Homeಕರೋನಾ ತಲ್ಲಣನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

ನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

- Advertisement -
- Advertisement -

ಕಾರ್ಗಿಲ್ ಯುದ್ಧದ ವೀರ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆಯವರ 31 ವರ್ಷದ ಮಗ ಕೋವಿಡ್ ಕಾರಣದಿಂದಾಗಿ ಉತ್ತರಪ್ರದೇಶದ ಕಾನ್ಪುರ ನಗರದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಬೇದಾರ್ ದುಬೆಯವರು ತನ್ನ ಮಗನ ದೇಹವನ್ನು ಕೊನೆಯ ಬಾರಿಗೆ ನೋಡಲು ಸುಡುವ ಸೂರ್ಯನ ಕೆಳಗೆ ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕಾನ್ಪುರ್ ಉತ್ತರ ಪ್ರದೇಶದ ಅತಿ ಹೆಚ್ಚು ಕೋವಿಡ್ ಪೀಡಿತ ನಗರಗಳಲ್ಲಿ ಒಂದಾಗಿದೆ.
ಇಂಡಿಯಾ ಟುಡೆ ಟಿವಿ ಜೊತೆ ಹ್ಯಾಲೆಟ್ ಆಸ್ಪತ್ರೆಯಲ್ಲಿ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆ ಮಾತನಾಡಿದ್ದಾರೆ.

“ನಾನು 1981ರಿಂದ 2011ರವರೆಗೆ ನನ್ನ ತಾಯಿನಾಡಿಗೆ ಸೇವೆ ಸಲ್ಲಿಸಿದ್ದೇನೆ. ಕಾರ್ಗಿಲ್ ಯುದ್ಧದ ವೇಳೆ ಭಾಗಿಯಾಗಿದ್ದೇನೆ. ನಂತರ ಬಾರಾಮುಲ್ಲಾ, ಲಡಾಖ್ ಮತ್ತು ಲುಕುಂಗ್ಗೆ ಪ್ರದೇಶಗಳಲ್ಲಿ ಹೋರಾಡಿದ್ದೇನೆ. ನಾನು ಬಾರಾಮುಲ್ಲಾದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದೇನೆ ಮತ್ತು ಕಾರ್ಗಿಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಡಿದೆ. ಆದರೆ ಈ ದೇಶದ ವ್ಯವಸ್ಥೆಗೆ ನನ್ನ ಮಗನನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಮಂಗಳವಾರ ಸಂಜೆ ಕೋವಿಡ್‌ನಿಂದ ನಿಧನರಾದ ಮಗ ಅಮಿತಾಬ್ ನೆನೆದು ದುಃಖಿತರಾದರು.

ವೈದ್ಯಕೀಯ ಆಮ್ಲಜನಕ ಮತ್ತು ಆಮ್ಲಜನಕ ಸಿಲಿಂಡರ್‌ಗಳಿಗಾಗಿ ಹೆಣಗಾಡುತ್ತಿರುವ ನಗರದಾದ್ಯಂತದ ಆಸ್ಪತ್ರೆಗಳು ಕೋವಿಡ್ ರೋಗಿಗಳಿಂದ ತುಂಬಿವೆ. ಮೃತ ರೋಗಿಗಳ ಕುಟುಂಬ ಸದಸ್ಯರು ತಮ್ಮ ಪ್ರೀತಿಪಾತ್ರರ ಮೃತ ದೇಹಗಳನ್ನು ನೋಡಲು ಗಂಟೆಗಟ್ಟಲೆ ಕಾಯಬೇಕಾಗುತ್ತಿದೆ.

ಕಾನ್ಪುರದ ಭೈರವಘಾಟ್ ಪ್ರದೇಶದಲ್ಲಿನ ಸ್ಮಶಾನವನ್ನು ನೋಡಿದರೆ ಪರಿಸ್ಥಿತಿಯ ಭೀಕರತೆ ಅರ್ಥವಾಗುತ್ತದೆ. ಜನರ ಯಾತನೆ ಈಗ ಕೋಪಕ್ಕೆ ತಿರುಗಿದೆ. ದೇಶಕ್ಕೆ ಸೇವೆ ಸಲ್ಲಿಸಿದ ಅನುಭವಿಗಳು ಸಹ ಅಸಹಾಯಕರಾಗಿದ್ದಾರೆ.

ಇನ್ನೂ ಒಂದು ಸ್ಯನಿಕ ಕುಟುಂಬದ ಅಸಹಾಯಕತೆ…

‘ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ, ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ’ ಎಂದು ಕಾನ್ಪುರದ ನಿವಾಸಿ ಚಂದ್ರಪಾಲ್ ಹೇಳಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಕಮಾಂಡೆಂಟ್ ಆಗಿ ಕೆಲಸ ಮಾಡಿ ಅವರು ನಿವೃತ್ತರಾಗಿದ್ದಾರೆ. ಕೋವಿಡ್ ಪೀಡಿತ ಅವರ ಸಹೋದರಿ ಸಾವಿತ್ರಿ ಬುಧವಾರ ಬೆಳಿಗ್ಗೆ ನಿಧನರಾದರು.

ವಾರ್ಡ್ ಹುಡುಗರು ತಮ್ಮ ಸಹೋದರಿಯ ನಿಧನದ ಬಗ್ಗೆ ಮಾಹಿತಿ ನೀಡಿದರು ಎಂದು ನಿವೃತ್ತ ಸೈನಿಕ ಹೇಳುತ್ತಾರೆ.

ಚಂದ್ರಪಾಲ್ ಅವರ ಕುಟುಂಬ ಸದಸ್ಯ ರಾಮಚಂದ್ರ ಕೂಡ ನಿವೃತ್ತ ಸೈನಿಕ. ಉಸಿರಾಟದ ತೊಂದರೆಯಿಂದಾಗಿ ಕುಟುಂಬವು ಏಪ್ರಿಲ್ 22 ರಂದು ಕಾನ್ಪುರದ ಹ್ಯಾಲೆಟ್ ಆಸ್ಪತ್ರೆಗೆ ಸಾವಿತ್ರಿ ಅವರನ್ನು ಕರೆತಂದಿತ್ತು ಎಂದು ಇಂಡಿಯಾ ಟುಡೆ ಟಿವಿಗೆ ತಿಳಿಸಿದರು.

“ಸಾವಿತ್ರಿ ಅವರನ್ನು ಹ್ಯಾಲೆಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಯೋಗಕ್ಷೇಮದ ಬಗ್ಗೆ ಯಾರಿಂದಲೂ ಮಾಹಿತಿ ಸಿಗಲಿಲ್ಲ. ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ ಆದರೆ ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ. ಅವರು ನಿಧನರಾದರು ಎಂದು ನಮಗೆ ಇಂದು ತಿಳಿದುಬಂದಿದೆ” ಎಂದು ರಾಮಚಂದ್ರ ಹೇಳಿದರು.

ಮಹಿಳೆಯ ದುಃಖಿತ ಮಗ, ಆಮ್ಲಜನಕದ ಮಟ್ಟವು ತೀವ್ರವಾಗಿ ಕುಸಿಯಿತು ಮತ್ತು ತಾಯಿಯನ್ನು ಬೈಪಾಪ್ (ಬಿಲೆವೆಲ್ ಪಾಸಿಟಿವ್ ಏರ್‌ವೇ ಪ್ರೆಶರ್) ನಲ್ಲಿ ಇರಿಸಲಾಗಿದೆ ಎಂದು ಹೇಳಿದರು. ಆದರೆ ಯಾವುದೂ ನೆರವಾಗಲಿಲ್ಲ ಎಂದರು.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....