Homeಕರೋನಾ ತಲ್ಲಣನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

ನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

- Advertisement -
- Advertisement -

ಕಾರ್ಗಿಲ್ ಯುದ್ಧದ ವೀರ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆಯವರ 31 ವರ್ಷದ ಮಗ ಕೋವಿಡ್ ಕಾರಣದಿಂದಾಗಿ ಉತ್ತರಪ್ರದೇಶದ ಕಾನ್ಪುರ ನಗರದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಬೇದಾರ್ ದುಬೆಯವರು ತನ್ನ ಮಗನ ದೇಹವನ್ನು ಕೊನೆಯ ಬಾರಿಗೆ ನೋಡಲು ಸುಡುವ ಸೂರ್ಯನ ಕೆಳಗೆ ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕಾನ್ಪುರ್ ಉತ್ತರ ಪ್ರದೇಶದ ಅತಿ ಹೆಚ್ಚು ಕೋವಿಡ್ ಪೀಡಿತ ನಗರಗಳಲ್ಲಿ ಒಂದಾಗಿದೆ.
ಇಂಡಿಯಾ ಟುಡೆ ಟಿವಿ ಜೊತೆ ಹ್ಯಾಲೆಟ್ ಆಸ್ಪತ್ರೆಯಲ್ಲಿ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆ ಮಾತನಾಡಿದ್ದಾರೆ.

“ನಾನು 1981ರಿಂದ 2011ರವರೆಗೆ ನನ್ನ ತಾಯಿನಾಡಿಗೆ ಸೇವೆ ಸಲ್ಲಿಸಿದ್ದೇನೆ. ಕಾರ್ಗಿಲ್ ಯುದ್ಧದ ವೇಳೆ ಭಾಗಿಯಾಗಿದ್ದೇನೆ. ನಂತರ ಬಾರಾಮುಲ್ಲಾ, ಲಡಾಖ್ ಮತ್ತು ಲುಕುಂಗ್ಗೆ ಪ್ರದೇಶಗಳಲ್ಲಿ ಹೋರಾಡಿದ್ದೇನೆ. ನಾನು ಬಾರಾಮುಲ್ಲಾದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದೇನೆ ಮತ್ತು ಕಾರ್ಗಿಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಡಿದೆ. ಆದರೆ ಈ ದೇಶದ ವ್ಯವಸ್ಥೆಗೆ ನನ್ನ ಮಗನನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಮಂಗಳವಾರ ಸಂಜೆ ಕೋವಿಡ್‌ನಿಂದ ನಿಧನರಾದ ಮಗ ಅಮಿತಾಬ್ ನೆನೆದು ದುಃಖಿತರಾದರು.

ವೈದ್ಯಕೀಯ ಆಮ್ಲಜನಕ ಮತ್ತು ಆಮ್ಲಜನಕ ಸಿಲಿಂಡರ್‌ಗಳಿಗಾಗಿ ಹೆಣಗಾಡುತ್ತಿರುವ ನಗರದಾದ್ಯಂತದ ಆಸ್ಪತ್ರೆಗಳು ಕೋವಿಡ್ ರೋಗಿಗಳಿಂದ ತುಂಬಿವೆ. ಮೃತ ರೋಗಿಗಳ ಕುಟುಂಬ ಸದಸ್ಯರು ತಮ್ಮ ಪ್ರೀತಿಪಾತ್ರರ ಮೃತ ದೇಹಗಳನ್ನು ನೋಡಲು ಗಂಟೆಗಟ್ಟಲೆ ಕಾಯಬೇಕಾಗುತ್ತಿದೆ.

ಕಾನ್ಪುರದ ಭೈರವಘಾಟ್ ಪ್ರದೇಶದಲ್ಲಿನ ಸ್ಮಶಾನವನ್ನು ನೋಡಿದರೆ ಪರಿಸ್ಥಿತಿಯ ಭೀಕರತೆ ಅರ್ಥವಾಗುತ್ತದೆ. ಜನರ ಯಾತನೆ ಈಗ ಕೋಪಕ್ಕೆ ತಿರುಗಿದೆ. ದೇಶಕ್ಕೆ ಸೇವೆ ಸಲ್ಲಿಸಿದ ಅನುಭವಿಗಳು ಸಹ ಅಸಹಾಯಕರಾಗಿದ್ದಾರೆ.

ಇನ್ನೂ ಒಂದು ಸ್ಯನಿಕ ಕುಟುಂಬದ ಅಸಹಾಯಕತೆ…

‘ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ, ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ’ ಎಂದು ಕಾನ್ಪುರದ ನಿವಾಸಿ ಚಂದ್ರಪಾಲ್ ಹೇಳಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಕಮಾಂಡೆಂಟ್ ಆಗಿ ಕೆಲಸ ಮಾಡಿ ಅವರು ನಿವೃತ್ತರಾಗಿದ್ದಾರೆ. ಕೋವಿಡ್ ಪೀಡಿತ ಅವರ ಸಹೋದರಿ ಸಾವಿತ್ರಿ ಬುಧವಾರ ಬೆಳಿಗ್ಗೆ ನಿಧನರಾದರು.

ವಾರ್ಡ್ ಹುಡುಗರು ತಮ್ಮ ಸಹೋದರಿಯ ನಿಧನದ ಬಗ್ಗೆ ಮಾಹಿತಿ ನೀಡಿದರು ಎಂದು ನಿವೃತ್ತ ಸೈನಿಕ ಹೇಳುತ್ತಾರೆ.

ಚಂದ್ರಪಾಲ್ ಅವರ ಕುಟುಂಬ ಸದಸ್ಯ ರಾಮಚಂದ್ರ ಕೂಡ ನಿವೃತ್ತ ಸೈನಿಕ. ಉಸಿರಾಟದ ತೊಂದರೆಯಿಂದಾಗಿ ಕುಟುಂಬವು ಏಪ್ರಿಲ್ 22 ರಂದು ಕಾನ್ಪುರದ ಹ್ಯಾಲೆಟ್ ಆಸ್ಪತ್ರೆಗೆ ಸಾವಿತ್ರಿ ಅವರನ್ನು ಕರೆತಂದಿತ್ತು ಎಂದು ಇಂಡಿಯಾ ಟುಡೆ ಟಿವಿಗೆ ತಿಳಿಸಿದರು.

“ಸಾವಿತ್ರಿ ಅವರನ್ನು ಹ್ಯಾಲೆಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಯೋಗಕ್ಷೇಮದ ಬಗ್ಗೆ ಯಾರಿಂದಲೂ ಮಾಹಿತಿ ಸಿಗಲಿಲ್ಲ. ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ ಆದರೆ ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ. ಅವರು ನಿಧನರಾದರು ಎಂದು ನಮಗೆ ಇಂದು ತಿಳಿದುಬಂದಿದೆ” ಎಂದು ರಾಮಚಂದ್ರ ಹೇಳಿದರು.

ಮಹಿಳೆಯ ದುಃಖಿತ ಮಗ, ಆಮ್ಲಜನಕದ ಮಟ್ಟವು ತೀವ್ರವಾಗಿ ಕುಸಿಯಿತು ಮತ್ತು ತಾಯಿಯನ್ನು ಬೈಪಾಪ್ (ಬಿಲೆವೆಲ್ ಪಾಸಿಟಿವ್ ಏರ್‌ವೇ ಪ್ರೆಶರ್) ನಲ್ಲಿ ಇರಿಸಲಾಗಿದೆ ಎಂದು ಹೇಳಿದರು. ಆದರೆ ಯಾವುದೂ ನೆರವಾಗಲಿಲ್ಲ ಎಂದರು.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....