Homeಕರ್ನಾಟಕಯಡ್ಡಿಯ ಗುಲಗಂಜಿಯೂ, ಕಟೀಲ್‌ರ ಪಿಟೀಲೂ....

ಯಡ್ಡಿಯ ಗುಲಗಂಜಿಯೂ, ಕಟೀಲ್‌ರ ಪಿಟೀಲೂ….

- Advertisement -
- Advertisement -

ನಮ್ಮಲ್ಲಿರುವುದು ಭಿನ್ನಮತ ಅಲ್ಲ, ಭಿನ್ನಾಭಿಪ್ರಾಯ ಮಾತ್ರ, ನಾವು ಎಲ್ಲರಿಗಿಂತ ಭಿನ್ನ ಎಂದವರ ಪಾಡು ಹತ್ತರೊಳಗೆ ಹನ್ನೊಂದು ಎಂಬಂತಾಗಿದೆ. ಯಾರಿಗಿಂತ ಭಿನ್ನವೆಂದು ಅಧಿಕಾರಕ್ಕೆ ಬಂದರೋ ಅವರಿಗಿಂತ ಕಡೆಯಾಗಿ ಹೋಗಿದ್ದಾರೆ. ಯಾರಿಗೆ ಗೊತ್ತು ಅಧಿಕಾರದ ಅಮಲು ಎಲ್ಲ ನಿಯಮಗಳನ್ನೂ ಗಾಳಿಗೆ ತೂರುತ್ತದೆ ಎಂದು. ಅಧಿಕಾರ ಉಂಡ ಮೇಲೆ ಯಯಾತಿಯಾಗಬೇಕು. ಮತ್ತೆಮತ್ತೆ ಯೌವ್ವನ ಬೇಕು. ಹೆಸರನ್ನೂ ಬದಲಾಯಿಸಬೇಕು. ಬೇರೊಬ್ಬರೊಂದಿಗೆ ವಿವಾಹವೂ ನಡೆಯಬೇಕು. ಇದೆಲ್ಲವೂ ಅಪೂರ್ಣಗೊಂಡಿರುವ ಕೆಲಸಗಳನ್ನು ಮುಗಿಸಲು. ಇದಕ್ಕಾಗಿ ಗದ್ದುಗೆ ಬೇಕು. ಗದ್ದುಗೆ ಪಡೆಯಲು ಯಾವ ಗದ್ದುಗೆಗೆ ಬೇಕಾದರೂ ಅಡ್ಡಬೀಳಲು ಸಿದ್ದ. ಇದು ರಾಜಕಾರಣಿಗಳು ಕಾರ್ಯವೈಖರಿ.

ನಾಲ್ಕನೇ ಬಾರಿ ಅಧಿಕಾರದ ಗದ್ದುಗೆ ಏರಿ ಕುಳಿತಿರುವ ಬಿ.ಎಸ್.ಯಡಿಯೂರಪ್ಪ ಚಿಗುರು ಮೀಸೆಯ ತೋಳ್ಬಲದ ಯುವಕನಾಗಬೇಕು. ಅವರ ಅಧಿಕಾರದ ಅವಧಿಯಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ನೀಡುವುದು, ಸೈಕಲ್ ನೀಡಿದ್ದು ಬಿಟ್ಟರೆ ಬೇರೇನೂ ಕೆಲಸಗಳು ಆಗಲಿಲ್ಲ. ಕೆಲಸ ಮಾಡಲು ಮನಸ್ಸು ಇರಲಿಲ್ಲವೋ? ಅಥವಾ ಕೆಲಸಕ್ಕೆ ಕೊಕ್ಕೆ ಇಕ್ಕಿದರೂ, ಭಿನ್ನಮತ ಕಾರಣವೋ ಅಂತು ಬಸ್ ಹತ್ತಿ ಇಳಿದು ಮತ್ತೆ ಹತ್ತಿದ್ದಾರೆ. ಜನರ ನೋವಿಗೆ ಮಿಡಿವ ಪ್ರಾಣಮಿತ್ರನಾದರೆ, ಜನಪರ ಕೆಲಸಕ್ಕೆ ಬದ್ದನಾಗಿದ್ದರೆ ಹತ್ತು ಸಲ ಮುಖ್ಯಮಂತ್ರಿಯಾದರೂ ಯಾರ ಅಭ್ಯಂತರವೂ ಇಲ್ಲ. ಆದರೆ ಅಧಿಕಾರದ ಲಾಲಸೆಗೆ ಹುದ್ದೆ ಏರಿದರೆ ಅದರಿಂದ ಜನರಿಗಾದ ಪ್ರಯೋಜನವೇನು ಅಲ್ಲವೇ?

ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಭರಪೂರ ಟೀಕಿಸುತ್ತಿದ್ದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರ ಸ್ವಾಮಿ ಸರ್ಕಾರ ಟೇಕ್ ಆಫ್ ಆಗಿಲ್ಲ ಎಂದು ಜರಿದರು. ರಾಜ್ಯದ ಉದ್ದಗಲಕ್ಕೂ ಸಂಚರಿಸುವುದಾಗಿ ಹೇಳಿದರು. ಹೇಳಿದಂತೆ ನಡೆದುಕೊಂಡರು. ರಾಜ್ಯದಲ್ಲಿ ಬರ ಆವರಿಸಿ ಜನ ತತ್ತರಿಸಿ ಹೋಗಿದ್ದಾರೆ ಎಂದು ಬೊಬ್ಬೆ ಹೊಡೆದರು. ಕೆಲವೆಡೆ ಏಕಾಂಗಿಯಾಗಿ ಮತ್ತೆ ಕೆಲವೆಡೆ ಪರಿವಾರ ಸಮೇತ ಹೋಗಿ ಜನರ ಗಮನ ಸೆಳೆಯುವ ಕೆಲಸ ಮಾಡಿದರು. ಜೊತೆಯಲ್ಲಿದ್ದವರು ಶೋಭಾ ಕರಂದ್ಲಾಜೆ, ಜಿ.ಎಸ್.ಬಸವರಾಜು, ಬಸವರಾಜ ಬೊಮ್ಮಾಯಿ, ಅದೇ ಉಮೇಶ್ ಕತ್ತಿ. ಒಳಗೊಳಗೆ ಚಕ್ರವ್ಯೂಹವನ್ನು ರಚಿಸಿದರು. ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ರಾಜಿನಾಮೆ ಕೊಡಿಸಿದರು. ಇದರಲ್ಲಿ ನಮ್ಮ ಪಾತ್ರವಿಲ್ಲ ಎಂದು ತಿಪ್ಪೆಯನ್ನು ಸಾರಿಸಿದರು. ಕೊನೆಯದಾಗಿ ಮುಖ್ಯಮಂತ್ರಿಯೂ ಆದರು.

ಈಗ ಕಾಲ ಬದಲಾಗಿದೆ. 105 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಕರ್ನಾಟಕದ ಅಧಿಕಾರದ ಗದ್ದುಗೆ ಹಿಡಿದಿದೆ. ಹಠಕ್ಕೆ ಬಿದ್ದಂತೆ ಯಡಿಯೂರಪ್ಪ ಮುಖ್ಯಮಂತ್ರಿಯು ಆಗಿದ್ದಾರೆ. ಆದರೆ ಏನು ಬಂತು. ಕಷ್ಟಕ್ಕೆ ಆಗದವನು ನಂಟನಲ್ಲ, ಊಟಕ್ಕೆ ಇಲ್ಲದ ಉಪ್ಪಿನಕಾಯಿ ಮತ್ಯಾಕೆ.. ಎನ್ನುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದ ಸುಮಾರು 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿದು ಜನರು ಮನೆ-ಮಠ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ್ದ, ಫಸಲಿಗೆ ಬಂದಿದ್ದ ಬೆಳೆಯೆಲ್ಲವೂ ನೀರು ಪಾಲಾಗಿದೆ. ಮನೆಯಲ್ಲಿ ಕಾಗದ ಪತ್ರಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಮಳೆಯಲ್ಲಿ ಇರಲು ಜಾಗವಿಲ್ಲದೆ ಜನರ ಸಿಟ್ಟನ್ನು ಹೊರ ಹಾಕುತ್ತಿದ್ದರೂ ಯಡಿಯೂರಪ್ಪ ಅತ್ತ ತಲೆಯೂ ಹಾಕದೆ ಮೌನಕ್ಕೆ ಶರಣಾಗಿದ್ದಾರೆ. ಉತ್ತರ ಕರ್ನಾಟಕದ ಜನರ ಏನಾಗಿದ್ದಾರೆ ಎಂದು ನೋಡುತ್ತಲೂ ಇಲ್ಲ.

