Homeಕರೋನಾ ತಲ್ಲಣನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

ನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

- Advertisement -
- Advertisement -

ಕಾರ್ಗಿಲ್ ಯುದ್ಧದ ವೀರ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆಯವರ 31 ವರ್ಷದ ಮಗ ಕೋವಿಡ್ ಕಾರಣದಿಂದಾಗಿ ಉತ್ತರಪ್ರದೇಶದ ಕಾನ್ಪುರ ನಗರದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಬೇದಾರ್ ದುಬೆಯವರು ತನ್ನ ಮಗನ ದೇಹವನ್ನು ಕೊನೆಯ ಬಾರಿಗೆ ನೋಡಲು ಸುಡುವ ಸೂರ್ಯನ ಕೆಳಗೆ ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕಾನ್ಪುರ್ ಉತ್ತರ ಪ್ರದೇಶದ ಅತಿ ಹೆಚ್ಚು ಕೋವಿಡ್ ಪೀಡಿತ ನಗರಗಳಲ್ಲಿ ಒಂದಾಗಿದೆ.
ಇಂಡಿಯಾ ಟುಡೆ ಟಿವಿ ಜೊತೆ ಹ್ಯಾಲೆಟ್ ಆಸ್ಪತ್ರೆಯಲ್ಲಿ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆ ಮಾತನಾಡಿದ್ದಾರೆ.

“ನಾನು 1981ರಿಂದ 2011ರವರೆಗೆ ನನ್ನ ತಾಯಿನಾಡಿಗೆ ಸೇವೆ ಸಲ್ಲಿಸಿದ್ದೇನೆ. ಕಾರ್ಗಿಲ್ ಯುದ್ಧದ ವೇಳೆ ಭಾಗಿಯಾಗಿದ್ದೇನೆ. ನಂತರ ಬಾರಾಮುಲ್ಲಾ, ಲಡಾಖ್ ಮತ್ತು ಲುಕುಂಗ್ಗೆ ಪ್ರದೇಶಗಳಲ್ಲಿ ಹೋರಾಡಿದ್ದೇನೆ. ನಾನು ಬಾರಾಮುಲ್ಲಾದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದೇನೆ ಮತ್ತು ಕಾರ್ಗಿಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಡಿದೆ. ಆದರೆ ಈ ದೇಶದ ವ್ಯವಸ್ಥೆಗೆ ನನ್ನ ಮಗನನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಮಂಗಳವಾರ ಸಂಜೆ ಕೋವಿಡ್‌ನಿಂದ ನಿಧನರಾದ ಮಗ ಅಮಿತಾಬ್ ನೆನೆದು ದುಃಖಿತರಾದರು.

ವೈದ್ಯಕೀಯ ಆಮ್ಲಜನಕ ಮತ್ತು ಆಮ್ಲಜನಕ ಸಿಲಿಂಡರ್‌ಗಳಿಗಾಗಿ ಹೆಣಗಾಡುತ್ತಿರುವ ನಗರದಾದ್ಯಂತದ ಆಸ್ಪತ್ರೆಗಳು ಕೋವಿಡ್ ರೋಗಿಗಳಿಂದ ತುಂಬಿವೆ. ಮೃತ ರೋಗಿಗಳ ಕುಟುಂಬ ಸದಸ್ಯರು ತಮ್ಮ ಪ್ರೀತಿಪಾತ್ರರ ಮೃತ ದೇಹಗಳನ್ನು ನೋಡಲು ಗಂಟೆಗಟ್ಟಲೆ ಕಾಯಬೇಕಾಗುತ್ತಿದೆ.

ಕಾನ್ಪುರದ ಭೈರವಘಾಟ್ ಪ್ರದೇಶದಲ್ಲಿನ ಸ್ಮಶಾನವನ್ನು ನೋಡಿದರೆ ಪರಿಸ್ಥಿತಿಯ ಭೀಕರತೆ ಅರ್ಥವಾಗುತ್ತದೆ. ಜನರ ಯಾತನೆ ಈಗ ಕೋಪಕ್ಕೆ ತಿರುಗಿದೆ. ದೇಶಕ್ಕೆ ಸೇವೆ ಸಲ್ಲಿಸಿದ ಅನುಭವಿಗಳು ಸಹ ಅಸಹಾಯಕರಾಗಿದ್ದಾರೆ.

ಇನ್ನೂ ಒಂದು ಸ್ಯನಿಕ ಕುಟುಂಬದ ಅಸಹಾಯಕತೆ…

‘ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ, ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ’ ಎಂದು ಕಾನ್ಪುರದ ನಿವಾಸಿ ಚಂದ್ರಪಾಲ್ ಹೇಳಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಕಮಾಂಡೆಂಟ್ ಆಗಿ ಕೆಲಸ ಮಾಡಿ ಅವರು ನಿವೃತ್ತರಾಗಿದ್ದಾರೆ. ಕೋವಿಡ್ ಪೀಡಿತ ಅವರ ಸಹೋದರಿ ಸಾವಿತ್ರಿ ಬುಧವಾರ ಬೆಳಿಗ್ಗೆ ನಿಧನರಾದರು.

ವಾರ್ಡ್ ಹುಡುಗರು ತಮ್ಮ ಸಹೋದರಿಯ ನಿಧನದ ಬಗ್ಗೆ ಮಾಹಿತಿ ನೀಡಿದರು ಎಂದು ನಿವೃತ್ತ ಸೈನಿಕ ಹೇಳುತ್ತಾರೆ.

ಚಂದ್ರಪಾಲ್ ಅವರ ಕುಟುಂಬ ಸದಸ್ಯ ರಾಮಚಂದ್ರ ಕೂಡ ನಿವೃತ್ತ ಸೈನಿಕ. ಉಸಿರಾಟದ ತೊಂದರೆಯಿಂದಾಗಿ ಕುಟುಂಬವು ಏಪ್ರಿಲ್ 22 ರಂದು ಕಾನ್ಪುರದ ಹ್ಯಾಲೆಟ್ ಆಸ್ಪತ್ರೆಗೆ ಸಾವಿತ್ರಿ ಅವರನ್ನು ಕರೆತಂದಿತ್ತು ಎಂದು ಇಂಡಿಯಾ ಟುಡೆ ಟಿವಿಗೆ ತಿಳಿಸಿದರು.

“ಸಾವಿತ್ರಿ ಅವರನ್ನು ಹ್ಯಾಲೆಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಯೋಗಕ್ಷೇಮದ ಬಗ್ಗೆ ಯಾರಿಂದಲೂ ಮಾಹಿತಿ ಸಿಗಲಿಲ್ಲ. ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ ಆದರೆ ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ. ಅವರು ನಿಧನರಾದರು ಎಂದು ನಮಗೆ ಇಂದು ತಿಳಿದುಬಂದಿದೆ” ಎಂದು ರಾಮಚಂದ್ರ ಹೇಳಿದರು.

ಮಹಿಳೆಯ ದುಃಖಿತ ಮಗ, ಆಮ್ಲಜನಕದ ಮಟ್ಟವು ತೀವ್ರವಾಗಿ ಕುಸಿಯಿತು ಮತ್ತು ತಾಯಿಯನ್ನು ಬೈಪಾಪ್ (ಬಿಲೆವೆಲ್ ಪಾಸಿಟಿವ್ ಏರ್‌ವೇ ಪ್ರೆಶರ್) ನಲ್ಲಿ ಇರಿಸಲಾಗಿದೆ ಎಂದು ಹೇಳಿದರು. ಆದರೆ ಯಾವುದೂ ನೆರವಾಗಲಿಲ್ಲ ಎಂದರು.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...