Homeಕರೋನಾ ತಲ್ಲಣನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

ನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

- Advertisement -
- Advertisement -

ಕಾರ್ಗಿಲ್ ಯುದ್ಧದ ವೀರ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆಯವರ 31 ವರ್ಷದ ಮಗ ಕೋವಿಡ್ ಕಾರಣದಿಂದಾಗಿ ಉತ್ತರಪ್ರದೇಶದ ಕಾನ್ಪುರ ನಗರದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಬೇದಾರ್ ದುಬೆಯವರು ತನ್ನ ಮಗನ ದೇಹವನ್ನು ಕೊನೆಯ ಬಾರಿಗೆ ನೋಡಲು ಸುಡುವ ಸೂರ್ಯನ ಕೆಳಗೆ ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕಾನ್ಪುರ್ ಉತ್ತರ ಪ್ರದೇಶದ ಅತಿ ಹೆಚ್ಚು ಕೋವಿಡ್ ಪೀಡಿತ ನಗರಗಳಲ್ಲಿ ಒಂದಾಗಿದೆ.
ಇಂಡಿಯಾ ಟುಡೆ ಟಿವಿ ಜೊತೆ ಹ್ಯಾಲೆಟ್ ಆಸ್ಪತ್ರೆಯಲ್ಲಿ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆ ಮಾತನಾಡಿದ್ದಾರೆ.

“ನಾನು 1981ರಿಂದ 2011ರವರೆಗೆ ನನ್ನ ತಾಯಿನಾಡಿಗೆ ಸೇವೆ ಸಲ್ಲಿಸಿದ್ದೇನೆ. ಕಾರ್ಗಿಲ್ ಯುದ್ಧದ ವೇಳೆ ಭಾಗಿಯಾಗಿದ್ದೇನೆ. ನಂತರ ಬಾರಾಮುಲ್ಲಾ, ಲಡಾಖ್ ಮತ್ತು ಲುಕುಂಗ್ಗೆ ಪ್ರದೇಶಗಳಲ್ಲಿ ಹೋರಾಡಿದ್ದೇನೆ. ನಾನು ಬಾರಾಮುಲ್ಲಾದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದೇನೆ ಮತ್ತು ಕಾರ್ಗಿಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಡಿದೆ. ಆದರೆ ಈ ದೇಶದ ವ್ಯವಸ್ಥೆಗೆ ನನ್ನ ಮಗನನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಮಂಗಳವಾರ ಸಂಜೆ ಕೋವಿಡ್‌ನಿಂದ ನಿಧನರಾದ ಮಗ ಅಮಿತಾಬ್ ನೆನೆದು ದುಃಖಿತರಾದರು.

ವೈದ್ಯಕೀಯ ಆಮ್ಲಜನಕ ಮತ್ತು ಆಮ್ಲಜನಕ ಸಿಲಿಂಡರ್‌ಗಳಿಗಾಗಿ ಹೆಣಗಾಡುತ್ತಿರುವ ನಗರದಾದ್ಯಂತದ ಆಸ್ಪತ್ರೆಗಳು ಕೋವಿಡ್ ರೋಗಿಗಳಿಂದ ತುಂಬಿವೆ. ಮೃತ ರೋಗಿಗಳ ಕುಟುಂಬ ಸದಸ್ಯರು ತಮ್ಮ ಪ್ರೀತಿಪಾತ್ರರ ಮೃತ ದೇಹಗಳನ್ನು ನೋಡಲು ಗಂಟೆಗಟ್ಟಲೆ ಕಾಯಬೇಕಾಗುತ್ತಿದೆ.

ಕಾನ್ಪುರದ ಭೈರವಘಾಟ್ ಪ್ರದೇಶದಲ್ಲಿನ ಸ್ಮಶಾನವನ್ನು ನೋಡಿದರೆ ಪರಿಸ್ಥಿತಿಯ ಭೀಕರತೆ ಅರ್ಥವಾಗುತ್ತದೆ. ಜನರ ಯಾತನೆ ಈಗ ಕೋಪಕ್ಕೆ ತಿರುಗಿದೆ. ದೇಶಕ್ಕೆ ಸೇವೆ ಸಲ್ಲಿಸಿದ ಅನುಭವಿಗಳು ಸಹ ಅಸಹಾಯಕರಾಗಿದ್ದಾರೆ.

ಇನ್ನೂ ಒಂದು ಸ್ಯನಿಕ ಕುಟುಂಬದ ಅಸಹಾಯಕತೆ…

‘ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ, ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ’ ಎಂದು ಕಾನ್ಪುರದ ನಿವಾಸಿ ಚಂದ್ರಪಾಲ್ ಹೇಳಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಕಮಾಂಡೆಂಟ್ ಆಗಿ ಕೆಲಸ ಮಾಡಿ ಅವರು ನಿವೃತ್ತರಾಗಿದ್ದಾರೆ. ಕೋವಿಡ್ ಪೀಡಿತ ಅವರ ಸಹೋದರಿ ಸಾವಿತ್ರಿ ಬುಧವಾರ ಬೆಳಿಗ್ಗೆ ನಿಧನರಾದರು.

ವಾರ್ಡ್ ಹುಡುಗರು ತಮ್ಮ ಸಹೋದರಿಯ ನಿಧನದ ಬಗ್ಗೆ ಮಾಹಿತಿ ನೀಡಿದರು ಎಂದು ನಿವೃತ್ತ ಸೈನಿಕ ಹೇಳುತ್ತಾರೆ.

ಚಂದ್ರಪಾಲ್ ಅವರ ಕುಟುಂಬ ಸದಸ್ಯ ರಾಮಚಂದ್ರ ಕೂಡ ನಿವೃತ್ತ ಸೈನಿಕ. ಉಸಿರಾಟದ ತೊಂದರೆಯಿಂದಾಗಿ ಕುಟುಂಬವು ಏಪ್ರಿಲ್ 22 ರಂದು ಕಾನ್ಪುರದ ಹ್ಯಾಲೆಟ್ ಆಸ್ಪತ್ರೆಗೆ ಸಾವಿತ್ರಿ ಅವರನ್ನು ಕರೆತಂದಿತ್ತು ಎಂದು ಇಂಡಿಯಾ ಟುಡೆ ಟಿವಿಗೆ ತಿಳಿಸಿದರು.

“ಸಾವಿತ್ರಿ ಅವರನ್ನು ಹ್ಯಾಲೆಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಯೋಗಕ್ಷೇಮದ ಬಗ್ಗೆ ಯಾರಿಂದಲೂ ಮಾಹಿತಿ ಸಿಗಲಿಲ್ಲ. ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ ಆದರೆ ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ. ಅವರು ನಿಧನರಾದರು ಎಂದು ನಮಗೆ ಇಂದು ತಿಳಿದುಬಂದಿದೆ” ಎಂದು ರಾಮಚಂದ್ರ ಹೇಳಿದರು.

ಮಹಿಳೆಯ ದುಃಖಿತ ಮಗ, ಆಮ್ಲಜನಕದ ಮಟ್ಟವು ತೀವ್ರವಾಗಿ ಕುಸಿಯಿತು ಮತ್ತು ತಾಯಿಯನ್ನು ಬೈಪಾಪ್ (ಬಿಲೆವೆಲ್ ಪಾಸಿಟಿವ್ ಏರ್‌ವೇ ಪ್ರೆಶರ್) ನಲ್ಲಿ ಇರಿಸಲಾಗಿದೆ ಎಂದು ಹೇಳಿದರು. ಆದರೆ ಯಾವುದೂ ನೆರವಾಗಲಿಲ್ಲ ಎಂದರು.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...