Homeಕರೋನಾ ತಲ್ಲಣನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

ನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

- Advertisement -
- Advertisement -

ಕಾರ್ಗಿಲ್ ಯುದ್ಧದ ವೀರ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆಯವರ 31 ವರ್ಷದ ಮಗ ಕೋವಿಡ್ ಕಾರಣದಿಂದಾಗಿ ಉತ್ತರಪ್ರದೇಶದ ಕಾನ್ಪುರ ನಗರದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಬೇದಾರ್ ದುಬೆಯವರು ತನ್ನ ಮಗನ ದೇಹವನ್ನು ಕೊನೆಯ ಬಾರಿಗೆ ನೋಡಲು ಸುಡುವ ಸೂರ್ಯನ ಕೆಳಗೆ ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕಾನ್ಪುರ್ ಉತ್ತರ ಪ್ರದೇಶದ ಅತಿ ಹೆಚ್ಚು ಕೋವಿಡ್ ಪೀಡಿತ ನಗರಗಳಲ್ಲಿ ಒಂದಾಗಿದೆ.
ಇಂಡಿಯಾ ಟುಡೆ ಟಿವಿ ಜೊತೆ ಹ್ಯಾಲೆಟ್ ಆಸ್ಪತ್ರೆಯಲ್ಲಿ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆ ಮಾತನಾಡಿದ್ದಾರೆ.

“ನಾನು 1981ರಿಂದ 2011ರವರೆಗೆ ನನ್ನ ತಾಯಿನಾಡಿಗೆ ಸೇವೆ ಸಲ್ಲಿಸಿದ್ದೇನೆ. ಕಾರ್ಗಿಲ್ ಯುದ್ಧದ ವೇಳೆ ಭಾಗಿಯಾಗಿದ್ದೇನೆ. ನಂತರ ಬಾರಾಮುಲ್ಲಾ, ಲಡಾಖ್ ಮತ್ತು ಲುಕುಂಗ್ಗೆ ಪ್ರದೇಶಗಳಲ್ಲಿ ಹೋರಾಡಿದ್ದೇನೆ. ನಾನು ಬಾರಾಮುಲ್ಲಾದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದೇನೆ ಮತ್ತು ಕಾರ್ಗಿಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಡಿದೆ. ಆದರೆ ಈ ದೇಶದ ವ್ಯವಸ್ಥೆಗೆ ನನ್ನ ಮಗನನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಮಂಗಳವಾರ ಸಂಜೆ ಕೋವಿಡ್‌ನಿಂದ ನಿಧನರಾದ ಮಗ ಅಮಿತಾಬ್ ನೆನೆದು ದುಃಖಿತರಾದರು.

ವೈದ್ಯಕೀಯ ಆಮ್ಲಜನಕ ಮತ್ತು ಆಮ್ಲಜನಕ ಸಿಲಿಂಡರ್‌ಗಳಿಗಾಗಿ ಹೆಣಗಾಡುತ್ತಿರುವ ನಗರದಾದ್ಯಂತದ ಆಸ್ಪತ್ರೆಗಳು ಕೋವಿಡ್ ರೋಗಿಗಳಿಂದ ತುಂಬಿವೆ. ಮೃತ ರೋಗಿಗಳ ಕುಟುಂಬ ಸದಸ್ಯರು ತಮ್ಮ ಪ್ರೀತಿಪಾತ್ರರ ಮೃತ ದೇಹಗಳನ್ನು ನೋಡಲು ಗಂಟೆಗಟ್ಟಲೆ ಕಾಯಬೇಕಾಗುತ್ತಿದೆ.

ಕಾನ್ಪುರದ ಭೈರವಘಾಟ್ ಪ್ರದೇಶದಲ್ಲಿನ ಸ್ಮಶಾನವನ್ನು ನೋಡಿದರೆ ಪರಿಸ್ಥಿತಿಯ ಭೀಕರತೆ ಅರ್ಥವಾಗುತ್ತದೆ. ಜನರ ಯಾತನೆ ಈಗ ಕೋಪಕ್ಕೆ ತಿರುಗಿದೆ. ದೇಶಕ್ಕೆ ಸೇವೆ ಸಲ್ಲಿಸಿದ ಅನುಭವಿಗಳು ಸಹ ಅಸಹಾಯಕರಾಗಿದ್ದಾರೆ.

ಇನ್ನೂ ಒಂದು ಸ್ಯನಿಕ ಕುಟುಂಬದ ಅಸಹಾಯಕತೆ…

‘ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ, ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ’ ಎಂದು ಕಾನ್ಪುರದ ನಿವಾಸಿ ಚಂದ್ರಪಾಲ್ ಹೇಳಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಕಮಾಂಡೆಂಟ್ ಆಗಿ ಕೆಲಸ ಮಾಡಿ ಅವರು ನಿವೃತ್ತರಾಗಿದ್ದಾರೆ. ಕೋವಿಡ್ ಪೀಡಿತ ಅವರ ಸಹೋದರಿ ಸಾವಿತ್ರಿ ಬುಧವಾರ ಬೆಳಿಗ್ಗೆ ನಿಧನರಾದರು.

ವಾರ್ಡ್ ಹುಡುಗರು ತಮ್ಮ ಸಹೋದರಿಯ ನಿಧನದ ಬಗ್ಗೆ ಮಾಹಿತಿ ನೀಡಿದರು ಎಂದು ನಿವೃತ್ತ ಸೈನಿಕ ಹೇಳುತ್ತಾರೆ.

ಚಂದ್ರಪಾಲ್ ಅವರ ಕುಟುಂಬ ಸದಸ್ಯ ರಾಮಚಂದ್ರ ಕೂಡ ನಿವೃತ್ತ ಸೈನಿಕ. ಉಸಿರಾಟದ ತೊಂದರೆಯಿಂದಾಗಿ ಕುಟುಂಬವು ಏಪ್ರಿಲ್ 22 ರಂದು ಕಾನ್ಪುರದ ಹ್ಯಾಲೆಟ್ ಆಸ್ಪತ್ರೆಗೆ ಸಾವಿತ್ರಿ ಅವರನ್ನು ಕರೆತಂದಿತ್ತು ಎಂದು ಇಂಡಿಯಾ ಟುಡೆ ಟಿವಿಗೆ ತಿಳಿಸಿದರು.

“ಸಾವಿತ್ರಿ ಅವರನ್ನು ಹ್ಯಾಲೆಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಯೋಗಕ್ಷೇಮದ ಬಗ್ಗೆ ಯಾರಿಂದಲೂ ಮಾಹಿತಿ ಸಿಗಲಿಲ್ಲ. ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ ಆದರೆ ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ. ಅವರು ನಿಧನರಾದರು ಎಂದು ನಮಗೆ ಇಂದು ತಿಳಿದುಬಂದಿದೆ” ಎಂದು ರಾಮಚಂದ್ರ ಹೇಳಿದರು.

ಮಹಿಳೆಯ ದುಃಖಿತ ಮಗ, ಆಮ್ಲಜನಕದ ಮಟ್ಟವು ತೀವ್ರವಾಗಿ ಕುಸಿಯಿತು ಮತ್ತು ತಾಯಿಯನ್ನು ಬೈಪಾಪ್ (ಬಿಲೆವೆಲ್ ಪಾಸಿಟಿವ್ ಏರ್‌ವೇ ಪ್ರೆಶರ್) ನಲ್ಲಿ ಇರಿಸಲಾಗಿದೆ ಎಂದು ಹೇಳಿದರು. ಆದರೆ ಯಾವುದೂ ನೆರವಾಗಲಿಲ್ಲ ಎಂದರು.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...