Homeಕರ್ನಾಟಕಯಡ್ಡಿಯ ಗುಲಗಂಜಿಯೂ, ಕಟೀಲ್‌ರ ಪಿಟೀಲೂ....

ಯಡ್ಡಿಯ ಗುಲಗಂಜಿಯೂ, ಕಟೀಲ್‌ರ ಪಿಟೀಲೂ….

- Advertisement -
- Advertisement -

ನಮ್ಮಲ್ಲಿರುವುದು ಭಿನ್ನಮತ ಅಲ್ಲ, ಭಿನ್ನಾಭಿಪ್ರಾಯ ಮಾತ್ರ, ನಾವು ಎಲ್ಲರಿಗಿಂತ ಭಿನ್ನ ಎಂದವರ ಪಾಡು ಹತ್ತರೊಳಗೆ ಹನ್ನೊಂದು ಎಂಬಂತಾಗಿದೆ. ಯಾರಿಗಿಂತ ಭಿನ್ನವೆಂದು ಅಧಿಕಾರಕ್ಕೆ ಬಂದರೋ ಅವರಿಗಿಂತ ಕಡೆಯಾಗಿ ಹೋಗಿದ್ದಾರೆ. ಯಾರಿಗೆ ಗೊತ್ತು ಅಧಿಕಾರದ ಅಮಲು ಎಲ್ಲ ನಿಯಮಗಳನ್ನೂ ಗಾಳಿಗೆ ತೂರುತ್ತದೆ ಎಂದು. ಅಧಿಕಾರ ಉಂಡ ಮೇಲೆ ಯಯಾತಿಯಾಗಬೇಕು. ಮತ್ತೆಮತ್ತೆ ಯೌವ್ವನ ಬೇಕು. ಹೆಸರನ್ನೂ ಬದಲಾಯಿಸಬೇಕು. ಬೇರೊಬ್ಬರೊಂದಿಗೆ ವಿವಾಹವೂ ನಡೆಯಬೇಕು. ಇದೆಲ್ಲವೂ ಅಪೂರ್ಣಗೊಂಡಿರುವ ಕೆಲಸಗಳನ್ನು ಮುಗಿಸಲು. ಇದಕ್ಕಾಗಿ ಗದ್ದುಗೆ ಬೇಕು. ಗದ್ದುಗೆ ಪಡೆಯಲು ಯಾವ ಗದ್ದುಗೆಗೆ ಬೇಕಾದರೂ ಅಡ್ಡಬೀಳಲು ಸಿದ್ದ. ಇದು ರಾಜಕಾರಣಿಗಳು ಕಾರ್ಯವೈಖರಿ.

ನಾಲ್ಕನೇ ಬಾರಿ ಅಧಿಕಾರದ ಗದ್ದುಗೆ ಏರಿ ಕುಳಿತಿರುವ ಬಿ.ಎಸ್.ಯಡಿಯೂರಪ್ಪ ಚಿಗುರು ಮೀಸೆಯ ತೋಳ್ಬಲದ ಯುವಕನಾಗಬೇಕು. ಅವರ ಅಧಿಕಾರದ ಅವಧಿಯಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ನೀಡುವುದು, ಸೈಕಲ್ ನೀಡಿದ್ದು ಬಿಟ್ಟರೆ ಬೇರೇನೂ ಕೆಲಸಗಳು ಆಗಲಿಲ್ಲ. ಕೆಲಸ ಮಾಡಲು ಮನಸ್ಸು ಇರಲಿಲ್ಲವೋ? ಅಥವಾ ಕೆಲಸಕ್ಕೆ ಕೊಕ್ಕೆ ಇಕ್ಕಿದರೂ, ಭಿನ್ನಮತ ಕಾರಣವೋ ಅಂತು ಬಸ್ ಹತ್ತಿ ಇಳಿದು ಮತ್ತೆ ಹತ್ತಿದ್ದಾರೆ. ಜನರ ನೋವಿಗೆ ಮಿಡಿವ ಪ್ರಾಣಮಿತ್ರನಾದರೆ, ಜನಪರ ಕೆಲಸಕ್ಕೆ ಬದ್ದನಾಗಿದ್ದರೆ ಹತ್ತು ಸಲ ಮುಖ್ಯಮಂತ್ರಿಯಾದರೂ ಯಾರ ಅಭ್ಯಂತರವೂ ಇಲ್ಲ. ಆದರೆ ಅಧಿಕಾರದ ಲಾಲಸೆಗೆ ಹುದ್ದೆ ಏರಿದರೆ ಅದರಿಂದ ಜನರಿಗಾದ ಪ್ರಯೋಜನವೇನು ಅಲ್ಲವೇ?

ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಭರಪೂರ ಟೀಕಿಸುತ್ತಿದ್ದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರ ಸ್ವಾಮಿ ಸರ್ಕಾರ ಟೇಕ್ ಆಫ್ ಆಗಿಲ್ಲ ಎಂದು ಜರಿದರು. ರಾಜ್ಯದ ಉದ್ದಗಲಕ್ಕೂ ಸಂಚರಿಸುವುದಾಗಿ ಹೇಳಿದರು. ಹೇಳಿದಂತೆ ನಡೆದುಕೊಂಡರು. ರಾಜ್ಯದಲ್ಲಿ ಬರ ಆವರಿಸಿ ಜನ ತತ್ತರಿಸಿ ಹೋಗಿದ್ದಾರೆ ಎಂದು ಬೊಬ್ಬೆ ಹೊಡೆದರು. ಕೆಲವೆಡೆ ಏಕಾಂಗಿಯಾಗಿ ಮತ್ತೆ ಕೆಲವೆಡೆ ಪರಿವಾರ ಸಮೇತ ಹೋಗಿ ಜನರ ಗಮನ ಸೆಳೆಯುವ ಕೆಲಸ ಮಾಡಿದರು. ಜೊತೆಯಲ್ಲಿದ್ದವರು ಶೋಭಾ ಕರಂದ್ಲಾಜೆ, ಜಿ.ಎಸ್.ಬಸವರಾಜು, ಬಸವರಾಜ ಬೊಮ್ಮಾಯಿ, ಅದೇ ಉಮೇಶ್ ಕತ್ತಿ. ಒಳಗೊಳಗೆ ಚಕ್ರವ್ಯೂಹವನ್ನು ರಚಿಸಿದರು. ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ರಾಜಿನಾಮೆ ಕೊಡಿಸಿದರು. ಇದರಲ್ಲಿ ನಮ್ಮ ಪಾತ್ರವಿಲ್ಲ ಎಂದು ತಿಪ್ಪೆಯನ್ನು ಸಾರಿಸಿದರು. ಕೊನೆಯದಾಗಿ ಮುಖ್ಯಮಂತ್ರಿಯೂ ಆದರು.

ಈಗ ಕಾಲ ಬದಲಾಗಿದೆ. 105 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಕರ್ನಾಟಕದ ಅಧಿಕಾರದ ಗದ್ದುಗೆ ಹಿಡಿದಿದೆ. ಹಠಕ್ಕೆ ಬಿದ್ದಂತೆ ಯಡಿಯೂರಪ್ಪ ಮುಖ್ಯಮಂತ್ರಿಯು ಆಗಿದ್ದಾರೆ. ಆದರೆ ಏನು ಬಂತು. ಕಷ್ಟಕ್ಕೆ ಆಗದವನು ನಂಟನಲ್ಲ, ಊಟಕ್ಕೆ ಇಲ್ಲದ ಉಪ್ಪಿನಕಾಯಿ ಮತ್ಯಾಕೆ.. ಎನ್ನುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದ ಸುಮಾರು 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿದು ಜನರು ಮನೆ-ಮಠ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ್ದ, ಫಸಲಿಗೆ ಬಂದಿದ್ದ ಬೆಳೆಯೆಲ್ಲವೂ ನೀರು ಪಾಲಾಗಿದೆ. ಮನೆಯಲ್ಲಿ ಕಾಗದ ಪತ್ರಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಮಳೆಯಲ್ಲಿ ಇರಲು ಜಾಗವಿಲ್ಲದೆ ಜನರ ಸಿಟ್ಟನ್ನು ಹೊರ ಹಾಕುತ್ತಿದ್ದರೂ ಯಡಿಯೂರಪ್ಪ ಅತ್ತ ತಲೆಯೂ ಹಾಕದೆ ಮೌನಕ್ಕೆ ಶರಣಾಗಿದ್ದಾರೆ. ಉತ್ತರ ಕರ್ನಾಟಕದ ಜನರ ಏನಾಗಿದ್ದಾರೆ ಎಂದು ನೋಡುತ್ತಲೂ ಇಲ್ಲ.

