Homeಕರೋನಾ ತಲ್ಲಣನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

ನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

- Advertisement -
- Advertisement -

ಕಾರ್ಗಿಲ್ ಯುದ್ಧದ ವೀರ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆಯವರ 31 ವರ್ಷದ ಮಗ ಕೋವಿಡ್ ಕಾರಣದಿಂದಾಗಿ ಉತ್ತರಪ್ರದೇಶದ ಕಾನ್ಪುರ ನಗರದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಬೇದಾರ್ ದುಬೆಯವರು ತನ್ನ ಮಗನ ದೇಹವನ್ನು ಕೊನೆಯ ಬಾರಿಗೆ ನೋಡಲು ಸುಡುವ ಸೂರ್ಯನ ಕೆಳಗೆ ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕಾನ್ಪುರ್ ಉತ್ತರ ಪ್ರದೇಶದ ಅತಿ ಹೆಚ್ಚು ಕೋವಿಡ್ ಪೀಡಿತ ನಗರಗಳಲ್ಲಿ ಒಂದಾಗಿದೆ.
ಇಂಡಿಯಾ ಟುಡೆ ಟಿವಿ ಜೊತೆ ಹ್ಯಾಲೆಟ್ ಆಸ್ಪತ್ರೆಯಲ್ಲಿ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆ ಮಾತನಾಡಿದ್ದಾರೆ.

“ನಾನು 1981ರಿಂದ 2011ರವರೆಗೆ ನನ್ನ ತಾಯಿನಾಡಿಗೆ ಸೇವೆ ಸಲ್ಲಿಸಿದ್ದೇನೆ. ಕಾರ್ಗಿಲ್ ಯುದ್ಧದ ವೇಳೆ ಭಾಗಿಯಾಗಿದ್ದೇನೆ. ನಂತರ ಬಾರಾಮುಲ್ಲಾ, ಲಡಾಖ್ ಮತ್ತು ಲುಕುಂಗ್ಗೆ ಪ್ರದೇಶಗಳಲ್ಲಿ ಹೋರಾಡಿದ್ದೇನೆ. ನಾನು ಬಾರಾಮುಲ್ಲಾದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದೇನೆ ಮತ್ತು ಕಾರ್ಗಿಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಡಿದೆ. ಆದರೆ ಈ ದೇಶದ ವ್ಯವಸ್ಥೆಗೆ ನನ್ನ ಮಗನನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಮಂಗಳವಾರ ಸಂಜೆ ಕೋವಿಡ್‌ನಿಂದ ನಿಧನರಾದ ಮಗ ಅಮಿತಾಬ್ ನೆನೆದು ದುಃಖಿತರಾದರು.

ವೈದ್ಯಕೀಯ ಆಮ್ಲಜನಕ ಮತ್ತು ಆಮ್ಲಜನಕ ಸಿಲಿಂಡರ್‌ಗಳಿಗಾಗಿ ಹೆಣಗಾಡುತ್ತಿರುವ ನಗರದಾದ್ಯಂತದ ಆಸ್ಪತ್ರೆಗಳು ಕೋವಿಡ್ ರೋಗಿಗಳಿಂದ ತುಂಬಿವೆ. ಮೃತ ರೋಗಿಗಳ ಕುಟುಂಬ ಸದಸ್ಯರು ತಮ್ಮ ಪ್ರೀತಿಪಾತ್ರರ ಮೃತ ದೇಹಗಳನ್ನು ನೋಡಲು ಗಂಟೆಗಟ್ಟಲೆ ಕಾಯಬೇಕಾಗುತ್ತಿದೆ.

ಕಾನ್ಪುರದ ಭೈರವಘಾಟ್ ಪ್ರದೇಶದಲ್ಲಿನ ಸ್ಮಶಾನವನ್ನು ನೋಡಿದರೆ ಪರಿಸ್ಥಿತಿಯ ಭೀಕರತೆ ಅರ್ಥವಾಗುತ್ತದೆ. ಜನರ ಯಾತನೆ ಈಗ ಕೋಪಕ್ಕೆ ತಿರುಗಿದೆ. ದೇಶಕ್ಕೆ ಸೇವೆ ಸಲ್ಲಿಸಿದ ಅನುಭವಿಗಳು ಸಹ ಅಸಹಾಯಕರಾಗಿದ್ದಾರೆ.

ಇನ್ನೂ ಒಂದು ಸ್ಯನಿಕ ಕುಟುಂಬದ ಅಸಹಾಯಕತೆ…

‘ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ, ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ’ ಎಂದು ಕಾನ್ಪುರದ ನಿವಾಸಿ ಚಂದ್ರಪಾಲ್ ಹೇಳಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಕಮಾಂಡೆಂಟ್ ಆಗಿ ಕೆಲಸ ಮಾಡಿ ಅವರು ನಿವೃತ್ತರಾಗಿದ್ದಾರೆ. ಕೋವಿಡ್ ಪೀಡಿತ ಅವರ ಸಹೋದರಿ ಸಾವಿತ್ರಿ ಬುಧವಾರ ಬೆಳಿಗ್ಗೆ ನಿಧನರಾದರು.

ವಾರ್ಡ್ ಹುಡುಗರು ತಮ್ಮ ಸಹೋದರಿಯ ನಿಧನದ ಬಗ್ಗೆ ಮಾಹಿತಿ ನೀಡಿದರು ಎಂದು ನಿವೃತ್ತ ಸೈನಿಕ ಹೇಳುತ್ತಾರೆ.

ಚಂದ್ರಪಾಲ್ ಅವರ ಕುಟುಂಬ ಸದಸ್ಯ ರಾಮಚಂದ್ರ ಕೂಡ ನಿವೃತ್ತ ಸೈನಿಕ. ಉಸಿರಾಟದ ತೊಂದರೆಯಿಂದಾಗಿ ಕುಟುಂಬವು ಏಪ್ರಿಲ್ 22 ರಂದು ಕಾನ್ಪುರದ ಹ್ಯಾಲೆಟ್ ಆಸ್ಪತ್ರೆಗೆ ಸಾವಿತ್ರಿ ಅವರನ್ನು ಕರೆತಂದಿತ್ತು ಎಂದು ಇಂಡಿಯಾ ಟುಡೆ ಟಿವಿಗೆ ತಿಳಿಸಿದರು.

“ಸಾವಿತ್ರಿ ಅವರನ್ನು ಹ್ಯಾಲೆಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಯೋಗಕ್ಷೇಮದ ಬಗ್ಗೆ ಯಾರಿಂದಲೂ ಮಾಹಿತಿ ಸಿಗಲಿಲ್ಲ. ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ ಆದರೆ ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ. ಅವರು ನಿಧನರಾದರು ಎಂದು ನಮಗೆ ಇಂದು ತಿಳಿದುಬಂದಿದೆ” ಎಂದು ರಾಮಚಂದ್ರ ಹೇಳಿದರು.

ಮಹಿಳೆಯ ದುಃಖಿತ ಮಗ, ಆಮ್ಲಜನಕದ ಮಟ್ಟವು ತೀವ್ರವಾಗಿ ಕುಸಿಯಿತು ಮತ್ತು ತಾಯಿಯನ್ನು ಬೈಪಾಪ್ (ಬಿಲೆವೆಲ್ ಪಾಸಿಟಿವ್ ಏರ್‌ವೇ ಪ್ರೆಶರ್) ನಲ್ಲಿ ಇರಿಸಲಾಗಿದೆ ಎಂದು ಹೇಳಿದರು. ಆದರೆ ಯಾವುದೂ ನೆರವಾಗಲಿಲ್ಲ ಎಂದರು.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...