Homeಕರ್ನಾಟಕಯಡ್ಡಿಯ ಗುಲಗಂಜಿಯೂ, ಕಟೀಲ್‌ರ ಪಿಟೀಲೂ....

ಯಡ್ಡಿಯ ಗುಲಗಂಜಿಯೂ, ಕಟೀಲ್‌ರ ಪಿಟೀಲೂ….

- Advertisement -
- Advertisement -

ನಮ್ಮಲ್ಲಿರುವುದು ಭಿನ್ನಮತ ಅಲ್ಲ, ಭಿನ್ನಾಭಿಪ್ರಾಯ ಮಾತ್ರ, ನಾವು ಎಲ್ಲರಿಗಿಂತ ಭಿನ್ನ ಎಂದವರ ಪಾಡು ಹತ್ತರೊಳಗೆ ಹನ್ನೊಂದು ಎಂಬಂತಾಗಿದೆ. ಯಾರಿಗಿಂತ ಭಿನ್ನವೆಂದು ಅಧಿಕಾರಕ್ಕೆ ಬಂದರೋ ಅವರಿಗಿಂತ ಕಡೆಯಾಗಿ ಹೋಗಿದ್ದಾರೆ. ಯಾರಿಗೆ ಗೊತ್ತು ಅಧಿಕಾರದ ಅಮಲು ಎಲ್ಲ ನಿಯಮಗಳನ್ನೂ ಗಾಳಿಗೆ ತೂರುತ್ತದೆ ಎಂದು. ಅಧಿಕಾರ ಉಂಡ ಮೇಲೆ ಯಯಾತಿಯಾಗಬೇಕು. ಮತ್ತೆಮತ್ತೆ ಯೌವ್ವನ ಬೇಕು. ಹೆಸರನ್ನೂ ಬದಲಾಯಿಸಬೇಕು. ಬೇರೊಬ್ಬರೊಂದಿಗೆ ವಿವಾಹವೂ ನಡೆಯಬೇಕು. ಇದೆಲ್ಲವೂ ಅಪೂರ್ಣಗೊಂಡಿರುವ ಕೆಲಸಗಳನ್ನು ಮುಗಿಸಲು. ಇದಕ್ಕಾಗಿ ಗದ್ದುಗೆ ಬೇಕು. ಗದ್ದುಗೆ ಪಡೆಯಲು ಯಾವ ಗದ್ದುಗೆಗೆ ಬೇಕಾದರೂ ಅಡ್ಡಬೀಳಲು ಸಿದ್ದ. ಇದು ರಾಜಕಾರಣಿಗಳು ಕಾರ್ಯವೈಖರಿ.

ನಾಲ್ಕನೇ ಬಾರಿ ಅಧಿಕಾರದ ಗದ್ದುಗೆ ಏರಿ ಕುಳಿತಿರುವ ಬಿ.ಎಸ್.ಯಡಿಯೂರಪ್ಪ ಚಿಗುರು ಮೀಸೆಯ ತೋಳ್ಬಲದ ಯುವಕನಾಗಬೇಕು. ಅವರ ಅಧಿಕಾರದ ಅವಧಿಯಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ನೀಡುವುದು, ಸೈಕಲ್ ನೀಡಿದ್ದು ಬಿಟ್ಟರೆ ಬೇರೇನೂ ಕೆಲಸಗಳು ಆಗಲಿಲ್ಲ. ಕೆಲಸ ಮಾಡಲು ಮನಸ್ಸು ಇರಲಿಲ್ಲವೋ? ಅಥವಾ ಕೆಲಸಕ್ಕೆ ಕೊಕ್ಕೆ ಇಕ್ಕಿದರೂ, ಭಿನ್ನಮತ ಕಾರಣವೋ ಅಂತು ಬಸ್ ಹತ್ತಿ ಇಳಿದು ಮತ್ತೆ ಹತ್ತಿದ್ದಾರೆ. ಜನರ ನೋವಿಗೆ ಮಿಡಿವ ಪ್ರಾಣಮಿತ್ರನಾದರೆ, ಜನಪರ ಕೆಲಸಕ್ಕೆ ಬದ್ದನಾಗಿದ್ದರೆ ಹತ್ತು ಸಲ ಮುಖ್ಯಮಂತ್ರಿಯಾದರೂ ಯಾರ ಅಭ್ಯಂತರವೂ ಇಲ್ಲ. ಆದರೆ ಅಧಿಕಾರದ ಲಾಲಸೆಗೆ ಹುದ್ದೆ ಏರಿದರೆ ಅದರಿಂದ ಜನರಿಗಾದ ಪ್ರಯೋಜನವೇನು ಅಲ್ಲವೇ?

ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಭರಪೂರ ಟೀಕಿಸುತ್ತಿದ್ದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರ ಸ್ವಾಮಿ ಸರ್ಕಾರ ಟೇಕ್ ಆಫ್ ಆಗಿಲ್ಲ ಎಂದು ಜರಿದರು. ರಾಜ್ಯದ ಉದ್ದಗಲಕ್ಕೂ ಸಂಚರಿಸುವುದಾಗಿ ಹೇಳಿದರು. ಹೇಳಿದಂತೆ ನಡೆದುಕೊಂಡರು. ರಾಜ್ಯದಲ್ಲಿ ಬರ ಆವರಿಸಿ ಜನ ತತ್ತರಿಸಿ ಹೋಗಿದ್ದಾರೆ ಎಂದು ಬೊಬ್ಬೆ ಹೊಡೆದರು. ಕೆಲವೆಡೆ ಏಕಾಂಗಿಯಾಗಿ ಮತ್ತೆ ಕೆಲವೆಡೆ ಪರಿವಾರ ಸಮೇತ ಹೋಗಿ ಜನರ ಗಮನ ಸೆಳೆಯುವ ಕೆಲಸ ಮಾಡಿದರು. ಜೊತೆಯಲ್ಲಿದ್ದವರು ಶೋಭಾ ಕರಂದ್ಲಾಜೆ, ಜಿ.ಎಸ್.ಬಸವರಾಜು, ಬಸವರಾಜ ಬೊಮ್ಮಾಯಿ, ಅದೇ ಉಮೇಶ್ ಕತ್ತಿ. ಒಳಗೊಳಗೆ ಚಕ್ರವ್ಯೂಹವನ್ನು ರಚಿಸಿದರು. ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ರಾಜಿನಾಮೆ ಕೊಡಿಸಿದರು. ಇದರಲ್ಲಿ ನಮ್ಮ ಪಾತ್ರವಿಲ್ಲ ಎಂದು ತಿಪ್ಪೆಯನ್ನು ಸಾರಿಸಿದರು. ಕೊನೆಯದಾಗಿ ಮುಖ್ಯಮಂತ್ರಿಯೂ ಆದರು.

ಈಗ ಕಾಲ ಬದಲಾಗಿದೆ. 105 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಕರ್ನಾಟಕದ ಅಧಿಕಾರದ ಗದ್ದುಗೆ ಹಿಡಿದಿದೆ. ಹಠಕ್ಕೆ ಬಿದ್ದಂತೆ ಯಡಿಯೂರಪ್ಪ ಮುಖ್ಯಮಂತ್ರಿಯು ಆಗಿದ್ದಾರೆ. ಆದರೆ ಏನು ಬಂತು. ಕಷ್ಟಕ್ಕೆ ಆಗದವನು ನಂಟನಲ್ಲ, ಊಟಕ್ಕೆ ಇಲ್ಲದ ಉಪ್ಪಿನಕಾಯಿ ಮತ್ಯಾಕೆ.. ಎನ್ನುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದ ಸುಮಾರು 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿದು ಜನರು ಮನೆ-ಮಠ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ್ದ, ಫಸಲಿಗೆ ಬಂದಿದ್ದ ಬೆಳೆಯೆಲ್ಲವೂ ನೀರು ಪಾಲಾಗಿದೆ. ಮನೆಯಲ್ಲಿ ಕಾಗದ ಪತ್ರಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಮಳೆಯಲ್ಲಿ ಇರಲು ಜಾಗವಿಲ್ಲದೆ ಜನರ ಸಿಟ್ಟನ್ನು ಹೊರ ಹಾಕುತ್ತಿದ್ದರೂ ಯಡಿಯೂರಪ್ಪ ಅತ್ತ ತಲೆಯೂ ಹಾಕದೆ ಮೌನಕ್ಕೆ ಶರಣಾಗಿದ್ದಾರೆ. ಉತ್ತರ ಕರ್ನಾಟಕದ ಜನರ ಏನಾಗಿದ್ದಾರೆ ಎಂದು ನೋಡುತ್ತಲೂ ಇಲ್ಲ.

