Homeಕರ್ನಾಟಕಯಡ್ಡಿಯ ಗುಲಗಂಜಿಯೂ, ಕಟೀಲ್‌ರ ಪಿಟೀಲೂ....

ಯಡ್ಡಿಯ ಗುಲಗಂಜಿಯೂ, ಕಟೀಲ್‌ರ ಪಿಟೀಲೂ….

- Advertisement -
- Advertisement -

ನಮ್ಮಲ್ಲಿರುವುದು ಭಿನ್ನಮತ ಅಲ್ಲ, ಭಿನ್ನಾಭಿಪ್ರಾಯ ಮಾತ್ರ, ನಾವು ಎಲ್ಲರಿಗಿಂತ ಭಿನ್ನ ಎಂದವರ ಪಾಡು ಹತ್ತರೊಳಗೆ ಹನ್ನೊಂದು ಎಂಬಂತಾಗಿದೆ. ಯಾರಿಗಿಂತ ಭಿನ್ನವೆಂದು ಅಧಿಕಾರಕ್ಕೆ ಬಂದರೋ ಅವರಿಗಿಂತ ಕಡೆಯಾಗಿ ಹೋಗಿದ್ದಾರೆ. ಯಾರಿಗೆ ಗೊತ್ತು ಅಧಿಕಾರದ ಅಮಲು ಎಲ್ಲ ನಿಯಮಗಳನ್ನೂ ಗಾಳಿಗೆ ತೂರುತ್ತದೆ ಎಂದು. ಅಧಿಕಾರ ಉಂಡ ಮೇಲೆ ಯಯಾತಿಯಾಗಬೇಕು. ಮತ್ತೆಮತ್ತೆ ಯೌವ್ವನ ಬೇಕು. ಹೆಸರನ್ನೂ ಬದಲಾಯಿಸಬೇಕು. ಬೇರೊಬ್ಬರೊಂದಿಗೆ ವಿವಾಹವೂ ನಡೆಯಬೇಕು. ಇದೆಲ್ಲವೂ ಅಪೂರ್ಣಗೊಂಡಿರುವ ಕೆಲಸಗಳನ್ನು ಮುಗಿಸಲು. ಇದಕ್ಕಾಗಿ ಗದ್ದುಗೆ ಬೇಕು. ಗದ್ದುಗೆ ಪಡೆಯಲು ಯಾವ ಗದ್ದುಗೆಗೆ ಬೇಕಾದರೂ ಅಡ್ಡಬೀಳಲು ಸಿದ್ದ. ಇದು ರಾಜಕಾರಣಿಗಳು ಕಾರ್ಯವೈಖರಿ.

ನಾಲ್ಕನೇ ಬಾರಿ ಅಧಿಕಾರದ ಗದ್ದುಗೆ ಏರಿ ಕುಳಿತಿರುವ ಬಿ.ಎಸ್.ಯಡಿಯೂರಪ್ಪ ಚಿಗುರು ಮೀಸೆಯ ತೋಳ್ಬಲದ ಯುವಕನಾಗಬೇಕು. ಅವರ ಅಧಿಕಾರದ ಅವಧಿಯಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ನೀಡುವುದು, ಸೈಕಲ್ ನೀಡಿದ್ದು ಬಿಟ್ಟರೆ ಬೇರೇನೂ ಕೆಲಸಗಳು ಆಗಲಿಲ್ಲ. ಕೆಲಸ ಮಾಡಲು ಮನಸ್ಸು ಇರಲಿಲ್ಲವೋ? ಅಥವಾ ಕೆಲಸಕ್ಕೆ ಕೊಕ್ಕೆ ಇಕ್ಕಿದರೂ, ಭಿನ್ನಮತ ಕಾರಣವೋ ಅಂತು ಬಸ್ ಹತ್ತಿ ಇಳಿದು ಮತ್ತೆ ಹತ್ತಿದ್ದಾರೆ. ಜನರ ನೋವಿಗೆ ಮಿಡಿವ ಪ್ರಾಣಮಿತ್ರನಾದರೆ, ಜನಪರ ಕೆಲಸಕ್ಕೆ ಬದ್ದನಾಗಿದ್ದರೆ ಹತ್ತು ಸಲ ಮುಖ್ಯಮಂತ್ರಿಯಾದರೂ ಯಾರ ಅಭ್ಯಂತರವೂ ಇಲ್ಲ. ಆದರೆ ಅಧಿಕಾರದ ಲಾಲಸೆಗೆ ಹುದ್ದೆ ಏರಿದರೆ ಅದರಿಂದ ಜನರಿಗಾದ ಪ್ರಯೋಜನವೇನು ಅಲ್ಲವೇ?

ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಭರಪೂರ ಟೀಕಿಸುತ್ತಿದ್ದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರ ಸ್ವಾಮಿ ಸರ್ಕಾರ ಟೇಕ್ ಆಫ್ ಆಗಿಲ್ಲ ಎಂದು ಜರಿದರು. ರಾಜ್ಯದ ಉದ್ದಗಲಕ್ಕೂ ಸಂಚರಿಸುವುದಾಗಿ ಹೇಳಿದರು. ಹೇಳಿದಂತೆ ನಡೆದುಕೊಂಡರು. ರಾಜ್ಯದಲ್ಲಿ ಬರ ಆವರಿಸಿ ಜನ ತತ್ತರಿಸಿ ಹೋಗಿದ್ದಾರೆ ಎಂದು ಬೊಬ್ಬೆ ಹೊಡೆದರು. ಕೆಲವೆಡೆ ಏಕಾಂಗಿಯಾಗಿ ಮತ್ತೆ ಕೆಲವೆಡೆ ಪರಿವಾರ ಸಮೇತ ಹೋಗಿ ಜನರ ಗಮನ ಸೆಳೆಯುವ ಕೆಲಸ ಮಾಡಿದರು. ಜೊತೆಯಲ್ಲಿದ್ದವರು ಶೋಭಾ ಕರಂದ್ಲಾಜೆ, ಜಿ.ಎಸ್.ಬಸವರಾಜು, ಬಸವರಾಜ ಬೊಮ್ಮಾಯಿ, ಅದೇ ಉಮೇಶ್ ಕತ್ತಿ. ಒಳಗೊಳಗೆ ಚಕ್ರವ್ಯೂಹವನ್ನು ರಚಿಸಿದರು. ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ರಾಜಿನಾಮೆ ಕೊಡಿಸಿದರು. ಇದರಲ್ಲಿ ನಮ್ಮ ಪಾತ್ರವಿಲ್ಲ ಎಂದು ತಿಪ್ಪೆಯನ್ನು ಸಾರಿಸಿದರು. ಕೊನೆಯದಾಗಿ ಮುಖ್ಯಮಂತ್ರಿಯೂ ಆದರು.

ಈಗ ಕಾಲ ಬದಲಾಗಿದೆ. 105 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಕರ್ನಾಟಕದ ಅಧಿಕಾರದ ಗದ್ದುಗೆ ಹಿಡಿದಿದೆ. ಹಠಕ್ಕೆ ಬಿದ್ದಂತೆ ಯಡಿಯೂರಪ್ಪ ಮುಖ್ಯಮಂತ್ರಿಯು ಆಗಿದ್ದಾರೆ. ಆದರೆ ಏನು ಬಂತು. ಕಷ್ಟಕ್ಕೆ ಆಗದವನು ನಂಟನಲ್ಲ, ಊಟಕ್ಕೆ ಇಲ್ಲದ ಉಪ್ಪಿನಕಾಯಿ ಮತ್ಯಾಕೆ.. ಎನ್ನುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದ ಸುಮಾರು 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿದು ಜನರು ಮನೆ-ಮಠ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ್ದ, ಫಸಲಿಗೆ ಬಂದಿದ್ದ ಬೆಳೆಯೆಲ್ಲವೂ ನೀರು ಪಾಲಾಗಿದೆ. ಮನೆಯಲ್ಲಿ ಕಾಗದ ಪತ್ರಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಮಳೆಯಲ್ಲಿ ಇರಲು ಜಾಗವಿಲ್ಲದೆ ಜನರ ಸಿಟ್ಟನ್ನು ಹೊರ ಹಾಕುತ್ತಿದ್ದರೂ ಯಡಿಯೂರಪ್ಪ ಅತ್ತ ತಲೆಯೂ ಹಾಕದೆ ಮೌನಕ್ಕೆ ಶರಣಾಗಿದ್ದಾರೆ. ಉತ್ತರ ಕರ್ನಾಟಕದ ಜನರ ಏನಾಗಿದ್ದಾರೆ ಎಂದು ನೋಡುತ್ತಲೂ ಇಲ್ಲ.

