Homeಮುಖಪುಟಎನ್.ಡಿ.ಎ ಯಿಂದ ಶಿವಸೇನೆ ಹೊರಹಾಕಿದ ಬಿಜೆಪಿ: ಬಿಜೆಪಿಯನ್ನು ಘೋರಿಗೆ ಹೋಲಿಸಿದ ಸಾಮ್ನಾ

ಎನ್.ಡಿ.ಎ ಯಿಂದ ಶಿವಸೇನೆ ಹೊರಹಾಕಿದ ಬಿಜೆಪಿ: ಬಿಜೆಪಿಯನ್ನು ಘೋರಿಗೆ ಹೋಲಿಸಿದ ಸಾಮ್ನಾ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಎರಡನೇ ಪ್ರಯತ್ನದಲ್ಲಿ ಇನ್ನೇನು ಸರ್ಕಾರ ರಚಿಸಿಬಿಡುತ್ತವೆ ಎನ್ನುವಾಗಲೇ ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದೆ. ಶಿವಸೇನೆಯನ್ನು ಎನ್.ಡಿ.ಎ ಕೂಟದಿಂದ ಹೊರಹಾಕಿರುವುದು ಶಿವಸೇನೆಯನ್ನು ಕೆರಳುವಂತೆ ಮಾಡಿದೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಬಿಕ್ಕಟ್ಟು ಮತ್ತೆ ಮುಂದುವರೆಯುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.

ನ್ಯಾಷನಲ್ ಡೆಮಾಕ್ರೆಟಿಕ್ ಮೈತ್ರಿಕೂಟದಿಣದ ಪಕ್ಷವನ್ನು ಹೊರಹಾಕಿರುವ ಬಿಜೆಪಿಯ ಕ್ರಮವನ್ನು ಖಂಡಿಸಿರುವ ಶಿವಸೇನೆ ಮುಖವಾಣಿ ಸಾಮ್ನಾ ಬಿಜೆಪಿ ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಬಾಳಠಾಕ್ರೆ ಮತ್ತು ಇತರೆ ಕೆಲವರು ಎನ್.ಡಿ.ಎ ಮೈತ್ರಿ ಕೂಟವನ್ನು ರಚಿಸಿದರು. ಆಗ ಹಿಂದುತ್ವದ ಬಗ್ಗೆ ಮಾತುಕತೆ ಮಾಡಿರಲಿಲ್ಲ. ಅಷ್ಟೇ ಅಲ್ಲ ರಾಜಕೀಯದಲ್ಲಿ ಹಿಂದುತ್ವ ಮತ್ತು ರಾಷ್ಟ್ರೀಯತೆ ವಿಷಯಗಳನ್ನು ತರುವ ಕುರಿತೂ ಚರ್ಚೆ ನಡೆಸಿರಲಿಲ್ಲ ಎಂದು ಸಾಮ್ನಾ ಸಂಪಾದಕೀಯದಲ್ಲಿ ಸ್ಪಷ್ಟಪಡಿಸಿದೆ.

ಎನ್.ಸಿ.ಪಿ-ಕಾಂಗ್ರೆಸ್ ಜೊತೆ ಮೈತ್ರಿಯ ಆರೋಪ ಹೊರಿಸಿ ಎನ್.ಡಿ.ಎ ಯಿಂದ ಶಿವಸೇನೆಯನ್ನು ಹೊರ ಹಾಕಿರುವುದು ಖಂಡನೀಯ. ಶಿವಸೇನೆಯನ್ನು ಹೊರಹಾಕಲು ಬಾಳಠಾಕ್ರೆಯವರ ವರ್ಷಾಚರಣೆಯ ಸಂದರ್ಭವನ್ನು ನಿಗದಿಪಡಿಸಿರುವುದು ಮಹಾರಾಷ್ಟ್ರದ ಜನರ ಬೆನ್ನಿಗೆ ಚೂರಿ ಹಾಕಿದಂತಾಗಿದೆ ಎಂದು ಟೀಕಾಪ್ರಹಾರ ನಡೆಸಿದೆ.

ಹಿಂದುತ್ವ ಮತ್ತು ರಾಷ್ಟ್ರೀಯತೆಯ ವಿಷಯಗಳು ಎನ್.ಡಿ.ಎ. ರಚನೆಯ ಸಂದರ್ಭದಲ್ಲಿ ಚರ್ಚೆಗೆ ಬಂದಿರಲಿಲ್ಲ ಎಂಬುದು ಈಗ ನ್ಯಾಷನಲ್ ಡೆಮಾಕ್ರೆಟಿಕ್ ಅಲಯನ್ಸ್ ಮುನ್ನಡೆಸುತ್ತಿರುವವರಿಗೆ ಮಾಹಿತಿ ಇಲ್ಲ. ಆದರೂ ಶಿವನೇನೆಗೆ ಒಂದು ಮಾತನ್ನು ತಿಳಿಸದೆ, ಯಾವುದೇ ಮಾಹಿತಿಯನ್ನೂ ಕೊಡದೆ ಏಕಪಕ್ಷೀಯವಾಗಿ ಹೊರ ಹಾಕಿರುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದೆ.

ಬಿಜೆಪಿ ಮಹಾರಾಷ್ಟ್ರದ ವಿರುದ್ದ ಸೇಡು ತೀರಿಸಿಕೊಳ್ಳಲು ಮುಂದಾಗಿದೆ. ಹೀಗಾಗಿ ನಾವು ಸುಮ್ಮನೆ ಕೂರುವುದಿಲ್ಲ ಎಂದು ಸಾಮ್ನಾ ಸಂಪಾದಕೀಯ ತಿಳಿಸಿದೆ. ಬಿಜೆಪಿಯನ್ನು ಮೊಹಮದ್ ಘೋರಿ ವಂಶಕ್ಕೆ ಹೋಲಿಸಿರುವ ಶಿವಸೇನೆ, ನಾವು ತಿರುಗಿಬಿದ್ದರೆ ಬಿಜೆಪಿ ಇನ್ನಿಲ್ಲವಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಹಿಂದೆ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌವ್ಹಾಣ್ ತಪ್ಪು ಮಾಡಿ 17 ಬಾರಿ ಸೋಲನ್ನು ಅನುಭವಿಸಬೇಕಾಯಿತು. 18 ಬಾರಿ ಜೈಲಿಗೆ ಹೋಗಿಬಂದರು ಎಂಬುದನ್ನು ನೆನೆಪಿಸಿರುವ ಶಿವಸೇನೆ ಒಂದು ಶೋಕಾಸ್ ನೋಟಿಸ್ ನೀಡದೆ ತೆಗೆದುಹಾಕಿದ್ದು ಮುಂದಿನ ದಿನಗಳಲ್ಲಿ ಬಿಜೆಪಿ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...