Homeಚಳವಳಿ4 ನೆ ತಿಂಗಳಿಗೆ ಕಾಲಿಟ್ಟ ಹೋರಾಟ - ದೆಹಲಿ ಗಡಿಗಳಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ

4 ನೆ ತಿಂಗಳಿಗೆ ಕಾಲಿಟ್ಟ ಹೋರಾಟ – ದೆಹಲಿ ಗಡಿಗಳಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟ ನಾಲ್ಕನೇ ತಿಂಗಳಿಗೆ ಕಾಲಿಟ್ಟುದೆ. ಸರ್ಕಾರ ಹೋರಾಟವನ್ನು ಒಡೆಯಲು ಬೇಕಾಗಿ ದಿನಕ್ಕೊಂದು ಸಂಚು ರೂಪಿಸಿದಂತೆ ಆಂದೋಲನ ತೀವ್ರಗೊಳ್ಳುತ್ತಿದ್ದು, ಗುರುವಾರ ಗಾಜಿಪುರ, ಟಿಕ್ರಿ ಮತ್ತು ಸಿಂಗು ಗಡಿಗಳಲ್ಲಿನ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ದೆಹಲಿ ಪೊಲೀಸರು ಈ ಪ್ರದೇಶಗಳ ಸಮೀಪದ ವಾಹನ ಸಂಚಾರವನ್ನು ಬೇರೆಡೆಗೆ ತಿರುಗಿಸಿದ್ದಾರೆ. ಇದರಿಂದಾಗಿ ಪೀಕ್ ಅವರ್‌‌ಗಲ್ಲಿ(ಎಲ್ಲರೂ ಸಮಾನ್ಯವಾಗಿ ಸಂಚಾರ ಮಾಡುವ ಸಮಯ/ಸಂಜೆ ಅಥವಾ ಬೆಳಿಗ್ಗೆ) ಭಾರಿ ಸಂಚಾರ ದಟ್ಟಣೆ ಉಂಟಾಗಲಿದೆ ಎಂದು ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಗಾಜಿಪುರ-ಗಾಜಿಯಾಬಾದ್ (ಯುಪಿ ಗೇಟ್) ಗಡಿ ಸಂಪೂರ್ಣವಾಗಿ ಮುಚ್ಚಲ್ಪಟ್ಟಿರುವುದರಿಂದ ದೆಹಲಿ ಮತ್ತು ಗಾಜಿಯಾಬಾದ್‌‌ ಪೀಕ್‌ ಅವರ್‌ಗಳಲ್ಲಿ ಭಾರಿ ಸಂಚಾರ ದಟ್ಟಣೆಯನ್ನು ಎದುರಿಸುತ್ತದೆ ಎಂದು ದೆಹಲಿ ಸಂಚಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಯುಪಿ ಗೇಟ್ ಗಡಿಗೆ ಹಾಕಿರುವ ದಿಗ್ಬಂಧನದಿಂದಾಗಿ ದೆಹಲಿ-ಮೀರತ್, ರಾಷ್ಟ್ರೀಯ ಹೆದ್ದಾರಿ-9 ಮತ್ತು ರಾಷ್ಟ್ರೀಯ ಹೆದ್ದಾರಿ -24 ರ ಎಲ್ಲಾ ಆರು ಪಥಗಳನ್ನು ಮುಚ್ಚಲಾಗಿದೆ.

ಇದನ್ನೂ ಓದಿ: ಭಾರತದ ರೈತ ಹೋರಾಟಕ್ಕೆ ಅಮೆರಿಕದ 87 ಸಂಘಟನೆಗಳ ಬೆಂಬಲ

ಗಾಜಿಯಾಬಾದ್‌ನಿಂದ ದೆಹಲಿಗೆ ಪ್ರವೇಶಿಸುವ ವಾಹನಗಳನ್ನು ಪರ್ಯಾಯ ಗಡಿ ಮಾರ್ಗಗಳಾದ ಆನಂದ್ ವಿಹಾರ, ಸೂರ್ಯ ನಗರ, ಅಪ್ಸರಾ, ಭೋಪ್ರಾ , ಲೋನಿ, ಕೊಂಡ್ಲಿ, ಚಿಲ್ಲಾ, ನ್ಯೂ ಅಶೋಕ್ ನಗರ, ಡಿಎನ್‌ಡಿ, ಮತ್ತು ಕಾಳಿಂದಿ ಕುಂಜ್ ಮೂಲಕ ಕಳುಹಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಗಾಜಿಯಾಬಾದ್‌ನಿಂದ ಘಾಜಿಪುರ ವೃತ್ತದ ಮೂಲಕ ದೆಹಲಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿ-24 ಅನ್ನು ಮುಕ್ತವಾಗಿರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಗಡಿಗಳ ಸುತ್ತಲು ರೈತರು ನಡೆಸುತ್ತಿರುವ ಹೋರಾಟ ನಾಲ್ಕನೇ ತಿಂಗಳಿಗೆ ಕಾಲಿಟ್ಟಿದೆ. ಕೇಂದ್ರ ಸರ್ಕಾರದೊಂದಿಗೆ ರೈತರು ಇದುವರೆಗೂ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದರೂ ಎಲ್ಲವು ಮುರಿದು ಬಿದ್ದಿದೆ. ರೈತರು ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುವ ತನಕ ಹೋರಾಟ ಮುಂದುವೆಯುತ್ತದೆ ಎಂದು ಹೇಳಿದ್ದಾರೆ.

ರೈತರ ಹೋರಾಟ ಇದೀಗ ಕೇವಲ ದೆಹಲಿ ಕೇಂದ್ರವಾಗಿ ಮಾತ್ರ ಉಳಿದಿಲ್ಲ. ಹರಿಯಾಣ, ಉತ್ತರ ಪ್ರದೇಶ, ಪಂಜಾಬ್, ರಾಜಸ್ಥಾನಗಳಲ್ಲಿ ಬೃಹತ್‌ ರೈತ ಮಹಾಪಂಚಾಯತ್‌ಗಳು ನಡೆಯುತ್ತಿದ್ದು ಉತ್ತರ ಭಾರತದ ಪ್ರತಿಯೊಂದು ಹಳ್ಳಿಯಲ್ಲೂ ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರುದ್ದ ರೈತರನ್ನು ಸಂಘಟಿಲಾಗುತ್ತಿದೆ. ಅಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಲಕ್ಷಾಂತರ ಜನರು ಸೇರುತ್ತಿದ್ದು, ಆಂದೋಲನ ತಳ ಮಟ್ಟದಿಂದಲೇ ಗಟ್ಟಿಗೊಳ್ಳುತ್ತಿದೆ.

ಇದನ್ನೂ ಓದಿ: ರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...