ಹಿಂದಿನ ಸರ್ಕಾರವನ್ನು ಟೀಕಿಸುತ್ತಿದ್ದ ಯಡಿಯೂರಪ್ಪ ಬರಪರಿಹಾರ ನೀಡಲಿಲ್ಲವೆಂದು ಅಕ್ರೋಶಭರಿತರಾದರು. ತಾನೇ ಅಧಿಕಾರಕ್ಕೆ ಏರಿದಾಗ ಅದೇ ಆಕ್ರೋಶದ ಮಾತುಗಳಲ್ಲಿ ಕೇಂದ್ರಕ್ಕೆ ಪರಿಹಾರ ಬಿಡುಗಡೆ ಮಾಡುವಂತೆ ಕೇಳಬಹುದಿಲ್ಲವೇ? ಅದು ಮಾಡಲಿಲ್ಲ. ದೆಹಲಿಗೆ ಎರಡು ಬಾರಿ ಹೋಗಿ ಬಂದು ನಾಟಕ ಮಾಡಿದರು. ಯಡಿಯೂರಪ್ಪನವರಿಗೆ ಹೈಕಮಾಂಡ್ ನಾಯಕರು ಕ್ಯಾರೆ ಅಂದರೋ ಬಿಟ್ಟರೋ! ಪರಿಹಾರವಂತು ಬರಲಿಲ್ಲ. 25 ಸಂಸದರು ಕೂಡ ತುಟಿ ಎರಡು ಮಾಡಲಿಲ್ಲ. ಬಿಜೆಪಿ ಅಧ್ಯಕ್ಷರೂ ನಾನು ಕರಾವಳಿಗೆ ಮಾತ್ರ ಎಂಬಂತೆ ವರ್ತಿಸಿದರು. ಮೀಡಿಯಾಗಳು ಯಡಿಯೂರಪ್ಪ, ಕಟೀಲ್ ನಡುವೆ ಹೊಂದಾಣಿಕೆ ಇಲ್ಲವೆಂಬಂತೆ ಬಿಂಬಿಸಿದವು. ಕೂಡಲೇ ಯಡಿಯೂಪ್ಪ ನನ್ನ ಮತ್ತು ಕಟೀಲು ನಡುವೆ ಗುಲಗಂಜಿಯಷ್ಟೂ ಭಿನ್ನಾಭಿಪ್ರಾಯಗಳಿಲ್ಲ ಎಂದು ತೇಪೆ ಹಚ್ಚುವ ಕೆಲಸ ಮಾಡಿದರು. ಅವರಿಗೆ ಇವರು ಮಣಿದರೋ ಇವರಿಗೆ ಅವರು ಮಣಿದರೋ ಅಂತು ಭಿನ್ನಮತದ ನಾಟಕ ಮಾತ್ರ ನಡೆಯುತ್ತಿದೆ.

‘ಗುಲಗಂಜಿ ಎಷ್ಟೇ ಕೆಂಪಗಿದ್ದರೂ ಅದರ ತಿಕ ಮಾತ್ರ ಕಪ್ಪು’ ಎಂಬಂತೆ ಬಿಜೆಪಿ ಭಿನ್ನರಾಗ ಹಾಡುತ್ತಲೇ ಬರುತ್ತಿದೆ. ಪೀಟಿಲು ಕೊಯ್ಯುತ್ತಲೇ ಇದೆ. ಆದರೆ ಜನರ ಸಮಸ್ಯೆಗಳು ಮಾತ್ರ ಬಗೆಹರಿದಿಲ್ಲ. ಜನ ನರಳುತ್ತಲೇ ಇದ್ದಾರೆ. ಉತ್ತರದ ಕೂಗು ಸೊರಗುತ್ತಿದೆ. ಪರಿಹಾರದ ಕನಸು ಗಗನ ಕುಸಮವೆಂದು ಜನ ಭಾವಿಸಿದ್ದರೆ, ಯಡಿಯೂರಪ್ಪ, 25 ಸಂಸದರು ಬಾಯಿ ಬಿಡದಂತೆ ಕೇಂದ್ರದ ಪರಿಹಾರಕ್ಕಾಗಿ ಭಿಕ್ಷೆ ಬೇಡಿ ನಿಂತುಕೊಳ್ಳುವಂತಹ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್- ಜೆಡಿಎಸ್ ಒಮ್ಮೊಮ್ಮೆ ಸದ್ದು ಮಾಡುತ್ತಾ ಮೌನಕ್ಕೆ ಶರಣಾಗಿವೆ. ಯಡಿಯೂರಪ್ಪ ಅವರ ಶೌರ್ಯ ವಿರೋಧ ಪಕ್ಷದಲ್ಲಿದ್ದಾಗ ಎಂದು ವಿರೋಧಿಗಳು ಗಹಗಹಿಸಿ ನಗುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...