ಹಿಂದಿನ ಸರ್ಕಾರವನ್ನು ಟೀಕಿಸುತ್ತಿದ್ದ ಯಡಿಯೂರಪ್ಪ ಬರಪರಿಹಾರ ನೀಡಲಿಲ್ಲವೆಂದು ಅಕ್ರೋಶಭರಿತರಾದರು. ತಾನೇ ಅಧಿಕಾರಕ್ಕೆ ಏರಿದಾಗ ಅದೇ ಆಕ್ರೋಶದ ಮಾತುಗಳಲ್ಲಿ ಕೇಂದ್ರಕ್ಕೆ ಪರಿಹಾರ ಬಿಡುಗಡೆ ಮಾಡುವಂತೆ ಕೇಳಬಹುದಿಲ್ಲವೇ? ಅದು ಮಾಡಲಿಲ್ಲ. ದೆಹಲಿಗೆ ಎರಡು ಬಾರಿ ಹೋಗಿ ಬಂದು ನಾಟಕ ಮಾಡಿದರು. ಯಡಿಯೂರಪ್ಪನವರಿಗೆ ಹೈಕಮಾಂಡ್ ನಾಯಕರು ಕ್ಯಾರೆ ಅಂದರೋ ಬಿಟ್ಟರೋ! ಪರಿಹಾರವಂತು ಬರಲಿಲ್ಲ. 25 ಸಂಸದರು ಕೂಡ ತುಟಿ ಎರಡು ಮಾಡಲಿಲ್ಲ. ಬಿಜೆಪಿ ಅಧ್ಯಕ್ಷರೂ ನಾನು ಕರಾವಳಿಗೆ ಮಾತ್ರ ಎಂಬಂತೆ ವರ್ತಿಸಿದರು. ಮೀಡಿಯಾಗಳು ಯಡಿಯೂರಪ್ಪ, ಕಟೀಲ್ ನಡುವೆ ಹೊಂದಾಣಿಕೆ ಇಲ್ಲವೆಂಬಂತೆ ಬಿಂಬಿಸಿದವು. ಕೂಡಲೇ ಯಡಿಯೂಪ್ಪ ನನ್ನ ಮತ್ತು ಕಟೀಲು ನಡುವೆ ಗುಲಗಂಜಿಯಷ್ಟೂ ಭಿನ್ನಾಭಿಪ್ರಾಯಗಳಿಲ್ಲ ಎಂದು ತೇಪೆ ಹಚ್ಚುವ ಕೆಲಸ ಮಾಡಿದರು. ಅವರಿಗೆ ಇವರು ಮಣಿದರೋ ಇವರಿಗೆ ಅವರು ಮಣಿದರೋ ಅಂತು ಭಿನ್ನಮತದ ನಾಟಕ ಮಾತ್ರ ನಡೆಯುತ್ತಿದೆ.

‘ಗುಲಗಂಜಿ ಎಷ್ಟೇ ಕೆಂಪಗಿದ್ದರೂ ಅದರ ತಿಕ ಮಾತ್ರ ಕಪ್ಪು’ ಎಂಬಂತೆ ಬಿಜೆಪಿ ಭಿನ್ನರಾಗ ಹಾಡುತ್ತಲೇ ಬರುತ್ತಿದೆ. ಪೀಟಿಲು ಕೊಯ್ಯುತ್ತಲೇ ಇದೆ. ಆದರೆ ಜನರ ಸಮಸ್ಯೆಗಳು ಮಾತ್ರ ಬಗೆಹರಿದಿಲ್ಲ. ಜನ ನರಳುತ್ತಲೇ ಇದ್ದಾರೆ. ಉತ್ತರದ ಕೂಗು ಸೊರಗುತ್ತಿದೆ. ಪರಿಹಾರದ ಕನಸು ಗಗನ ಕುಸಮವೆಂದು ಜನ ಭಾವಿಸಿದ್ದರೆ, ಯಡಿಯೂರಪ್ಪ, 25 ಸಂಸದರು ಬಾಯಿ ಬಿಡದಂತೆ ಕೇಂದ್ರದ ಪರಿಹಾರಕ್ಕಾಗಿ ಭಿಕ್ಷೆ ಬೇಡಿ ನಿಂತುಕೊಳ್ಳುವಂತಹ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್- ಜೆಡಿಎಸ್ ಒಮ್ಮೊಮ್ಮೆ ಸದ್ದು ಮಾಡುತ್ತಾ ಮೌನಕ್ಕೆ ಶರಣಾಗಿವೆ. ಯಡಿಯೂರಪ್ಪ ಅವರ ಶೌರ್ಯ ವಿರೋಧ ಪಕ್ಷದಲ್ಲಿದ್ದಾಗ ಎಂದು ವಿರೋಧಿಗಳು ಗಹಗಹಿಸಿ ನಗುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...