Homeಕರ್ನಾಟಕಯಡ್ಡಿಯ ಗುಲಗಂಜಿಯೂ, ಕಟೀಲ್‌ರ ಪಿಟೀಲೂ....

ಯಡ್ಡಿಯ ಗುಲಗಂಜಿಯೂ, ಕಟೀಲ್‌ರ ಪಿಟೀಲೂ….

- Advertisement -
- Advertisement -

ನಮ್ಮಲ್ಲಿರುವುದು ಭಿನ್ನಮತ ಅಲ್ಲ, ಭಿನ್ನಾಭಿಪ್ರಾಯ ಮಾತ್ರ, ನಾವು ಎಲ್ಲರಿಗಿಂತ ಭಿನ್ನ ಎಂದವರ ಪಾಡು ಹತ್ತರೊಳಗೆ ಹನ್ನೊಂದು ಎಂಬಂತಾಗಿದೆ. ಯಾರಿಗಿಂತ ಭಿನ್ನವೆಂದು ಅಧಿಕಾರಕ್ಕೆ ಬಂದರೋ ಅವರಿಗಿಂತ ಕಡೆಯಾಗಿ ಹೋಗಿದ್ದಾರೆ. ಯಾರಿಗೆ ಗೊತ್ತು ಅಧಿಕಾರದ ಅಮಲು ಎಲ್ಲ ನಿಯಮಗಳನ್ನೂ ಗಾಳಿಗೆ ತೂರುತ್ತದೆ ಎಂದು. ಅಧಿಕಾರ ಉಂಡ ಮೇಲೆ ಯಯಾತಿಯಾಗಬೇಕು. ಮತ್ತೆಮತ್ತೆ ಯೌವ್ವನ ಬೇಕು. ಹೆಸರನ್ನೂ ಬದಲಾಯಿಸಬೇಕು. ಬೇರೊಬ್ಬರೊಂದಿಗೆ ವಿವಾಹವೂ ನಡೆಯಬೇಕು. ಇದೆಲ್ಲವೂ ಅಪೂರ್ಣಗೊಂಡಿರುವ ಕೆಲಸಗಳನ್ನು ಮುಗಿಸಲು. ಇದಕ್ಕಾಗಿ ಗದ್ದುಗೆ ಬೇಕು. ಗದ್ದುಗೆ ಪಡೆಯಲು ಯಾವ ಗದ್ದುಗೆಗೆ ಬೇಕಾದರೂ ಅಡ್ಡಬೀಳಲು ಸಿದ್ದ. ಇದು ರಾಜಕಾರಣಿಗಳು ಕಾರ್ಯವೈಖರಿ.

ನಾಲ್ಕನೇ ಬಾರಿ ಅಧಿಕಾರದ ಗದ್ದುಗೆ ಏರಿ ಕುಳಿತಿರುವ ಬಿ.ಎಸ್.ಯಡಿಯೂರಪ್ಪ ಚಿಗುರು ಮೀಸೆಯ ತೋಳ್ಬಲದ ಯುವಕನಾಗಬೇಕು. ಅವರ ಅಧಿಕಾರದ ಅವಧಿಯಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ನೀಡುವುದು, ಸೈಕಲ್ ನೀಡಿದ್ದು ಬಿಟ್ಟರೆ ಬೇರೇನೂ ಕೆಲಸಗಳು ಆಗಲಿಲ್ಲ. ಕೆಲಸ ಮಾಡಲು ಮನಸ್ಸು ಇರಲಿಲ್ಲವೋ? ಅಥವಾ ಕೆಲಸಕ್ಕೆ ಕೊಕ್ಕೆ ಇಕ್ಕಿದರೂ, ಭಿನ್ನಮತ ಕಾರಣವೋ ಅಂತು ಬಸ್ ಹತ್ತಿ ಇಳಿದು ಮತ್ತೆ ಹತ್ತಿದ್ದಾರೆ. ಜನರ ನೋವಿಗೆ ಮಿಡಿವ ಪ್ರಾಣಮಿತ್ರನಾದರೆ, ಜನಪರ ಕೆಲಸಕ್ಕೆ ಬದ್ದನಾಗಿದ್ದರೆ ಹತ್ತು ಸಲ ಮುಖ್ಯಮಂತ್ರಿಯಾದರೂ ಯಾರ ಅಭ್ಯಂತರವೂ ಇಲ್ಲ. ಆದರೆ ಅಧಿಕಾರದ ಲಾಲಸೆಗೆ ಹುದ್ದೆ ಏರಿದರೆ ಅದರಿಂದ ಜನರಿಗಾದ ಪ್ರಯೋಜನವೇನು ಅಲ್ಲವೇ?

ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಭರಪೂರ ಟೀಕಿಸುತ್ತಿದ್ದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರ ಸ್ವಾಮಿ ಸರ್ಕಾರ ಟೇಕ್ ಆಫ್ ಆಗಿಲ್ಲ ಎಂದು ಜರಿದರು. ರಾಜ್ಯದ ಉದ್ದಗಲಕ್ಕೂ ಸಂಚರಿಸುವುದಾಗಿ ಹೇಳಿದರು. ಹೇಳಿದಂತೆ ನಡೆದುಕೊಂಡರು. ರಾಜ್ಯದಲ್ಲಿ ಬರ ಆವರಿಸಿ ಜನ ತತ್ತರಿಸಿ ಹೋಗಿದ್ದಾರೆ ಎಂದು ಬೊಬ್ಬೆ ಹೊಡೆದರು. ಕೆಲವೆಡೆ ಏಕಾಂಗಿಯಾಗಿ ಮತ್ತೆ ಕೆಲವೆಡೆ ಪರಿವಾರ ಸಮೇತ ಹೋಗಿ ಜನರ ಗಮನ ಸೆಳೆಯುವ ಕೆಲಸ ಮಾಡಿದರು. ಜೊತೆಯಲ್ಲಿದ್ದವರು ಶೋಭಾ ಕರಂದ್ಲಾಜೆ, ಜಿ.ಎಸ್.ಬಸವರಾಜು, ಬಸವರಾಜ ಬೊಮ್ಮಾಯಿ, ಅದೇ ಉಮೇಶ್ ಕತ್ತಿ. ಒಳಗೊಳಗೆ ಚಕ್ರವ್ಯೂಹವನ್ನು ರಚಿಸಿದರು. ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ರಾಜಿನಾಮೆ ಕೊಡಿಸಿದರು. ಇದರಲ್ಲಿ ನಮ್ಮ ಪಾತ್ರವಿಲ್ಲ ಎಂದು ತಿಪ್ಪೆಯನ್ನು ಸಾರಿಸಿದರು. ಕೊನೆಯದಾಗಿ ಮುಖ್ಯಮಂತ್ರಿಯೂ ಆದರು.

ಈಗ ಕಾಲ ಬದಲಾಗಿದೆ. 105 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಕರ್ನಾಟಕದ ಅಧಿಕಾರದ ಗದ್ದುಗೆ ಹಿಡಿದಿದೆ. ಹಠಕ್ಕೆ ಬಿದ್ದಂತೆ ಯಡಿಯೂರಪ್ಪ ಮುಖ್ಯಮಂತ್ರಿಯು ಆಗಿದ್ದಾರೆ. ಆದರೆ ಏನು ಬಂತು. ಕಷ್ಟಕ್ಕೆ ಆಗದವನು ನಂಟನಲ್ಲ, ಊಟಕ್ಕೆ ಇಲ್ಲದ ಉಪ್ಪಿನಕಾಯಿ ಮತ್ಯಾಕೆ.. ಎನ್ನುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದ ಸುಮಾರು 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿದು ಜನರು ಮನೆ-ಮಠ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ್ದ, ಫಸಲಿಗೆ ಬಂದಿದ್ದ ಬೆಳೆಯೆಲ್ಲವೂ ನೀರು ಪಾಲಾಗಿದೆ. ಮನೆಯಲ್ಲಿ ಕಾಗದ ಪತ್ರಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಮಳೆಯಲ್ಲಿ ಇರಲು ಜಾಗವಿಲ್ಲದೆ ಜನರ ಸಿಟ್ಟನ್ನು ಹೊರ ಹಾಕುತ್ತಿದ್ದರೂ ಯಡಿಯೂರಪ್ಪ ಅತ್ತ ತಲೆಯೂ ಹಾಕದೆ ಮೌನಕ್ಕೆ ಶರಣಾಗಿದ್ದಾರೆ. ಉತ್ತರ ಕರ್ನಾಟಕದ ಜನರ ಏನಾಗಿದ್ದಾರೆ ಎಂದು ನೋಡುತ್ತಲೂ ಇಲ್ಲ.

