Homeಕರ್ನಾಟಕಯಡ್ಡಿಯ ಗುಲಗಂಜಿಯೂ, ಕಟೀಲ್‌ರ ಪಿಟೀಲೂ....

ಯಡ್ಡಿಯ ಗುಲಗಂಜಿಯೂ, ಕಟೀಲ್‌ರ ಪಿಟೀಲೂ….

- Advertisement -
- Advertisement -

ನಮ್ಮಲ್ಲಿರುವುದು ಭಿನ್ನಮತ ಅಲ್ಲ, ಭಿನ್ನಾಭಿಪ್ರಾಯ ಮಾತ್ರ, ನಾವು ಎಲ್ಲರಿಗಿಂತ ಭಿನ್ನ ಎಂದವರ ಪಾಡು ಹತ್ತರೊಳಗೆ ಹನ್ನೊಂದು ಎಂಬಂತಾಗಿದೆ. ಯಾರಿಗಿಂತ ಭಿನ್ನವೆಂದು ಅಧಿಕಾರಕ್ಕೆ ಬಂದರೋ ಅವರಿಗಿಂತ ಕಡೆಯಾಗಿ ಹೋಗಿದ್ದಾರೆ. ಯಾರಿಗೆ ಗೊತ್ತು ಅಧಿಕಾರದ ಅಮಲು ಎಲ್ಲ ನಿಯಮಗಳನ್ನೂ ಗಾಳಿಗೆ ತೂರುತ್ತದೆ ಎಂದು. ಅಧಿಕಾರ ಉಂಡ ಮೇಲೆ ಯಯಾತಿಯಾಗಬೇಕು. ಮತ್ತೆಮತ್ತೆ ಯೌವ್ವನ ಬೇಕು. ಹೆಸರನ್ನೂ ಬದಲಾಯಿಸಬೇಕು. ಬೇರೊಬ್ಬರೊಂದಿಗೆ ವಿವಾಹವೂ ನಡೆಯಬೇಕು. ಇದೆಲ್ಲವೂ ಅಪೂರ್ಣಗೊಂಡಿರುವ ಕೆಲಸಗಳನ್ನು ಮುಗಿಸಲು. ಇದಕ್ಕಾಗಿ ಗದ್ದುಗೆ ಬೇಕು. ಗದ್ದುಗೆ ಪಡೆಯಲು ಯಾವ ಗದ್ದುಗೆಗೆ ಬೇಕಾದರೂ ಅಡ್ಡಬೀಳಲು ಸಿದ್ದ. ಇದು ರಾಜಕಾರಣಿಗಳು ಕಾರ್ಯವೈಖರಿ.

ನಾಲ್ಕನೇ ಬಾರಿ ಅಧಿಕಾರದ ಗದ್ದುಗೆ ಏರಿ ಕುಳಿತಿರುವ ಬಿ.ಎಸ್.ಯಡಿಯೂರಪ್ಪ ಚಿಗುರು ಮೀಸೆಯ ತೋಳ್ಬಲದ ಯುವಕನಾಗಬೇಕು. ಅವರ ಅಧಿಕಾರದ ಅವಧಿಯಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ನೀಡುವುದು, ಸೈಕಲ್ ನೀಡಿದ್ದು ಬಿಟ್ಟರೆ ಬೇರೇನೂ ಕೆಲಸಗಳು ಆಗಲಿಲ್ಲ. ಕೆಲಸ ಮಾಡಲು ಮನಸ್ಸು ಇರಲಿಲ್ಲವೋ? ಅಥವಾ ಕೆಲಸಕ್ಕೆ ಕೊಕ್ಕೆ ಇಕ್ಕಿದರೂ, ಭಿನ್ನಮತ ಕಾರಣವೋ ಅಂತು ಬಸ್ ಹತ್ತಿ ಇಳಿದು ಮತ್ತೆ ಹತ್ತಿದ್ದಾರೆ. ಜನರ ನೋವಿಗೆ ಮಿಡಿವ ಪ್ರಾಣಮಿತ್ರನಾದರೆ, ಜನಪರ ಕೆಲಸಕ್ಕೆ ಬದ್ದನಾಗಿದ್ದರೆ ಹತ್ತು ಸಲ ಮುಖ್ಯಮಂತ್ರಿಯಾದರೂ ಯಾರ ಅಭ್ಯಂತರವೂ ಇಲ್ಲ. ಆದರೆ ಅಧಿಕಾರದ ಲಾಲಸೆಗೆ ಹುದ್ದೆ ಏರಿದರೆ ಅದರಿಂದ ಜನರಿಗಾದ ಪ್ರಯೋಜನವೇನು ಅಲ್ಲವೇ?

ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಭರಪೂರ ಟೀಕಿಸುತ್ತಿದ್ದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರ ಸ್ವಾಮಿ ಸರ್ಕಾರ ಟೇಕ್ ಆಫ್ ಆಗಿಲ್ಲ ಎಂದು ಜರಿದರು. ರಾಜ್ಯದ ಉದ್ದಗಲಕ್ಕೂ ಸಂಚರಿಸುವುದಾಗಿ ಹೇಳಿದರು. ಹೇಳಿದಂತೆ ನಡೆದುಕೊಂಡರು. ರಾಜ್ಯದಲ್ಲಿ ಬರ ಆವರಿಸಿ ಜನ ತತ್ತರಿಸಿ ಹೋಗಿದ್ದಾರೆ ಎಂದು ಬೊಬ್ಬೆ ಹೊಡೆದರು. ಕೆಲವೆಡೆ ಏಕಾಂಗಿಯಾಗಿ ಮತ್ತೆ ಕೆಲವೆಡೆ ಪರಿವಾರ ಸಮೇತ ಹೋಗಿ ಜನರ ಗಮನ ಸೆಳೆಯುವ ಕೆಲಸ ಮಾಡಿದರು. ಜೊತೆಯಲ್ಲಿದ್ದವರು ಶೋಭಾ ಕರಂದ್ಲಾಜೆ, ಜಿ.ಎಸ್.ಬಸವರಾಜು, ಬಸವರಾಜ ಬೊಮ್ಮಾಯಿ, ಅದೇ ಉಮೇಶ್ ಕತ್ತಿ. ಒಳಗೊಳಗೆ ಚಕ್ರವ್ಯೂಹವನ್ನು ರಚಿಸಿದರು. ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ರಾಜಿನಾಮೆ ಕೊಡಿಸಿದರು. ಇದರಲ್ಲಿ ನಮ್ಮ ಪಾತ್ರವಿಲ್ಲ ಎಂದು ತಿಪ್ಪೆಯನ್ನು ಸಾರಿಸಿದರು. ಕೊನೆಯದಾಗಿ ಮುಖ್ಯಮಂತ್ರಿಯೂ ಆದರು.

ಈಗ ಕಾಲ ಬದಲಾಗಿದೆ. 105 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಕರ್ನಾಟಕದ ಅಧಿಕಾರದ ಗದ್ದುಗೆ ಹಿಡಿದಿದೆ. ಹಠಕ್ಕೆ ಬಿದ್ದಂತೆ ಯಡಿಯೂರಪ್ಪ ಮುಖ್ಯಮಂತ್ರಿಯು ಆಗಿದ್ದಾರೆ. ಆದರೆ ಏನು ಬಂತು. ಕಷ್ಟಕ್ಕೆ ಆಗದವನು ನಂಟನಲ್ಲ, ಊಟಕ್ಕೆ ಇಲ್ಲದ ಉಪ್ಪಿನಕಾಯಿ ಮತ್ಯಾಕೆ.. ಎನ್ನುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದ ಸುಮಾರು 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿದು ಜನರು ಮನೆ-ಮಠ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ್ದ, ಫಸಲಿಗೆ ಬಂದಿದ್ದ ಬೆಳೆಯೆಲ್ಲವೂ ನೀರು ಪಾಲಾಗಿದೆ. ಮನೆಯಲ್ಲಿ ಕಾಗದ ಪತ್ರಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಮಳೆಯಲ್ಲಿ ಇರಲು ಜಾಗವಿಲ್ಲದೆ ಜನರ ಸಿಟ್ಟನ್ನು ಹೊರ ಹಾಕುತ್ತಿದ್ದರೂ ಯಡಿಯೂರಪ್ಪ ಅತ್ತ ತಲೆಯೂ ಹಾಕದೆ ಮೌನಕ್ಕೆ ಶರಣಾಗಿದ್ದಾರೆ. ಉತ್ತರ ಕರ್ನಾಟಕದ ಜನರ ಏನಾಗಿದ್ದಾರೆ ಎಂದು ನೋಡುತ್ತಲೂ ಇಲ್ಲ.