ಹಿಂದಿನ ಸರ್ಕಾರವನ್ನು ಟೀಕಿಸುತ್ತಿದ್ದ ಯಡಿಯೂರಪ್ಪ ಬರಪರಿಹಾರ ನೀಡಲಿಲ್ಲವೆಂದು ಅಕ್ರೋಶಭರಿತರಾದರು. ತಾನೇ ಅಧಿಕಾರಕ್ಕೆ ಏರಿದಾಗ ಅದೇ ಆಕ್ರೋಶದ ಮಾತುಗಳಲ್ಲಿ ಕೇಂದ್ರಕ್ಕೆ ಪರಿಹಾರ ಬಿಡುಗಡೆ ಮಾಡುವಂತೆ ಕೇಳಬಹುದಿಲ್ಲವೇ? ಅದು ಮಾಡಲಿಲ್ಲ. ದೆಹಲಿಗೆ ಎರಡು ಬಾರಿ ಹೋಗಿ ಬಂದು ನಾಟಕ ಮಾಡಿದರು. ಯಡಿಯೂರಪ್ಪನವರಿಗೆ ಹೈಕಮಾಂಡ್ ನಾಯಕರು ಕ್ಯಾರೆ ಅಂದರೋ ಬಿಟ್ಟರೋ! ಪರಿಹಾರವಂತು ಬರಲಿಲ್ಲ. 25 ಸಂಸದರು ಕೂಡ ತುಟಿ ಎರಡು ಮಾಡಲಿಲ್ಲ. ಬಿಜೆಪಿ ಅಧ್ಯಕ್ಷರೂ ನಾನು ಕರಾವಳಿಗೆ ಮಾತ್ರ ಎಂಬಂತೆ ವರ್ತಿಸಿದರು. ಮೀಡಿಯಾಗಳು ಯಡಿಯೂರಪ್ಪ, ಕಟೀಲ್ ನಡುವೆ ಹೊಂದಾಣಿಕೆ ಇಲ್ಲವೆಂಬಂತೆ ಬಿಂಬಿಸಿದವು. ಕೂಡಲೇ ಯಡಿಯೂಪ್ಪ ನನ್ನ ಮತ್ತು ಕಟೀಲು ನಡುವೆ ಗುಲಗಂಜಿಯಷ್ಟೂ ಭಿನ್ನಾಭಿಪ್ರಾಯಗಳಿಲ್ಲ ಎಂದು ತೇಪೆ ಹಚ್ಚುವ ಕೆಲಸ ಮಾಡಿದರು. ಅವರಿಗೆ ಇವರು ಮಣಿದರೋ ಇವರಿಗೆ ಅವರು ಮಣಿದರೋ ಅಂತು ಭಿನ್ನಮತದ ನಾಟಕ ಮಾತ್ರ ನಡೆಯುತ್ತಿದೆ.

‘ಗುಲಗಂಜಿ ಎಷ್ಟೇ ಕೆಂಪಗಿದ್ದರೂ ಅದರ ತಿಕ ಮಾತ್ರ ಕಪ್ಪು’ ಎಂಬಂತೆ ಬಿಜೆಪಿ ಭಿನ್ನರಾಗ ಹಾಡುತ್ತಲೇ ಬರುತ್ತಿದೆ. ಪೀಟಿಲು ಕೊಯ್ಯುತ್ತಲೇ ಇದೆ. ಆದರೆ ಜನರ ಸಮಸ್ಯೆಗಳು ಮಾತ್ರ ಬಗೆಹರಿದಿಲ್ಲ. ಜನ ನರಳುತ್ತಲೇ ಇದ್ದಾರೆ. ಉತ್ತರದ ಕೂಗು ಸೊರಗುತ್ತಿದೆ. ಪರಿಹಾರದ ಕನಸು ಗಗನ ಕುಸಮವೆಂದು ಜನ ಭಾವಿಸಿದ್ದರೆ, ಯಡಿಯೂರಪ್ಪ, 25 ಸಂಸದರು ಬಾಯಿ ಬಿಡದಂತೆ ಕೇಂದ್ರದ ಪರಿಹಾರಕ್ಕಾಗಿ ಭಿಕ್ಷೆ ಬೇಡಿ ನಿಂತುಕೊಳ್ಳುವಂತಹ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್- ಜೆಡಿಎಸ್ ಒಮ್ಮೊಮ್ಮೆ ಸದ್ದು ಮಾಡುತ್ತಾ ಮೌನಕ್ಕೆ ಶರಣಾಗಿವೆ. ಯಡಿಯೂರಪ್ಪ ಅವರ ಶೌರ್ಯ ವಿರೋಧ ಪಕ್ಷದಲ್ಲಿದ್ದಾಗ ಎಂದು ವಿರೋಧಿಗಳು ಗಹಗಹಿಸಿ ನಗುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...