ಹಿಂದಿನ ಸರ್ಕಾರವನ್ನು ಟೀಕಿಸುತ್ತಿದ್ದ ಯಡಿಯೂರಪ್ಪ ಬರಪರಿಹಾರ ನೀಡಲಿಲ್ಲವೆಂದು ಅಕ್ರೋಶಭರಿತರಾದರು. ತಾನೇ ಅಧಿಕಾರಕ್ಕೆ ಏರಿದಾಗ ಅದೇ ಆಕ್ರೋಶದ ಮಾತುಗಳಲ್ಲಿ ಕೇಂದ್ರಕ್ಕೆ ಪರಿಹಾರ ಬಿಡುಗಡೆ ಮಾಡುವಂತೆ ಕೇಳಬಹುದಿಲ್ಲವೇ? ಅದು ಮಾಡಲಿಲ್ಲ. ದೆಹಲಿಗೆ ಎರಡು ಬಾರಿ ಹೋಗಿ ಬಂದು ನಾಟಕ ಮಾಡಿದರು. ಯಡಿಯೂರಪ್ಪನವರಿಗೆ ಹೈಕಮಾಂಡ್ ನಾಯಕರು ಕ್ಯಾರೆ ಅಂದರೋ ಬಿಟ್ಟರೋ! ಪರಿಹಾರವಂತು ಬರಲಿಲ್ಲ. 25 ಸಂಸದರು ಕೂಡ ತುಟಿ ಎರಡು ಮಾಡಲಿಲ್ಲ. ಬಿಜೆಪಿ ಅಧ್ಯಕ್ಷರೂ ನಾನು ಕರಾವಳಿಗೆ ಮಾತ್ರ ಎಂಬಂತೆ ವರ್ತಿಸಿದರು. ಮೀಡಿಯಾಗಳು ಯಡಿಯೂರಪ್ಪ, ಕಟೀಲ್ ನಡುವೆ ಹೊಂದಾಣಿಕೆ ಇಲ್ಲವೆಂಬಂತೆ ಬಿಂಬಿಸಿದವು. ಕೂಡಲೇ ಯಡಿಯೂಪ್ಪ ನನ್ನ ಮತ್ತು ಕಟೀಲು ನಡುವೆ ಗುಲಗಂಜಿಯಷ್ಟೂ ಭಿನ್ನಾಭಿಪ್ರಾಯಗಳಿಲ್ಲ ಎಂದು ತೇಪೆ ಹಚ್ಚುವ ಕೆಲಸ ಮಾಡಿದರು. ಅವರಿಗೆ ಇವರು ಮಣಿದರೋ ಇವರಿಗೆ ಅವರು ಮಣಿದರೋ ಅಂತು ಭಿನ್ನಮತದ ನಾಟಕ ಮಾತ್ರ ನಡೆಯುತ್ತಿದೆ.

‘ಗುಲಗಂಜಿ ಎಷ್ಟೇ ಕೆಂಪಗಿದ್ದರೂ ಅದರ ತಿಕ ಮಾತ್ರ ಕಪ್ಪು’ ಎಂಬಂತೆ ಬಿಜೆಪಿ ಭಿನ್ನರಾಗ ಹಾಡುತ್ತಲೇ ಬರುತ್ತಿದೆ. ಪೀಟಿಲು ಕೊಯ್ಯುತ್ತಲೇ ಇದೆ. ಆದರೆ ಜನರ ಸಮಸ್ಯೆಗಳು ಮಾತ್ರ ಬಗೆಹರಿದಿಲ್ಲ. ಜನ ನರಳುತ್ತಲೇ ಇದ್ದಾರೆ. ಉತ್ತರದ ಕೂಗು ಸೊರಗುತ್ತಿದೆ. ಪರಿಹಾರದ ಕನಸು ಗಗನ ಕುಸಮವೆಂದು ಜನ ಭಾವಿಸಿದ್ದರೆ, ಯಡಿಯೂರಪ್ಪ, 25 ಸಂಸದರು ಬಾಯಿ ಬಿಡದಂತೆ ಕೇಂದ್ರದ ಪರಿಹಾರಕ್ಕಾಗಿ ಭಿಕ್ಷೆ ಬೇಡಿ ನಿಂತುಕೊಳ್ಳುವಂತಹ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್- ಜೆಡಿಎಸ್ ಒಮ್ಮೊಮ್ಮೆ ಸದ್ದು ಮಾಡುತ್ತಾ ಮೌನಕ್ಕೆ ಶರಣಾಗಿವೆ. ಯಡಿಯೂರಪ್ಪ ಅವರ ಶೌರ್ಯ ವಿರೋಧ ಪಕ್ಷದಲ್ಲಿದ್ದಾಗ ಎಂದು ವಿರೋಧಿಗಳು ಗಹಗಹಿಸಿ ನಗುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...