ಹಿಂದಿನ ಸರ್ಕಾರವನ್ನು ಟೀಕಿಸುತ್ತಿದ್ದ ಯಡಿಯೂರಪ್ಪ ಬರಪರಿಹಾರ ನೀಡಲಿಲ್ಲವೆಂದು ಅಕ್ರೋಶಭರಿತರಾದರು. ತಾನೇ ಅಧಿಕಾರಕ್ಕೆ ಏರಿದಾಗ ಅದೇ ಆಕ್ರೋಶದ ಮಾತುಗಳಲ್ಲಿ ಕೇಂದ್ರಕ್ಕೆ ಪರಿಹಾರ ಬಿಡುಗಡೆ ಮಾಡುವಂತೆ ಕೇಳಬಹುದಿಲ್ಲವೇ? ಅದು ಮಾಡಲಿಲ್ಲ. ದೆಹಲಿಗೆ ಎರಡು ಬಾರಿ ಹೋಗಿ ಬಂದು ನಾಟಕ ಮಾಡಿದರು. ಯಡಿಯೂರಪ್ಪನವರಿಗೆ ಹೈಕಮಾಂಡ್ ನಾಯಕರು ಕ್ಯಾರೆ ಅಂದರೋ ಬಿಟ್ಟರೋ! ಪರಿಹಾರವಂತು ಬರಲಿಲ್ಲ. 25 ಸಂಸದರು ಕೂಡ ತುಟಿ ಎರಡು ಮಾಡಲಿಲ್ಲ. ಬಿಜೆಪಿ ಅಧ್ಯಕ್ಷರೂ ನಾನು ಕರಾವಳಿಗೆ ಮಾತ್ರ ಎಂಬಂತೆ ವರ್ತಿಸಿದರು. ಮೀಡಿಯಾಗಳು ಯಡಿಯೂರಪ್ಪ, ಕಟೀಲ್ ನಡುವೆ ಹೊಂದಾಣಿಕೆ ಇಲ್ಲವೆಂಬಂತೆ ಬಿಂಬಿಸಿದವು. ಕೂಡಲೇ ಯಡಿಯೂಪ್ಪ ನನ್ನ ಮತ್ತು ಕಟೀಲು ನಡುವೆ ಗುಲಗಂಜಿಯಷ್ಟೂ ಭಿನ್ನಾಭಿಪ್ರಾಯಗಳಿಲ್ಲ ಎಂದು ತೇಪೆ ಹಚ್ಚುವ ಕೆಲಸ ಮಾಡಿದರು. ಅವರಿಗೆ ಇವರು ಮಣಿದರೋ ಇವರಿಗೆ ಅವರು ಮಣಿದರೋ ಅಂತು ಭಿನ್ನಮತದ ನಾಟಕ ಮಾತ್ರ ನಡೆಯುತ್ತಿದೆ.

‘ಗುಲಗಂಜಿ ಎಷ್ಟೇ ಕೆಂಪಗಿದ್ದರೂ ಅದರ ತಿಕ ಮಾತ್ರ ಕಪ್ಪು’ ಎಂಬಂತೆ ಬಿಜೆಪಿ ಭಿನ್ನರಾಗ ಹಾಡುತ್ತಲೇ ಬರುತ್ತಿದೆ. ಪೀಟಿಲು ಕೊಯ್ಯುತ್ತಲೇ ಇದೆ. ಆದರೆ ಜನರ ಸಮಸ್ಯೆಗಳು ಮಾತ್ರ ಬಗೆಹರಿದಿಲ್ಲ. ಜನ ನರಳುತ್ತಲೇ ಇದ್ದಾರೆ. ಉತ್ತರದ ಕೂಗು ಸೊರಗುತ್ತಿದೆ. ಪರಿಹಾರದ ಕನಸು ಗಗನ ಕುಸಮವೆಂದು ಜನ ಭಾವಿಸಿದ್ದರೆ, ಯಡಿಯೂರಪ್ಪ, 25 ಸಂಸದರು ಬಾಯಿ ಬಿಡದಂತೆ ಕೇಂದ್ರದ ಪರಿಹಾರಕ್ಕಾಗಿ ಭಿಕ್ಷೆ ಬೇಡಿ ನಿಂತುಕೊಳ್ಳುವಂತಹ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್- ಜೆಡಿಎಸ್ ಒಮ್ಮೊಮ್ಮೆ ಸದ್ದು ಮಾಡುತ್ತಾ ಮೌನಕ್ಕೆ ಶರಣಾಗಿವೆ. ಯಡಿಯೂರಪ್ಪ ಅವರ ಶೌರ್ಯ ವಿರೋಧ ಪಕ್ಷದಲ್ಲಿದ್ದಾಗ ಎಂದು ವಿರೋಧಿಗಳು ಗಹಗಹಿಸಿ ನಗುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...