಂತರ ಮಾಡಿದರು ಎಂದು ಆರೋಪಿಸಿದ್ದಾರೆ.

‘ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದರೂ ಗೋವುಗಳ ಹತ್ಯೆ ನಿಂತಿಲ್ಲ. ಅಂತೆಯೇ, ಮತಾಂತರ ತಡೆ ಕಾನೂನು ಆಗಬಾರದು. ಮತಾಂತರಕ್ಕೆ ಮುಂದಾಗುವ ಪಾದ್ರಿಗಳಿಗೆ ಜೈಲು ಶಿಕ್ಷೆ ಆಗಬೇಕು. ಒಂದು ವರ್ಷದವರೆಗೆ ಜಾಮೀನು ಸಿಗಬಾರದು. ಈ ರೀತಿಯಾಗಿ ಮತಾಂತರ ವಿರೋಧಿ ಕಾನೂನನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಶ್ರೀರಾಮ ಸೇನೆ ಸಂಘಟನೆಯ ರಾಜು ಖಾನಾಪುರ ಹಾಜರಿದ್ದರು.

ಇದನ್ನೂ ಓದಿರಿ: ಉತ್ತರ ಪ್ರದೇಶ: ನ್ಯಾಯಾಲಯ ಅಂಗಳದಲ್ಲಿ ವಕೀಲನಿಗೆ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....