ಹಿಂದಿನ ಸರ್ಕಾರವನ್ನು ಟೀಕಿಸುತ್ತಿದ್ದ ಯಡಿಯೂರಪ್ಪ ಬರಪರಿಹಾರ ನೀಡಲಿಲ್ಲವೆಂದು ಅಕ್ರೋಶಭರಿತರಾದರು. ತಾನೇ ಅಧಿಕಾರಕ್ಕೆ ಏರಿದಾಗ ಅದೇ ಆಕ್ರೋಶದ ಮಾತುಗಳಲ್ಲಿ ಕೇಂದ್ರಕ್ಕೆ ಪರಿಹಾರ ಬಿಡುಗಡೆ ಮಾಡುವಂತೆ ಕೇಳಬಹುದಿಲ್ಲವೇ? ಅದು ಮಾಡಲಿಲ್ಲ. ದೆಹಲಿಗೆ ಎರಡು ಬಾರಿ ಹೋಗಿ ಬಂದು ನಾಟಕ ಮಾಡಿದರು. ಯಡಿಯೂರಪ್ಪನವರಿಗೆ ಹೈಕಮಾಂಡ್ ನಾಯಕರು ಕ್ಯಾರೆ ಅಂದರೋ ಬಿಟ್ಟರೋ! ಪರಿಹಾರವಂತು ಬರಲಿಲ್ಲ. 25 ಸಂಸದರು ಕೂಡ ತುಟಿ ಎರಡು ಮಾಡಲಿಲ್ಲ. ಬಿಜೆಪಿ ಅಧ್ಯಕ್ಷರೂ ನಾನು ಕರಾವಳಿಗೆ ಮಾತ್ರ ಎಂಬಂತೆ ವರ್ತಿಸಿದರು. ಮೀಡಿಯಾಗಳು ಯಡಿಯೂರಪ್ಪ, ಕಟೀಲ್ ನಡುವೆ ಹೊಂದಾಣಿಕೆ ಇಲ್ಲವೆಂಬಂತೆ ಬಿಂಬಿಸಿದವು. ಕೂಡಲೇ ಯಡಿಯೂಪ್ಪ ನನ್ನ ಮತ್ತು ಕಟೀಲು ನಡುವೆ ಗುಲಗಂಜಿಯಷ್ಟೂ ಭಿನ್ನಾಭಿಪ್ರಾಯಗಳಿಲ್ಲ ಎಂದು ತೇಪೆ ಹಚ್ಚುವ ಕೆಲಸ ಮಾಡಿದರು. ಅವರಿಗೆ ಇವರು ಮಣಿದರೋ ಇವರಿಗೆ ಅವರು ಮಣಿದರೋ ಅಂತು ಭಿನ್ನಮತದ ನಾಟಕ ಮಾತ್ರ ನಡೆಯುತ್ತಿದೆ.

‘ಗುಲಗಂಜಿ ಎಷ್ಟೇ ಕೆಂಪಗಿದ್ದರೂ ಅದರ ತಿಕ ಮಾತ್ರ ಕಪ್ಪು’ ಎಂಬಂತೆ ಬಿಜೆಪಿ ಭಿನ್ನರಾಗ ಹಾಡುತ್ತಲೇ ಬರುತ್ತಿದೆ. ಪೀಟಿಲು ಕೊಯ್ಯುತ್ತಲೇ ಇದೆ. ಆದರೆ ಜನರ ಸಮಸ್ಯೆಗಳು ಮಾತ್ರ ಬಗೆಹರಿದಿಲ್ಲ. ಜನ ನರಳುತ್ತಲೇ ಇದ್ದಾರೆ. ಉತ್ತರದ ಕೂಗು ಸೊರಗುತ್ತಿದೆ. ಪರಿಹಾರದ ಕನಸು ಗಗನ ಕುಸಮವೆಂದು ಜನ ಭಾವಿಸಿದ್ದರೆ, ಯಡಿಯೂರಪ್ಪ, 25 ಸಂಸದರು ಬಾಯಿ ಬಿಡದಂತೆ ಕೇಂದ್ರದ ಪರಿಹಾರಕ್ಕಾಗಿ ಭಿಕ್ಷೆ ಬೇಡಿ ನಿಂತುಕೊಳ್ಳುವಂತಹ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್- ಜೆಡಿಎಸ್ ಒಮ್ಮೊಮ್ಮೆ ಸದ್ದು ಮಾಡುತ್ತಾ ಮೌನಕ್ಕೆ ಶರಣಾಗಿವೆ. ಯಡಿಯೂರಪ್ಪ ಅವರ ಶೌರ್ಯ ವಿರೋಧ ಪಕ್ಷದಲ್ಲಿದ್ದಾಗ ಎಂದು ವಿರೋಧಿಗಳು ಗಹಗಹಿಸಿ ನಗುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...